Homeಮುಖಪುಟಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಕೃಷಿ ಮಸೂದೆಗಳು ದೀರ್ಘಾವಧಿಯಲ್ಲಿ ಸಾರ್ವಜನಿಕ ಬೆಂಬಲ ವ್ಯವಸ್ಥೆಯ ಮೇಲೆ (ಪಿಡಿಎಸ್) ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೊನೆಗೊಳಿಸಲು ಪರೋಕ್ಷವಾಗಿ ಕಾರಣವಾಗುತ್ತವೆ ಎಂದು ಪ.ಬಂಗಾಳ ಸರ್ಕಾರ ತಿಳಿಸಿದೆ.

- Advertisement -
- Advertisement -

ಸಂಸತ್ತು ಅಂಗೀಕರಿಸಿರುವ ವಿವಾದಿತ ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯಲು ಆಗ್ರಹಿಸಿ ವಿರುದ್ಧ ದೇಶದ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳು, ರೈತ ಸಂಘಟನೆಗಳು, ಯುವ, ದಲಿತ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿವೆ.

ಇವುಗಳ ನಡುವೆ ಪಶ್ಚಿಮ ಬಂಗಾಳ ಸರ್ಕಾರ ಈ ಕಾಯಿದೆಗಳ ದೀರ್ಘಾವಧಿಯ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಈ ಮೂರು ಕೃಷಿ ಮಸೂದೆಗಳು ದೀರ್ಘಾವಧಿಯಲ್ಲಿ ಸಾರ್ವಜನಿಕ ಬೆಂಬಲ ವ್ಯವಸ್ಥೆಯ ಮೇಲೆ (ಪಿಡಿಎಸ್) ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೊನೆಗೊಳಿಸಲು ಪರೋಕ್ಷವಾಗಿ ಕಾರಣವಾಗುತ್ತವೆ ಎಂದು ಪ.ಬಂಗಾಳ ಸರ್ಕಾರ ತಿಳಿಸಿದೆ.

ಮಸೂದೆಗಳಿ ಇಡೀ ಕೃಷಿ ಮಾರುಕಟ್ಟೆಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ಹಸ್ತಾಂತರಿಸುವುದರಿಂದ ಎಂಎಸ್‌ಪಿ ನೀಡಿ ರೈತರ ಬೆಳೆ ಕೊಳ್ಳುವುದರಿಂದ ಸರ್ಕಾರಗಳು ಹಿಂದೆ ಸರಿಯುತ್ತವೆ ಎಂದು ರಾಜ್ಯದ ತೃಣಮೂಲ ಕಾಂಗ್ರೆಸ್ ಸರ್ಕಾರ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಈಗ ಮುಕ್ತ-ಸಂಗ್ರಹದಡಿಯಲ್ಲಿ, ಪಿಡಿಎಸ್‌ಗಾಗಿ ಭಾರತದ ಆಹಾರ ನಿಗಮ (ಎಫ್‌ಸಿಐ) ಸೇರಿದಂತೆ ಸರ್ಕಾರಿ ಸಂಸ್ಥೆಗಳು ಎಂಎಸ್‌ಪಿ ದರನೀಡಿ ನಿಗದಿತ ಅವಧಿಯೊಳಗೆ ರೈತರಿಂದ ಆಹಾರ ಧಾನ್ಯಗಳನ್ನು ಖರೀದಿಸಿ ಸಂಗ್ರಹಿಸುತ್ತವೆ. ಕೆಲವು ರಾಜ್ಯಗಳು ಗೋಧಿ ಮತ್ತು ಭತ್ತದ ಮೇಲೆ ಎಂಎಸ್‌ಪಿಗಿಂತ ಹೆಚ್ಚಿನ ರಾಜ್ಯ ಬೋನಸ್ ಸಹ ಘೋಷಿಸುತ್ತವೆ.

 

“ಈ ಕಾಯಿದೆಗಳಿಂದ ಆಹಾರ ದಾಸ್ತಾನು ಮಾಡಲು ಯಾವುದೇ ಸರ್ಕಾರಿ ನಿಯಮಗಳು ಮತ್ತು ನಿರ್ಬಂಧವಿಲ್ಲದ ಕಾರಣ, ಕಾರ್ಪೋರೆಟ್ ಮಾರುಕಟ್ಟೆ ಸಂಗ್ರಹವು ಸರ್ಕಾರದ ಖರೀದಿ, ಸಂಗ್ರಹಣೆ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳ್ಳುತ್ತವೆ” ಎಂದು ಪಶ್ಚಿಮ ಬಂಗಾಳದ ಕೃಷಿ ಸಚಿವ ಆಸಿಶ್ ಬ್ಯಾನರ್ಜಿ ದಿ ಫೆಡರಲ್ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗೀಕಾರ: ಬಹುಮತವಿಲ್ಲದೆ ನಿಯಮಗಳ ಉಲ್ಲಂಘನೆ..?

ಈ ಮಸೂದೆಗಳು ರೈತರಿಗೆ ಮರಣದಂಡನೆ ಮಾತ್ರವಲ್ಲದೆ ಆಹಾರ ಭದ್ರತೆ ಮತ್ತು ರಾಜ್ಯ ಸರ್ಕಾರಗಳು ಸಬ್ಸಿಡಿ ನೀಡುವ ಆಹಾರ ಧಾನ್ಯಗಳ ವಿತರಣೆಯ ಮೇಲೂ ಪರಿಣಾಮ ಬೀರುತ್ತವೆ. ಈ ಮಸೂದೆಗಳಲ್ಲಿ ಬೆಲೆ ನಿಗದಿ ಮಾಡಲು ಯಾವುದೇ ನಿಗದಿತ ಕಾರ್ಯವಿಧಾನಗಳಿಲ್ಲ. ಇದರಿಂದಾಗಿ ರೈತರು ಮತ್ತು ಗ್ರಾಹಕರನ್ನು ಶೋಷಿಸಲು ಕಾರ್ಪೊರೇಟ್‌‌ಗಳಿಗೆ ಎಲ್ಲ ಅವಕಾಶ ದೊರೆಯುತ್ತದೆ ಎಂದು ಆಸಿಶ್ ಬ್ಯಾನರ್ಜಿ ಹೇಳಿದ್ದಾರೆ.

’ಇತ್ತೀಚೆಗೆ ಆಲೂಗಡ್ಡೆ ಮತ್ತು ಈರುಳ್ಳಿಯ ಬೆಲೆಗಳು ಗಗನಕ್ಕೇರಿದಾಗ, ಬೆಲೆಗಳನ್ನು ನಿಯಂತ್ರಿಸಲು ಸರ್ಕಾರ ಹೇಗೆ ಮಧ್ಯಪ್ರವೇಶಿಸಿತು ಎಂಬುದನ್ನು ನೀವು ನೋಡಿದ್ದೀರಿ. ಸರ್ಕಾರ ಈಗಲೂ ಎಚ್ಚೆತ್ತುಕೊಳ್ಳದಿದ್ದರೇ ಭವಿಷ್ಯದಲ್ಲಿ, ಸರ್ಕಾರವು ತನ್ನ ಆಹಾರ ಧಾನ್ಯಗಳ ಅಗತ್ಯವನ್ನು ಪೂರೈಸಲು ಕಾರ್ಪೋರೇಟ್‌‌ಗಳನ್ನು ಅವಲಂಬಿಸಬೇಕಾಗುತ್ತದೆ’ ಎಂದು ಬ್ಯಾನರ್ಜಿ ಆತಂಕ ವ್ಯಕ್ತಪಡಿಸುತ್ತಾರೆ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...