Homeಮುಖಪುಟಶ್ರೀಲಂಕಾದ ತಮಿಳು ಹಿಂದೂಗಳ ಬಗ್ಗೆ ನಿಲುವೇನು? ಸಿಎಎ ಕುರಿತ ಕೇಂದ್ರದ ಸಮರ್ಥನೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ ಮುಸ್ಲಿಂ...

ಶ್ರೀಲಂಕಾದ ತಮಿಳು ಹಿಂದೂಗಳ ಬಗ್ಗೆ ನಿಲುವೇನು? ಸಿಎಎ ಕುರಿತ ಕೇಂದ್ರದ ಸಮರ್ಥನೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ ಮುಸ್ಲಿಂ ಲೀಗ್

- Advertisement -
- Advertisement -

ನೆರೆಯ ದೇಶಗಳ ಕಿರುಕುಳಕ್ಕೆ ಹೆದರಿ ಪಲಾಯನ ಮಾಡಿದ ಅಲ್ಪಸಂಖ್ಯಾತರಿಗೆ ಪೌರತ್ವವನ್ನು ನೀಡಲು ಸಿಎಎ ಉದ್ದೇಶಿಸಿದೆ ಎಂದು ಕೇಂದ್ರ ಸರ್ಕಾರ ನೀಡಿರುವ ಹೇಳಿಕೆಯನ್ನು ಭಾರತೀಯ ಯೂನಿಯನ್ ಮುಸ್ಲಿಂ ಲೀಗ್(IUML) ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಲಿಖಿತ ಹೇಳಿಕೆಯಲ್ಲಿ ಪ್ರಶ್ನಿಸಿದೆ.

ಏಪ್ರಿಲ್ 9ರಂದು ವಿಚಾರಣೆಗೆ ಮುಂಚಿತವಾಗಿ ಲಿಖಿತ ಹೇಳಿಕೆಗಳನ್ನು ಸಲ್ಲಿಸಿದ IUML, ಪಾಕಿಸ್ತಾನದ ಅಹ್ಮದೀಯರು, ಮ್ಯಾನ್ಮಾರ್‌ನ ಮುಸ್ಲಿಮರು, ಶ್ರೀಲಂಕಾದ ತಮಿಳು ಹಿಂದೂಗಳು, ಚೀನಾದ ಬೌದ್ಧರು ಏನು? ನೆರೆಯ ರಾಷ್ಟ್ರಗಳ ಅಲ್ಪಸಂಖ್ಯಾತರು ಅಲ್ಲವೇ? ಅವರು ಮೇಲೆ ಕಿರುಕುಳ ನಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ-2019ನ್ನು ಪ್ರಶ್ನಿಸಿ ಸಲ್ಲಿಸಿದ್ದ 200ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಚಾರಣೆಗೆ ನಿಗದಿಪಡಿಸಿದೆ, ಅರ್ಜಿಯಲ್ಲಿ ಸಿಎಎಗೆ ತಡೆ ಕೋರುವಂತೆ ಮನವಿ ಮಾಡಲಾಗಿತ್ತು.  ಪೌರತ್ವ ಕಾಯ್ದೆಯ ಪ್ರಕಾರ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂಗಳು, ಕ್ರಿಶ್ಚಿಯನ್ನರು, ಪಾರ್ಸಿಗಳು, ಸಿಖ್ಖರು ಮತ್ತು ಜೈನರು ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಬಂದಿದ್ದರೆ ಸಿಎಎ ಅಡಿಯಲ್ಲಿ ಪೌರತ್ವಕ್ಕೆ ಅರ್ಹರು. ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಕಾಯಿದೆ ಸಹಾಯ ಮಾಡುತ್ತದೆ ಎಂಬ ಕೇಂದ್ರದ ಹೇಳಿಕೆಯು “ಮೂಲಭೂತವಾಗಿ ದೋಷಪೂರಿತವಾಗಿದೆ” ಎಂದು IUML ಹೇಳಿದೆ.

ಸಿಎಎ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಗುರಿಯನ್ನು ಹೊಂದಿದೆ ಎಂಬ ಮೂಲಭೂತ ಪ್ರಸ್ತಾಪ ದೋಷ ಪೂರಿತವಾಗಿದೆ ಮತ್ತು ವಿವಿಧ ರೀತಿಯ ಕಿರುಕುಳಕ್ಕೊಳಗಾದ ಗುಂಪುಗಳ ಆಯ್ಕೆಯಲ್ಲಿ ವಿಫಲವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ನಿರಾಶ್ರಿತರ ನೀತಿಯು, ನ್ಯಾಯೋಚಿತ, ಸಮಂಜಸ, ತಾರತಮ್ಯರಹಿತ ಮತ್ತು ಸಾರ್ವತ್ರಿಕ ನಿರಾಶ್ರಿತರ ನೀತಿಯಾಗಿರಬೇಕು, ನೀತಿಯಲ್ಲಿ ಗುಣಲಕ್ಷಣಗಳ ಆಧಾರದ ಮೇಲೆ ತಾರತಮ್ಯ ಮಾಡಬಾರದು. ಸಿಎಎಯಲ್ಲಿ ಉಭಯ ಪೌರತ್ವದ ಬಗ್ಗೆ ಸ್ಪಷ್ಟತೆಯ ಕೊರತೆಯಿದೆ. ಸಿಎಎ ಮತ್ತು ನಿಯಮಗಳಲ್ಲಿ ಅರ್ಜಿದಾರರು ತಮ್ಮ ಸ್ಥಳೀಯ ದೇಶದ ಪೌರತ್ವವನ್ನು ತ್ಯಜಿಸುವ ಅಗತ್ಯವಿಲ್ಲ. ಇದು ದ್ವಿಪೌರತ್ವದ ಸಾಧ್ಯತೆಯನ್ನು ಸೃಷ್ಟಿಸುತ್ತದೆ ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಲಿಖಿತ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ:

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ ನಿನ್ನೆ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ಜಾರಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಪೌರತ್ವ (ತಿದ್ದುಪಡಿ) ಮಸೂದೆ-2019ನ್ನು ಡಿಸೆಂಬರ್ 11, 2019ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಮಸೂದೆಯು ಪೌರತ್ವ ಕಾಯ್ದೆ-1955ನ್ನು ತಿದ್ದುಪಡಿ ಮಾಡಿದೆ. ಧರ್ಮದ ಆಧಾರದಲ್ಲಿ ವಿದೇಶಿ ಅಕ್ರಮ ವಲಸಿಗರನ್ನು ಭಾರತೀಯ ಪೌರತ್ವಕ್ಕೆ ಅರ್ಹರನ್ನಾಗಿ ಮಾಡಿದ್ದು, ಇದು ವ್ಯಾಪಕವಾದ ವಿರೋಧಕ್ಕೆ ಕಾರಣವಾಗಿತ್ತು.

ಪೌರತ್ವ (ತಿದ್ದುಪಡಿ) ಮಸೂದೆ-2019ರಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿತ್ತು.

ಇದನ್ನು ಓದಿ: ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು, ಲಾಡೆನ್ ಅಹಿಂಸೆ ಬಗ್ಗೆ ಮಾತನಾಡಿದಂತೆ: ಸಂಜಯ್‌ ಸಿಂಗ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...