Homeಕರ್ನಾಟಕಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

ಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

- Advertisement -
- Advertisement -

ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಮೃತರಿಗೆ ಗೌರವಯುತ ವಿದಾಯಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ರಾಜ್ಯಪಾಲರ ಆಹ್ವಾನದ ಮೇರೆಗೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದೇವೆ. ರಾಜ್ಯಪಾಲರು ಸರ್ಕಾರದಿಂದ ನೇರವಾಗಿ ಮಾಹಿತಿ ಪಡೆಯಬಹುದಿತ್ತು. ಆದರೆ ಮೊದಲ ಬಾರಿಗೆ ರಾಜ್ಯಪಾಲರು ವಿರೋಧ ಪಕ್ಷ ಹಾಗೂ ಸ್ಪೀಕರ್ ಅವರನ್ನು ಸೇರಿಸಿ ಸಭೆ ಕರೆದಿದ್ದಾರೆ. ನಮ್ಮ ರಾಜ್ಯ ಪುದುಚೇರಿ, ದೆಹಲಿಯಂತೆ ಕೇಂದ್ರಾಡಳಿತ ಪ್ರದೇಶವಲ್ಲ. ನಮ್ಮ ಸಂವಿಧಾನದ ಹಕ್ಕಿನಲ್ಲಿ, ಯಾವ ಕಾನೂನಿನ ಅನ್ವಯ ನಮ್ಮ ಜತೆ ಚರ್ಚೆ ಮಾಡುತ್ತಿದ್ದಾರೋ ಗೊತ್ತಿಲ್ಲ” ಎಂದು ಹೇಳಿದರು.

ಇದನ್ನು ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು

“ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದು, ಅವರ ಆರೋಗ್ಯ ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸರ್ಕಾರ ಇರುವಾಗ ರಾಜ್ಯಪಾಲರು ಈ ರೀತಿ ಹಸ್ತಕ್ಷೇಪ ಮಾಡಲು ಯಾವ ಕಾನೂನು ಬಳಸಿದ್ದಾರೆ ಎಂಬುದು ಗೊತ್ತಿಲ್ಲ. ಕಾನೂನು ಸಚಿವರು ನಮಗೆ ಈ ಬಗ್ಗೆ ಬೆಳಕು ಚೆಲ್ಲಿದರೆ ತಿಳಿದುಕೊಳ್ಳುತ್ತೇವೆ. ನಾವು ಸಭೆಯಲ್ಲಿ ಭಾಗವಹಿಸಿ ನಮ್ಮ ಸಲಹೆ ನೀಡುತ್ತೇವೆ. ನಾವು ಸರ್ಕಾರಕ್ಕೆ ಎಲ್ಲ ಸಹಕಾರ ಕೊಟ್ಟಿದ್ದೇವೆ” ಎಂದು ಅವರು ತಿಳಿದರು.

“ಕೇಂದ್ರ ಸರ್ಕಾರ 20 ಲಕ್ಷ ಕೋಟಿ, ರಾಜ್ಯ ಸರ್ಕಾರ 1600 ಕೋಟಿ ಪ್ಯಾಕೇಜ್ ಘೋಷಿಸಿದಾಗ ಯಾರಿಗೆ ತಲುಪಿದೆ ಅಂತಾ ಪಟ್ಟಿ ಕೇಳಿದ್ದೇವೆ. ಈ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಆಗ್ರಹಿಸಿದ್ದೇವೆ. ಆದರೆ ಸರ್ಕಾರ ಈ ಬಗ್ಗೆ ಮಾಹಿತಿ ಕೊಟ್ಟಿಲ್ಲ. ತಾಂತ್ರಿಕ ಸಮಿತಿಯು ಎರಡನೇ ಅಲೆ ಬಗ್ಗೆ ನವೆಂಬರ್ 30ರಂದೇ ಎಚ್ಚರಿಕೆ ನೀಡಿತ್ತು. ಪ್ರತಿನಿತ್ಯ 1.25 ಲಕ್ಷ ಪರೀಕ್ಷೆ ನಡೆಸಿ ಎಂಬುದು ಸೇರಿ 17 ಶಿಫಾರಸ್ಸು ಮಾಡಿತ್ತು. ಈ ಎಚ್ಚರಿಕೆ ನೀಡಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ರಾಜ್ಯಪಾಲರು ಸಭೆ ಕರೆದಿದ್ದಾರೆ” ಎಂದು ಅವರು ಕಿಡಿ ಕಾರಿದರು.

“ಔಷಧಿ, ಲಸಿಕೆಗಳು ಎಷ್ಟು ಕಡೆ ತಯಾರಾಗುತ್ತಿದೆ ಎಂದು ಗೊತ್ತಿದ್ದ ಮೇಲೆ ಅದನ್ನು ಬೇರೆ ಕಡೆಗಳಲ್ಲಿ ಉತ್ಪಾದನೆ ಮಾಡಲು ಯಾಕೆ ಕ್ರಮ ಕೈಗೊಳ್ಳಲಿಲ್ಲ? ಇಂದು ರಾಜ್ಯಪಾಲರು ಸಭೆ ಕರೆದಿರುವುದರಿಂದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದಂತಾಗಿದ್ದು, ಅವರು ಲಸಿಕೆ ತಯಾರಿಕೆ ಬಗ್ಗೆ ಮಾಹಿತಿ ನೀಡುವ ವಿಶ್ವಾಸವಿದೆ” ಎಂದು ತಿಳಿಸಿದರು.

ಇದನ್ನು ಓದಿ:18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ 

“ರಾಜ್ಯದಲ್ಲಿ ಎಷ್ಟು ಐಸಿಯು ಹಾಸಿಗೆ ಇವೆ? ಯಾವ ಆಸ್ಪತ್ರೆಯಲ್ಲಿ ಏನೇನಿದೆ, ಏನೇನಿಲ್ಲ ಎಂಬುದರ ಬಗ್ಗೆ ರಿಯಾಲಿಟಿ ಚೆಕ್ ಮಾಡೋಣ. ಈ ಪರಿಸ್ಥಿತಿಯಲ್ಲಿ ಜನರಿಗೆ ಧೈರ್ಯ ತುಂಬಬೇಕು ಮಾಧ್ಯಮಗಳು ಹೆದರಿಸುತ್ತಿವೆ ಅಂತಾ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಸಚಿವರಾಗಿ ನೀವು ಜನರಿಗೆ ಯಾವ ರೀತಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೀರಿ? ಕೇವಲ ಆರೋಗ್ಯ ಹಾಗೂ ಕಂದಾಯ ಸಚಿವರು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟರೆ ಆಗೋದಿಲ್ಲ. ಸರ್ಕಾರದಲ್ಲಿರುವ ಎಲ್ಲ ಮಂತ್ರಿಗಳು, ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

“ಈ ಪರಿಸ್ಥಿತಿಯಲ್ಲಿ ಲಾಕ್‌ಡೌನ್ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ರೈತರ ಕತೆ ಏನು? ಕಳೆದ ಬಾರಿಯೇ ನೀವು ಏನೂ ಮಾಡಲು ಆಗಲಿಲ್ಲ. 20 ಲಕ್ಷ ಕೋಟಿ ರುಪಾಯಿಯಲ್ಲಿ ಯಾರಿಗೂ 1 ರೂಪಾಯಿ ತಲುಪಿಲ್ಲ. ನೀವು ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ನೈತಿಕ ಜವಾಬ್ದಾರಿ ಹೊತ್ತು ಜನತೆಯ ಕ್ಷಮೆ ಕೊರಬೇಕು” ಎಂದು ಹೇಳಿದರು.

“ಶವ ಸಂಸ್ಕಾರದ ವಿಚಾರದಲ್ಲಿ ಹೆಚ್ಚಿನ ವೆಚ್ಚದ ಬಗ್ಗೆ ಮಾತನಾಡುತ್ತೀರಿ. ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಾಗಗಳನ್ನು ಗುರುತಿಸಿ, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ. ಮೃತರಿಗೆ ಗೌರವಯುತ ವಿದಾಯಕ್ಕೆ ಅವಕಾಶ ಮಾಡಿಕೊಡಿ. ಅದಕ್ಕೂ ಅವಕಾಶ ಮಾಡಿಕೊಡಲು ಆಗದಿದ್ದರೆ ಇದ್ಯಾವ ಸೀಮೆ ಸರ್ಕಾರ? ಇದಕ್ಕೂ ರಾಜ್ಯಪಾಲರ ಆದೇಶಕ್ಕಾಗಿ ಕಾಯಬೇಕಾ? ಶವ ಸಂಸ್ಕಾರಕ್ಕೆ ಟೋಕನ್ ವ್ಯವಸ್ಥೆ ಯಾಕೆ? ನಿಮ್ಮ ಆಡಳಿತ ನೋಡಿ ಹಳ್ಳಿ ಜನ ನಗುತ್ತಿದ್ದಾರೆ” ಎಂದು ಹೇಳಿದರು.

ಇದನ್ನು ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

“ಕೋವಿಡ್ ಸಾವಿನ ಬಗ್ಗೆ ಆಡಿಟ್ ನಡೆಯಬೇಕಿದೆ. 164 ಜನರು ಸತ್ತಿದ್ದರೆ, ಅಧಿಕಾರಿಗಳ ಮೂಲಕ ಸತ್ತವರ ಕುಟುಂಬಕ್ಕೆ ಸಾವಿನ ಬಗ್ಗೆ ಮಾಹಿತಿ ಕೊಡಿ. ಇಲ್ಲಿ ಯಾರೂ ಪರಿಪಕ್ವರಲ್ಲ. ನಿಮ್ಮ ತಪ್ಪನ್ನು ನೀವು ತಿದ್ದಿಕೊಂಡು ಮುಂದಿನ ಹೆಜ್ಜೆ ಇಡಿ. ಸರ್ಕಾರ ಎಂದರೆ ಪಂಚಾಯಿತಿಯಿಂದ ಸಂಸತ್ ವರೆಗೂ ಎಲ್ಲವೂ ಸರ್ಕಾರದ ಭಾಗವೇ. ಮುಖ್ಯಮಂತ್ರಿ ಪರಿಹಾರ ನಿಧಿ, ಪಿಎಂ ಕೇರ್ ಗೆ ಎಷ್ಟು ಹಣ ಬಂತು, ಎಷ್ಟು ಖರ್ಚಾಯ್ತು ಅಂತಾ ಲೆಕ್ಕ ಹೇಳಿ” ಎಂದು ಸರ್ಕಾರವನ್ನು ಆಗ್ರಹಿಸಿದರು.

“ಸರ್ಕಾರ ಕೋವಿಡ್ ವಾರಿಯರ್ಸ್ ಗಳಿಗೆ ವಿಮೆ ರದ್ದುಗೊಳಿಸಿದೆ. ನಾವು ಪ್ರಶ್ನಿಸಿದ ಮೇಲೆ ಬೇರೆ ಮಾದರಿಯಲ್ಲಿ ನೀಡಲಾಗುವುದು ಎಂದು ಹೇಳಿದೆ. ಲಸಿಕೆಯನ್ನು ಮೊದಲು ಪ್ರಧಾನಿ, ಮುಖ್ಯಮಂತ್ರಿಗಳು ತೆಗೆದುಕೊಳ್ಳದೇ, ಆ ಕೊರೊನಾ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದೀರಿ. ಇದು ಅತ್ಯಂತ ವಿಫಲ ಸರ್ಕಾರ. ಈ ಪರಿಸ್ಥಿತಿ ನಿಭಾಯಿಸಲು ನಿಮ್ಮ ಕೈಯಲ್ಲಿ ಆಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ” ಎಂದು ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ ಆರೋಗ್ಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...