Homeಮುಖಪುಟ10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

- Advertisement -
- Advertisement -

ಕಳೆದ 10 ವರ್ಷಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿಲೋಮೀಟರ್ ಅರಣ್ಯ ನಾಶವಾಗಿದೆ ಎಂದು ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌) -2023 ಹೇಳಿದೆ.

ಭಾರತೀಯ ಅರಣ್ಯ ಸಮೀಕ್ಷೆ (ಐಎಫ್‌ಎಸ್‌)ಯ ಭಾಗವಾಗಿ ಸಿದ್ದಪಡಿಸಲಾದ ವರದಿಯನ್ನು ಶನಿವಾರ (ಡಿ.21) ಉತ್ತರಾಖಂಡದ ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದರು.

PC : pib.gov.in

ವರದಿಯಲ್ಲಿ, ಕಳೆದ 10 ವರ್ಷದ ಅವಧಿಯಲ್ಲಿ ಪಶ್ಚಿಮ ಘಟ್ಟದಲ್ಲಿ ಅತ್ಯಂತ ದಟ್ಟಾರಣ್ಯಗಳು 3,465.12 ಚ.ಕಿ.ಮೀಗಳಷ್ಟು ಹೆಚ್ಚಾದರೆ, ಮಧ್ಯಮ ದಟ್ಟಾರಣ್ಯಗಳು ಮತ್ತು ತೆರೆದ ಅರಣ್ಯಗಳು ಕ್ರಮವಾಗಿ 1,043.23 ಚ.ಕಿ.ಮೀ ಮತ್ತು 2,480.11 ಚ.ಕಿ.ಮೀ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ಆರು ರಾಜ್ಯಗಳ 45 ಘಟ್ಟ ಜಿಲ್ಲೆಗಳ ಪೈಕಿ ಮಧ್ಯಮ ದಟ್ಟಾರಣ್ಯ ಹಾಗೂ ತೆರೆದ ಅರಣ್ಯ ಹೊಂದಿದ 25 ಜಿಲ್ಲೆಗಳು ಅರಣ್ಯ ನಾಶಕ್ಕೆ ಸಾಕ್ಷಿಯಾಗಿವೆ. ಗರಿಷ್ಠ ಪ್ರಮಾಣದಲ್ಲಿ ಅರಣ್ಯ ಪ್ರದೇಶವನ್ನು ಕಳೆದುಕೊಂಡಿರುವ ಪ್ರದೇಶಗಳಾಗಿ ತಮಿಳುನಾಡಿನ ನೀಲಗಿರಿ (123 ಚ.ಕಿ.ಮೀಗಿಂತ ಹೆಚ್ಚು), ಕೇರಳದ ಇಡುಕ್ಕಿ (98 ಚ.ಕಿ.ಮೀ), ಮಹಾರಾಷ್ಟ್ರದ ಪುಣೆ (83 ಚ.ಕಿ.ಮೀ), ಹಾಗೂ ಕರ್ನಾಟಕದ ಶಿವಮೊಗ್ಗ ಜಿಲ್ಲೆಗಳನ್ನು (74.5 ಚ.ಕಿ.ಮೀ) ಗುರುತಿಸಲಾಗಿದೆ.

ಪ್ರಸ್ತುತ ಅಂದಾಜಿನ ಪ್ರಕಾರ, ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು 827,357 ಚದರ ಕಿ.ಮೀ ಇದೆ. ಇದು ದೇಶದ ಭೌಗೋಳಿಕ ಪ್ರದೇಶದ ಶೇಕಡಾ 25.17 ಆಗಿದೆ. ಅರಣ್ಯ ಪ್ರದೇಶವು ಸುಮಾರು 715,343 ಚದರ ಕಿ.ಮೀ (21.76%) ವಿಸ್ತೀರ್ಣವನ್ನು ಹೊಂದಿದೆ. ಮರಗಳ ಹೊದಿಕೆಯು 112,014 ಚದರ ಕಿ.ಮೀ (3.41%) ವಿಸ್ತೀರ್ಣವನ್ನು ಆವರಿಸಿದೆ.

2021ಕ್ಕೆ ಹೋಲಿಸಿದರೆ, ದೇಶದ ಒಟ್ಟು ಅರಣ್ಯ ಮತ್ತು ಮರಗಳ ಹೊದಿಕೆಯಲ್ಲಿ 1,445 ಚದರ ಕಿ.ಮೀ ಹೆಚ್ಚಳವಾಗಿದೆ. ಮಹಾರಾಷ್ಟ್ರ (65,383 ಚದರ ಕಿ.ಮೀ) ಅತಿದೊಡ್ಡ ಅರಣ್ಯ ಮತ್ತು ಮರಗಳನ್ನು ಹೊಂದಿರುವ ಮೊದಲ ಮೂರು ರಾಜ್ಯಗಳಲ್ಲಿ ಒಂದಾಗಿದೆ ಎಂದು ಐಎಸ್‌ಎಫ್‌ಆರ್‌ ಎತ್ತಿ ತೋರಿಸಿದೆ.

ವರದಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ (WGESA) ಅರಣ್ಯ ವ್ಯಾಪ್ತಿಯ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಿದೆ. ಪಶ್ಚಿಮಘಟ್ಟ ಭಾರತದ ಅತ್ಯಂತ ಅಮೂಲ್ಯ ಜೀವವೈವಿಧ್ಯದ ತಾಣವಾಗಿದೆ. ಇದು ಗೋವಾ, ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡು ಈ ಆರು ರಾಜ್ಯಗಳ 45 ಜಿಲ್ಲೆಗಳು ಆವರಿಸಿದೆ.

ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌)

1987ರಿಂದ ಎರಡು ವರ್ಷಕೊಮ್ಮೆ ಭಾರತೀಯ ಅರಣ್ಯ ಸಮೀಕ್ಷೆ(ಎಫ್‌ಎಸ್‌ಐ) ವತಿಯಿಂದ ಭಾರತೀಯ ರಾಜ್ಯ ಅರಣ್ಯ ವರದಿ ( ಐಎಸ್‌ಎಫ್‌ಆರ್‌) ಪ್ರಕಟಿಸಲಾಗುತ್ತಿದೆ. ಎಫ್‌ಎಸ್‌ಐ ರಿಮೋಟ್ ಸೆನ್ಸಿಂಗ್‌ನ ವ್ಯಾಖ್ಯಾನದ ಆಧಾರದ ಮೇಲೆ ದೇಶದ ಅರಣ್ಯ ಮತ್ತು ಮರದ ಸಂಪನ್ಮೂಲಗಳ ಆಳವಾದ ಮೌಲ್ಯಮಾಪನವನ್ನು ನಡೆಸುತ್ತದೆ. ಉಪಗ್ರಹ ಡೇಟಾ ಮತ್ತು ಕ್ಷೇತ್ರ ಆಧಾರಿತ ರಾಷ್ಟ್ರೀಯ ಅರಣ್ಯ ದಾಸ್ತಾನು (ಎನ್‌ಎಫ್‌ಐಐ) ಫಲಿತಾಂಶಗಳನ್ನು ಐಎಸ್‌ಎಫ್‌ಆರ್‌ನಲ್ಲಿ ಪ್ರಕಟಿಸಲಾಗುತ್ತದೆ.

ಈ ಬಾರಿ ಪ್ರಕಟಿಸಿರುವುದು 18ನೇ ಐಎಸ್‌ಎಫ್‌ಆರ್‌ ಆಗಿದೆ. ಇದು ಭಾರತದ ಅರಣ್ಯ ಪ್ರದೇಶ, ಮರಗಳ ಹೊದಿಕೆ, ಮ್ಯಾಂಗ್ರೋವ್ ಹೊದಿಕೆ, ಅರಣ್ಯ ಹೊದಿಕೆ ಹೆಚ್ಚಳ, ಭಾರತದ ಕಾಡುಗಳಲ್ಲಿನ ಇಂಗಾಲದ ಸಂಗ್ರಹ, ಅರಣ್ಯ ಬೆಂಕಿಯ ನಿದರ್ಶನಗಳು, ಕೃಷಿ ಅರಣ್ಯ ಇತ್ಯಾದಿಗಳ ಮಾಹಿತಿಯನ್ನು ಒಳಗೊಂಡಿದೆ.

ಇದನ್ನೂ ಓದಿ : ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...