Homeಮುಖಪುಟ10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

- Advertisement -
- Advertisement -

ಕಳೆದ 10 ವರ್ಷಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿಲೋಮೀಟರ್ ಅರಣ್ಯ ನಾಶವಾಗಿದೆ ಎಂದು ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌) -2023 ಹೇಳಿದೆ.

ಭಾರತೀಯ ಅರಣ್ಯ ಸಮೀಕ್ಷೆ (ಐಎಫ್‌ಎಸ್‌)ಯ ಭಾಗವಾಗಿ ಸಿದ್ದಪಡಿಸಲಾದ ವರದಿಯನ್ನು ಶನಿವಾರ (ಡಿ.21) ಉತ್ತರಾಖಂಡದ ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದರು.

PC : pib.gov.in

ವರದಿಯಲ್ಲಿ, ಕಳೆದ 10 ವರ್ಷದ ಅವಧಿಯಲ್ಲಿ ಪಶ್ಚಿಮ ಘಟ್ಟದಲ್ಲಿ ಅತ್ಯಂತ ದಟ್ಟಾರಣ್ಯಗಳು 3,465.12 ಚ.ಕಿ.ಮೀಗಳಷ್ಟು ಹೆಚ್ಚಾದರೆ, ಮಧ್ಯಮ ದಟ್ಟಾರಣ್ಯಗಳು ಮತ್ತು ತೆರೆದ ಅರಣ್ಯಗಳು ಕ್ರಮವಾಗಿ 1,043.23 ಚ.ಕಿ.ಮೀ ಮತ್ತು 2,480.11 ಚ.ಕಿ.ಮೀ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ಆರು ರಾಜ್ಯಗಳ 45 ಘಟ್ಟ ಜಿಲ್ಲೆಗಳ ಪೈಕಿ ಮಧ್ಯಮ ದಟ್ಟಾರಣ್ಯ ಹಾಗೂ ತೆರೆದ ಅರಣ್ಯ ಹೊಂದಿದ 25 ಜಿಲ್ಲೆಗಳು ಅರಣ್ಯ ನಾಶಕ್ಕೆ ಸಾಕ್ಷಿಯಾಗಿವೆ. ಗರಿಷ್ಠ ಪ್ರಮಾಣದಲ್ಲಿ ಅರಣ್ಯ ಪ್ರದೇಶವನ್ನು ಕಳೆದುಕೊಂಡಿರುವ ಪ್ರದೇಶಗಳಾಗಿ ತಮಿಳುನಾಡಿನ ನೀಲಗಿರಿ (123 ಚ.ಕಿ.ಮೀಗಿಂತ ಹೆಚ್ಚು), ಕೇರಳದ ಇಡುಕ್ಕಿ (98 ಚ.ಕಿ.ಮೀ), ಮಹಾರಾಷ್ಟ್ರದ ಪುಣೆ (83 ಚ.ಕಿ.ಮೀ), ಹಾಗೂ ಕರ್ನಾಟಕದ ಶಿವಮೊಗ್ಗ ಜಿಲ್ಲೆಗಳನ್ನು (74.5 ಚ.ಕಿ.ಮೀ) ಗುರುತಿಸಲಾಗಿದೆ.

ಪ್ರಸ್ತುತ ಅಂದಾಜಿನ ಪ್ರಕಾರ, ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು 827,357 ಚದರ ಕಿ.ಮೀ ಇದೆ. ಇದು ದೇಶದ ಭೌಗೋಳಿಕ ಪ್ರದೇಶದ ಶೇಕಡಾ 25.17 ಆಗಿದೆ. ಅರಣ್ಯ ಪ್ರದೇಶವು ಸುಮಾರು 715,343 ಚದರ ಕಿ.ಮೀ (21.76%) ವಿಸ್ತೀರ್ಣವನ್ನು ಹೊಂದಿದೆ. ಮರಗಳ ಹೊದಿಕೆಯು 112,014 ಚದರ ಕಿ.ಮೀ (3.41%) ವಿಸ್ತೀರ್ಣವನ್ನು ಆವರಿಸಿದೆ.

2021ಕ್ಕೆ ಹೋಲಿಸಿದರೆ, ದೇಶದ ಒಟ್ಟು ಅರಣ್ಯ ಮತ್ತು ಮರಗಳ ಹೊದಿಕೆಯಲ್ಲಿ 1,445 ಚದರ ಕಿ.ಮೀ ಹೆಚ್ಚಳವಾಗಿದೆ. ಮಹಾರಾಷ್ಟ್ರ (65,383 ಚದರ ಕಿ.ಮೀ) ಅತಿದೊಡ್ಡ ಅರಣ್ಯ ಮತ್ತು ಮರಗಳನ್ನು ಹೊಂದಿರುವ ಮೊದಲ ಮೂರು ರಾಜ್ಯಗಳಲ್ಲಿ ಒಂದಾಗಿದೆ ಎಂದು ಐಎಸ್‌ಎಫ್‌ಆರ್‌ ಎತ್ತಿ ತೋರಿಸಿದೆ.

ವರದಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ (WGESA) ಅರಣ್ಯ ವ್ಯಾಪ್ತಿಯ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಿದೆ. ಪಶ್ಚಿಮಘಟ್ಟ ಭಾರತದ ಅತ್ಯಂತ ಅಮೂಲ್ಯ ಜೀವವೈವಿಧ್ಯದ ತಾಣವಾಗಿದೆ. ಇದು ಗೋವಾ, ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡು ಈ ಆರು ರಾಜ್ಯಗಳ 45 ಜಿಲ್ಲೆಗಳು ಆವರಿಸಿದೆ.

ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌)

1987ರಿಂದ ಎರಡು ವರ್ಷಕೊಮ್ಮೆ ಭಾರತೀಯ ಅರಣ್ಯ ಸಮೀಕ್ಷೆ(ಎಫ್‌ಎಸ್‌ಐ) ವತಿಯಿಂದ ಭಾರತೀಯ ರಾಜ್ಯ ಅರಣ್ಯ ವರದಿ ( ಐಎಸ್‌ಎಫ್‌ಆರ್‌) ಪ್ರಕಟಿಸಲಾಗುತ್ತಿದೆ. ಎಫ್‌ಎಸ್‌ಐ ರಿಮೋಟ್ ಸೆನ್ಸಿಂಗ್‌ನ ವ್ಯಾಖ್ಯಾನದ ಆಧಾರದ ಮೇಲೆ ದೇಶದ ಅರಣ್ಯ ಮತ್ತು ಮರದ ಸಂಪನ್ಮೂಲಗಳ ಆಳವಾದ ಮೌಲ್ಯಮಾಪನವನ್ನು ನಡೆಸುತ್ತದೆ. ಉಪಗ್ರಹ ಡೇಟಾ ಮತ್ತು ಕ್ಷೇತ್ರ ಆಧಾರಿತ ರಾಷ್ಟ್ರೀಯ ಅರಣ್ಯ ದಾಸ್ತಾನು (ಎನ್‌ಎಫ್‌ಐಐ) ಫಲಿತಾಂಶಗಳನ್ನು ಐಎಸ್‌ಎಫ್‌ಆರ್‌ನಲ್ಲಿ ಪ್ರಕಟಿಸಲಾಗುತ್ತದೆ.

ಈ ಬಾರಿ ಪ್ರಕಟಿಸಿರುವುದು 18ನೇ ಐಎಸ್‌ಎಫ್‌ಆರ್‌ ಆಗಿದೆ. ಇದು ಭಾರತದ ಅರಣ್ಯ ಪ್ರದೇಶ, ಮರಗಳ ಹೊದಿಕೆ, ಮ್ಯಾಂಗ್ರೋವ್ ಹೊದಿಕೆ, ಅರಣ್ಯ ಹೊದಿಕೆ ಹೆಚ್ಚಳ, ಭಾರತದ ಕಾಡುಗಳಲ್ಲಿನ ಇಂಗಾಲದ ಸಂಗ್ರಹ, ಅರಣ್ಯ ಬೆಂಕಿಯ ನಿದರ್ಶನಗಳು, ಕೃಷಿ ಅರಣ್ಯ ಇತ್ಯಾದಿಗಳ ಮಾಹಿತಿಯನ್ನು ಒಳಗೊಂಡಿದೆ.

ಇದನ್ನೂ ಓದಿ : ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...