Homeಮುಖಪುಟಪಶ್ಚಿಮ ಬಂಗಾಳ: ಇಬ್ಬರು ಬಿಜೆಪಿ ಶಾಸಕರ ರಾಜೀನಾಮೆ-75ಕ್ಕೆ ಇಳಿದ ಸಂಖ್ಯಾಬಲ

ಪಶ್ಚಿಮ ಬಂಗಾಳ: ಇಬ್ಬರು ಬಿಜೆಪಿ ಶಾಸಕರ ರಾಜೀನಾಮೆ-75ಕ್ಕೆ ಇಳಿದ ಸಂಖ್ಯಾಬಲ

- Advertisement -
- Advertisement -

ಬಿಜೆಪಿ ಲೋಕಸಭಾ ಸಂಸದರಾದ ಜಗನ್ನಾಥ ಸರ್ಕಾರ್ ಮತ್ತು ನಿಶಿತ್ ಪ್ರಮಾಣಿಕ್ ಪಶ್ಚಿಮ ಬಂಗಾಳ ವಿಧಾನಸಭೆಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಇಬ್ಬರು ಶಾಸಕರಾಗಿ ಆಯ್ಕೆಯಾಗಿದ್ದರು.

ರಣಘಾಟ್ ಸಂಸದ ಜಗನ್ನಾಥ ಸರ್ಕಾರ್ ಮತ್ತು ಕೂಚ್ ಬೆಹಾರ್ ಸಂಸದ ನಿಶಿತ್ ಪ್ರಮಾಣಿಕ್ ಅವರು ವಿಧಾನಸಭೆಗೆ ತೆರಳಿ ತಮ್ಮ ರಾಜೀನಾಮೆ ಪತ್ರಗಳನ್ನು ಸ್ಪೀಕರ್ ಬಿಮನ್ ಬ್ಯಾನರ್ಜಿಗೆ ಸಲ್ಲಿಸಿದ್ದಾರೆ. ಬಿಜೆಪಿ ಹೈಕಮಾಂಡ್ ನಿರ್ದೇಶನದ ಮೇರೆಗೆ ಅವರು ಶಾಸಕ ಸ್ಥಾನದಿಂದ ಹೊರಗುಳಿಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಬಂಗಾಳ ಚುನಾವಣೆಯಲ್ಲಿ ಈ ಇಬ್ಬರು ಸಂಸದರನ್ನಲ್ಲದೆ, ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಲಾಕೆಟ್ ಚಟರ್ಜಿ ಮತ್ತು ರಾಜ್ಯಸಭಾ ಸದಸ್ಯ ಸ್ವಾಪನ್ ದಾಸ್‌ಗುಪ್ತಾ ಅವರನ್ನು ಕಣಕ್ಕಿಳಿಸಿತ್ತು ಆದರೆ ಇವರೆಲ್ಲಾ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ 77 ಬಿಜೆಪಿ ಶಾಸಕರಿಗೆ ಕೇಂದ್ರದ ಭದ್ರತಾ ಪಡೆಗಳಿಂದ ರಕ್ಷಣೆ

“ಬಿಜೆಪಿ ಕೇವಲ ಮೂರು ಶಾಸಕರಿಂದ (2016 ರ ಚುನಾವಣೆಯಲ್ಲಿ) 77 ಶಾಸಕರಿಗೆ ಏರಿದೆ. ಸರ್ಕಾರವನ್ನು ನಡೆಸುವಾಗ ಅನುಭವಿಗಳು ಇರಲಿ ಎಂದು ಕೆಲವು ಸಂಸದರನ್ನು ಕಣಕ್ಕಿಳಿಸಲಾಗಿತ್ತು. ಆದರೆ ರಾಜ್ಯದಲ್ಲಿ ಸರ್ಕಾರ ರಚಿಸುವ ಗುರಿಯನ್ನು ಸಾಧಿಸಲು ಪಕ್ಷಕ್ಕೆ ಸಾಧ್ಯವವಾಗಲಿಲ್ಲ” ಎಂದು ಜಗನ್ನಾಥ ಸರ್ಕಾರ್ ಹೇಳಿದ್ದಾರೆ.

ಸಂಸದರಾಗಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದು ನಂತರ ಗೆದ್ದ ನಂತರ ರಾಜೀನಾಮೆ ನೀಡುವುದು ಬಿಜೆಪಿಯ ಯಾವುದೇ ಸಾಂಸ್ಥಿಕ ದೌರ್ಬಲ್ಯವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸರ್ಕಾರ್ ಪ್ರತಿಪಾದಿಸಿದ್ದಾರೆ.

ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಯ ಸದಸ್ಯರಾಗಿ ಉಳಿಯಲು ಸಾಧ್ಯವಿಲ್ಲ ಎಂದು ಸಮಸದ ನಿಶಿತ್ ಪ್ರಮಾಣಿಕ್ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ನಿಶಿತ್ ಪ್ರಮಾಣಿಕ್ ಕೇವಲ 57 ಮತಗಳ ಅಂತರದಿಂದ ಟಿಎಂಸಿ ಅಭ್ಯರ್ಥಿ ಉದಯನ್ ಗುಹಾ ಅವರನ್ನು ದಿನ್ಹಾಟಾ ಸ್ಥಾನದಿಂದ ಸೋಲಿಸಿದ್ದರು. ಜಗನ್ನಾಥ ಸರ್ಕಾರ್ ಅವರು ಸಂತೀಪುರದಿಂದ 15,878 ಮತಗಳ ಅಂತರದಿಂದ ಜಯಗಳಿಸಿದ್ದರು.

ದಿನ್ಹಾಟಾ ಮತ್ತು ಸಂತೀಪುರ ವಿಧಾನಸಭೆಗಳು ಪ್ರಮಾಣಿಕ್ ಮತ್ತು ಸರ್ಕಾರ್ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುತ್ತವೆ.

ಬಿಜೆಪಿಯು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗಳಿಸಿದರೆ, ತೃಣಮೂಲ ಕಾಂಗ್ರೆಸ್ 292 ಕ್ಷೇತ್ರಗಳಲ್ಲಿ 213 ಜಯಗಳಿಸಿ ಭರ್ಜರಿ ಜಯ ಸಾಧಿಸಿ ಸರ್ಕಾರ ರಚಿಸಿದೆ.


ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಯೋಜನೆಗೆ ವ್ಯಾಪಕ ವಿರೋಧ: ಪೋಟೋ, ವಿಡಿಯೊ ನಿಷೇಧಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...