Homeಮುಖಪುಟ10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

- Advertisement -
- Advertisement -

ಕಳೆದ 10 ವರ್ಷಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿಲೋಮೀಟರ್ ಅರಣ್ಯ ನಾಶವಾಗಿದೆ ಎಂದು ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌) -2023 ಹೇಳಿದೆ.

ಭಾರತೀಯ ಅರಣ್ಯ ಸಮೀಕ್ಷೆ (ಐಎಫ್‌ಎಸ್‌)ಯ ಭಾಗವಾಗಿ ಸಿದ್ದಪಡಿಸಲಾದ ವರದಿಯನ್ನು ಶನಿವಾರ (ಡಿ.21) ಉತ್ತರಾಖಂಡದ ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದರು.

PC : pib.gov.in

ವರದಿಯಲ್ಲಿ, ಕಳೆದ 10 ವರ್ಷದ ಅವಧಿಯಲ್ಲಿ ಪಶ್ಚಿಮ ಘಟ್ಟದಲ್ಲಿ ಅತ್ಯಂತ ದಟ್ಟಾರಣ್ಯಗಳು 3,465.12 ಚ.ಕಿ.ಮೀಗಳಷ್ಟು ಹೆಚ್ಚಾದರೆ, ಮಧ್ಯಮ ದಟ್ಟಾರಣ್ಯಗಳು ಮತ್ತು ತೆರೆದ ಅರಣ್ಯಗಳು ಕ್ರಮವಾಗಿ 1,043.23 ಚ.ಕಿ.ಮೀ ಮತ್ತು 2,480.11 ಚ.ಕಿ.ಮೀ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ಆರು ರಾಜ್ಯಗಳ 45 ಘಟ್ಟ ಜಿಲ್ಲೆಗಳ ಪೈಕಿ ಮಧ್ಯಮ ದಟ್ಟಾರಣ್ಯ ಹಾಗೂ ತೆರೆದ ಅರಣ್ಯ ಹೊಂದಿದ 25 ಜಿಲ್ಲೆಗಳು ಅರಣ್ಯ ನಾಶಕ್ಕೆ ಸಾಕ್ಷಿಯಾಗಿವೆ. ಗರಿಷ್ಠ ಪ್ರಮಾಣದಲ್ಲಿ ಅರಣ್ಯ ಪ್ರದೇಶವನ್ನು ಕಳೆದುಕೊಂಡಿರುವ ಪ್ರದೇಶಗಳಾಗಿ ತಮಿಳುನಾಡಿನ ನೀಲಗಿರಿ (123 ಚ.ಕಿ.ಮೀಗಿಂತ ಹೆಚ್ಚು), ಕೇರಳದ ಇಡುಕ್ಕಿ (98 ಚ.ಕಿ.ಮೀ), ಮಹಾರಾಷ್ಟ್ರದ ಪುಣೆ (83 ಚ.ಕಿ.ಮೀ), ಹಾಗೂ ಕರ್ನಾಟಕದ ಶಿವಮೊಗ್ಗ ಜಿಲ್ಲೆಗಳನ್ನು (74.5 ಚ.ಕಿ.ಮೀ) ಗುರುತಿಸಲಾಗಿದೆ.

ಪ್ರಸ್ತುತ ಅಂದಾಜಿನ ಪ್ರಕಾರ, ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು 827,357 ಚದರ ಕಿ.ಮೀ ಇದೆ. ಇದು ದೇಶದ ಭೌಗೋಳಿಕ ಪ್ರದೇಶದ ಶೇಕಡಾ 25.17 ಆಗಿದೆ. ಅರಣ್ಯ ಪ್ರದೇಶವು ಸುಮಾರು 715,343 ಚದರ ಕಿ.ಮೀ (21.76%) ವಿಸ್ತೀರ್ಣವನ್ನು ಹೊಂದಿದೆ. ಮರಗಳ ಹೊದಿಕೆಯು 112,014 ಚದರ ಕಿ.ಮೀ (3.41%) ವಿಸ್ತೀರ್ಣವನ್ನು ಆವರಿಸಿದೆ.

2021ಕ್ಕೆ ಹೋಲಿಸಿದರೆ, ದೇಶದ ಒಟ್ಟು ಅರಣ್ಯ ಮತ್ತು ಮರಗಳ ಹೊದಿಕೆಯಲ್ಲಿ 1,445 ಚದರ ಕಿ.ಮೀ ಹೆಚ್ಚಳವಾಗಿದೆ. ಮಹಾರಾಷ್ಟ್ರ (65,383 ಚದರ ಕಿ.ಮೀ) ಅತಿದೊಡ್ಡ ಅರಣ್ಯ ಮತ್ತು ಮರಗಳನ್ನು ಹೊಂದಿರುವ ಮೊದಲ ಮೂರು ರಾಜ್ಯಗಳಲ್ಲಿ ಒಂದಾಗಿದೆ ಎಂದು ಐಎಸ್‌ಎಫ್‌ಆರ್‌ ಎತ್ತಿ ತೋರಿಸಿದೆ.

ವರದಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ (WGESA) ಅರಣ್ಯ ವ್ಯಾಪ್ತಿಯ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಿದೆ. ಪಶ್ಚಿಮಘಟ್ಟ ಭಾರತದ ಅತ್ಯಂತ ಅಮೂಲ್ಯ ಜೀವವೈವಿಧ್ಯದ ತಾಣವಾಗಿದೆ. ಇದು ಗೋವಾ, ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡು ಈ ಆರು ರಾಜ್ಯಗಳ 45 ಜಿಲ್ಲೆಗಳು ಆವರಿಸಿದೆ.

ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌)

1987ರಿಂದ ಎರಡು ವರ್ಷಕೊಮ್ಮೆ ಭಾರತೀಯ ಅರಣ್ಯ ಸಮೀಕ್ಷೆ(ಎಫ್‌ಎಸ್‌ಐ) ವತಿಯಿಂದ ಭಾರತೀಯ ರಾಜ್ಯ ಅರಣ್ಯ ವರದಿ ( ಐಎಸ್‌ಎಫ್‌ಆರ್‌) ಪ್ರಕಟಿಸಲಾಗುತ್ತಿದೆ. ಎಫ್‌ಎಸ್‌ಐ ರಿಮೋಟ್ ಸೆನ್ಸಿಂಗ್‌ನ ವ್ಯಾಖ್ಯಾನದ ಆಧಾರದ ಮೇಲೆ ದೇಶದ ಅರಣ್ಯ ಮತ್ತು ಮರದ ಸಂಪನ್ಮೂಲಗಳ ಆಳವಾದ ಮೌಲ್ಯಮಾಪನವನ್ನು ನಡೆಸುತ್ತದೆ. ಉಪಗ್ರಹ ಡೇಟಾ ಮತ್ತು ಕ್ಷೇತ್ರ ಆಧಾರಿತ ರಾಷ್ಟ್ರೀಯ ಅರಣ್ಯ ದಾಸ್ತಾನು (ಎನ್‌ಎಫ್‌ಐಐ) ಫಲಿತಾಂಶಗಳನ್ನು ಐಎಸ್‌ಎಫ್‌ಆರ್‌ನಲ್ಲಿ ಪ್ರಕಟಿಸಲಾಗುತ್ತದೆ.

ಈ ಬಾರಿ ಪ್ರಕಟಿಸಿರುವುದು 18ನೇ ಐಎಸ್‌ಎಫ್‌ಆರ್‌ ಆಗಿದೆ. ಇದು ಭಾರತದ ಅರಣ್ಯ ಪ್ರದೇಶ, ಮರಗಳ ಹೊದಿಕೆ, ಮ್ಯಾಂಗ್ರೋವ್ ಹೊದಿಕೆ, ಅರಣ್ಯ ಹೊದಿಕೆ ಹೆಚ್ಚಳ, ಭಾರತದ ಕಾಡುಗಳಲ್ಲಿನ ಇಂಗಾಲದ ಸಂಗ್ರಹ, ಅರಣ್ಯ ಬೆಂಕಿಯ ನಿದರ್ಶನಗಳು, ಕೃಷಿ ಅರಣ್ಯ ಇತ್ಯಾದಿಗಳ ಮಾಹಿತಿಯನ್ನು ಒಳಗೊಂಡಿದೆ.

ಇದನ್ನೂ ಓದಿ : ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ’: ‘ದಿ ಕೇರಳ ಸ್ಟೋರಿ 2’ ಸಿನಿಮಾ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...