Homeಮುಖಪುಟಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಕೃಷಿ ಮಸೂದೆಗಳು ದೀರ್ಘಾವಧಿಯಲ್ಲಿ ಸಾರ್ವಜನಿಕ ಬೆಂಬಲ ವ್ಯವಸ್ಥೆಯ ಮೇಲೆ (ಪಿಡಿಎಸ್) ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೊನೆಗೊಳಿಸಲು ಪರೋಕ್ಷವಾಗಿ ಕಾರಣವಾಗುತ್ತವೆ ಎಂದು ಪ.ಬಂಗಾಳ ಸರ್ಕಾರ ತಿಳಿಸಿದೆ.

- Advertisement -
- Advertisement -

ಸಂಸತ್ತು ಅಂಗೀಕರಿಸಿರುವ ವಿವಾದಿತ ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯಲು ಆಗ್ರಹಿಸಿ ವಿರುದ್ಧ ದೇಶದ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳು, ರೈತ ಸಂಘಟನೆಗಳು, ಯುವ, ದಲಿತ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿವೆ.

ಇವುಗಳ ನಡುವೆ ಪಶ್ಚಿಮ ಬಂಗಾಳ ಸರ್ಕಾರ ಈ ಕಾಯಿದೆಗಳ ದೀರ್ಘಾವಧಿಯ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಈ ಮೂರು ಕೃಷಿ ಮಸೂದೆಗಳು ದೀರ್ಘಾವಧಿಯಲ್ಲಿ ಸಾರ್ವಜನಿಕ ಬೆಂಬಲ ವ್ಯವಸ್ಥೆಯ ಮೇಲೆ (ಪಿಡಿಎಸ್) ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೊನೆಗೊಳಿಸಲು ಪರೋಕ್ಷವಾಗಿ ಕಾರಣವಾಗುತ್ತವೆ ಎಂದು ಪ.ಬಂಗಾಳ ಸರ್ಕಾರ ತಿಳಿಸಿದೆ.

ಮಸೂದೆಗಳಿ ಇಡೀ ಕೃಷಿ ಮಾರುಕಟ್ಟೆಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ಹಸ್ತಾಂತರಿಸುವುದರಿಂದ ಎಂಎಸ್‌ಪಿ ನೀಡಿ ರೈತರ ಬೆಳೆ ಕೊಳ್ಳುವುದರಿಂದ ಸರ್ಕಾರಗಳು ಹಿಂದೆ ಸರಿಯುತ್ತವೆ ಎಂದು ರಾಜ್ಯದ ತೃಣಮೂಲ ಕಾಂಗ್ರೆಸ್ ಸರ್ಕಾರ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಈಗ ಮುಕ್ತ-ಸಂಗ್ರಹದಡಿಯಲ್ಲಿ, ಪಿಡಿಎಸ್‌ಗಾಗಿ ಭಾರತದ ಆಹಾರ ನಿಗಮ (ಎಫ್‌ಸಿಐ) ಸೇರಿದಂತೆ ಸರ್ಕಾರಿ ಸಂಸ್ಥೆಗಳು ಎಂಎಸ್‌ಪಿ ದರನೀಡಿ ನಿಗದಿತ ಅವಧಿಯೊಳಗೆ ರೈತರಿಂದ ಆಹಾರ ಧಾನ್ಯಗಳನ್ನು ಖರೀದಿಸಿ ಸಂಗ್ರಹಿಸುತ್ತವೆ. ಕೆಲವು ರಾಜ್ಯಗಳು ಗೋಧಿ ಮತ್ತು ಭತ್ತದ ಮೇಲೆ ಎಂಎಸ್‌ಪಿಗಿಂತ ಹೆಚ್ಚಿನ ರಾಜ್ಯ ಬೋನಸ್ ಸಹ ಘೋಷಿಸುತ್ತವೆ.

 

“ಈ ಕಾಯಿದೆಗಳಿಂದ ಆಹಾರ ದಾಸ್ತಾನು ಮಾಡಲು ಯಾವುದೇ ಸರ್ಕಾರಿ ನಿಯಮಗಳು ಮತ್ತು ನಿರ್ಬಂಧವಿಲ್ಲದ ಕಾರಣ, ಕಾರ್ಪೋರೆಟ್ ಮಾರುಕಟ್ಟೆ ಸಂಗ್ರಹವು ಸರ್ಕಾರದ ಖರೀದಿ, ಸಂಗ್ರಹಣೆ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳ್ಳುತ್ತವೆ” ಎಂದು ಪಶ್ಚಿಮ ಬಂಗಾಳದ ಕೃಷಿ ಸಚಿವ ಆಸಿಶ್ ಬ್ಯಾನರ್ಜಿ ದಿ ಫೆಡರಲ್ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗೀಕಾರ: ಬಹುಮತವಿಲ್ಲದೆ ನಿಯಮಗಳ ಉಲ್ಲಂಘನೆ..?

ಈ ಮಸೂದೆಗಳು ರೈತರಿಗೆ ಮರಣದಂಡನೆ ಮಾತ್ರವಲ್ಲದೆ ಆಹಾರ ಭದ್ರತೆ ಮತ್ತು ರಾಜ್ಯ ಸರ್ಕಾರಗಳು ಸಬ್ಸಿಡಿ ನೀಡುವ ಆಹಾರ ಧಾನ್ಯಗಳ ವಿತರಣೆಯ ಮೇಲೂ ಪರಿಣಾಮ ಬೀರುತ್ತವೆ. ಈ ಮಸೂದೆಗಳಲ್ಲಿ ಬೆಲೆ ನಿಗದಿ ಮಾಡಲು ಯಾವುದೇ ನಿಗದಿತ ಕಾರ್ಯವಿಧಾನಗಳಿಲ್ಲ. ಇದರಿಂದಾಗಿ ರೈತರು ಮತ್ತು ಗ್ರಾಹಕರನ್ನು ಶೋಷಿಸಲು ಕಾರ್ಪೊರೇಟ್‌‌ಗಳಿಗೆ ಎಲ್ಲ ಅವಕಾಶ ದೊರೆಯುತ್ತದೆ ಎಂದು ಆಸಿಶ್ ಬ್ಯಾನರ್ಜಿ ಹೇಳಿದ್ದಾರೆ.

’ಇತ್ತೀಚೆಗೆ ಆಲೂಗಡ್ಡೆ ಮತ್ತು ಈರುಳ್ಳಿಯ ಬೆಲೆಗಳು ಗಗನಕ್ಕೇರಿದಾಗ, ಬೆಲೆಗಳನ್ನು ನಿಯಂತ್ರಿಸಲು ಸರ್ಕಾರ ಹೇಗೆ ಮಧ್ಯಪ್ರವೇಶಿಸಿತು ಎಂಬುದನ್ನು ನೀವು ನೋಡಿದ್ದೀರಿ. ಸರ್ಕಾರ ಈಗಲೂ ಎಚ್ಚೆತ್ತುಕೊಳ್ಳದಿದ್ದರೇ ಭವಿಷ್ಯದಲ್ಲಿ, ಸರ್ಕಾರವು ತನ್ನ ಆಹಾರ ಧಾನ್ಯಗಳ ಅಗತ್ಯವನ್ನು ಪೂರೈಸಲು ಕಾರ್ಪೋರೇಟ್‌‌ಗಳನ್ನು ಅವಲಂಬಿಸಬೇಕಾಗುತ್ತದೆ’ ಎಂದು ಬ್ಯಾನರ್ಜಿ ಆತಂಕ ವ್ಯಕ್ತಪಡಿಸುತ್ತಾರೆ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...