Homeಕರ್ನಾಟಕಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

ಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

- Advertisement -
- Advertisement -

ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಮೃತರಿಗೆ ಗೌರವಯುತ ವಿದಾಯಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ರಾಜ್ಯಪಾಲರ ಆಹ್ವಾನದ ಮೇರೆಗೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದೇವೆ. ರಾಜ್ಯಪಾಲರು ಸರ್ಕಾರದಿಂದ ನೇರವಾಗಿ ಮಾಹಿತಿ ಪಡೆಯಬಹುದಿತ್ತು. ಆದರೆ ಮೊದಲ ಬಾರಿಗೆ ರಾಜ್ಯಪಾಲರು ವಿರೋಧ ಪಕ್ಷ ಹಾಗೂ ಸ್ಪೀಕರ್ ಅವರನ್ನು ಸೇರಿಸಿ ಸಭೆ ಕರೆದಿದ್ದಾರೆ. ನಮ್ಮ ರಾಜ್ಯ ಪುದುಚೇರಿ, ದೆಹಲಿಯಂತೆ ಕೇಂದ್ರಾಡಳಿತ ಪ್ರದೇಶವಲ್ಲ. ನಮ್ಮ ಸಂವಿಧಾನದ ಹಕ್ಕಿನಲ್ಲಿ, ಯಾವ ಕಾನೂನಿನ ಅನ್ವಯ ನಮ್ಮ ಜತೆ ಚರ್ಚೆ ಮಾಡುತ್ತಿದ್ದಾರೋ ಗೊತ್ತಿಲ್ಲ” ಎಂದು ಹೇಳಿದರು.

ಇದನ್ನು ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು

“ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದು, ಅವರ ಆರೋಗ್ಯ ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸರ್ಕಾರ ಇರುವಾಗ ರಾಜ್ಯಪಾಲರು ಈ ರೀತಿ ಹಸ್ತಕ್ಷೇಪ ಮಾಡಲು ಯಾವ ಕಾನೂನು ಬಳಸಿದ್ದಾರೆ ಎಂಬುದು ಗೊತ್ತಿಲ್ಲ. ಕಾನೂನು ಸಚಿವರು ನಮಗೆ ಈ ಬಗ್ಗೆ ಬೆಳಕು ಚೆಲ್ಲಿದರೆ ತಿಳಿದುಕೊಳ್ಳುತ್ತೇವೆ. ನಾವು ಸಭೆಯಲ್ಲಿ ಭಾಗವಹಿಸಿ ನಮ್ಮ ಸಲಹೆ ನೀಡುತ್ತೇವೆ. ನಾವು ಸರ್ಕಾರಕ್ಕೆ ಎಲ್ಲ ಸಹಕಾರ ಕೊಟ್ಟಿದ್ದೇವೆ” ಎಂದು ಅವರು ತಿಳಿದರು.

“ಕೇಂದ್ರ ಸರ್ಕಾರ 20 ಲಕ್ಷ ಕೋಟಿ, ರಾಜ್ಯ ಸರ್ಕಾರ 1600 ಕೋಟಿ ಪ್ಯಾಕೇಜ್ ಘೋಷಿಸಿದಾಗ ಯಾರಿಗೆ ತಲುಪಿದೆ ಅಂತಾ ಪಟ್ಟಿ ಕೇಳಿದ್ದೇವೆ. ಈ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಆಗ್ರಹಿಸಿದ್ದೇವೆ. ಆದರೆ ಸರ್ಕಾರ ಈ ಬಗ್ಗೆ ಮಾಹಿತಿ ಕೊಟ್ಟಿಲ್ಲ. ತಾಂತ್ರಿಕ ಸಮಿತಿಯು ಎರಡನೇ ಅಲೆ ಬಗ್ಗೆ ನವೆಂಬರ್ 30ರಂದೇ ಎಚ್ಚರಿಕೆ ನೀಡಿತ್ತು. ಪ್ರತಿನಿತ್ಯ 1.25 ಲಕ್ಷ ಪರೀಕ್ಷೆ ನಡೆಸಿ ಎಂಬುದು ಸೇರಿ 17 ಶಿಫಾರಸ್ಸು ಮಾಡಿತ್ತು. ಈ ಎಚ್ಚರಿಕೆ ನೀಡಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ರಾಜ್ಯಪಾಲರು ಸಭೆ ಕರೆದಿದ್ದಾರೆ” ಎಂದು ಅವರು ಕಿಡಿ ಕಾರಿದರು.

“ಔಷಧಿ, ಲಸಿಕೆಗಳು ಎಷ್ಟು ಕಡೆ ತಯಾರಾಗುತ್ತಿದೆ ಎಂದು ಗೊತ್ತಿದ್ದ ಮೇಲೆ ಅದನ್ನು ಬೇರೆ ಕಡೆಗಳಲ್ಲಿ ಉತ್ಪಾದನೆ ಮಾಡಲು ಯಾಕೆ ಕ್ರಮ ಕೈಗೊಳ್ಳಲಿಲ್ಲ? ಇಂದು ರಾಜ್ಯಪಾಲರು ಸಭೆ ಕರೆದಿರುವುದರಿಂದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದಂತಾಗಿದ್ದು, ಅವರು ಲಸಿಕೆ ತಯಾರಿಕೆ ಬಗ್ಗೆ ಮಾಹಿತಿ ನೀಡುವ ವಿಶ್ವಾಸವಿದೆ” ಎಂದು ತಿಳಿಸಿದರು.

ಇದನ್ನು ಓದಿ:18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ 

“ರಾಜ್ಯದಲ್ಲಿ ಎಷ್ಟು ಐಸಿಯು ಹಾಸಿಗೆ ಇವೆ? ಯಾವ ಆಸ್ಪತ್ರೆಯಲ್ಲಿ ಏನೇನಿದೆ, ಏನೇನಿಲ್ಲ ಎಂಬುದರ ಬಗ್ಗೆ ರಿಯಾಲಿಟಿ ಚೆಕ್ ಮಾಡೋಣ. ಈ ಪರಿಸ್ಥಿತಿಯಲ್ಲಿ ಜನರಿಗೆ ಧೈರ್ಯ ತುಂಬಬೇಕು ಮಾಧ್ಯಮಗಳು ಹೆದರಿಸುತ್ತಿವೆ ಅಂತಾ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಸಚಿವರಾಗಿ ನೀವು ಜನರಿಗೆ ಯಾವ ರೀತಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೀರಿ? ಕೇವಲ ಆರೋಗ್ಯ ಹಾಗೂ ಕಂದಾಯ ಸಚಿವರು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟರೆ ಆಗೋದಿಲ್ಲ. ಸರ್ಕಾರದಲ್ಲಿರುವ ಎಲ್ಲ ಮಂತ್ರಿಗಳು, ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

“ಈ ಪರಿಸ್ಥಿತಿಯಲ್ಲಿ ಲಾಕ್‌ಡೌನ್ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ರೈತರ ಕತೆ ಏನು? ಕಳೆದ ಬಾರಿಯೇ ನೀವು ಏನೂ ಮಾಡಲು ಆಗಲಿಲ್ಲ. 20 ಲಕ್ಷ ಕೋಟಿ ರುಪಾಯಿಯಲ್ಲಿ ಯಾರಿಗೂ 1 ರೂಪಾಯಿ ತಲುಪಿಲ್ಲ. ನೀವು ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ನೈತಿಕ ಜವಾಬ್ದಾರಿ ಹೊತ್ತು ಜನತೆಯ ಕ್ಷಮೆ ಕೊರಬೇಕು” ಎಂದು ಹೇಳಿದರು.

“ಶವ ಸಂಸ್ಕಾರದ ವಿಚಾರದಲ್ಲಿ ಹೆಚ್ಚಿನ ವೆಚ್ಚದ ಬಗ್ಗೆ ಮಾತನಾಡುತ್ತೀರಿ. ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಾಗಗಳನ್ನು ಗುರುತಿಸಿ, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ. ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಅದಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ನಿಮ್ಮ ಆಡಳಿತ ನೋಡಿ ಹಳ್ಳಿ ಜನ ನಗುತ್ತಿದ್ದಾರೆ” ಎಂದು ಹೇಳಿದರು.

ಇದನ್ನು ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

“ಕೋವಿಡ್ ಸಾವಿನ ಬಗ್ಗೆ ಆಡಿಟ್ ನಡೆಯಬೇಕಿದೆ. 164 ಜನರು ಸತ್ತಿದ್ದರೆ, ಅಧಿಕಾರಿಗಳ ಮೂಲಕ ಸತ್ತವರ ಕುಟುಂಬಕ್ಕೆ ಸಾವಿನ ಬಗ್ಗೆ ಮಾಹಿತಿ ಕೊಡಿ. ಇಲ್ಲಿ ಯಾರೂ ಪರಿಪಕ್ವರಲ್ಲ. ನಿಮ್ಮ ತಪ್ಪನ್ನು ನೀವು ತಿದ್ದಿಕೊಂಡು ಮುಂದಿನ ಹೆಜ್ಜೆ ಇಡಿ. ಸರ್ಕಾರ ಎಂದರೆ ಪಂಚಾಯಿತಿಯಿಂದ ಸಂಸತ್ ವರೆಗೂ ಎಲ್ಲವೂ ಸರ್ಕಾರದ ಭಾಗವೇ. ಮುಖ್ಯಮಂತ್ರಿ ಪರಿಹಾರ ನಿಧಿ, ಪಿಎಂ ಕೇರ್ ಗೆ ಎಷ್ಟು ಹಣ ಬಂತು, ಎಷ್ಟು ಖರ್ಚಾಯ್ತು ಅಂತಾ ಲೆಕ್ಕ ಹೇಳಿ” ಎಂದು ಸರ್ಕಾರವನ್ನು ಆಗ್ರಹಿಸಿದರು.

“ಸರ್ಕಾರ ಕೋವಿಡ್ ವಾರಿಯರ್ಸ್ ಗಳಿಗೆ ವಿಮೆ ರದ್ದುಗೊಳಿಸಿದೆ. ನಾವು ಪ್ರಶ್ನಿಸಿದ ಮೇಲೆ ಬೇರೆ ಮಾದರಿಯಲ್ಲಿ ನೀಡಲಾಗುವುದು ಎಂದು ಹೇಳಿದೆ. ಲಸಿಕೆಯನ್ನು ಮೊದಲು ಪ್ರಧಾನಿ, ಮುಖ್ಯಮಂತ್ರಿಗಳು ತೆಗೆದುಕೊಳ್ಳದೇ, ಆ ಕೊರೊನಾ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದೀರಿ. ಇದು ಅತ್ಯಂತ ವಿಫಲ ಸರ್ಕಾರ. ಈ ಪರಿಸ್ಥಿತಿ ನಿಭಾಯಿಸಲು ನಿಮ್ಮ ಕೈಯಲ್ಲಿ ಆಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ” ಎಂದು ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ ಆರೋಗ್ಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...