Homeಮುಖಪುಟಪಶ್ಚಿಮ ಬಂಗಾಳ : ಮಹಿಳೆಗೆ ಅಮಾನುಷವಾಗಿ ಥಳಿಸಿದ ಟಿಎಂಸಿ ಮುಖಂಡ

ಪಶ್ಚಿಮ ಬಂಗಾಳ : ಮಹಿಳೆಗೆ ಅಮಾನುಷವಾಗಿ ಥಳಿಸಿದ ಟಿಎಂಸಿ ಮುಖಂಡ

- Advertisement -
- Advertisement -

ಪಶ್ಚಿಮ ಬಂಗಾಳದ ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮುಖಂಡ ಎನ್ನಲಾದ ವ್ಯಕ್ತಿ ಮಹಿಳೆಯೊಬ್ಬರಿಗೆ ಸಾರ್ವಜನಿಕವಾಗಿ ಥಳಿಸಿರುವ ಘಟನೆ ನಡೆದಿದೆ.

ಉತ್ತರ ದಿನಾಜ್‌ಪುರ ಜಿಲ್ಲೆಯ ಲಖೀಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘೆಮ್ಟಗಚ್ ಗ್ರಾಮದ ರಸ್ತೆಯಲ್ಲಿ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆಗೆ ಭೀಕರವಾಗಿ ಥಳಿಸುವಾಗ ನೂರಾರು ಜನರು ಸುತ್ತುವರಿದು ನೋಡುವ ದೃಶ್ಯವಿದೆ.

ಜೂನ್ 28ರಂದು ಘಟನೆ ನಡೆದರೂ ಬೆಳಕಿಗೆ ಬಂದಿರಲಿಲ್ಲ. ಜನರ ಮೊಬೈಲ್‌ನಲ್ಲಿ ವಿಡಿಯೋ ಹರಿದಾಡುತ್ತಿತ್ತು. ಆದರೆ, ಅವರು ಭಯದಿಂದ ಪೊಲೀಸರು ಮತ್ತು ಮಾಧ್ಯಮಗಳಿಗೆ ತಿಳಿಸಿರಲಿಲ್ಲ ಎಂದು ವರದಿಗಳು ಹೇಳಿವೆ.

ಘಟನೆ ಸಂಬಂಧ ಇಸ್ಲಾಂಪುರ ಪೊಲೀಸ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಡಾ. ಜೋಬಿ ಥಾಮಸ್ ಕೆ ಅವರನ್ನು ನಾವು ಸಂಪರ್ಕಿಸಿದ್ದು, “ಚೋಪ್ರಾ ಪ್ರದೇಶದ ಘಟನೆಯೊಂದು ನಮ್ಮ ಗಮನಕ್ಕೆ ಬಂದಿದೆ. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸ್ ತನಿಖೆ ಮುಂದುವರಿಯುತ್ತದೆ.” ಎಂದು ತಿಳಿಸಿದ್ದಾರೆ ಎಂಬುವುದಾಗಿ ದಿ ವೈರ್ ವರದಿ ಮಾಡಿದೆ.

ಜೂನ್ 30ರಂದು ಸಂಜೆ ಘಟನೆಯ ಬಗ್ಗೆ ತಪ್ಪು ಮಾಹಿತಿ ಹರಡಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ಎಕ್ಸ್‌ನಲ್ಲಿ ಬರೆದಿದ್ದಾರೆ. ಆದರೆ, ಆರೋಪಿಗಳ ಪಕ್ಷದ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ.

ಹಲ್ಲೆಗೊಳಗಾದ ಮಹಿಳೆಯನ್ನು ಸುಲ್ತಾನಾ ಎಂದು ಗುರುತಿಸಲಾಗಿದ್ದು, ಈಕೆ ವಾರದ ಹಿಂದೆ ತನ್ನ ಪತಿ ಮತ್ತು ಇಬ್ಬರು ಮಕ್ಕಳನ್ನು ತೊರೆದು ರಾಜೀವ್ ಎಂಬ ವ್ಯಕ್ತಿಯೊಂದಿಗೆ ಸಿಲಿಗುರಿ ಬಳಿಯ ಮಟಿಗಾರ ಪ್ರದೇಶಕ್ಕೆ ತೆರಳಿದ್ದರು. ಜೂನ್ 28 ರಂದು ರಾಜೀವ್ ಮತ್ತು ಸುಲ್ತಾನಾ ಗ್ರಾಮಕ್ಕೆ ಮರಳಿದಾಗ ಥಳಿಸಲಾಗಿದೆ ಎಂದು ದಿ ವೈರ್ ಹೇಳಿದೆ.

ಟಿಎಂಸಿಯ ಸ್ಥಳೀಯ ಮುಖಂಡ ತಾಜಿಮುಲ್ ಅಲಿಯಾಸ್ ‘ಜೆಸಿಬಿ’ ಮಹಿಳೆಗೆ ಥಳಿಸಿದ್ದು, ಆಕೆ ತನ್ನ ಪತಿಯನ್ನು ಎರಡನೇ ಬಾರಿ ಮದುವೆಯಾಗಬೇಕಾದರೆ 3 ಲಕ್ಷ ರೂ. ಮತ್ತು ತಾಜಿಮುಲ್‌ಗೆ 2 ಲಕ್ಷ ರೂ. ಪಾವತಿಸಬೇಕೆಂದು ಷರತ್ತು ವಿಧಿಸಲಾಗಿತ್ತು. ಆದರೆ, ಸುಲ್ತಾನಾ ಹಣ ಪಾವತಿಸಲು ನಿರಾಕರಿಸಿದ್ದರು.

ಇದರಿಂದ ಕುಪಿತಗೊಂಡ ತಾಜಿಮುಲ್, ಮೊದಲು ಮಹಿಳೆಗೆ ಅವಮಾನಿಸಿ ಬಳಿಕ ಸುಮಾರು ಒಂದು ಗಂಟೆಗಳ ಕಾಲ ಭೀಕರವಾಗಿ ಥಳಿಸಿದ್ದಾನೆ. ಕೆಲ ಪ್ರತ್ಯಕ್ಷದರ್ಶಿಗಳ ಪ್ರಕಾರ, ರಾಜೀವ್‌ಗೂ ಥಳಿಸಲಾಗಿದೆ ಎನ್ನಲಾಗಿದೆ.

ಘಟನೆ ನಡೆದ ನಾಲ್ಕೈದು ಗಂಟೆಗಳ ನಂತರ ಚೋಪ್ರಾ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಜ್ಞಾಹೀನರಾಗಿದ್ದ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಂಧನಕ್ಕೊಳಗಾದ ವ್ಯಕ್ತಿ ತಾಜಿಮುಲ್ ಜಾಮೀನು ಕೂಡ ಪಡೆದಿದ್ದಾನೆ ಎಂದು ದಿ ವೈರ್ ಖಚಿತಪಡಿಸಿದೆ.

ತಾಜಿಮುಲ್ ಚೋಪ್ರಾ ಶಾಸಕ ಹಮೀದುರ್ ರೆಹಮಾನ್ ಅವರ ಬಲಗೈ ಬಂಟ ಎಂದು ತಿಳಿದು ಬಂದಿದೆ. ಈತ ಹಲವು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ವರದಿಯಾಗಿದೆ. ಕಳೆದ ವರ್ಷ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಗುಂಡಿನ ದಾಳಿಯಿಂದ ಹತ್ಯೆಗೀಡಾದ ಯುವ ಸಿಪಿಐ(ಎಂ) ಕಾರ್ಯಕರ್ತ ಮನ್ಸೂರ್ ಹತ್ಯೆ ಪ್ರಕರಣದ ಪ್ರಮುಖ ಶಂಕಿತ ಆರೋಪಿ ಈತನಾಗಿದ್ದಾನೆ.

ಮಾಜಿ ಸಂಸದ ಮತ್ತು ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಅವರು ಎಕ್ಸ್‌ ಪೋಸ್ಟ್‌ನಲ್ಲಿ ಹಲ್ಲೆಯ ವಿಡಿಯೋವನ್ನು ಚಿತ್ರೀಕರಿಸಿದ ವ್ಯಕ್ತಿಯನ್ನು ಈಗಾಗಲೇ ಗ್ರಾಮದಿಂದ ಹೊರಹಾಕಲಾಗಿದೆ ಎಂದು ಹೇಳಿದ್ದಾರೆ. ದಿ ವೈರ್‌ ಇದನ್ನು ದೃಢಪಡಿಸಿವೆ. ವಿಡಿಯೋ ಹಂಚಿಕೆಯಲ್ಲಿ ಪಾತ್ರವಹಿಸಿದ ಇನ್ನೊಬ್ಬ ವ್ಯಕ್ತಿಗೆ 50,000 ರೂ “ದಂಡ” ವಿಧಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ನೀಟ್-ಯುಜಿ ಮರು ಪರೀಕ್ಷೆ: ಪರಿಷ್ಕೃತ ಶ್ರೇಣಿಯ ಪಟ್ಟಿ ಪ್ರಕಟಿಸಿದ ಎನ್‌ಟಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...