Homeಮುಖಪುಟಶ್ರೀಲಂಕಾದ ತಮಿಳು ಹಿಂದೂಗಳ ಬಗ್ಗೆ ನಿಲುವೇನು? ಸಿಎಎ ಕುರಿತ ಕೇಂದ್ರದ ಸಮರ್ಥನೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ ಮುಸ್ಲಿಂ...

ಶ್ರೀಲಂಕಾದ ತಮಿಳು ಹಿಂದೂಗಳ ಬಗ್ಗೆ ನಿಲುವೇನು? ಸಿಎಎ ಕುರಿತ ಕೇಂದ್ರದ ಸಮರ್ಥನೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ ಮುಸ್ಲಿಂ ಲೀಗ್

- Advertisement -
- Advertisement -

ನೆರೆಯ ದೇಶಗಳ ಕಿರುಕುಳಕ್ಕೆ ಹೆದರಿ ಪಲಾಯನ ಮಾಡಿದ ಅಲ್ಪಸಂಖ್ಯಾತರಿಗೆ ಪೌರತ್ವವನ್ನು ನೀಡಲು ಸಿಎಎ ಉದ್ದೇಶಿಸಿದೆ ಎಂದು ಕೇಂದ್ರ ಸರ್ಕಾರ ನೀಡಿರುವ ಹೇಳಿಕೆಯನ್ನು ಭಾರತೀಯ ಯೂನಿಯನ್ ಮುಸ್ಲಿಂ ಲೀಗ್(IUML) ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಲಿಖಿತ ಹೇಳಿಕೆಯಲ್ಲಿ ಪ್ರಶ್ನಿಸಿದೆ.

ಏಪ್ರಿಲ್ 9ರಂದು ವಿಚಾರಣೆಗೆ ಮುಂಚಿತವಾಗಿ ಲಿಖಿತ ಹೇಳಿಕೆಗಳನ್ನು ಸಲ್ಲಿಸಿದ IUML, ಪಾಕಿಸ್ತಾನದ ಅಹ್ಮದೀಯರು, ಮ್ಯಾನ್ಮಾರ್‌ನ ಮುಸ್ಲಿಮರು, ಶ್ರೀಲಂಕಾದ ತಮಿಳು ಹಿಂದೂಗಳು, ಚೀನಾದ ಬೌದ್ಧರು ಏನು? ನೆರೆಯ ರಾಷ್ಟ್ರಗಳ ಅಲ್ಪಸಂಖ್ಯಾತರು ಅಲ್ಲವೇ? ಅವರು ಮೇಲೆ ಕಿರುಕುಳ ನಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ-2019ನ್ನು ಪ್ರಶ್ನಿಸಿ ಸಲ್ಲಿಸಿದ್ದ 200ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಚಾರಣೆಗೆ ನಿಗದಿಪಡಿಸಿದೆ, ಅರ್ಜಿಯಲ್ಲಿ ಸಿಎಎಗೆ ತಡೆ ಕೋರುವಂತೆ ಮನವಿ ಮಾಡಲಾಗಿತ್ತು.  ಪೌರತ್ವ ಕಾಯ್ದೆಯ ಪ್ರಕಾರ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂಗಳು, ಕ್ರಿಶ್ಚಿಯನ್ನರು, ಪಾರ್ಸಿಗಳು, ಸಿಖ್ಖರು ಮತ್ತು ಜೈನರು ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಬಂದಿದ್ದರೆ ಸಿಎಎ ಅಡಿಯಲ್ಲಿ ಪೌರತ್ವಕ್ಕೆ ಅರ್ಹರು. ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಕಾಯಿದೆ ಸಹಾಯ ಮಾಡುತ್ತದೆ ಎಂಬ ಕೇಂದ್ರದ ಹೇಳಿಕೆಯು “ಮೂಲಭೂತವಾಗಿ ದೋಷಪೂರಿತವಾಗಿದೆ” ಎಂದು IUML ಹೇಳಿದೆ.

ಸಿಎಎ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಗುರಿಯನ್ನು ಹೊಂದಿದೆ ಎಂಬ ಮೂಲಭೂತ ಪ್ರಸ್ತಾಪ ದೋಷ ಪೂರಿತವಾಗಿದೆ ಮತ್ತು ವಿವಿಧ ರೀತಿಯ ಕಿರುಕುಳಕ್ಕೊಳಗಾದ ಗುಂಪುಗಳ ಆಯ್ಕೆಯಲ್ಲಿ ವಿಫಲವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ನಿರಾಶ್ರಿತರ ನೀತಿಯು, ನ್ಯಾಯೋಚಿತ, ಸಮಂಜಸ, ತಾರತಮ್ಯರಹಿತ ಮತ್ತು ಸಾರ್ವತ್ರಿಕ ನಿರಾಶ್ರಿತರ ನೀತಿಯಾಗಿರಬೇಕು, ನೀತಿಯಲ್ಲಿ ಗುಣಲಕ್ಷಣಗಳ ಆಧಾರದ ಮೇಲೆ ತಾರತಮ್ಯ ಮಾಡಬಾರದು. ಸಿಎಎಯಲ್ಲಿ ಉಭಯ ಪೌರತ್ವದ ಬಗ್ಗೆ ಸ್ಪಷ್ಟತೆಯ ಕೊರತೆಯಿದೆ. ಸಿಎಎ ಮತ್ತು ನಿಯಮಗಳಲ್ಲಿ ಅರ್ಜಿದಾರರು ತಮ್ಮ ಸ್ಥಳೀಯ ದೇಶದ ಪೌರತ್ವವನ್ನು ತ್ಯಜಿಸುವ ಅಗತ್ಯವಿಲ್ಲ. ಇದು ದ್ವಿಪೌರತ್ವದ ಸಾಧ್ಯತೆಯನ್ನು ಸೃಷ್ಟಿಸುತ್ತದೆ ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಲಿಖಿತ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ:

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ ನಿನ್ನೆ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ಜಾರಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಪೌರತ್ವ (ತಿದ್ದುಪಡಿ) ಮಸೂದೆ-2019ನ್ನು ಡಿಸೆಂಬರ್ 11, 2019ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಮಸೂದೆಯು ಪೌರತ್ವ ಕಾಯ್ದೆ-1955ನ್ನು ತಿದ್ದುಪಡಿ ಮಾಡಿದೆ. ಧರ್ಮದ ಆಧಾರದಲ್ಲಿ ವಿದೇಶಿ ಅಕ್ರಮ ವಲಸಿಗರನ್ನು ಭಾರತೀಯ ಪೌರತ್ವಕ್ಕೆ ಅರ್ಹರನ್ನಾಗಿ ಮಾಡಿದ್ದು, ಇದು ವ್ಯಾಪಕವಾದ ವಿರೋಧಕ್ಕೆ ಕಾರಣವಾಗಿತ್ತು.

ಪೌರತ್ವ (ತಿದ್ದುಪಡಿ) ಮಸೂದೆ-2019ರಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿತ್ತು.

ಇದನ್ನು ಓದಿ: ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು, ಲಾಡೆನ್ ಅಹಿಂಸೆ ಬಗ್ಗೆ ಮಾತನಾಡಿದಂತೆ: ಸಂಜಯ್‌ ಸಿಂಗ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...