Homeಮುಖಪುಟ10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

- Advertisement -
- Advertisement -

ಕಳೆದ 10 ವರ್ಷಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿಲೋಮೀಟರ್ ಅರಣ್ಯ ನಾಶವಾಗಿದೆ ಎಂದು ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌) -2023 ಹೇಳಿದೆ.

ಭಾರತೀಯ ಅರಣ್ಯ ಸಮೀಕ್ಷೆ (ಐಎಫ್‌ಎಸ್‌)ಯ ಭಾಗವಾಗಿ ಸಿದ್ದಪಡಿಸಲಾದ ವರದಿಯನ್ನು ಶನಿವಾರ (ಡಿ.21) ಉತ್ತರಾಖಂಡದ ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದರು.

PC : pib.gov.in

ವರದಿಯಲ್ಲಿ, ಕಳೆದ 10 ವರ್ಷದ ಅವಧಿಯಲ್ಲಿ ಪಶ್ಚಿಮ ಘಟ್ಟದಲ್ಲಿ ಅತ್ಯಂತ ದಟ್ಟಾರಣ್ಯಗಳು 3,465.12 ಚ.ಕಿ.ಮೀಗಳಷ್ಟು ಹೆಚ್ಚಾದರೆ, ಮಧ್ಯಮ ದಟ್ಟಾರಣ್ಯಗಳು ಮತ್ತು ತೆರೆದ ಅರಣ್ಯಗಳು ಕ್ರಮವಾಗಿ 1,043.23 ಚ.ಕಿ.ಮೀ ಮತ್ತು 2,480.11 ಚ.ಕಿ.ಮೀ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ಆರು ರಾಜ್ಯಗಳ 45 ಘಟ್ಟ ಜಿಲ್ಲೆಗಳ ಪೈಕಿ ಮಧ್ಯಮ ದಟ್ಟಾರಣ್ಯ ಹಾಗೂ ತೆರೆದ ಅರಣ್ಯ ಹೊಂದಿದ 25 ಜಿಲ್ಲೆಗಳು ಅರಣ್ಯ ನಾಶಕ್ಕೆ ಸಾಕ್ಷಿಯಾಗಿವೆ. ಗರಿಷ್ಠ ಪ್ರಮಾಣದಲ್ಲಿ ಅರಣ್ಯ ಪ್ರದೇಶವನ್ನು ಕಳೆದುಕೊಂಡಿರುವ ಪ್ರದೇಶಗಳಾಗಿ ತಮಿಳುನಾಡಿನ ನೀಲಗಿರಿ (123 ಚ.ಕಿ.ಮೀಗಿಂತ ಹೆಚ್ಚು), ಕೇರಳದ ಇಡುಕ್ಕಿ (98 ಚ.ಕಿ.ಮೀ), ಮಹಾರಾಷ್ಟ್ರದ ಪುಣೆ (83 ಚ.ಕಿ.ಮೀ), ಹಾಗೂ ಕರ್ನಾಟಕದ ಶಿವಮೊಗ್ಗ ಜಿಲ್ಲೆಗಳನ್ನು (74.5 ಚ.ಕಿ.ಮೀ) ಗುರುತಿಸಲಾಗಿದೆ.

ಪ್ರಸ್ತುತ ಅಂದಾಜಿನ ಪ್ರಕಾರ, ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು 827,357 ಚದರ ಕಿ.ಮೀ ಇದೆ. ಇದು ದೇಶದ ಭೌಗೋಳಿಕ ಪ್ರದೇಶದ ಶೇಕಡಾ 25.17 ಆಗಿದೆ. ಅರಣ್ಯ ಪ್ರದೇಶವು ಸುಮಾರು 715,343 ಚದರ ಕಿ.ಮೀ (21.76%) ವಿಸ್ತೀರ್ಣವನ್ನು ಹೊಂದಿದೆ. ಮರಗಳ ಹೊದಿಕೆಯು 112,014 ಚದರ ಕಿ.ಮೀ (3.41%) ವಿಸ್ತೀರ್ಣವನ್ನು ಆವರಿಸಿದೆ.

2021ಕ್ಕೆ ಹೋಲಿಸಿದರೆ, ದೇಶದ ಒಟ್ಟು ಅರಣ್ಯ ಮತ್ತು ಮರಗಳ ಹೊದಿಕೆಯಲ್ಲಿ 1,445 ಚದರ ಕಿ.ಮೀ ಹೆಚ್ಚಳವಾಗಿದೆ. ಮಹಾರಾಷ್ಟ್ರ (65,383 ಚದರ ಕಿ.ಮೀ) ಅತಿದೊಡ್ಡ ಅರಣ್ಯ ಮತ್ತು ಮರಗಳನ್ನು ಹೊಂದಿರುವ ಮೊದಲ ಮೂರು ರಾಜ್ಯಗಳಲ್ಲಿ ಒಂದಾಗಿದೆ ಎಂದು ಐಎಸ್‌ಎಫ್‌ಆರ್‌ ಎತ್ತಿ ತೋರಿಸಿದೆ.

ವರದಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ (WGESA) ಅರಣ್ಯ ವ್ಯಾಪ್ತಿಯ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಿದೆ. ಪಶ್ಚಿಮಘಟ್ಟ ಭಾರತದ ಅತ್ಯಂತ ಅಮೂಲ್ಯ ಜೀವವೈವಿಧ್ಯದ ತಾಣವಾಗಿದೆ. ಇದು ಗೋವಾ, ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡು ಈ ಆರು ರಾಜ್ಯಗಳ 45 ಜಿಲ್ಲೆಗಳು ಆವರಿಸಿದೆ.

ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌)

1987ರಿಂದ ಎರಡು ವರ್ಷಕೊಮ್ಮೆ ಭಾರತೀಯ ಅರಣ್ಯ ಸಮೀಕ್ಷೆ(ಎಫ್‌ಎಸ್‌ಐ) ವತಿಯಿಂದ ಭಾರತೀಯ ರಾಜ್ಯ ಅರಣ್ಯ ವರದಿ ( ಐಎಸ್‌ಎಫ್‌ಆರ್‌) ಪ್ರಕಟಿಸಲಾಗುತ್ತಿದೆ. ಎಫ್‌ಎಸ್‌ಐ ರಿಮೋಟ್ ಸೆನ್ಸಿಂಗ್‌ನ ವ್ಯಾಖ್ಯಾನದ ಆಧಾರದ ಮೇಲೆ ದೇಶದ ಅರಣ್ಯ ಮತ್ತು ಮರದ ಸಂಪನ್ಮೂಲಗಳ ಆಳವಾದ ಮೌಲ್ಯಮಾಪನವನ್ನು ನಡೆಸುತ್ತದೆ. ಉಪಗ್ರಹ ಡೇಟಾ ಮತ್ತು ಕ್ಷೇತ್ರ ಆಧಾರಿತ ರಾಷ್ಟ್ರೀಯ ಅರಣ್ಯ ದಾಸ್ತಾನು (ಎನ್‌ಎಫ್‌ಐಐ) ಫಲಿತಾಂಶಗಳನ್ನು ಐಎಸ್‌ಎಫ್‌ಆರ್‌ನಲ್ಲಿ ಪ್ರಕಟಿಸಲಾಗುತ್ತದೆ.

ಈ ಬಾರಿ ಪ್ರಕಟಿಸಿರುವುದು 18ನೇ ಐಎಸ್‌ಎಫ್‌ಆರ್‌ ಆಗಿದೆ. ಇದು ಭಾರತದ ಅರಣ್ಯ ಪ್ರದೇಶ, ಮರಗಳ ಹೊದಿಕೆ, ಮ್ಯಾಂಗ್ರೋವ್ ಹೊದಿಕೆ, ಅರಣ್ಯ ಹೊದಿಕೆ ಹೆಚ್ಚಳ, ಭಾರತದ ಕಾಡುಗಳಲ್ಲಿನ ಇಂಗಾಲದ ಸಂಗ್ರಹ, ಅರಣ್ಯ ಬೆಂಕಿಯ ನಿದರ್ಶನಗಳು, ಕೃಷಿ ಅರಣ್ಯ ಇತ್ಯಾದಿಗಳ ಮಾಹಿತಿಯನ್ನು ಒಳಗೊಂಡಿದೆ.

ಇದನ್ನೂ ಓದಿ : ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...