Homeಮುಖಪುಟ10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

- Advertisement -
- Advertisement -

ಕಳೆದ 10 ವರ್ಷಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿಲೋಮೀಟರ್ ಅರಣ್ಯ ನಾಶವಾಗಿದೆ ಎಂದು ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌) -2023 ಹೇಳಿದೆ.

ಭಾರತೀಯ ಅರಣ್ಯ ಸಮೀಕ್ಷೆ (ಐಎಫ್‌ಎಸ್‌)ಯ ಭಾಗವಾಗಿ ಸಿದ್ದಪಡಿಸಲಾದ ವರದಿಯನ್ನು ಶನಿವಾರ (ಡಿ.21) ಉತ್ತರಾಖಂಡದ ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದರು.

PC : pib.gov.in

ವರದಿಯಲ್ಲಿ, ಕಳೆದ 10 ವರ್ಷದ ಅವಧಿಯಲ್ಲಿ ಪಶ್ಚಿಮ ಘಟ್ಟದಲ್ಲಿ ಅತ್ಯಂತ ದಟ್ಟಾರಣ್ಯಗಳು 3,465.12 ಚ.ಕಿ.ಮೀಗಳಷ್ಟು ಹೆಚ್ಚಾದರೆ, ಮಧ್ಯಮ ದಟ್ಟಾರಣ್ಯಗಳು ಮತ್ತು ತೆರೆದ ಅರಣ್ಯಗಳು ಕ್ರಮವಾಗಿ 1,043.23 ಚ.ಕಿ.ಮೀ ಮತ್ತು 2,480.11 ಚ.ಕಿ.ಮೀ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ಆರು ರಾಜ್ಯಗಳ 45 ಘಟ್ಟ ಜಿಲ್ಲೆಗಳ ಪೈಕಿ ಮಧ್ಯಮ ದಟ್ಟಾರಣ್ಯ ಹಾಗೂ ತೆರೆದ ಅರಣ್ಯ ಹೊಂದಿದ 25 ಜಿಲ್ಲೆಗಳು ಅರಣ್ಯ ನಾಶಕ್ಕೆ ಸಾಕ್ಷಿಯಾಗಿವೆ. ಗರಿಷ್ಠ ಪ್ರಮಾಣದಲ್ಲಿ ಅರಣ್ಯ ಪ್ರದೇಶವನ್ನು ಕಳೆದುಕೊಂಡಿರುವ ಪ್ರದೇಶಗಳಾಗಿ ತಮಿಳುನಾಡಿನ ನೀಲಗಿರಿ (123 ಚ.ಕಿ.ಮೀಗಿಂತ ಹೆಚ್ಚು), ಕೇರಳದ ಇಡುಕ್ಕಿ (98 ಚ.ಕಿ.ಮೀ), ಮಹಾರಾಷ್ಟ್ರದ ಪುಣೆ (83 ಚ.ಕಿ.ಮೀ), ಹಾಗೂ ಕರ್ನಾಟಕದ ಶಿವಮೊಗ್ಗ ಜಿಲ್ಲೆಗಳನ್ನು (74.5 ಚ.ಕಿ.ಮೀ) ಗುರುತಿಸಲಾಗಿದೆ.

ಪ್ರಸ್ತುತ ಅಂದಾಜಿನ ಪ್ರಕಾರ, ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು 827,357 ಚದರ ಕಿ.ಮೀ ಇದೆ. ಇದು ದೇಶದ ಭೌಗೋಳಿಕ ಪ್ರದೇಶದ ಶೇಕಡಾ 25.17 ಆಗಿದೆ. ಅರಣ್ಯ ಪ್ರದೇಶವು ಸುಮಾರು 715,343 ಚದರ ಕಿ.ಮೀ (21.76%) ವಿಸ್ತೀರ್ಣವನ್ನು ಹೊಂದಿದೆ. ಮರಗಳ ಹೊದಿಕೆಯು 112,014 ಚದರ ಕಿ.ಮೀ (3.41%) ವಿಸ್ತೀರ್ಣವನ್ನು ಆವರಿಸಿದೆ.

2021ಕ್ಕೆ ಹೋಲಿಸಿದರೆ, ದೇಶದ ಒಟ್ಟು ಅರಣ್ಯ ಮತ್ತು ಮರಗಳ ಹೊದಿಕೆಯಲ್ಲಿ 1,445 ಚದರ ಕಿ.ಮೀ ಹೆಚ್ಚಳವಾಗಿದೆ. ಮಹಾರಾಷ್ಟ್ರ (65,383 ಚದರ ಕಿ.ಮೀ) ಅತಿದೊಡ್ಡ ಅರಣ್ಯ ಮತ್ತು ಮರಗಳನ್ನು ಹೊಂದಿರುವ ಮೊದಲ ಮೂರು ರಾಜ್ಯಗಳಲ್ಲಿ ಒಂದಾಗಿದೆ ಎಂದು ಐಎಸ್‌ಎಫ್‌ಆರ್‌ ಎತ್ತಿ ತೋರಿಸಿದೆ.

ವರದಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ (WGESA) ಅರಣ್ಯ ವ್ಯಾಪ್ತಿಯ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಿದೆ. ಪಶ್ಚಿಮಘಟ್ಟ ಭಾರತದ ಅತ್ಯಂತ ಅಮೂಲ್ಯ ಜೀವವೈವಿಧ್ಯದ ತಾಣವಾಗಿದೆ. ಇದು ಗೋವಾ, ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡು ಈ ಆರು ರಾಜ್ಯಗಳ 45 ಜಿಲ್ಲೆಗಳು ಆವರಿಸಿದೆ.

ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌)

1987ರಿಂದ ಎರಡು ವರ್ಷಕೊಮ್ಮೆ ಭಾರತೀಯ ಅರಣ್ಯ ಸಮೀಕ್ಷೆ(ಎಫ್‌ಎಸ್‌ಐ) ವತಿಯಿಂದ ಭಾರತೀಯ ರಾಜ್ಯ ಅರಣ್ಯ ವರದಿ ( ಐಎಸ್‌ಎಫ್‌ಆರ್‌) ಪ್ರಕಟಿಸಲಾಗುತ್ತಿದೆ. ಎಫ್‌ಎಸ್‌ಐ ರಿಮೋಟ್ ಸೆನ್ಸಿಂಗ್‌ನ ವ್ಯಾಖ್ಯಾನದ ಆಧಾರದ ಮೇಲೆ ದೇಶದ ಅರಣ್ಯ ಮತ್ತು ಮರದ ಸಂಪನ್ಮೂಲಗಳ ಆಳವಾದ ಮೌಲ್ಯಮಾಪನವನ್ನು ನಡೆಸುತ್ತದೆ. ಉಪಗ್ರಹ ಡೇಟಾ ಮತ್ತು ಕ್ಷೇತ್ರ ಆಧಾರಿತ ರಾಷ್ಟ್ರೀಯ ಅರಣ್ಯ ದಾಸ್ತಾನು (ಎನ್‌ಎಫ್‌ಐಐ) ಫಲಿತಾಂಶಗಳನ್ನು ಐಎಸ್‌ಎಫ್‌ಆರ್‌ನಲ್ಲಿ ಪ್ರಕಟಿಸಲಾಗುತ್ತದೆ.

ಈ ಬಾರಿ ಪ್ರಕಟಿಸಿರುವುದು 18ನೇ ಐಎಸ್‌ಎಫ್‌ಆರ್‌ ಆಗಿದೆ. ಇದು ಭಾರತದ ಅರಣ್ಯ ಪ್ರದೇಶ, ಮರಗಳ ಹೊದಿಕೆ, ಮ್ಯಾಂಗ್ರೋವ್ ಹೊದಿಕೆ, ಅರಣ್ಯ ಹೊದಿಕೆ ಹೆಚ್ಚಳ, ಭಾರತದ ಕಾಡುಗಳಲ್ಲಿನ ಇಂಗಾಲದ ಸಂಗ್ರಹ, ಅರಣ್ಯ ಬೆಂಕಿಯ ನಿದರ್ಶನಗಳು, ಕೃಷಿ ಅರಣ್ಯ ಇತ್ಯಾದಿಗಳ ಮಾಹಿತಿಯನ್ನು ಒಳಗೊಂಡಿದೆ.

ಇದನ್ನೂ ಓದಿ : ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...