Homeಮುಖಪುಟಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ ಜೈಲು: ಬುಲ್ಡೋಜರ್ ಕಾರ್ಯಾಚರಣೆ ಯಾವಾಗ?; ಅಖಿಲೇಶ್ ಯಾದವ್

ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ ಜೈಲು: ಬುಲ್ಡೋಜರ್ ಕಾರ್ಯಾಚರಣೆ ಯಾವಾಗ?; ಅಖಿಲೇಶ್ ಯಾದವ್

- Advertisement -
- Advertisement -

ಅಪ್ರಾಪ್ತೆಯ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕನಿಗೆ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ವಿಚಾರವನ್ನು ಉಲ್ಲೇಖಿಸಿದ ಸಮಾಜಾವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಬುಲ್ಡೋಝರ್ ಕಾರ್ಯಾಚರಣೆ ಯಾವಾಗಾ? ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಯೋಗಿ ಆದಿತ್ಯನಾಥ್ ಸರ್ಕಾರ ನಾಳೆ ಅಥವಾ ನಾಡಿದ್ದು, ಯಾವಾಗ ಅತ್ಯಾಚಾರಿ ಶಾಸಕನ ಮನೆ ಮೇಲೆ ಬುಲ್ಡೋಝರ್ ಕಾರ್ಯಾಚರಣೆ ನಡೆಸಲಿದೆ? ಎಂದು ಅಖಿಲೇಶ್ ಕೇಳಿದ್ದಾರೆ. ಅಪರಾಧಿ ಶಾಸಕನನ್ನು ವಿಧಾನಸಭೆಯಿಂದ ಅಮಾನತು ಮಾಡದಿರುವುದಕ್ಕೆ ಅವರು ಕಿಡಿ ಕಾರಿದ್ದಾರೆ.

“ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯ ದುದ್ದಿ (ಸೋನಭದ್ರ) ಶಾಸಕನಿಗೆ 25 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಆದರೂ, ಅವರ ವಿಧಾನಸಭೆಯ ಸದಸ್ಯತ್ವವನ್ನು ರದ್ದುಗೊಳಿಸಲಾಗಿಲ್ಲ. ಬಿಜೆಪಿ ಶಾಸಕ ಎಂಬ ಕಾರಣಕ್ಕೆ ಅವರಿಗೆ ವಿಶೇಷ ಗೌರವ, ವಿನಾಯಿತಿ ನೀಡಲಾಗುತ್ತಿದೆಯೇ? ಬುಲ್ಡೋಜರ್ ಕಾರ್ಯಾಚರಣೆ ಇಂದು ಅಥವಾ ನಾಳೆ ನಡೆಯಲಿದೆಯಾ? ಸಾರ್ವಜನಿಕರು ಕೇಳುತ್ತಿದ್ದಾರೆ” ಎಂದು ಯಾದವ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಏನಿದು ಪ್ರಕರಣ?

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ದುದ್ಧಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್‌ಗೆ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ. ದಂಡ ವಿಧಿಸಿದೆ.

ಡಿಸೆಂಬರ್ 12 ರಂದು ಸೋನಭದ್ರಾ ಜಿಲ್ಲಾ ಹೆಚ್ಚುವರಿ ನ್ಯಾಯಾಲಯವು ಶಾಸಕ ಗೊಂಡ್ ತಪ್ಪಿತಸ್ಥ ಎಂದು ಘೋಷಿಸಿತ್ತು. ಆತ 2014 ರಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವುದು ಸಾಕ್ಷ್ಯಾಧಾರಗಳಿಂದ ರುಜುವಾತಾಗಿದೆ ಎಂದು ತೀರ್ಪು ನೀಡಿತ್ತು. ಶಾಸಕನ ಮೇಲೆ ಐಪಿಸಿ ಸೆಕ್ಷನ್ 376, 506 ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಎರಡು ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಯಾದ ಕಾರಣ ರಾಮ್ದುಲರ್ ಗೊಂಡ್‌ಗೆ ಸುಪ್ರೀಂ ಕೋರ್ಟ್‌ ಆದೇಶದಂತೆ ತನ್ನ ಶಾಸಕ ಸ್ಥಾನ ಕಳೆದುಕೊಳ್ಳಲಿದ್ದಾರೆ. ಸುಪ್ರೀಂ ಕೋರ್ಟ್‌ನ 2013 ರ ತೀರ್ಪಿನ ಪ್ರಕಾರ, ಯಾವುದೇ ಸಂಸದ ಅಥವಾ ಶಾಸಕ ಅಪರಾಧದ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ರುಜುವಾತಾಗಿ, ಅವರಿಗೆ ಕನಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆ ಘೋಷಣೆಯಾದರೆ ತಕ್ಷಣವೇ ಜಾರಿಗೆ ಬರುವಂತೆ ಅವರು ಸಂಸತ್ ಮತ್ತು ವಿಧಾನಮಂಡಲದ ಸದಸ್ಯತ್ವವನ್ನು ಕಳೆದುಕೊಳ್ಳಲಿದ್ದಾರೆ ಎಂದು ಸಂತ್ರಸ್ಥೆ ಪರ ವಕೀಲ ಸತ್ಯಪ್ರಕಾಶ್ ಸಖ್ಯ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಶಾಸಕ ತಪ್ಪಿತಸ್ಥ ಎಂದು ರುಜುವಾತಾಗಿದೆ. ಎಂಟು ಪ್ರಾಸಿಕ್ಯೂಷನ್ ಮತ್ತು ಮೂವರು ಡಿಫೆನ್ಸ್ ಸಾಕ್ಷಿಗಳನ್ನು ನ್ಯಾಯಾಲಯವು ಪರಿಶೀಲಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶಾಸಕನಿಗೆ ಶಿಕ್ಷೆಯಾಗಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದ ಅತ್ಯಾಚಾರ ಸಂತ್ರಸ್ತೆಯ ಸಹೋದರ, ರಾಮ್ದುಲರ್ ಗೊಂಡ್ ಶಾಸಕನಾದ ನಂತರ ಗೊಂಡ್ ನಮ್ಮ ಕುಟುಂಬಕ್ಕೆ ಕಿರುಕುಳ ನೀಡಿದ್ದ. ಪ್ರಕರಣವನ್ನು ಹಿಂಪಡೆಯುವಂತೆ ಒತ್ತಡ ಹೇರಿದ್ದ ಎಂದು ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ, ಆರೋಪಿ ರಾಮ್ದುಲರ್ ಗೊಂಡ್‌ನ ಪತ್ನಿ ಗ್ರಾಮದ ಮುಖ್ಯಸ್ಥರಾಗಿದ್ದರು. ನವೆಂಬರ್ 4,2014 ರ ಸಂಜೆ ಸಂತ್ರಸ್ತೆ ಬಹಿರ್ದೆಸೆಗೆ ಮನೆ ಬಳಿಯ ಹೊಲಕ್ಕೆ ಹೋದಾಗ ಅಪರಾಧಿ ಗೊಂಡ್ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ.

ಬಾಲಕಿ ಘಟನಾ ಸ್ಥಳದಿಂದ ಮನೆಗೆ ಬಂದು ರೈತನಾಗಿದ್ದ ತನ್ನ ಅಣ್ಣನಿಗೆ ವಿಷಯ ತಿಳಿಸಿದ್ದಳು. ಪ್ರಭಾವಿ ವ್ಯಕ್ತಿಯಾಗಿದ್ದ ಆರೋಪಿಯ ಮುಂದೆ ಬಾಲಕಿಯ ಅಣ್ಣ ಏನು ಮಾಡುವಂತೆ ಇರಲಿಲ್ಲ. ಇದನ್ನೇ ಲಾಭ ಮಾಡಿಕೊಂಡ ಆರೋಪಿ ಬಾಲಕಿಯ ಅಣ್ಣನಿಗೆ ಬೆದರಿಕೆ ಹಾಕಿ, ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದ. ಆತನ ಕಿರುಕುಳ ತಾಳಲಾರದೆ, ಕೊನೆಗೆ ಬಾಲಕಿಯ ತಂದೆ ಸೋನಭದ್ರಾ ಜಿಲ್ಲೆಯ ಮೈರಪುರ ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಆತ ಬಿಡುಗಡೆಗೊಂಡಿದ್ದ.

ಘಟನೆ ನಡೆದಾಗ ಅಪರಾಧಿ ಶಾಸಕನಾಗಿರಲಿಲ್ಲ. ಬಳಿಕ 2022 ರ ವಿಧಾನಸಭಾ ಚುನಾವಣೆಯಲ್ಲಿ ಆರೋಪಿ ಗೊಂಡ್ ದುದ್ಧಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಮಾಜವಾದಿ ಪಕ್ಷದ ವಿಜಯ್ ಸಿಂಗ್ ಅವರನ್ನು 6,723 ಮತಗಳಿಂದ ಸೋಲಿಸಿ ಶಾಸಕನಾಗಿದ್ದಾನೆ.

ಇದನ್ನೂ ಓದಿ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...