Homeಮುಖಪುಟಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ ಜೈಲು: ಬುಲ್ಡೋಜರ್ ಕಾರ್ಯಾಚರಣೆ ಯಾವಾಗ?; ಅಖಿಲೇಶ್ ಯಾದವ್

ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ ಜೈಲು: ಬುಲ್ಡೋಜರ್ ಕಾರ್ಯಾಚರಣೆ ಯಾವಾಗ?; ಅಖಿಲೇಶ್ ಯಾದವ್

- Advertisement -
- Advertisement -

ಅಪ್ರಾಪ್ತೆಯ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕನಿಗೆ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ವಿಚಾರವನ್ನು ಉಲ್ಲೇಖಿಸಿದ ಸಮಾಜಾವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಬುಲ್ಡೋಝರ್ ಕಾರ್ಯಾಚರಣೆ ಯಾವಾಗಾ? ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಯೋಗಿ ಆದಿತ್ಯನಾಥ್ ಸರ್ಕಾರ ನಾಳೆ ಅಥವಾ ನಾಡಿದ್ದು, ಯಾವಾಗ ಅತ್ಯಾಚಾರಿ ಶಾಸಕನ ಮನೆ ಮೇಲೆ ಬುಲ್ಡೋಝರ್ ಕಾರ್ಯಾಚರಣೆ ನಡೆಸಲಿದೆ? ಎಂದು ಅಖಿಲೇಶ್ ಕೇಳಿದ್ದಾರೆ. ಅಪರಾಧಿ ಶಾಸಕನನ್ನು ವಿಧಾನಸಭೆಯಿಂದ ಅಮಾನತು ಮಾಡದಿರುವುದಕ್ಕೆ ಅವರು ಕಿಡಿ ಕಾರಿದ್ದಾರೆ.

“ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯ ದುದ್ದಿ (ಸೋನಭದ್ರ) ಶಾಸಕನಿಗೆ 25 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಆದರೂ, ಅವರ ವಿಧಾನಸಭೆಯ ಸದಸ್ಯತ್ವವನ್ನು ರದ್ದುಗೊಳಿಸಲಾಗಿಲ್ಲ. ಬಿಜೆಪಿ ಶಾಸಕ ಎಂಬ ಕಾರಣಕ್ಕೆ ಅವರಿಗೆ ವಿಶೇಷ ಗೌರವ, ವಿನಾಯಿತಿ ನೀಡಲಾಗುತ್ತಿದೆಯೇ? ಬುಲ್ಡೋಜರ್ ಕಾರ್ಯಾಚರಣೆ ಇಂದು ಅಥವಾ ನಾಳೆ ನಡೆಯಲಿದೆಯಾ? ಸಾರ್ವಜನಿಕರು ಕೇಳುತ್ತಿದ್ದಾರೆ” ಎಂದು ಯಾದವ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಏನಿದು ಪ್ರಕರಣ?

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ದುದ್ಧಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್‌ಗೆ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ. ದಂಡ ವಿಧಿಸಿದೆ.

ಡಿಸೆಂಬರ್ 12 ರಂದು ಸೋನಭದ್ರಾ ಜಿಲ್ಲಾ ಹೆಚ್ಚುವರಿ ನ್ಯಾಯಾಲಯವು ಶಾಸಕ ಗೊಂಡ್ ತಪ್ಪಿತಸ್ಥ ಎಂದು ಘೋಷಿಸಿತ್ತು. ಆತ 2014 ರಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವುದು ಸಾಕ್ಷ್ಯಾಧಾರಗಳಿಂದ ರುಜುವಾತಾಗಿದೆ ಎಂದು ತೀರ್ಪು ನೀಡಿತ್ತು. ಶಾಸಕನ ಮೇಲೆ ಐಪಿಸಿ ಸೆಕ್ಷನ್ 376, 506 ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಎರಡು ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಯಾದ ಕಾರಣ ರಾಮ್ದುಲರ್ ಗೊಂಡ್‌ಗೆ ಸುಪ್ರೀಂ ಕೋರ್ಟ್‌ ಆದೇಶದಂತೆ ತನ್ನ ಶಾಸಕ ಸ್ಥಾನ ಕಳೆದುಕೊಳ್ಳಲಿದ್ದಾರೆ. ಸುಪ್ರೀಂ ಕೋರ್ಟ್‌ನ 2013 ರ ತೀರ್ಪಿನ ಪ್ರಕಾರ, ಯಾವುದೇ ಸಂಸದ ಅಥವಾ ಶಾಸಕ ಅಪರಾಧದ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ರುಜುವಾತಾಗಿ, ಅವರಿಗೆ ಕನಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆ ಘೋಷಣೆಯಾದರೆ ತಕ್ಷಣವೇ ಜಾರಿಗೆ ಬರುವಂತೆ ಅವರು ಸಂಸತ್ ಮತ್ತು ವಿಧಾನಮಂಡಲದ ಸದಸ್ಯತ್ವವನ್ನು ಕಳೆದುಕೊಳ್ಳಲಿದ್ದಾರೆ ಎಂದು ಸಂತ್ರಸ್ಥೆ ಪರ ವಕೀಲ ಸತ್ಯಪ್ರಕಾಶ್ ಸಖ್ಯ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಶಾಸಕ ತಪ್ಪಿತಸ್ಥ ಎಂದು ರುಜುವಾತಾಗಿದೆ. ಎಂಟು ಪ್ರಾಸಿಕ್ಯೂಷನ್ ಮತ್ತು ಮೂವರು ಡಿಫೆನ್ಸ್ ಸಾಕ್ಷಿಗಳನ್ನು ನ್ಯಾಯಾಲಯವು ಪರಿಶೀಲಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶಾಸಕನಿಗೆ ಶಿಕ್ಷೆಯಾಗಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದ ಅತ್ಯಾಚಾರ ಸಂತ್ರಸ್ತೆಯ ಸಹೋದರ, ರಾಮ್ದುಲರ್ ಗೊಂಡ್ ಶಾಸಕನಾದ ನಂತರ ಗೊಂಡ್ ನಮ್ಮ ಕುಟುಂಬಕ್ಕೆ ಕಿರುಕುಳ ನೀಡಿದ್ದ. ಪ್ರಕರಣವನ್ನು ಹಿಂಪಡೆಯುವಂತೆ ಒತ್ತಡ ಹೇರಿದ್ದ ಎಂದು ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ, ಆರೋಪಿ ರಾಮ್ದುಲರ್ ಗೊಂಡ್‌ನ ಪತ್ನಿ ಗ್ರಾಮದ ಮುಖ್ಯಸ್ಥರಾಗಿದ್ದರು. ನವೆಂಬರ್ 4,2014 ರ ಸಂಜೆ ಸಂತ್ರಸ್ತೆ ಬಹಿರ್ದೆಸೆಗೆ ಮನೆ ಬಳಿಯ ಹೊಲಕ್ಕೆ ಹೋದಾಗ ಅಪರಾಧಿ ಗೊಂಡ್ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ.

ಬಾಲಕಿ ಘಟನಾ ಸ್ಥಳದಿಂದ ಮನೆಗೆ ಬಂದು ರೈತನಾಗಿದ್ದ ತನ್ನ ಅಣ್ಣನಿಗೆ ವಿಷಯ ತಿಳಿಸಿದ್ದಳು. ಪ್ರಭಾವಿ ವ್ಯಕ್ತಿಯಾಗಿದ್ದ ಆರೋಪಿಯ ಮುಂದೆ ಬಾಲಕಿಯ ಅಣ್ಣ ಏನು ಮಾಡುವಂತೆ ಇರಲಿಲ್ಲ. ಇದನ್ನೇ ಲಾಭ ಮಾಡಿಕೊಂಡ ಆರೋಪಿ ಬಾಲಕಿಯ ಅಣ್ಣನಿಗೆ ಬೆದರಿಕೆ ಹಾಕಿ, ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದ. ಆತನ ಕಿರುಕುಳ ತಾಳಲಾರದೆ, ಕೊನೆಗೆ ಬಾಲಕಿಯ ತಂದೆ ಸೋನಭದ್ರಾ ಜಿಲ್ಲೆಯ ಮೈರಪುರ ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಆತ ಬಿಡುಗಡೆಗೊಂಡಿದ್ದ.

ಘಟನೆ ನಡೆದಾಗ ಅಪರಾಧಿ ಶಾಸಕನಾಗಿರಲಿಲ್ಲ. ಬಳಿಕ 2022 ರ ವಿಧಾನಸಭಾ ಚುನಾವಣೆಯಲ್ಲಿ ಆರೋಪಿ ಗೊಂಡ್ ದುದ್ಧಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಮಾಜವಾದಿ ಪಕ್ಷದ ವಿಜಯ್ ಸಿಂಗ್ ಅವರನ್ನು 6,723 ಮತಗಳಿಂದ ಸೋಲಿಸಿ ಶಾಸಕನಾಗಿದ್ದಾನೆ.

ಇದನ್ನೂ ಓದಿ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...