Homeಮುಖಪುಟ10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

- Advertisement -
- Advertisement -

ಕಳೆದ 10 ವರ್ಷಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿಲೋಮೀಟರ್ ಅರಣ್ಯ ನಾಶವಾಗಿದೆ ಎಂದು ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌) -2023 ಹೇಳಿದೆ.

ಭಾರತೀಯ ಅರಣ್ಯ ಸಮೀಕ್ಷೆ (ಐಎಫ್‌ಎಸ್‌)ಯ ಭಾಗವಾಗಿ ಸಿದ್ದಪಡಿಸಲಾದ ವರದಿಯನ್ನು ಶನಿವಾರ (ಡಿ.21) ಉತ್ತರಾಖಂಡದ ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದರು.

PC : pib.gov.in

ವರದಿಯಲ್ಲಿ, ಕಳೆದ 10 ವರ್ಷದ ಅವಧಿಯಲ್ಲಿ ಪಶ್ಚಿಮ ಘಟ್ಟದಲ್ಲಿ ಅತ್ಯಂತ ದಟ್ಟಾರಣ್ಯಗಳು 3,465.12 ಚ.ಕಿ.ಮೀಗಳಷ್ಟು ಹೆಚ್ಚಾದರೆ, ಮಧ್ಯಮ ದಟ್ಟಾರಣ್ಯಗಳು ಮತ್ತು ತೆರೆದ ಅರಣ್ಯಗಳು ಕ್ರಮವಾಗಿ 1,043.23 ಚ.ಕಿ.ಮೀ ಮತ್ತು 2,480.11 ಚ.ಕಿ.ಮೀ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ಆರು ರಾಜ್ಯಗಳ 45 ಘಟ್ಟ ಜಿಲ್ಲೆಗಳ ಪೈಕಿ ಮಧ್ಯಮ ದಟ್ಟಾರಣ್ಯ ಹಾಗೂ ತೆರೆದ ಅರಣ್ಯ ಹೊಂದಿದ 25 ಜಿಲ್ಲೆಗಳು ಅರಣ್ಯ ನಾಶಕ್ಕೆ ಸಾಕ್ಷಿಯಾಗಿವೆ. ಗರಿಷ್ಠ ಪ್ರಮಾಣದಲ್ಲಿ ಅರಣ್ಯ ಪ್ರದೇಶವನ್ನು ಕಳೆದುಕೊಂಡಿರುವ ಪ್ರದೇಶಗಳಾಗಿ ತಮಿಳುನಾಡಿನ ನೀಲಗಿರಿ (123 ಚ.ಕಿ.ಮೀಗಿಂತ ಹೆಚ್ಚು), ಕೇರಳದ ಇಡುಕ್ಕಿ (98 ಚ.ಕಿ.ಮೀ), ಮಹಾರಾಷ್ಟ್ರದ ಪುಣೆ (83 ಚ.ಕಿ.ಮೀ), ಹಾಗೂ ಕರ್ನಾಟಕದ ಶಿವಮೊಗ್ಗ ಜಿಲ್ಲೆಗಳನ್ನು (74.5 ಚ.ಕಿ.ಮೀ) ಗುರುತಿಸಲಾಗಿದೆ.

ಪ್ರಸ್ತುತ ಅಂದಾಜಿನ ಪ್ರಕಾರ, ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು 827,357 ಚದರ ಕಿ.ಮೀ ಇದೆ. ಇದು ದೇಶದ ಭೌಗೋಳಿಕ ಪ್ರದೇಶದ ಶೇಕಡಾ 25.17 ಆಗಿದೆ. ಅರಣ್ಯ ಪ್ರದೇಶವು ಸುಮಾರು 715,343 ಚದರ ಕಿ.ಮೀ (21.76%) ವಿಸ್ತೀರ್ಣವನ್ನು ಹೊಂದಿದೆ. ಮರಗಳ ಹೊದಿಕೆಯು 112,014 ಚದರ ಕಿ.ಮೀ (3.41%) ವಿಸ್ತೀರ್ಣವನ್ನು ಆವರಿಸಿದೆ.

2021ಕ್ಕೆ ಹೋಲಿಸಿದರೆ, ದೇಶದ ಒಟ್ಟು ಅರಣ್ಯ ಮತ್ತು ಮರಗಳ ಹೊದಿಕೆಯಲ್ಲಿ 1,445 ಚದರ ಕಿ.ಮೀ ಹೆಚ್ಚಳವಾಗಿದೆ. ಮಹಾರಾಷ್ಟ್ರ (65,383 ಚದರ ಕಿ.ಮೀ) ಅತಿದೊಡ್ಡ ಅರಣ್ಯ ಮತ್ತು ಮರಗಳನ್ನು ಹೊಂದಿರುವ ಮೊದಲ ಮೂರು ರಾಜ್ಯಗಳಲ್ಲಿ ಒಂದಾಗಿದೆ ಎಂದು ಐಎಸ್‌ಎಫ್‌ಆರ್‌ ಎತ್ತಿ ತೋರಿಸಿದೆ.

ವರದಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ (WGESA) ಅರಣ್ಯ ವ್ಯಾಪ್ತಿಯ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಿದೆ. ಪಶ್ಚಿಮಘಟ್ಟ ಭಾರತದ ಅತ್ಯಂತ ಅಮೂಲ್ಯ ಜೀವವೈವಿಧ್ಯದ ತಾಣವಾಗಿದೆ. ಇದು ಗೋವಾ, ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡು ಈ ಆರು ರಾಜ್ಯಗಳ 45 ಜಿಲ್ಲೆಗಳು ಆವರಿಸಿದೆ.

ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌)

1987ರಿಂದ ಎರಡು ವರ್ಷಕೊಮ್ಮೆ ಭಾರತೀಯ ಅರಣ್ಯ ಸಮೀಕ್ಷೆ(ಎಫ್‌ಎಸ್‌ಐ) ವತಿಯಿಂದ ಭಾರತೀಯ ರಾಜ್ಯ ಅರಣ್ಯ ವರದಿ ( ಐಎಸ್‌ಎಫ್‌ಆರ್‌) ಪ್ರಕಟಿಸಲಾಗುತ್ತಿದೆ. ಎಫ್‌ಎಸ್‌ಐ ರಿಮೋಟ್ ಸೆನ್ಸಿಂಗ್‌ನ ವ್ಯಾಖ್ಯಾನದ ಆಧಾರದ ಮೇಲೆ ದೇಶದ ಅರಣ್ಯ ಮತ್ತು ಮರದ ಸಂಪನ್ಮೂಲಗಳ ಆಳವಾದ ಮೌಲ್ಯಮಾಪನವನ್ನು ನಡೆಸುತ್ತದೆ. ಉಪಗ್ರಹ ಡೇಟಾ ಮತ್ತು ಕ್ಷೇತ್ರ ಆಧಾರಿತ ರಾಷ್ಟ್ರೀಯ ಅರಣ್ಯ ದಾಸ್ತಾನು (ಎನ್‌ಎಫ್‌ಐಐ) ಫಲಿತಾಂಶಗಳನ್ನು ಐಎಸ್‌ಎಫ್‌ಆರ್‌ನಲ್ಲಿ ಪ್ರಕಟಿಸಲಾಗುತ್ತದೆ.

ಈ ಬಾರಿ ಪ್ರಕಟಿಸಿರುವುದು 18ನೇ ಐಎಸ್‌ಎಫ್‌ಆರ್‌ ಆಗಿದೆ. ಇದು ಭಾರತದ ಅರಣ್ಯ ಪ್ರದೇಶ, ಮರಗಳ ಹೊದಿಕೆ, ಮ್ಯಾಂಗ್ರೋವ್ ಹೊದಿಕೆ, ಅರಣ್ಯ ಹೊದಿಕೆ ಹೆಚ್ಚಳ, ಭಾರತದ ಕಾಡುಗಳಲ್ಲಿನ ಇಂಗಾಲದ ಸಂಗ್ರಹ, ಅರಣ್ಯ ಬೆಂಕಿಯ ನಿದರ್ಶನಗಳು, ಕೃಷಿ ಅರಣ್ಯ ಇತ್ಯಾದಿಗಳ ಮಾಹಿತಿಯನ್ನು ಒಳಗೊಂಡಿದೆ.

ಇದನ್ನೂ ಓದಿ : ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...