Homeಮುಖಪುಟಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

- Advertisement -
- Advertisement -

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ) ಯಾರೂ ಕೈ ಹಾಕುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ, ಒಮ್ಮೆ ಅಧಿಕಾರದ ಗದ್ದುಗೆ ಭದ್ರವಾಗುತ್ತಿದ್ದಂತೆ, ಚುನಾವಣಾ ಪ್ರದರ್ಶನಗಳು ಬದಿಗೆ ಸರಿದು ನೀತಿಗಳು (ಅಜೆಂಡಾ) ಮುಂಚೂಣಿಗೆ ಬಂದವು. ಪರಿಣಾಮವಾಗಿ, ಹೊಸ ಸರ್ಕಾರವು ಶಾಲಾ ಮಧ್ಯಾಹ್ನದ ಬಿಸಿಯೂಟದಲ್ಲಿ ಇನ್ನು ಮುಂದೆ ಮೊಟ್ಟೆಗಳನ್ನು ನೀಡದಿರಲು ನಿರ್ಧರಿಸಿದೆ.

ಪಶ್ಚಿಮ ಬಂಗಾಳದ ಹೊಸ ಸರ್ಕಾರವು ಕೋಲ್ಕತ್ತಾದ ಸುಮಾರು 1,800 ಶಾಲೆಗಳ ಮಧ್ಯಾಹ್ನದ ಬಿಸಿಯೂಟದ ಜವಾಬ್ದಾರಿಯನ್ನು ಇಸ್ಕಾನ್ (ISKCON) ಮತ್ತು ಅದರ ‘ಅನ್ನಾಮೃತ ಫೌಂಡೇಶನ್’ಗೆ ವಹಿಸಿದೆ. ಇಸ್ಕಾನ್ ಸಂಪೂರ್ಣ ಸಸ್ಯಾಹಾರಿ ಅಡುಗೆಮನೆಯನ್ನು ನಡೆಸುವುದರಿಂದ, ಮಕ್ಕಳ ಪ್ರೊಟೀನ್ ಅಗತ್ಯವನ್ನು ಪೂರೈಸಲು ಮೊಟ್ಟೆಗಳ ಬದಲಿಗೆ ಪನ್ನೀರ್, ಸೋಯಾ, ರಾಜ್ಮಾ ಮತ್ತು ಬೇಳೆಕಾಳುಗಳನ್ನು ನೀಡಲಾಗುತ್ತದೆ ಎಂದು ಹೇಳಿದೆ.

ನಿಜ ಹೇಳಬೇಕೆಂದರೆ, ಇಸ್ಕಾನ್ ಸಂಸ್ಥೆಯಿಂದ ಏನನ್ನು ನಿರೀಕ್ಷಿಸಬಹುದೋ ಅದನ್ನೇ ಅದು ಮಾಡಿದೆ. ಸಸ್ಯಾಹಾರಿ ಆಹಾರಕ್ಕೆ ತನ್ನ ಸದ್ಧಾಂತಿಕ ಬದ್ಧತೆಯನ್ನು ಅದು ಎಂದಿಗೂ ಮುಚ್ಚಿಟ್ಟಿಲ್ಲ. ಧಾರ್ಮಿಕ ಸಂಸ್ಥೆಯೊಂದು ತನ್ನ ನಂಬಿಕೆಗಳನ್ನು ಪ್ರತಿಬಿಂಬಿಸುವ ಆಹಾರವನ್ನೇ ಬಡಿಸಬೇಕು ಎಂದು ಹಠ ಹಿಡಿದಿರುವುದು ಇದೇ ಮೊದಲೇನಲ್ಲ. ‘ಅಕ್ಷಯ ಪಾತ್ರೆ ಫೌಂಡೇಶನ್’ ಕೂಡ ವರ್ಷಗಳಿಂದ ಇಂತಹುದೇ ನಿಲುವನ್ನು ಸಮರ್ಥಿಸಿಕೊಳ್ಳುತ್ತಾ ಬಂದಿದೆ. ಆದರೆ, ಸರ್ಕಾರದ ಕಲ್ಯಾಣ ಯೋಜನೆಯಡಿ ಮಕ್ಕಳು ಏನನ್ನು ತಿನ್ನಬೇಕು ಎಂಬುದನ್ನು ಸಿದ್ಧಾಂತಗಳು ನಿರ್ಧರಿಸಬೇಕೇ ಎಂದು ಪೌಷ್ಟಿಕಾಂಶ ತಜ್ಞರು ನಿರಂತರವಾಗಿ ಪ್ರಶ್ನಿಸುತ್ತಲೇ ಬಂದಿದ್ದಾರೆ.

ತಾವು ನೇಮಿಸಿಕೊಳ್ಳುವ ಸಂಸ್ಥೆಯ ಆಹಾರದ ನಂಬಿಕೆಗಳನ್ನು ಸರ್ಕಾರ ಪಾಲಿಸಬೇಕಾದ ಯಾವುದೇ ಅಗತ್ಯವಿಲ್ಲ. ಮಧ್ಯಾಹ್ನದ ಬಿಸಿಯೂಟ ಎನ್ನುವುದು ಯಾವುದೋ ಧಾರ್ಮಿಕ ದಾನ-ಧರ್ಮವಲ್ಲ. ಅದು ಸ್ವತಂತ್ರ ಭಾರತದ ಅತ್ಯಂತ ಯಶಸ್ವಿ ಕಲ್ಯಾಣ ಯೋಜನೆಗಳಲ್ಲಿ ಒಂದಾಗಿದೆ. ಮಕ್ಕಳನ್ನು ಶಾಲೆಗೆ ಬರುವಂತೆ ಮಾಡಲು, ಅಪೌಷ್ಟಿಕತೆಯ ವಿರುದ್ಧ ಹೋರಾಡಲು ಮತ್ತು ಬಡತನವು ಮಗುವಿನ ತಟ್ಟೆಯನ್ನು ಹಾಗೂ ಭವಿಷ್ಯವನ್ನು ನಿರ್ಧರಿಸಬಾರದು ಎಂಬ ಉದ್ದೇಶದಿಂದ ಇದನ್ನು ರೂಪಿಸಲಾಗಿದೆ. ಆದ್ದರಿಂದ, ಈ ಬಿಸಿಯೂಟದ ಮೆನು ಸಾರ್ವಜನಿಕ ಆರೋಗ್ಯ ಮತ್ತು ಮಕ್ಕಳ ಅಗತ್ಯಗಳಿಗೆ ಪೂರಕವಾಗಿರಬೇಕೇ ಹೊರತು ಧರ್ಮಕ್ಕಲ್ಲ. ಇದಕ್ಕೆ ಮೊಟ್ಟೆಗಳೇ ಅತ್ಯಂತ ಸೂಕ್ತ ಪರಿಹಾರವಾಗಿದೆ.

ಆದರೆ ಭಾರತದಲ್ಲಿ ಆಗಾಗ ಯಾವುದೋ ಒಂದು ಮೂಲೆಯಲ್ಲಿ ಮೊಟ್ಟೆಯೊಂದಿಗೆ ರಾಜಕೀಯ ವಿವಾದವನ್ನು ಎಳೆದು ತರಲಾಗುತ್ತದೆ. ಮೊಟ್ಟೆ ಎನ್ನುವುದು ಯಾವುದೇ ದೊಡ್ಡ ಭಾವನೆಯನ್ನು ಪ್ರಚೋದಿಸದಷ್ಟು ಸಾಮಾನ್ಯವಾದದ್ದು ಮತ್ತು ನಿರ್ಲಕ್ಷಿಸಲಾಗದಷ್ಟು ಪೌಷ್ಟಿಕಾಂಶದ್ದು. ಅದು ಭಾರತದ ಬಹುತೇಕ ಭಾಗಗಳಲ್ಲಿ ಅಗ್ಗವಾಗಿ, ಎಲ್ಲರಿಗೂ ಒಪ್ಪಿತವಾಗಿ, ಬೇಯಿಸಲು ಸುಲಭವಾಗಿ ಮತ್ತು ಅತ್ಯಂತ ಪೌಷ್ಟಿಕವಾಗಿರುವ ಕಾರಣಕ್ಕಾಗಿಯೇ ಇಷ್ಟು ವರ್ಷಗಳ ಕಾಲ ಬಿಸಿಯೂಟದ ವ್ಯವಸ್ಥೆಯಲ್ಲಿ ಉಳಿದುಕೊಂಡಿದೆ. ಅದಕ್ಕಾಗಿಯೇ ಸರ್ಕಾರಗಳು ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆಯನ್ನು ಆಯ್ಕೆ ಮಾಡಿಕೊಂಡಿದ್ದವು.

ಈಗ, ಇಸ್ಕಾನ್ ಸಂಸ್ಥೆಯು ಮೊಟ್ಟೆಗೆ ಪರ್ಯಾಯವಾಗಿ ಸೋಯಾ ಮತ್ತು ಪನ್ನೀರ್ ಅನ್ನು ನೀಡುತ್ತಿದೆ. ಆದರೆ ಇವೆರಡೂ ಮೊಟ್ಟೆಗೆ ಸಮಾನ ಪರ್ಯಾಯಗಳಲ್ಲ ಎಂದು ವೈದ್ಯರು ದಶಕಗಳಿಂದಲೂ ಹೇಳುತ್ತಲೇ ಬಂದಿದ್ದಾರೆ. ಮೊಟ್ಟೆಗಳಲ್ಲಿ ಅತ್ಯಂತ ಅಮೂಲ್ಯವಾದ ಪೌಷ್ಟಿಕಾಂಶಗಳಿವೆ ಎಂಬುದು ವಿಜ್ಞಾನ. ಆದರೆ ‘ನವ ಭಾರತ’ದಲ್ಲಿ ರಾಜಕೀಯಕ್ಕೆ ವಿಜ್ಞಾನವೇ ಅತ್ಯಂತ ದೊಡ್ಡ ಎದುರಾಳಿಯಾಗಿದೆ.

ಆಹಾರ, ವಿಜ್ಞಾನ ಮತ್ತು ನಂಬಿಕೆ

ಉತ್ತರ ಭಾರತದ ಇತರ ರಾಜ್ಯಗಳಿಗಿಂತ ಪಶ್ಚಿಮ ಬಂಗಾಳ ಆಹಾರದೊಂದಿಗಿನ ಸಂಬಂಧ ತೀರಾ ಭಿನ್ನವಾದುದು ಎಂಬುದನ್ನು ಬಿಜೆಪಿ ಚುನಾವಣಾ ಪ್ರಚಾರದ ಸಮಯದಲ್ಲಿ ಚೆನ್ನಾಗಿಯೇ ಅರಿತಿತ್ತು. ಬಂಗಾಳದಲ್ಲಿ ಆಹಾರಕ್ಕೆ ವಿಭಿನ್ನವಾದ ಗೌರವವಿದೆ. ಅಲ್ಲಿ ಮೀನನ್ನು ವಧುವಿಗೆ ಉಡುಗೊರೆಯಾಗಿ ನೀಡಬಹುದು, ದೇವತೆಗಳಿಗೆ ನೈವೇದ್ಯವಾಗಿ ಅರ್ಪಿಸಬಹುದು ಮತ್ತು ಯಾವುದೇ ವಿವಾದವಿಲ್ಲದೆ ಮಧ್ಯಾಹ್ನದ ಊಟಕ್ಕೆ ಬೇಯಿಸಬಹುದು. ಆದರೆ ಬಂಗಾಳದ ಹೊರಗೆ, ಹಿಂದೂ ಧರ್ಮವನ್ನು ಒಂದೇ ಒಂದು ಸಸ್ಯಾಹಾರಿ ಚೌಕಟ್ಟಿಗೆ ತರಲು ಹಠ ಹಿಡಿದಿರುವವರಿಗೆ ಇದು ಆಘಾತವನ್ನುಂಟು ಮಾಡುತ್ತದೆ.

ಆದರೆ ಬಂಗಾಳಿ ಅಡುಗೆಮನೆಗೆ ಎಂದಿಗೂ ಇಂತಹ ಆತಂಕವಿರಲಿಲ್ಲ. ಬಂಗಾಳದ ಸಂಸ್ಕೃತಿಯ ವೈಶಿಷ್ಟ್ಯ ಅಡಗಿರುವುದು ಯಾವುದನ್ನೂ ಹೊರಗಿಡುವುದರಲ್ಲಲ್ಲ, ಬದಲಿಗೆ ಎಲ್ಲವನ್ನೂ ಒಳಗೊಳ್ಳುವುದರಲ್ಲಿ; ಮಡಿವಂತಿಕೆಯಲ್ಲಲ್ಲ, ಬದಲಿಗೆ ಆಹಾರದ ಮೇಲಿನ ಪ್ರೀತಿಯಲ್ಲಿ. ಅಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರಗಳು ನೈತಿಕತೆಯ ಚೌಕಟ್ಟಿಗೆ ಸಿಲುಕದೆ ಒಟ್ಟಿಗೆ ಸಹಬಾಳ್ವೆ ನಡೆಸುತ್ತಿವೆ.

ಹಾಗಾಗಿಯೇ, ಬಂಗಾಳಿಗಳ ‘ಮೀನು-ಊಟದ’ ಈ ಸಹಜ ಗುಣವನ್ನು ಅರಿತಿದ್ದ ರಾಜಕಾರಣಿಗಳು, ಚುನಾವಣಾ ಪ್ರಚಾರದ ಸಮಯದಲ್ಲಿ ಸಾಸಿವೆ ಎಣ್ಣೆಯ ರುಚಿಯನ್ನು ತಕ್ಷಣವೇ ಒಪ್ಪಿಕೊಂಡರು. ಬಿಜೆಪಿ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನಿನ ರುಚಿ ನೋಡಿದರು, ಏಕೆಂದರೆ ಬಂಗಾಳದ ಆಹಾರ ಪದ್ಧತಿಯನ್ನು ಬಲವಂತವಾಗಿ ಶರಣಾಗಿಸಲು ಸಾಧ್ಯವಿಲ್ಲ ಎಂಬುದು ಅವರಿಗೆ ತಿಳಿದಿತ್ತು. ಈ ರೀತಿ ನಟಿಸದೇ ಇದ್ದರೆ ಚುನಾವಣೆಯಲ್ಲಿ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂಬುದು ಅವರಿಗೆ ಗೊತ್ತಿತ್ತು.

ಆದರೆ, ಒಮ್ಮೆ ಅಧಿಕಾರಕ್ಕೆ ಬಂದ ಮೇಲೆ ಅವರ ಆಡಳಿತದ ಶೈಲಿಯೇ ಸಂಪೂರ್ಣ ಬದಲಾಗಿದೆ. ಶಾಲಾ ಬಿಸಿಯೂಟದಿಂದ ಮೊಟ್ಟೆಯನ್ನು ಹೊರದೂಡಿರುವುದು, ಅಧಿಕಾರ ಸಿಕ್ಕ ತಕ್ಷಣ ಸಾಂಕೇತಿಕ ಭರವಸೆಗಳು ಹೇಗೆ ಸೈದ್ಧಾಂತಿಕ ಹಿತಾಸಕ್ತಿಗಳಿಗೆ ಬಲಿಯಾಗುತ್ತವೆ ಎಂಬುದನ್ನು ತೋರಿಸುತ್ತದೆ. ದುರಂತವೆಂದರೆ, ಮಕ್ಕಳಿಗೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೂ, ಅವರು ಈ ರಾಜಕೀಯ ಜಗಳದ ಮಧ್ಯೆ ದಾಳವಾಗುತ್ತಿದ್ದಾರೆ.

ಕಲ್ಯಾಣ ಯೋಜನೆಗಳು ಅಸ್ತಿತ್ವದಲ್ಲಿ ಇರುವುದು ಸರ್ಕಾರಗಳು ನಂಬಿಕೆಗಳಿಗಿಂತ ಫಲಿತಾಂಶಗಳಿಗೆ ಆದ್ಯತೆ ನೀಡಬೇಕು ಎಂಬ ಕಾರಣಕ್ಕಾಗಿ. ಬಾಲ್ಯದ ದೈನಂದಿನ ಆಹಾರದಲ್ಲಿ ಮೊಟ್ಟೆಗಳು ಅತ್ಯಗತ್ಯ ಎಂದು ವಿಜ್ಞಾನ ಮತ್ತು ವೈದ್ಯರು ಹೇಳಿದ ಮೇಲೆ ಆ ವಿಷಯ ಅಲ್ಲಿಗೇ ಮುಗಿಯಬೇಕಿತ್ತು. ಅದನ್ನು ನಂಬಿಕೊಂಡಿರುವ ಬಡ ಮಕ್ಕಳಿಗೆ ಅದನ್ನು ತಲುಪಿಸುವುದು ಮಾತ್ರ ಸರ್ಕಾರದ ಕೆಲಸವಾಗಿರಬೇಕು.

“ಊಟದ ವಿಷಯದಲ್ಲಿ ಧರ್ಮ ಅಥವಾ ನಂಬಿಕೆಯನ್ನು ಎಲ್ಲಿಯವರೆಗೆ ಇಟ್ಟುಕೊಳ್ಳಬೇಕು ಮತ್ತು ಮಕ್ಕಳ ಆರೋಗ್ಯದ ವಿಷಯ ಬಂದಾಗ ವಿಜ್ಞಾನಕ್ಕೆ ಹೇಗೆ ಬೆಲೆ ಕೊಡಬೇಕು ಎಂಬ ವಿವೇಕ ಬಂಗಾಳದ ಜನರಿಗೆ ಚೆನ್ನಾಗಿ ಗೊತ್ತಿದೆ.” ಎಂಬ ಮಾತು ನಿಜವಾಗಲಿ. ಮಕ್ಕಳ ತಟ್ಟೆಗೆ ಕೈ ಹಾಕಿರುವ ಬಿಜೆಪಿಗೆ ಪಾಠವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...