Homeಮುಖಪುಟ10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

- Advertisement -
- Advertisement -

ಕಳೆದ 10 ವರ್ಷಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿಲೋಮೀಟರ್ ಅರಣ್ಯ ನಾಶವಾಗಿದೆ ಎಂದು ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌) -2023 ಹೇಳಿದೆ.

ಭಾರತೀಯ ಅರಣ್ಯ ಸಮೀಕ್ಷೆ (ಐಎಫ್‌ಎಸ್‌)ಯ ಭಾಗವಾಗಿ ಸಿದ್ದಪಡಿಸಲಾದ ವರದಿಯನ್ನು ಶನಿವಾರ (ಡಿ.21) ಉತ್ತರಾಖಂಡದ ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದರು.

PC : pib.gov.in

ವರದಿಯಲ್ಲಿ, ಕಳೆದ 10 ವರ್ಷದ ಅವಧಿಯಲ್ಲಿ ಪಶ್ಚಿಮ ಘಟ್ಟದಲ್ಲಿ ಅತ್ಯಂತ ದಟ್ಟಾರಣ್ಯಗಳು 3,465.12 ಚ.ಕಿ.ಮೀಗಳಷ್ಟು ಹೆಚ್ಚಾದರೆ, ಮಧ್ಯಮ ದಟ್ಟಾರಣ್ಯಗಳು ಮತ್ತು ತೆರೆದ ಅರಣ್ಯಗಳು ಕ್ರಮವಾಗಿ 1,043.23 ಚ.ಕಿ.ಮೀ ಮತ್ತು 2,480.11 ಚ.ಕಿ.ಮೀ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ಆರು ರಾಜ್ಯಗಳ 45 ಘಟ್ಟ ಜಿಲ್ಲೆಗಳ ಪೈಕಿ ಮಧ್ಯಮ ದಟ್ಟಾರಣ್ಯ ಹಾಗೂ ತೆರೆದ ಅರಣ್ಯ ಹೊಂದಿದ 25 ಜಿಲ್ಲೆಗಳು ಅರಣ್ಯ ನಾಶಕ್ಕೆ ಸಾಕ್ಷಿಯಾಗಿವೆ. ಗರಿಷ್ಠ ಪ್ರಮಾಣದಲ್ಲಿ ಅರಣ್ಯ ಪ್ರದೇಶವನ್ನು ಕಳೆದುಕೊಂಡಿರುವ ಪ್ರದೇಶಗಳಾಗಿ ತಮಿಳುನಾಡಿನ ನೀಲಗಿರಿ (123 ಚ.ಕಿ.ಮೀಗಿಂತ ಹೆಚ್ಚು), ಕೇರಳದ ಇಡುಕ್ಕಿ (98 ಚ.ಕಿ.ಮೀ), ಮಹಾರಾಷ್ಟ್ರದ ಪುಣೆ (83 ಚ.ಕಿ.ಮೀ), ಹಾಗೂ ಕರ್ನಾಟಕದ ಶಿವಮೊಗ್ಗ ಜಿಲ್ಲೆಗಳನ್ನು (74.5 ಚ.ಕಿ.ಮೀ) ಗುರುತಿಸಲಾಗಿದೆ.

ಪ್ರಸ್ತುತ ಅಂದಾಜಿನ ಪ್ರಕಾರ, ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು 827,357 ಚದರ ಕಿ.ಮೀ ಇದೆ. ಇದು ದೇಶದ ಭೌಗೋಳಿಕ ಪ್ರದೇಶದ ಶೇಕಡಾ 25.17 ಆಗಿದೆ. ಅರಣ್ಯ ಪ್ರದೇಶವು ಸುಮಾರು 715,343 ಚದರ ಕಿ.ಮೀ (21.76%) ವಿಸ್ತೀರ್ಣವನ್ನು ಹೊಂದಿದೆ. ಮರಗಳ ಹೊದಿಕೆಯು 112,014 ಚದರ ಕಿ.ಮೀ (3.41%) ವಿಸ್ತೀರ್ಣವನ್ನು ಆವರಿಸಿದೆ.

2021ಕ್ಕೆ ಹೋಲಿಸಿದರೆ, ದೇಶದ ಒಟ್ಟು ಅರಣ್ಯ ಮತ್ತು ಮರಗಳ ಹೊದಿಕೆಯಲ್ಲಿ 1,445 ಚದರ ಕಿ.ಮೀ ಹೆಚ್ಚಳವಾಗಿದೆ. ಮಹಾರಾಷ್ಟ್ರ (65,383 ಚದರ ಕಿ.ಮೀ) ಅತಿದೊಡ್ಡ ಅರಣ್ಯ ಮತ್ತು ಮರಗಳನ್ನು ಹೊಂದಿರುವ ಮೊದಲ ಮೂರು ರಾಜ್ಯಗಳಲ್ಲಿ ಒಂದಾಗಿದೆ ಎಂದು ಐಎಸ್‌ಎಫ್‌ಆರ್‌ ಎತ್ತಿ ತೋರಿಸಿದೆ.

ವರದಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ (WGESA) ಅರಣ್ಯ ವ್ಯಾಪ್ತಿಯ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಿದೆ. ಪಶ್ಚಿಮಘಟ್ಟ ಭಾರತದ ಅತ್ಯಂತ ಅಮೂಲ್ಯ ಜೀವವೈವಿಧ್ಯದ ತಾಣವಾಗಿದೆ. ಇದು ಗೋವಾ, ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡು ಈ ಆರು ರಾಜ್ಯಗಳ 45 ಜಿಲ್ಲೆಗಳು ಆವರಿಸಿದೆ.

ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌)

1987ರಿಂದ ಎರಡು ವರ್ಷಕೊಮ್ಮೆ ಭಾರತೀಯ ಅರಣ್ಯ ಸಮೀಕ್ಷೆ(ಎಫ್‌ಎಸ್‌ಐ) ವತಿಯಿಂದ ಭಾರತೀಯ ರಾಜ್ಯ ಅರಣ್ಯ ವರದಿ ( ಐಎಸ್‌ಎಫ್‌ಆರ್‌) ಪ್ರಕಟಿಸಲಾಗುತ್ತಿದೆ. ಎಫ್‌ಎಸ್‌ಐ ರಿಮೋಟ್ ಸೆನ್ಸಿಂಗ್‌ನ ವ್ಯಾಖ್ಯಾನದ ಆಧಾರದ ಮೇಲೆ ದೇಶದ ಅರಣ್ಯ ಮತ್ತು ಮರದ ಸಂಪನ್ಮೂಲಗಳ ಆಳವಾದ ಮೌಲ್ಯಮಾಪನವನ್ನು ನಡೆಸುತ್ತದೆ. ಉಪಗ್ರಹ ಡೇಟಾ ಮತ್ತು ಕ್ಷೇತ್ರ ಆಧಾರಿತ ರಾಷ್ಟ್ರೀಯ ಅರಣ್ಯ ದಾಸ್ತಾನು (ಎನ್‌ಎಫ್‌ಐಐ) ಫಲಿತಾಂಶಗಳನ್ನು ಐಎಸ್‌ಎಫ್‌ಆರ್‌ನಲ್ಲಿ ಪ್ರಕಟಿಸಲಾಗುತ್ತದೆ.

ಈ ಬಾರಿ ಪ್ರಕಟಿಸಿರುವುದು 18ನೇ ಐಎಸ್‌ಎಫ್‌ಆರ್‌ ಆಗಿದೆ. ಇದು ಭಾರತದ ಅರಣ್ಯ ಪ್ರದೇಶ, ಮರಗಳ ಹೊದಿಕೆ, ಮ್ಯಾಂಗ್ರೋವ್ ಹೊದಿಕೆ, ಅರಣ್ಯ ಹೊದಿಕೆ ಹೆಚ್ಚಳ, ಭಾರತದ ಕಾಡುಗಳಲ್ಲಿನ ಇಂಗಾಲದ ಸಂಗ್ರಹ, ಅರಣ್ಯ ಬೆಂಕಿಯ ನಿದರ್ಶನಗಳು, ಕೃಷಿ ಅರಣ್ಯ ಇತ್ಯಾದಿಗಳ ಮಾಹಿತಿಯನ್ನು ಒಳಗೊಂಡಿದೆ.

ಇದನ್ನೂ ಓದಿ : ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...