Homeಮುಖಪುಟಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು ಆಹಾರದ ಮಾರಾಟ ಹಾಗೂ ಸೇವನೆಯನ್ನು ನಿರ್ಬಂಧಿಸಬೇಕು ಎಂಬ ವಿಎಚ್‌ಪಿಯ ‘ಆದೇಶ’ದ ಕುರಿತು ಜೆಡಿಯು, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ತಮ್ಮ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ವಿಎಚ್‌ಪಿಯ ಮಾರ್ಗಸೂಚಿಗಳಿಗೆ ಪ್ರತಿಕ್ರಿಯಿಸಿದ ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ಯಾಮ್ ರಜಾಕ್, ದುರ್ಗಾಪೂಜೆಯ ಸಮಯದಲ್ಲಿ ಮಾಂಸ ಮತ್ತು ಮೀನು ಮಾರಾಟವನ್ನು ತಡೆಯುವುದು ಒಳ್ಳೆಯ ವಿಷಯ. ಆದರೆ ಹಬ್ಬದ ಸಮಯದಲ್ಲಿ ನಡೆಸಲಾಗುವ ಸಾಂಪ್ರದಾಯಿಕ ಪ್ರಾಣಿ ಬಲಿ ಆಚರಣೆಗಳಿಗೆ ಈ ನಿಯಮ ಹೇಗೆ ಅನ್ವಯಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

“ದುರ್ಗಾಪೂಜೆಯ ಸಮಯದಲ್ಲಿ ಮಾಂಸ ಮತ್ತು ಮೀನು ಮಾರಾಟವನ್ನು ತಡೆಯುವುದು ಧನಾತ್ಮಕ ಹೆಜ್ಜೆ. ಆದರೆ, ದುರ್ಗಾಪೂಜೆಯ ಸಮಯದಲ್ಲಿ ಜನರು ಪ್ರಾಣಿ ಬಲಿ ನೀಡುತ್ತಾರೆ. ಪ್ರಾಣಿ ಬಲಿಯು ಕೆಲವು ಸಂಪ್ರದಾಯ ಹಾಗೂ ಧಾರ್ಮಿಕ ಆಚರಣೆಗಳ ಭಾಗವೂ ಆಗಿದೆ. ಇಂತಹ ಬಲಿಗಳು ನಡೆದಾಗ, ಆ ಮಾಂಸ ಏನಾಗುತ್ತದೆ? ಅದನ್ನು ಬಳಸಲು ಜನರಿಗೆ ನೀಡಲಾಗುತ್ತದೆಯೇ ಅಥವಾ ಇಲ್ಲವೇ?” ಎಂದು ರಜಾಕ್ ಕೇಳಿದ್ದಾರೆ.

ಈ ವಿಷಯವನ್ನು ವಿಎಚ್‌ಪಿ ಪರಿಗಣಿಸಬೇಕು ಎಂದಿರುವ ಅವರು, ಮಾಂಸ ಮತ್ತು ಮೀನು ಮಾರಾಟವನ್ನು ನಿಯಂತ್ರಿಸಲು ಬಯಸುವುದಾದರೆ, ಸಂಘಟನೆಯು ಮೊದಲು ಪ್ರಾಣಿ ಬಲಿ ಆಚರಣೆಯನ್ನು ಕೊನೆಗೊಳಿಸುವಂತೆ ಧಾರ್ಮಿಕ ಸಮುದಾಯಗಳಿಗೆ ಮನವಿ ಮಾಡಬೇಕು ಎಂದು ಹೇಳಿದ್ದಾರೆ.

ವಿಎಚ್‌ಪಿಯ ಈ ನಿಲುವಿಗೆ ವಿಶ್ವ ಹಿಂದೂ ಪರಿಷತ್ತಿನ ಇಂದ್ರಪ್ರಸ್ಥ ಪ್ರಾಂತ್ಯದ ಅಧ್ಯಕ್ಷೆ ಉಪಾಸನಾ ಅರೋರಾ ಬೆಂಬಲ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅರೋರಾ, ಈ ಮಾರ್ಗದರ್ಶಿ ಸೂತ್ರಗಳನ್ನು ಧನಾತ್ಮಕವಾಗಿ ನೋಡುವುದಾಗಿ ತಿಳಿಸಿದ್ದು, ಇವು ದುರ್ಗಾಪೂಜೆಗೆ ಸಂಬಂಧಿಸಿದ ಸಾಂಪ್ರದಾಯಿಕ ಆಚರಣೆಗಳಿಗೆ ಅನುಗುಣವಾಗಿವೆ ಎಂದು ಬಣ್ಣಿಸಿದ್ದಾರೆ.

“ನಾನು ಇದನ್ನು ಧನಾತ್ಮಕವಾಗಿ ನೋಡುತ್ತೇನೆ. ಏಕೆಂದರೆ ನನ್ನ ಬಾಲ್ಯದಿಂದಲೂ ದುರ್ಗಾಪೂಜೆಯ ಸಮಯದಲ್ಲಿ ಜನರು ಸಾಮಾನ್ಯವಾಗಿ ತಮ್ಮ ಮನೆಗಳಲ್ಲಿ ಮಾಂಸ ಮತ್ತು ಮದ್ಯ ಸೇವನೆಯನ್ನು ನಿಲ್ಲಿಸುವುದನ್ನು ನೋಡಿದ್ದೇನೆ. ಈ ದಿನಗಳಲ್ಲಿ ನಾನು ನನ್ನ ಮನೆಗೆ ಈರುಳ್ಳಿಯನ್ನು ಸಹ ತರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇಂತಹ ಆಚರಣೆಗಳು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದು, ಆ ಮೌಲ್ಯಗಳನ್ನು ರಕ್ಷಿಸುವ ಮತ್ತು ಪ್ರಚಾರ ಮಾಡುವ ಜವಾಬ್ದಾರಿ ವಿಎಚ್‌ಪಿಗೆ ಇದೆ ಎಂದು ಅರೋರಾ ಸಮರ್ಥಿಸಿಕೊಂಡಿದ್ದಾರೆ.

ವಿಎಚ್‌ಪಿ ಅಧಿಕಾರವನ್ನು ಪ್ರಶ್ನಿಸಿದ ಕಾಂಗ್ರೆಸ್

ಕಾಂಗ್ರೆಸ್ ನಾಯಕ ಉದಿತ್ ರಾಜ್, ವಿಎಚ್‌ಪಿ ಬೇಡಿಕೆಯನ್ನು ತೀವ್ರವಾಗಿ ವಿರೋಧಿಸಿದ್ದು, ಇಂತಹ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲು ಸಂಘಟನೆಗೆ ಇರುವ ಅಧಿಕಾರವನ್ನು ಪ್ರಶ್ನಿಸಿದ್ದಾರೆ.

“ಜನರು ಏನು ಮಾಡಬೇಕೆಂದು ನಿರ್ದೇಶಿಸಲು ಇವರಾರು? ಇವರೇನು ಚುನಾಯಿತ ಪ್ರತಿನಿಧಿಗಳೇ? ಇವರು ಗೂಂಡಾಗಳು ಮತ್ತು ಕಿಡಿಗೇಡಿಗಳು, ತಪ್ಪು ನಿರೂಪಣೆಯನ್ನು ಸೃಷ್ಟಿಸುತ್ತಿದ್ದಾರೆ. ಯಾರು ಏನು ತಿನ್ನಬೇಕು ಎಂಬುದು ಸಂವಿಧಾನಾತ್ಮಕ ಹಕ್ಕು. ಇದರ ಮೇಲೆ ಯಾವುದೇ ಸುತ್ತೋಲೆ ಹೊರಡಿಸಲು ಇವರಿಗೆ ಹಕ್ಕಿಲ್ಲ” ಎಂದು ರಾಜ್ ವಾಗ್ದಾಳಿ ನಡೆಸಿದ್ದಾರೆ.

ಬಂಗಾಳದಲ್ಲಿ ದುರ್ಗಾಪೂಜೆಗೂ ಮುನ್ನ ಶುಕ್ರವಾರ ಮಾರ್ಗಸೂಚಿ ಹೊರಡಿಸಿರುವ ವಿಎಚ್‌ಪಿ, ಆಯೋಜಕರು ಸಾಂಪ್ರದಾಯಿಕ ಆಚರಣೆಗಳಿಗೆ ಮರಳಬೇಕು. ಪೂಜಾ ಪೆಂಡಾಲ್‌ಗಳ ಸುತ್ತಮುತ್ತ ಮಾಂಸಹಾರ ಮಾರಾಟವಾಗದಂತೆ ಹಾಗೂ ಸೇವನೆಯಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದೆ.

ಹಬ್ಬದ ಸಮಯದಲ್ಲಿ ಮಾಂಸಹಾರದ ಮೇಲೆ ಸಂಪೂರ್ಣ ನಿಷೇಧವನ್ನು ತಾನು ಕೋರುತ್ತಿಲ್ಲ ಎಂದು ಸ್ಪಷ್ಟಪಡಿಸಿರುವ ಸಂಘಟನೆಯು, ಬಂಗಾಳದಲ್ಲಿ ದುರ್ಗಾಪೂಜೆಯು ಐತಿಹಾಸಿಕವಾಗಿ ಕಟ್ಟುನಿಟ್ಟಿನ ಸಸ್ಯಾಹಾರವಾಗಿರಲಿಲ್ಲ ಎಂಬುದನ್ನು ಒಪ್ಪಿಕೊಂಡಿದೆ. ಆದರೆ, ದೇವಿಯ ಮೂರ್ತಿಯ ಪವಿತ್ರತೆಯನ್ನು ಕಾಪಾಡಿಕೊಳ್ಳಬೇಕು. ಮೂರ್ತಿಯು ಮಾಂಸಹಾರಿ ಆಹಾರದ ಸಂಪರ್ಕಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದೆ.

ಈ ಮಾರ್ಗದರ್ಶಿ ಸೂತ್ರಗಳು ಧಾರ್ಮಿಕ ಸಂಪ್ರದಾಯಗಳು, ಆಹಾರದ ಆಯ್ಕೆಗಳು, ಸಾಂಸ್ಕೃತಿಕ ಆಚರಣೆಗಳು ಹಾಗೂ ಸಾರ್ವಜನಿಕವಾಗಿ ನಡೆಯುವ ಧಾರ್ಮಿಕ ಸಂಭ್ರಮಾಚರಣೆಗಳನ್ನು ನಿಯಂತ್ರಿಸುವಲ್ಲಿ ಸಂಘಟನೆಗಳ ಪಾತ್ರದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...