HomeಮುಖಪುಟWFI ಚುನಾವಣೆ: ಮತದಾರರ ಪಟ್ಟಿಯಿಂದ ಬ್ರಿಜ್‌ಭೂಷಣ್, ಪುತ್ರನ ಹೆಸರು ಕೈಬಿಟ್ಟ ಫೆಡರೇಶನ್

WFI ಚುನಾವಣೆ: ಮತದಾರರ ಪಟ್ಟಿಯಿಂದ ಬ್ರಿಜ್‌ಭೂಷಣ್, ಪುತ್ರನ ಹೆಸರು ಕೈಬಿಟ್ಟ ಫೆಡರೇಶನ್

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೆಸರು ಹಾಗೂ ಅವರ ಪುತ್ರ ಕರಣ್ ಹೆಸರನ್ನು ಮುಂಬರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಚುನಾವಣೆಯ ಮತದಾರರ ಪಟ್ಟಿಯಿಂದ ತಗೆದುಹಾಕಲಾಗಿದೆ.

ಲೈಂಗಿಕ ಕಿರುಕುಳದ ಆರೋಪದಡಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ಕಳೆದ ತಿಂಗಳು ಕ್ರೀಡಾ ಸಚಿವರಾದ ಅನುರಾಗ್ ರಾಕೂರ್ ಅವರೊಂದಿಗೆ ಸಭೆ ನಡೆಸಿ ಬ್ರಿಜ್ ಭೂಷಣ್ ಅವರ ಕುಟುಂಬದಿಂದ ಯಾರೂ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದರು.

”ನಮ್ಮ ಕುಟುಂಬವನ್ನು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಕುಸ್ತಿ) ಚುನಾವಣೆಯಿಂದ ಹೊರಗಿಡಬೇಕು, ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಯಾವುದೇ ವಿವಾದಗಳು ಮತ್ತೆ ಸೃಷ್ಟಿಯಾಗುವುದು ಬೇಡ” ಎಂದು ಬ್ರಿಜ್ ಭೂಷಣ ಹೇಳಿದ್ದಾರೆ.

ಮಂಗಳವಾರ ಅಂತಿಮಗೊಳಿಸಲಾದ ಚುನಾವಣಾ ಮತದಾರರ ಪಟ್ಟಿಯಲ್ಲಿ ಬ್ರಿಜ್ ಭೂಷಣ್ ಅವರ ಅಳಿಯನ ಒಬ್ಬರ ಹೆಸರು ಕಾಣಿಸಿಕೊಂಡಿದೆ. ಉಳಿದಂತೆ ಮತ್ತೊಬ್ಬ ಅಳಿಯ, ಮಾಜಿ ಜಂಟಿ:ಕಾರ್ಯದರ್ಶಿ ಆದಿತ್ಯ ಪುತಾಪ್ ಸಿಂಗ್ ಕೂಡ ಪಟ್ಟಿಯಿಂದ ಕೈ ಬಿಡಲಾಗಿದೆ.

ವರದಿಗಳ ಪ್ರಕಾರ, ಗಬ್ಬು ಎಫ್‌ಐ 25 ರಾಜ್ಯ ಘಟಕಗಳಿಂದ ಒಟ್ಟು 50 ಸದಸ್ಯರನ್ನು ಹೊಂದಿದ ಅಧ್ಯಕ್ಷರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಲು ಇದೇ ಆಗಸ್ಟ್1 ಕೊನೆಯ ದಿನಾಂಕವಾಗಿದೆ. ಮರುದಿನ ನಾಮಪತ್ರಗಳ ಪರಿಶೀಲನೆ ನಡೆಸಿ, ಆಗಸ್ಟ್ 7ರಂದು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು, ಅಗತ್ಯವಿದ್ದಲ್ಲಿ ಆಗಸ್ಟ್ 12 ರಂದು ಮತದಾನ ನಡೆಯಲಿದೆ.

ಪ್ರತಿ ರಾಜ್ಯ ಘಟಕದಿಂದ ಇಬ್ಬರು ಪ್ರತಿನಿಧಿಗಳಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಉತ್ತರ ಪ್ರದೇಶದ ಕೈಸರ್‌ಗುಂಜ್‌ನ ಸಂಸದ ಬ್ರಿಜ್‌ಭೂಷಣ್ ಸಿಂಗ್, ಲೈಂಗಿಕ ಕಿರುಕುಳದ ಅನೇಕ ಆರೋಪಗಳನ್ನು ಎದುರಿಸುತ್ತಿದ್ದಾರೆ ಮತ್ತು ಪ್ರಸ್ತುತ ಜಾಮೀನಿನ ಮೇಲೆ ಇದ್ದಾರೆ. ಅವರು ಈಗಾಗಲೇ ಪದಾಧಿಕಾರಿಯಾಗಿ 12 ವರ್ಷಗಳನ್ನು ಪೂರ್ಣಗೊಳಿಸಿರುವುದರಿಂದ ಅವರು ಸ್ಪರ್ಧಿಸಲು ಅರ್ಹರಲ್ಲ, ಇದು ರಾಷ್ಟ್ರೀಯ ಕ್ರೀಡಾ ಸಂಹಿತೆಯ ಪ್ರಕಾರ ಅನುಮತಿಸಲಾದ ಗರಿಷ್ಠ ಅವಧಿಯಾಗಿದೆ. ಅದರಂತೆ ಯುಪಿಯ ರಾಜ್ಯ ಘಟಕವನ್ನು ಪ್ರೇಮ್ ಕುಮಾರ್ ಮಿಶ್ರಾ ಮತ್ತು ಸಂಜಯ್ ಸಿಂಗ್ ಪ್ರತಿನಿಧಿಸಲಿದ್ದಾರೆ.

ಇದನ್ನೂ ಓದಿ: ಬ್ರಿಜ್ ಭೂಷಣ್‌ಗೆ ಜಾಮೀನು ನೀಡುವುದನ್ನು ದೆಹಲಿ ಪೊಲೀಸರೇಕೆ ವಿರೋಧಿಸಲಿಲ್ಲ? – ಸಂಸದೆ ಮಹುವ ಮೊಯಿತ್ರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...