Homeಮುಖಪುಟಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಕೃಷಿ ಮಸೂದೆಗಳು ದೀರ್ಘಾವಧಿಯಲ್ಲಿ ಸಾರ್ವಜನಿಕ ಬೆಂಬಲ ವ್ಯವಸ್ಥೆಯ ಮೇಲೆ (ಪಿಡಿಎಸ್) ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೊನೆಗೊಳಿಸಲು ಪರೋಕ್ಷವಾಗಿ ಕಾರಣವಾಗುತ್ತವೆ ಎಂದು ಪ.ಬಂಗಾಳ ಸರ್ಕಾರ ತಿಳಿಸಿದೆ.

- Advertisement -
- Advertisement -

ಸಂಸತ್ತು ಅಂಗೀಕರಿಸಿರುವ ವಿವಾದಿತ ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯಲು ಆಗ್ರಹಿಸಿ ವಿರುದ್ಧ ದೇಶದ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳು, ರೈತ ಸಂಘಟನೆಗಳು, ಯುವ, ದಲಿತ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿವೆ.

ಇವುಗಳ ನಡುವೆ ಪಶ್ಚಿಮ ಬಂಗಾಳ ಸರ್ಕಾರ ಈ ಕಾಯಿದೆಗಳ ದೀರ್ಘಾವಧಿಯ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಈ ಮೂರು ಕೃಷಿ ಮಸೂದೆಗಳು ದೀರ್ಘಾವಧಿಯಲ್ಲಿ ಸಾರ್ವಜನಿಕ ಬೆಂಬಲ ವ್ಯವಸ್ಥೆಯ ಮೇಲೆ (ಪಿಡಿಎಸ್) ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೊನೆಗೊಳಿಸಲು ಪರೋಕ್ಷವಾಗಿ ಕಾರಣವಾಗುತ್ತವೆ ಎಂದು ಪ.ಬಂಗಾಳ ಸರ್ಕಾರ ತಿಳಿಸಿದೆ.

ಮಸೂದೆಗಳಿ ಇಡೀ ಕೃಷಿ ಮಾರುಕಟ್ಟೆಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ಹಸ್ತಾಂತರಿಸುವುದರಿಂದ ಎಂಎಸ್‌ಪಿ ನೀಡಿ ರೈತರ ಬೆಳೆ ಕೊಳ್ಳುವುದರಿಂದ ಸರ್ಕಾರಗಳು ಹಿಂದೆ ಸರಿಯುತ್ತವೆ ಎಂದು ರಾಜ್ಯದ ತೃಣಮೂಲ ಕಾಂಗ್ರೆಸ್ ಸರ್ಕಾರ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಈಗ ಮುಕ್ತ-ಸಂಗ್ರಹದಡಿಯಲ್ಲಿ, ಪಿಡಿಎಸ್‌ಗಾಗಿ ಭಾರತದ ಆಹಾರ ನಿಗಮ (ಎಫ್‌ಸಿಐ) ಸೇರಿದಂತೆ ಸರ್ಕಾರಿ ಸಂಸ್ಥೆಗಳು ಎಂಎಸ್‌ಪಿ ದರನೀಡಿ ನಿಗದಿತ ಅವಧಿಯೊಳಗೆ ರೈತರಿಂದ ಆಹಾರ ಧಾನ್ಯಗಳನ್ನು ಖರೀದಿಸಿ ಸಂಗ್ರಹಿಸುತ್ತವೆ. ಕೆಲವು ರಾಜ್ಯಗಳು ಗೋಧಿ ಮತ್ತು ಭತ್ತದ ಮೇಲೆ ಎಂಎಸ್‌ಪಿಗಿಂತ ಹೆಚ್ಚಿನ ರಾಜ್ಯ ಬೋನಸ್ ಸಹ ಘೋಷಿಸುತ್ತವೆ.

 

“ಈ ಕಾಯಿದೆಗಳಿಂದ ಆಹಾರ ದಾಸ್ತಾನು ಮಾಡಲು ಯಾವುದೇ ಸರ್ಕಾರಿ ನಿಯಮಗಳು ಮತ್ತು ನಿರ್ಬಂಧವಿಲ್ಲದ ಕಾರಣ, ಕಾರ್ಪೋರೆಟ್ ಮಾರುಕಟ್ಟೆ ಸಂಗ್ರಹವು ಸರ್ಕಾರದ ಖರೀದಿ, ಸಂಗ್ರಹಣೆ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳ್ಳುತ್ತವೆ” ಎಂದು ಪಶ್ಚಿಮ ಬಂಗಾಳದ ಕೃಷಿ ಸಚಿವ ಆಸಿಶ್ ಬ್ಯಾನರ್ಜಿ ದಿ ಫೆಡರಲ್ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗೀಕಾರ: ಬಹುಮತವಿಲ್ಲದೆ ನಿಯಮಗಳ ಉಲ್ಲಂಘನೆ..?

ಈ ಮಸೂದೆಗಳು ರೈತರಿಗೆ ಮರಣದಂಡನೆ ಮಾತ್ರವಲ್ಲದೆ ಆಹಾರ ಭದ್ರತೆ ಮತ್ತು ರಾಜ್ಯ ಸರ್ಕಾರಗಳು ಸಬ್ಸಿಡಿ ನೀಡುವ ಆಹಾರ ಧಾನ್ಯಗಳ ವಿತರಣೆಯ ಮೇಲೂ ಪರಿಣಾಮ ಬೀರುತ್ತವೆ. ಈ ಮಸೂದೆಗಳಲ್ಲಿ ಬೆಲೆ ನಿಗದಿ ಮಾಡಲು ಯಾವುದೇ ನಿಗದಿತ ಕಾರ್ಯವಿಧಾನಗಳಿಲ್ಲ. ಇದರಿಂದಾಗಿ ರೈತರು ಮತ್ತು ಗ್ರಾಹಕರನ್ನು ಶೋಷಿಸಲು ಕಾರ್ಪೊರೇಟ್‌‌ಗಳಿಗೆ ಎಲ್ಲ ಅವಕಾಶ ದೊರೆಯುತ್ತದೆ ಎಂದು ಆಸಿಶ್ ಬ್ಯಾನರ್ಜಿ ಹೇಳಿದ್ದಾರೆ.

’ಇತ್ತೀಚೆಗೆ ಆಲೂಗಡ್ಡೆ ಮತ್ತು ಈರುಳ್ಳಿಯ ಬೆಲೆಗಳು ಗಗನಕ್ಕೇರಿದಾಗ, ಬೆಲೆಗಳನ್ನು ನಿಯಂತ್ರಿಸಲು ಸರ್ಕಾರ ಹೇಗೆ ಮಧ್ಯಪ್ರವೇಶಿಸಿತು ಎಂಬುದನ್ನು ನೀವು ನೋಡಿದ್ದೀರಿ. ಸರ್ಕಾರ ಈಗಲೂ ಎಚ್ಚೆತ್ತುಕೊಳ್ಳದಿದ್ದರೇ ಭವಿಷ್ಯದಲ್ಲಿ, ಸರ್ಕಾರವು ತನ್ನ ಆಹಾರ ಧಾನ್ಯಗಳ ಅಗತ್ಯವನ್ನು ಪೂರೈಸಲು ಕಾರ್ಪೋರೇಟ್‌‌ಗಳನ್ನು ಅವಲಂಬಿಸಬೇಕಾಗುತ್ತದೆ’ ಎಂದು ಬ್ಯಾನರ್ಜಿ ಆತಂಕ ವ್ಯಕ್ತಪಡಿಸುತ್ತಾರೆ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...