Homeಕರ್ನಾಟಕಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

ಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

- Advertisement -
- Advertisement -

ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಮೃತರಿಗೆ ಗೌರವಯುತ ವಿದಾಯಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ರಾಜ್ಯಪಾಲರ ಆಹ್ವಾನದ ಮೇರೆಗೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದೇವೆ. ರಾಜ್ಯಪಾಲರು ಸರ್ಕಾರದಿಂದ ನೇರವಾಗಿ ಮಾಹಿತಿ ಪಡೆಯಬಹುದಿತ್ತು. ಆದರೆ ಮೊದಲ ಬಾರಿಗೆ ರಾಜ್ಯಪಾಲರು ವಿರೋಧ ಪಕ್ಷ ಹಾಗೂ ಸ್ಪೀಕರ್ ಅವರನ್ನು ಸೇರಿಸಿ ಸಭೆ ಕರೆದಿದ್ದಾರೆ. ನಮ್ಮ ರಾಜ್ಯ ಪುದುಚೇರಿ, ದೆಹಲಿಯಂತೆ ಕೇಂದ್ರಾಡಳಿತ ಪ್ರದೇಶವಲ್ಲ. ನಮ್ಮ ಸಂವಿಧಾನದ ಹಕ್ಕಿನಲ್ಲಿ, ಯಾವ ಕಾನೂನಿನ ಅನ್ವಯ ನಮ್ಮ ಜತೆ ಚರ್ಚೆ ಮಾಡುತ್ತಿದ್ದಾರೋ ಗೊತ್ತಿಲ್ಲ” ಎಂದು ಹೇಳಿದರು.

ಇದನ್ನು ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು

“ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದು, ಅವರ ಆರೋಗ್ಯ ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸರ್ಕಾರ ಇರುವಾಗ ರಾಜ್ಯಪಾಲರು ಈ ರೀತಿ ಹಸ್ತಕ್ಷೇಪ ಮಾಡಲು ಯಾವ ಕಾನೂನು ಬಳಸಿದ್ದಾರೆ ಎಂಬುದು ಗೊತ್ತಿಲ್ಲ. ಕಾನೂನು ಸಚಿವರು ನಮಗೆ ಈ ಬಗ್ಗೆ ಬೆಳಕು ಚೆಲ್ಲಿದರೆ ತಿಳಿದುಕೊಳ್ಳುತ್ತೇವೆ. ನಾವು ಸಭೆಯಲ್ಲಿ ಭಾಗವಹಿಸಿ ನಮ್ಮ ಸಲಹೆ ನೀಡುತ್ತೇವೆ. ನಾವು ಸರ್ಕಾರಕ್ಕೆ ಎಲ್ಲ ಸಹಕಾರ ಕೊಟ್ಟಿದ್ದೇವೆ” ಎಂದು ಅವರು ತಿಳಿದರು.

“ಕೇಂದ್ರ ಸರ್ಕಾರ 20 ಲಕ್ಷ ಕೋಟಿ, ರಾಜ್ಯ ಸರ್ಕಾರ 1600 ಕೋಟಿ ಪ್ಯಾಕೇಜ್ ಘೋಷಿಸಿದಾಗ ಯಾರಿಗೆ ತಲುಪಿದೆ ಅಂತಾ ಪಟ್ಟಿ ಕೇಳಿದ್ದೇವೆ. ಈ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಆಗ್ರಹಿಸಿದ್ದೇವೆ. ಆದರೆ ಸರ್ಕಾರ ಈ ಬಗ್ಗೆ ಮಾಹಿತಿ ಕೊಟ್ಟಿಲ್ಲ. ತಾಂತ್ರಿಕ ಸಮಿತಿಯು ಎರಡನೇ ಅಲೆ ಬಗ್ಗೆ ನವೆಂಬರ್ 30ರಂದೇ ಎಚ್ಚರಿಕೆ ನೀಡಿತ್ತು. ಪ್ರತಿನಿತ್ಯ 1.25 ಲಕ್ಷ ಪರೀಕ್ಷೆ ನಡೆಸಿ ಎಂಬುದು ಸೇರಿ 17 ಶಿಫಾರಸ್ಸು ಮಾಡಿತ್ತು. ಈ ಎಚ್ಚರಿಕೆ ನೀಡಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ರಾಜ್ಯಪಾಲರು ಸಭೆ ಕರೆದಿದ್ದಾರೆ” ಎಂದು ಅವರು ಕಿಡಿ ಕಾರಿದರು.

“ಔಷಧಿ, ಲಸಿಕೆಗಳು ಎಷ್ಟು ಕಡೆ ತಯಾರಾಗುತ್ತಿದೆ ಎಂದು ಗೊತ್ತಿದ್ದ ಮೇಲೆ ಅದನ್ನು ಬೇರೆ ಕಡೆಗಳಲ್ಲಿ ಉತ್ಪಾದನೆ ಮಾಡಲು ಯಾಕೆ ಕ್ರಮ ಕೈಗೊಳ್ಳಲಿಲ್ಲ? ಇಂದು ರಾಜ್ಯಪಾಲರು ಸಭೆ ಕರೆದಿರುವುದರಿಂದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದಂತಾಗಿದ್ದು, ಅವರು ಲಸಿಕೆ ತಯಾರಿಕೆ ಬಗ್ಗೆ ಮಾಹಿತಿ ನೀಡುವ ವಿಶ್ವಾಸವಿದೆ” ಎಂದು ತಿಳಿಸಿದರು.

ಇದನ್ನು ಓದಿ:18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ 

“ರಾಜ್ಯದಲ್ಲಿ ಎಷ್ಟು ಐಸಿಯು ಹಾಸಿಗೆ ಇವೆ? ಯಾವ ಆಸ್ಪತ್ರೆಯಲ್ಲಿ ಏನೇನಿದೆ, ಏನೇನಿಲ್ಲ ಎಂಬುದರ ಬಗ್ಗೆ ರಿಯಾಲಿಟಿ ಚೆಕ್ ಮಾಡೋಣ. ಈ ಪರಿಸ್ಥಿತಿಯಲ್ಲಿ ಜನರಿಗೆ ಧೈರ್ಯ ತುಂಬಬೇಕು ಮಾಧ್ಯಮಗಳು ಹೆದರಿಸುತ್ತಿವೆ ಅಂತಾ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಸಚಿವರಾಗಿ ನೀವು ಜನರಿಗೆ ಯಾವ ರೀತಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೀರಿ? ಕೇವಲ ಆರೋಗ್ಯ ಹಾಗೂ ಕಂದಾಯ ಸಚಿವರು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟರೆ ಆಗೋದಿಲ್ಲ. ಸರ್ಕಾರದಲ್ಲಿರುವ ಎಲ್ಲ ಮಂತ್ರಿಗಳು, ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

“ಈ ಪರಿಸ್ಥಿತಿಯಲ್ಲಿ ಲಾಕ್‌ಡೌನ್ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ರೈತರ ಕತೆ ಏನು? ಕಳೆದ ಬಾರಿಯೇ ನೀವು ಏನೂ ಮಾಡಲು ಆಗಲಿಲ್ಲ. 20 ಲಕ್ಷ ಕೋಟಿ ರುಪಾಯಿಯಲ್ಲಿ ಯಾರಿಗೂ 1 ರೂಪಾಯಿ ತಲುಪಿಲ್ಲ. ನೀವು ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ನೈತಿಕ ಜವಾಬ್ದಾರಿ ಹೊತ್ತು ಜನತೆಯ ಕ್ಷಮೆ ಕೊರಬೇಕು” ಎಂದು ಹೇಳಿದರು.

“ಶವ ಸಂಸ್ಕಾರದ ವಿಚಾರದಲ್ಲಿ ಹೆಚ್ಚಿನ ವೆಚ್ಚದ ಬಗ್ಗೆ ಮಾತನಾಡುತ್ತೀರಿ. ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಾಗಗಳನ್ನು ಗುರುತಿಸಿ, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ. ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಅದಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ನಿಮ್ಮ ಆಡಳಿತ ನೋಡಿ ಹಳ್ಳಿ ಜನ ನಗುತ್ತಿದ್ದಾರೆ” ಎಂದು ಹೇಳಿದರು.

ಇದನ್ನು ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

“ಕೋವಿಡ್ ಸಾವಿನ ಬಗ್ಗೆ ಆಡಿಟ್ ನಡೆಯಬೇಕಿದೆ. 164 ಜನರು ಸತ್ತಿದ್ದರೆ, ಅಧಿಕಾರಿಗಳ ಮೂಲಕ ಸತ್ತವರ ಕುಟುಂಬಕ್ಕೆ ಸಾವಿನ ಬಗ್ಗೆ ಮಾಹಿತಿ ಕೊಡಿ. ಇಲ್ಲಿ ಯಾರೂ ಪರಿಪಕ್ವರಲ್ಲ. ನಿಮ್ಮ ತಪ್ಪನ್ನು ನೀವು ತಿದ್ದಿಕೊಂಡು ಮುಂದಿನ ಹೆಜ್ಜೆ ಇಡಿ. ಸರ್ಕಾರ ಎಂದರೆ ಪಂಚಾಯಿತಿಯಿಂದ ಸಂಸತ್ ವರೆಗೂ ಎಲ್ಲವೂ ಸರ್ಕಾರದ ಭಾಗವೇ. ಮುಖ್ಯಮಂತ್ರಿ ಪರಿಹಾರ ನಿಧಿ, ಪಿಎಂ ಕೇರ್ ಗೆ ಎಷ್ಟು ಹಣ ಬಂತು, ಎಷ್ಟು ಖರ್ಚಾಯ್ತು ಅಂತಾ ಲೆಕ್ಕ ಹೇಳಿ” ಎಂದು ಸರ್ಕಾರವನ್ನು ಆಗ್ರಹಿಸಿದರು.

“ಸರ್ಕಾರ ಕೋವಿಡ್ ವಾರಿಯರ್ಸ್ ಗಳಿಗೆ ವಿಮೆ ರದ್ದುಗೊಳಿಸಿದೆ. ನಾವು ಪ್ರಶ್ನಿಸಿದ ಮೇಲೆ ಬೇರೆ ಮಾದರಿಯಲ್ಲಿ ನೀಡಲಾಗುವುದು ಎಂದು ಹೇಳಿದೆ. ಲಸಿಕೆಯನ್ನು ಮೊದಲು ಪ್ರಧಾನಿ, ಮುಖ್ಯಮಂತ್ರಿಗಳು ತೆಗೆದುಕೊಳ್ಳದೇ, ಆ ಕೊರೊನಾ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದೀರಿ. ಇದು ಅತ್ಯಂತ ವಿಫಲ ಸರ್ಕಾರ. ಈ ಪರಿಸ್ಥಿತಿ ನಿಭಾಯಿಸಲು ನಿಮ್ಮ ಕೈಯಲ್ಲಿ ಆಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ” ಎಂದು ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ ಆರೋಗ್ಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...