Homeಮುಖಪುಟಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ ಜೈಲು: ಬುಲ್ಡೋಜರ್ ಕಾರ್ಯಾಚರಣೆ ಯಾವಾಗ?; ಅಖಿಲೇಶ್ ಯಾದವ್

ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ ಜೈಲು: ಬುಲ್ಡೋಜರ್ ಕಾರ್ಯಾಚರಣೆ ಯಾವಾಗ?; ಅಖಿಲೇಶ್ ಯಾದವ್

- Advertisement -
- Advertisement -

ಅಪ್ರಾಪ್ತೆಯ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕನಿಗೆ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ವಿಚಾರವನ್ನು ಉಲ್ಲೇಖಿಸಿದ ಸಮಾಜಾವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಬುಲ್ಡೋಝರ್ ಕಾರ್ಯಾಚರಣೆ ಯಾವಾಗಾ? ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಯೋಗಿ ಆದಿತ್ಯನಾಥ್ ಸರ್ಕಾರ ನಾಳೆ ಅಥವಾ ನಾಡಿದ್ದು, ಯಾವಾಗ ಅತ್ಯಾಚಾರಿ ಶಾಸಕನ ಮನೆ ಮೇಲೆ ಬುಲ್ಡೋಝರ್ ಕಾರ್ಯಾಚರಣೆ ನಡೆಸಲಿದೆ? ಎಂದು ಅಖಿಲೇಶ್ ಕೇಳಿದ್ದಾರೆ. ಅಪರಾಧಿ ಶಾಸಕನನ್ನು ವಿಧಾನಸಭೆಯಿಂದ ಅಮಾನತು ಮಾಡದಿರುವುದಕ್ಕೆ ಅವರು ಕಿಡಿ ಕಾರಿದ್ದಾರೆ.

“ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯ ದುದ್ದಿ (ಸೋನಭದ್ರ) ಶಾಸಕನಿಗೆ 25 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಆದರೂ, ಅವರ ವಿಧಾನಸಭೆಯ ಸದಸ್ಯತ್ವವನ್ನು ರದ್ದುಗೊಳಿಸಲಾಗಿಲ್ಲ. ಬಿಜೆಪಿ ಶಾಸಕ ಎಂಬ ಕಾರಣಕ್ಕೆ ಅವರಿಗೆ ವಿಶೇಷ ಗೌರವ, ವಿನಾಯಿತಿ ನೀಡಲಾಗುತ್ತಿದೆಯೇ? ಬುಲ್ಡೋಜರ್ ಕಾರ್ಯಾಚರಣೆ ಇಂದು ಅಥವಾ ನಾಳೆ ನಡೆಯಲಿದೆಯಾ? ಸಾರ್ವಜನಿಕರು ಕೇಳುತ್ತಿದ್ದಾರೆ” ಎಂದು ಯಾದವ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಏನಿದು ಪ್ರಕರಣ?

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ದುದ್ಧಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್‌ಗೆ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ. ದಂಡ ವಿಧಿಸಿದೆ.

ಡಿಸೆಂಬರ್ 12 ರಂದು ಸೋನಭದ್ರಾ ಜಿಲ್ಲಾ ಹೆಚ್ಚುವರಿ ನ್ಯಾಯಾಲಯವು ಶಾಸಕ ಗೊಂಡ್ ತಪ್ಪಿತಸ್ಥ ಎಂದು ಘೋಷಿಸಿತ್ತು. ಆತ 2014 ರಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವುದು ಸಾಕ್ಷ್ಯಾಧಾರಗಳಿಂದ ರುಜುವಾತಾಗಿದೆ ಎಂದು ತೀರ್ಪು ನೀಡಿತ್ತು. ಶಾಸಕನ ಮೇಲೆ ಐಪಿಸಿ ಸೆಕ್ಷನ್ 376, 506 ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಎರಡು ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಯಾದ ಕಾರಣ ರಾಮ್ದುಲರ್ ಗೊಂಡ್‌ಗೆ ಸುಪ್ರೀಂ ಕೋರ್ಟ್‌ ಆದೇಶದಂತೆ ತನ್ನ ಶಾಸಕ ಸ್ಥಾನ ಕಳೆದುಕೊಳ್ಳಲಿದ್ದಾರೆ. ಸುಪ್ರೀಂ ಕೋರ್ಟ್‌ನ 2013 ರ ತೀರ್ಪಿನ ಪ್ರಕಾರ, ಯಾವುದೇ ಸಂಸದ ಅಥವಾ ಶಾಸಕ ಅಪರಾಧದ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ರುಜುವಾತಾಗಿ, ಅವರಿಗೆ ಕನಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆ ಘೋಷಣೆಯಾದರೆ ತಕ್ಷಣವೇ ಜಾರಿಗೆ ಬರುವಂತೆ ಅವರು ಸಂಸತ್ ಮತ್ತು ವಿಧಾನಮಂಡಲದ ಸದಸ್ಯತ್ವವನ್ನು ಕಳೆದುಕೊಳ್ಳಲಿದ್ದಾರೆ ಎಂದು ಸಂತ್ರಸ್ಥೆ ಪರ ವಕೀಲ ಸತ್ಯಪ್ರಕಾಶ್ ಸಖ್ಯ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಶಾಸಕ ತಪ್ಪಿತಸ್ಥ ಎಂದು ರುಜುವಾತಾಗಿದೆ. ಎಂಟು ಪ್ರಾಸಿಕ್ಯೂಷನ್ ಮತ್ತು ಮೂವರು ಡಿಫೆನ್ಸ್ ಸಾಕ್ಷಿಗಳನ್ನು ನ್ಯಾಯಾಲಯವು ಪರಿಶೀಲಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶಾಸಕನಿಗೆ ಶಿಕ್ಷೆಯಾಗಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದ ಅತ್ಯಾಚಾರ ಸಂತ್ರಸ್ತೆಯ ಸಹೋದರ, ರಾಮ್ದುಲರ್ ಗೊಂಡ್ ಶಾಸಕನಾದ ನಂತರ ಗೊಂಡ್ ನಮ್ಮ ಕುಟುಂಬಕ್ಕೆ ಕಿರುಕುಳ ನೀಡಿದ್ದ. ಪ್ರಕರಣವನ್ನು ಹಿಂಪಡೆಯುವಂತೆ ಒತ್ತಡ ಹೇರಿದ್ದ ಎಂದು ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ, ಆರೋಪಿ ರಾಮ್ದುಲರ್ ಗೊಂಡ್‌ನ ಪತ್ನಿ ಗ್ರಾಮದ ಮುಖ್ಯಸ್ಥರಾಗಿದ್ದರು. ನವೆಂಬರ್ 4,2014 ರ ಸಂಜೆ ಸಂತ್ರಸ್ತೆ ಬಹಿರ್ದೆಸೆಗೆ ಮನೆ ಬಳಿಯ ಹೊಲಕ್ಕೆ ಹೋದಾಗ ಅಪರಾಧಿ ಗೊಂಡ್ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ.

ಬಾಲಕಿ ಘಟನಾ ಸ್ಥಳದಿಂದ ಮನೆಗೆ ಬಂದು ರೈತನಾಗಿದ್ದ ತನ್ನ ಅಣ್ಣನಿಗೆ ವಿಷಯ ತಿಳಿಸಿದ್ದಳು. ಪ್ರಭಾವಿ ವ್ಯಕ್ತಿಯಾಗಿದ್ದ ಆರೋಪಿಯ ಮುಂದೆ ಬಾಲಕಿಯ ಅಣ್ಣ ಏನು ಮಾಡುವಂತೆ ಇರಲಿಲ್ಲ. ಇದನ್ನೇ ಲಾಭ ಮಾಡಿಕೊಂಡ ಆರೋಪಿ ಬಾಲಕಿಯ ಅಣ್ಣನಿಗೆ ಬೆದರಿಕೆ ಹಾಕಿ, ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದ. ಆತನ ಕಿರುಕುಳ ತಾಳಲಾರದೆ, ಕೊನೆಗೆ ಬಾಲಕಿಯ ತಂದೆ ಸೋನಭದ್ರಾ ಜಿಲ್ಲೆಯ ಮೈರಪುರ ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಆತ ಬಿಡುಗಡೆಗೊಂಡಿದ್ದ.

ಘಟನೆ ನಡೆದಾಗ ಅಪರಾಧಿ ಶಾಸಕನಾಗಿರಲಿಲ್ಲ. ಬಳಿಕ 2022 ರ ವಿಧಾನಸಭಾ ಚುನಾವಣೆಯಲ್ಲಿ ಆರೋಪಿ ಗೊಂಡ್ ದುದ್ಧಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಮಾಜವಾದಿ ಪಕ್ಷದ ವಿಜಯ್ ಸಿಂಗ್ ಅವರನ್ನು 6,723 ಮತಗಳಿಂದ ಸೋಲಿಸಿ ಶಾಸಕನಾಗಿದ್ದಾನೆ.

ಇದನ್ನೂ ಓದಿ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...