Homeಕರ್ನಾಟಕಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

ಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

- Advertisement -
- Advertisement -

ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಮೃತರಿಗೆ ಗೌರವಯುತ ವಿದಾಯಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ರಾಜ್ಯಪಾಲರ ಆಹ್ವಾನದ ಮೇರೆಗೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದೇವೆ. ರಾಜ್ಯಪಾಲರು ಸರ್ಕಾರದಿಂದ ನೇರವಾಗಿ ಮಾಹಿತಿ ಪಡೆಯಬಹುದಿತ್ತು. ಆದರೆ ಮೊದಲ ಬಾರಿಗೆ ರಾಜ್ಯಪಾಲರು ವಿರೋಧ ಪಕ್ಷ ಹಾಗೂ ಸ್ಪೀಕರ್ ಅವರನ್ನು ಸೇರಿಸಿ ಸಭೆ ಕರೆದಿದ್ದಾರೆ. ನಮ್ಮ ರಾಜ್ಯ ಪುದುಚೇರಿ, ದೆಹಲಿಯಂತೆ ಕೇಂದ್ರಾಡಳಿತ ಪ್ರದೇಶವಲ್ಲ. ನಮ್ಮ ಸಂವಿಧಾನದ ಹಕ್ಕಿನಲ್ಲಿ, ಯಾವ ಕಾನೂನಿನ ಅನ್ವಯ ನಮ್ಮ ಜತೆ ಚರ್ಚೆ ಮಾಡುತ್ತಿದ್ದಾರೋ ಗೊತ್ತಿಲ್ಲ” ಎಂದು ಹೇಳಿದರು.

ಇದನ್ನು ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು

“ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದು, ಅವರ ಆರೋಗ್ಯ ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸರ್ಕಾರ ಇರುವಾಗ ರಾಜ್ಯಪಾಲರು ಈ ರೀತಿ ಹಸ್ತಕ್ಷೇಪ ಮಾಡಲು ಯಾವ ಕಾನೂನು ಬಳಸಿದ್ದಾರೆ ಎಂಬುದು ಗೊತ್ತಿಲ್ಲ. ಕಾನೂನು ಸಚಿವರು ನಮಗೆ ಈ ಬಗ್ಗೆ ಬೆಳಕು ಚೆಲ್ಲಿದರೆ ತಿಳಿದುಕೊಳ್ಳುತ್ತೇವೆ. ನಾವು ಸಭೆಯಲ್ಲಿ ಭಾಗವಹಿಸಿ ನಮ್ಮ ಸಲಹೆ ನೀಡುತ್ತೇವೆ. ನಾವು ಸರ್ಕಾರಕ್ಕೆ ಎಲ್ಲ ಸಹಕಾರ ಕೊಟ್ಟಿದ್ದೇವೆ” ಎಂದು ಅವರು ತಿಳಿದರು.

“ಕೇಂದ್ರ ಸರ್ಕಾರ 20 ಲಕ್ಷ ಕೋಟಿ, ರಾಜ್ಯ ಸರ್ಕಾರ 1600 ಕೋಟಿ ಪ್ಯಾಕೇಜ್ ಘೋಷಿಸಿದಾಗ ಯಾರಿಗೆ ತಲುಪಿದೆ ಅಂತಾ ಪಟ್ಟಿ ಕೇಳಿದ್ದೇವೆ. ಈ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಆಗ್ರಹಿಸಿದ್ದೇವೆ. ಆದರೆ ಸರ್ಕಾರ ಈ ಬಗ್ಗೆ ಮಾಹಿತಿ ಕೊಟ್ಟಿಲ್ಲ. ತಾಂತ್ರಿಕ ಸಮಿತಿಯು ಎರಡನೇ ಅಲೆ ಬಗ್ಗೆ ನವೆಂಬರ್ 30ರಂದೇ ಎಚ್ಚರಿಕೆ ನೀಡಿತ್ತು. ಪ್ರತಿನಿತ್ಯ 1.25 ಲಕ್ಷ ಪರೀಕ್ಷೆ ನಡೆಸಿ ಎಂಬುದು ಸೇರಿ 17 ಶಿಫಾರಸ್ಸು ಮಾಡಿತ್ತು. ಈ ಎಚ್ಚರಿಕೆ ನೀಡಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ರಾಜ್ಯಪಾಲರು ಸಭೆ ಕರೆದಿದ್ದಾರೆ” ಎಂದು ಅವರು ಕಿಡಿ ಕಾರಿದರು.

“ಔಷಧಿ, ಲಸಿಕೆಗಳು ಎಷ್ಟು ಕಡೆ ತಯಾರಾಗುತ್ತಿದೆ ಎಂದು ಗೊತ್ತಿದ್ದ ಮೇಲೆ ಅದನ್ನು ಬೇರೆ ಕಡೆಗಳಲ್ಲಿ ಉತ್ಪಾದನೆ ಮಾಡಲು ಯಾಕೆ ಕ್ರಮ ಕೈಗೊಳ್ಳಲಿಲ್ಲ? ಇಂದು ರಾಜ್ಯಪಾಲರು ಸಭೆ ಕರೆದಿರುವುದರಿಂದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದಂತಾಗಿದ್ದು, ಅವರು ಲಸಿಕೆ ತಯಾರಿಕೆ ಬಗ್ಗೆ ಮಾಹಿತಿ ನೀಡುವ ವಿಶ್ವಾಸವಿದೆ” ಎಂದು ತಿಳಿಸಿದರು.

ಇದನ್ನು ಓದಿ:18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ 

“ರಾಜ್ಯದಲ್ಲಿ ಎಷ್ಟು ಐಸಿಯು ಹಾಸಿಗೆ ಇವೆ? ಯಾವ ಆಸ್ಪತ್ರೆಯಲ್ಲಿ ಏನೇನಿದೆ, ಏನೇನಿಲ್ಲ ಎಂಬುದರ ಬಗ್ಗೆ ರಿಯಾಲಿಟಿ ಚೆಕ್ ಮಾಡೋಣ. ಈ ಪರಿಸ್ಥಿತಿಯಲ್ಲಿ ಜನರಿಗೆ ಧೈರ್ಯ ತುಂಬಬೇಕು ಮಾಧ್ಯಮಗಳು ಹೆದರಿಸುತ್ತಿವೆ ಅಂತಾ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಸಚಿವರಾಗಿ ನೀವು ಜನರಿಗೆ ಯಾವ ರೀತಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೀರಿ? ಕೇವಲ ಆರೋಗ್ಯ ಹಾಗೂ ಕಂದಾಯ ಸಚಿವರು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟರೆ ಆಗೋದಿಲ್ಲ. ಸರ್ಕಾರದಲ್ಲಿರುವ ಎಲ್ಲ ಮಂತ್ರಿಗಳು, ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

“ಈ ಪರಿಸ್ಥಿತಿಯಲ್ಲಿ ಲಾಕ್‌ಡೌನ್ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ರೈತರ ಕತೆ ಏನು? ಕಳೆದ ಬಾರಿಯೇ ನೀವು ಏನೂ ಮಾಡಲು ಆಗಲಿಲ್ಲ. 20 ಲಕ್ಷ ಕೋಟಿ ರುಪಾಯಿಯಲ್ಲಿ ಯಾರಿಗೂ 1 ರೂಪಾಯಿ ತಲುಪಿಲ್ಲ. ನೀವು ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ನೈತಿಕ ಜವಾಬ್ದಾರಿ ಹೊತ್ತು ಜನತೆಯ ಕ್ಷಮೆ ಕೊರಬೇಕು” ಎಂದು ಹೇಳಿದರು.

“ಶವ ಸಂಸ್ಕಾರದ ವಿಚಾರದಲ್ಲಿ ಹೆಚ್ಚಿನ ವೆಚ್ಚದ ಬಗ್ಗೆ ಮಾತನಾಡುತ್ತೀರಿ. ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಾಗಗಳನ್ನು ಗುರುತಿಸಿ, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ. ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಅದಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ನಿಮ್ಮ ಆಡಳಿತ ನೋಡಿ ಹಳ್ಳಿ ಜನ ನಗುತ್ತಿದ್ದಾರೆ” ಎಂದು ಹೇಳಿದರು.

ಇದನ್ನು ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

“ಕೋವಿಡ್ ಸಾವಿನ ಬಗ್ಗೆ ಆಡಿಟ್ ನಡೆಯಬೇಕಿದೆ. 164 ಜನರು ಸತ್ತಿದ್ದರೆ, ಅಧಿಕಾರಿಗಳ ಮೂಲಕ ಸತ್ತವರ ಕುಟುಂಬಕ್ಕೆ ಸಾವಿನ ಬಗ್ಗೆ ಮಾಹಿತಿ ಕೊಡಿ. ಇಲ್ಲಿ ಯಾರೂ ಪರಿಪಕ್ವರಲ್ಲ. ನಿಮ್ಮ ತಪ್ಪನ್ನು ನೀವು ತಿದ್ದಿಕೊಂಡು ಮುಂದಿನ ಹೆಜ್ಜೆ ಇಡಿ. ಸರ್ಕಾರ ಎಂದರೆ ಪಂಚಾಯಿತಿಯಿಂದ ಸಂಸತ್ ವರೆಗೂ ಎಲ್ಲವೂ ಸರ್ಕಾರದ ಭಾಗವೇ. ಮುಖ್ಯಮಂತ್ರಿ ಪರಿಹಾರ ನಿಧಿ, ಪಿಎಂ ಕೇರ್ ಗೆ ಎಷ್ಟು ಹಣ ಬಂತು, ಎಷ್ಟು ಖರ್ಚಾಯ್ತು ಅಂತಾ ಲೆಕ್ಕ ಹೇಳಿ” ಎಂದು ಸರ್ಕಾರವನ್ನು ಆಗ್ರಹಿಸಿದರು.

“ಸರ್ಕಾರ ಕೋವಿಡ್ ವಾರಿಯರ್ಸ್ ಗಳಿಗೆ ವಿಮೆ ರದ್ದುಗೊಳಿಸಿದೆ. ನಾವು ಪ್ರಶ್ನಿಸಿದ ಮೇಲೆ ಬೇರೆ ಮಾದರಿಯಲ್ಲಿ ನೀಡಲಾಗುವುದು ಎಂದು ಹೇಳಿದೆ. ಲಸಿಕೆಯನ್ನು ಮೊದಲು ಪ್ರಧಾನಿ, ಮುಖ್ಯಮಂತ್ರಿಗಳು ತೆಗೆದುಕೊಳ್ಳದೇ, ಆ ಕೊರೊನಾ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದೀರಿ. ಇದು ಅತ್ಯಂತ ವಿಫಲ ಸರ್ಕಾರ. ಈ ಪರಿಸ್ಥಿತಿ ನಿಭಾಯಿಸಲು ನಿಮ್ಮ ಕೈಯಲ್ಲಿ ಆಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ” ಎಂದು ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ ಆರೋಗ್ಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...