Homeಮುಖಪುಟಲೋಕಸಭೆ ಚುನಾವಣೆ: ದೆಹಲಿ ಸಿಎಂ ಪತ್ರದಲ್ಲಿದ್ದ 6 ಗ್ಯಾರೆಂಟಿಗಳು....

ಲೋಕಸಭೆ ಚುನಾವಣೆ: ದೆಹಲಿ ಸಿಎಂ ಪತ್ರದಲ್ಲಿದ್ದ 6 ಗ್ಯಾರೆಂಟಿಗಳು….

- Advertisement -
- Advertisement -

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಭಾನುವಾರ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ‘ಲೋಕತಂತ್ರ ಬಚಾವೋ’ ರ್ಯಾಲಿಯಲ್ಲಿ ವೇದಿಕೆಯ ಮೇಲೆ ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಭಾಗವಹಿಸಿದ್ದರು ಮತ್ತು 2024ರ ಲೋಕಸಭೆ ಚುನಾವಣೆ ಹಿನ್ನೆಲೆ ಆರು ಚುನಾವಣಾ ಭರವಸೆಗಳನ್ನು ಒಳಗೊಂಡಿರುವ ತಮ್ಮ ಪತಿಯ ಸಂದೇಶವನ್ನು ಅವರು ಓದಿದ್ದಾರೆ.

ಇಂಡಿಯಾ ಮೈತ್ರಿ ಕೂಟವು ಅಧಿಕಾರಕ್ಕೆ ಬಂದರೆ, ಉತ್ತಮ ಆಸ್ಪತ್ರೆಗಳು ಮತ್ತು ಶಿಕ್ಷಣ ಸೇರಿದಂತೆ ಆರು ಖಾತರಿಗಳನ್ನು ಪೂರೈಸುತ್ತದೆ. ನೀವು ಇಂಡಿಯಾ ಬಣಕ್ಕೆ ಅವಕಾಶ ನೀಡಿದರೆ, ನಾವು ಶ್ರೇಷ್ಠ ರಾಷ್ಟ್ರವನ್ನು ನಿರ್ಮಿಸುತ್ತೇವೆ ಎಂದು ಜೈಲಿನಲ್ಲಿರುವ ಪತಿಯ ಸಂದೇಶವನ್ನು ಓದುವಾಗ ಸುನೀತಾ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರದರ್ಶನ, ಅರವಿಂದ್ ಕೇಜ್ರಿವಾಲ್ ಬಂಧನದ ಹಿನ್ನೆಲೆಯಲ್ಲಿ ಇಂಡಿಯಾ ಮೈತ್ರಿಕೂಟದ ವತಿಯಿಂದ ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಲೋಕತಂತ್ರ ಬಚಾವೋ’ ರ್ಯಾಲಿ ಆಯೋಜಿಸಲಾಗಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎನ್‌ಸಿಪಿ ನಾಯಕ ಶರದ್ ಪವಾರ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್,  ಎಎಪಿ ನಾಯಕ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ.

ರ್ಯಾಲಿಯಲ್ಲಿ ಸುನೀತಾ ಕೇಜ್ರಿವಾಲ್ ಅವರು ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರು ನೀಡಿದ ಆರು ಚುನಾವಣಾ ಭರವಸೆಗಳನ್ನು ಓದಿದ್ದಾರೆ..

1. ದೇಶಾದ್ಯಂತ 24-ಗಂಟೆಗಳ ವಿದ್ಯುತ್ ಪೂರೈಕೆ

2. ದೇಶದ ಬಡವರಿಗೆ ಉಚಿತ ವಿದ್ಯುತ್ ಪೂರೈಕೆ

3. ಪ್ರತಿ ಗ್ರಾಮ ಮತ್ತು ಮೊಹಲ್ಲಾದಲ್ಲಿ ಉತ್ತಮ ಸರ್ಕಾರಿ ಶಾಲೆ ನಿರ್ಮಣ.

4. ಪ್ರತಿ ಗ್ರಾಮ, ಮತ್ತು ಮೊಹಲ್ಲಾದಲ್ಲಿ ಮೊಹಲ್ಲಾ ಕ್ಲಿನಿಕ್ ನಿರ್ಮಾಣ

5. ಸ್ವಾಮಿನಾಥನ್ ಸಮಿತಿ ವರದಿಯಂತೆ ರೈತರಿಗೆ MSP ಜಾರಿ

6. ದೆಹಲಿಗೆ ಪೂರ್ಣ ರಾಜ್ಯತ್ವ ಸ್ಥಾನಮಾನ

ಸಂದೇಶದಲ್ಲಿ ಏನೇನಿದೆ?

ಕಳೆದ 75 ವರ್ಷಗಳಲ್ಲಿ ದೆಹಲಿಯ ಜನರು ಅನ್ಯಾಯವನ್ನು ಎದುರಿಸಿದ್ದಾರೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ನಾವು ದೆಹಲಿಯನ್ನು ಸಂಪೂರ್ಣ ರಾಜ್ಯವನ್ನಾಗಿ ಮಾಡುತ್ತೇವೆ. ನಿಮ್ಮ ಸ್ವಂತ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ನಿಮಗಾಗಿ ಸಂದೇಶವನ್ನು ಕಳುಹಿಸಿದ್ದಾರೆ. ಈ ಸಂದೇಶವನ್ನು ಓದುವ ಮೊದಲು, ನಾನು ನಿಮಗೆ ಒಂದು ವಿಷಯವನ್ನು ಕೇಳಲು ಬಯಸುತ್ತೇನೆ. ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ನನ್ನ ಗಂಡನನ್ನು ಜೈಲಿಗೆ ಹಾಕಿದ್ದು, ಪ್ರಧಾನಿ ಮಾಡಿದ್ದು ಸರಿಯೇ? ಕೇಜ್ರಿವಾಲ್ ಅವರು ನಿಜವಾದ ದೇಶಭಕ್ತ ಮತ್ತು ಪ್ರಾಮಾಣಿಕ ವ್ಯಕ್ತಿ ಎಂದು ನೀವು ನಂಬುತ್ತೀರಾ? ಕೇಜ್ರಿವಾಲ್ ಜೈಲಿನಲ್ಲಿದ್ದಾರೆ, ರಾಜೀನಾಮೆ ನೀಡಬೇಕು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅವರು ರಾಜೀನಾಮೆ ನೀಡಬೇಕೇ? ನಿಮ್ಮ ಕೇಜ್ರಿವಾಲ್ ಸಿಂಹ, ಅವರನ್ನು ಹೆಚ್ಚು ಕಾಲ ಜೈಲಿನಲ್ಲಿಡಲು ಬಿಜೆಪಿಗೆ ಸಾಧ್ಯವಾಗುವುದಿಲ್ಲ…” ಎಂದು ಸುನೀತಾ ಕೇಜ್ರಿವಾಲ್ ಸಭೆಯಲ್ಲಿ ಹೇಳಿದರು.

ಜೈಲಿನಿಂದ ಅರವಿಂದ್ ಕೇಜ್ರಿವಾಲ್ ಅವರ ಸಂದೇಶವನ್ನು ಓದಿದ ಸುನೀತಾ ಕೇಜ್ರಿವಾಲ್, “ನನ್ನ ಪ್ರೀತಿಯ ಸಹೋದ್ಯೋಗಿಗಳೇ, ನಿಮ್ಮ ಮಗ, ನಿಮ್ಮ ಸಹೋದರ ಜೈಲಿನಿಂದ ಶುಭಾಶಯಗಳನ್ನು ಸ್ವೀಕರಿಸಿ. ನಾನು ನಿಮ್ಮ ಮತವನ್ನು ಕೇಳುತ್ತಿಲ್ಲ. ಮುಂಬರುವ ಚುನಾವಣೆಯಲ್ಲಿ ನಾನು ಗೆಲ್ಲುವ ಅಥವಾ ಸೋಲುವ ಬಗ್ಗೆ ಚರ್ಚಿಸುವುದಿಲ್ಲ. ಇಂದು ನಾನು ಈ ದೇಶದ ಎಲ್ಲಾ 1.4 ಶತಕೋಟಿ ಜನರನ್ನು ಭವ್ಯ ಭಾರತವನ್ನು ನಿರ್ಮಿಸಲು ಆಹ್ವಾನಿಸುತ್ತೇನೆ ಎಂದು ಹೇಳಿದ್ದಾರೆ.

ದೇವರು ಭಾರತಕ್ಕೆ ಎಲ್ಲವನ್ನೂ ಉಡುಗೊರೆಯಾಗಿ ನೀಡಿದ್ದಾನೆ. ಆದರೂ ನಾವೇಕೆ ಹಿಂದುಳಿದಿದ್ದೇವೆ? ನಾವೇಕೆ ಅನಕ್ಷರಸ್ಥರು? ನಾನು ಇಲ್ಲಿ ಜೈಲಿನಲ್ಲಿದ್ದೇನೆ, ಅಲ್ಲಿ ನನಗೆ ಯೋಚಿಸಲು ಸಾಕಷ್ಟು ಸಮಯವಿದೆ. ನಾನು ಭಾರತ ಮಾತೆಗಾಗಿ ಯೋಚಿಸುತ್ತೇನೆ. ಭಾರತಮಾತೆ ತುಂಬಾ ದುಃಖಿತಳಾಗಿದ್ದಾಳೆ. ಭಾರತ ಮಾತೆ ನೋವಿನಲ್ಲಿದ್ದಾರೆ, ಸಂಕಟದಿಂದ ಅಳುತ್ತಿದ್ದಾರೆ ಎಂದು ಸುನೀತಾ ಕೇಜ್ರಿವಾಲ್ ಅವರು ದೆಹಲಿ ಸಿಎಂ ಸಂದೇಶವನ್ನು ಓದಿದ್ದಾರೆ.

ಇದನ್ನು ಓದಿ: ಲೋಕಸಭಾ ಚುನಾವಣೆ: ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...

ಕೇರಳ ದಲಿತ ಕಾರ್ಮಿಕನ ಗುಂಪುಹತ್ಯೆ: ನನ್ನ ವೃತ್ತಿ ಬದುಕಿನಲ್ಲೇ ಇಂತಹ ಹಿಂಸಾಚಾರ ನೋಡಿಲ್ಲ ಎಂದ ವೈದ್ಯರು

ಕೇರಳದ ಪಾಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿದ ಛತ್ತೀಸ್‌ಗಢದ ದಲಿತ ವಲಸೆ ಕಾರ್ಮಿಕ ರಾಮ್ ನಾರಾಯಣ್ ಅವರ ಮರಣೋತ್ತರ ಪರೀಕ್ಷೆಯು ದಾಳಿಯ ತೀವ್ರ ಕ್ರೌರ್ಯವನ್ನು ಬಹಿರಂಗಪಡಿಸಿದೆ, ದೇಹದ ಒಂದು...

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...