Homeಮುಖಪುಟಲೋಕಸಭೆ ಚುನಾವಣೆ: ದೆಹಲಿ ಸಿಎಂ ಪತ್ರದಲ್ಲಿದ್ದ 6 ಗ್ಯಾರೆಂಟಿಗಳು....

ಲೋಕಸಭೆ ಚುನಾವಣೆ: ದೆಹಲಿ ಸಿಎಂ ಪತ್ರದಲ್ಲಿದ್ದ 6 ಗ್ಯಾರೆಂಟಿಗಳು….

- Advertisement -
- Advertisement -

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಭಾನುವಾರ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ‘ಲೋಕತಂತ್ರ ಬಚಾವೋ’ ರ್ಯಾಲಿಯಲ್ಲಿ ವೇದಿಕೆಯ ಮೇಲೆ ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಭಾಗವಹಿಸಿದ್ದರು ಮತ್ತು 2024ರ ಲೋಕಸಭೆ ಚುನಾವಣೆ ಹಿನ್ನೆಲೆ ಆರು ಚುನಾವಣಾ ಭರವಸೆಗಳನ್ನು ಒಳಗೊಂಡಿರುವ ತಮ್ಮ ಪತಿಯ ಸಂದೇಶವನ್ನು ಅವರು ಓದಿದ್ದಾರೆ.

ಇಂಡಿಯಾ ಮೈತ್ರಿ ಕೂಟವು ಅಧಿಕಾರಕ್ಕೆ ಬಂದರೆ, ಉತ್ತಮ ಆಸ್ಪತ್ರೆಗಳು ಮತ್ತು ಶಿಕ್ಷಣ ಸೇರಿದಂತೆ ಆರು ಖಾತರಿಗಳನ್ನು ಪೂರೈಸುತ್ತದೆ. ನೀವು ಇಂಡಿಯಾ ಬಣಕ್ಕೆ ಅವಕಾಶ ನೀಡಿದರೆ, ನಾವು ಶ್ರೇಷ್ಠ ರಾಷ್ಟ್ರವನ್ನು ನಿರ್ಮಿಸುತ್ತೇವೆ ಎಂದು ಜೈಲಿನಲ್ಲಿರುವ ಪತಿಯ ಸಂದೇಶವನ್ನು ಓದುವಾಗ ಸುನೀತಾ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರದರ್ಶನ, ಅರವಿಂದ್ ಕೇಜ್ರಿವಾಲ್ ಬಂಧನದ ಹಿನ್ನೆಲೆಯಲ್ಲಿ ಇಂಡಿಯಾ ಮೈತ್ರಿಕೂಟದ ವತಿಯಿಂದ ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಲೋಕತಂತ್ರ ಬಚಾವೋ’ ರ್ಯಾಲಿ ಆಯೋಜಿಸಲಾಗಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎನ್‌ಸಿಪಿ ನಾಯಕ ಶರದ್ ಪವಾರ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್,  ಎಎಪಿ ನಾಯಕ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ.

ರ್ಯಾಲಿಯಲ್ಲಿ ಸುನೀತಾ ಕೇಜ್ರಿವಾಲ್ ಅವರು ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರು ನೀಡಿದ ಆರು ಚುನಾವಣಾ ಭರವಸೆಗಳನ್ನು ಓದಿದ್ದಾರೆ..

1. ದೇಶಾದ್ಯಂತ 24-ಗಂಟೆಗಳ ವಿದ್ಯುತ್ ಪೂರೈಕೆ

2. ದೇಶದ ಬಡವರಿಗೆ ಉಚಿತ ವಿದ್ಯುತ್ ಪೂರೈಕೆ

3. ಪ್ರತಿ ಗ್ರಾಮ ಮತ್ತು ಮೊಹಲ್ಲಾದಲ್ಲಿ ಉತ್ತಮ ಸರ್ಕಾರಿ ಶಾಲೆ ನಿರ್ಮಣ.

4. ಪ್ರತಿ ಗ್ರಾಮ, ಮತ್ತು ಮೊಹಲ್ಲಾದಲ್ಲಿ ಮೊಹಲ್ಲಾ ಕ್ಲಿನಿಕ್ ನಿರ್ಮಾಣ

5. ಸ್ವಾಮಿನಾಥನ್ ಸಮಿತಿ ವರದಿಯಂತೆ ರೈತರಿಗೆ MSP ಜಾರಿ

6. ದೆಹಲಿಗೆ ಪೂರ್ಣ ರಾಜ್ಯತ್ವ ಸ್ಥಾನಮಾನ

ಸಂದೇಶದಲ್ಲಿ ಏನೇನಿದೆ?

ಕಳೆದ 75 ವರ್ಷಗಳಲ್ಲಿ ದೆಹಲಿಯ ಜನರು ಅನ್ಯಾಯವನ್ನು ಎದುರಿಸಿದ್ದಾರೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ನಾವು ದೆಹಲಿಯನ್ನು ಸಂಪೂರ್ಣ ರಾಜ್ಯವನ್ನಾಗಿ ಮಾಡುತ್ತೇವೆ. ನಿಮ್ಮ ಸ್ವಂತ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ನಿಮಗಾಗಿ ಸಂದೇಶವನ್ನು ಕಳುಹಿಸಿದ್ದಾರೆ. ಈ ಸಂದೇಶವನ್ನು ಓದುವ ಮೊದಲು, ನಾನು ನಿಮಗೆ ಒಂದು ವಿಷಯವನ್ನು ಕೇಳಲು ಬಯಸುತ್ತೇನೆ. ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ನನ್ನ ಗಂಡನನ್ನು ಜೈಲಿಗೆ ಹಾಕಿದ್ದು, ಪ್ರಧಾನಿ ಮಾಡಿದ್ದು ಸರಿಯೇ? ಕೇಜ್ರಿವಾಲ್ ಅವರು ನಿಜವಾದ ದೇಶಭಕ್ತ ಮತ್ತು ಪ್ರಾಮಾಣಿಕ ವ್ಯಕ್ತಿ ಎಂದು ನೀವು ನಂಬುತ್ತೀರಾ? ಕೇಜ್ರಿವಾಲ್ ಜೈಲಿನಲ್ಲಿದ್ದಾರೆ, ರಾಜೀನಾಮೆ ನೀಡಬೇಕು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅವರು ರಾಜೀನಾಮೆ ನೀಡಬೇಕೇ? ನಿಮ್ಮ ಕೇಜ್ರಿವಾಲ್ ಸಿಂಹ, ಅವರನ್ನು ಹೆಚ್ಚು ಕಾಲ ಜೈಲಿನಲ್ಲಿಡಲು ಬಿಜೆಪಿಗೆ ಸಾಧ್ಯವಾಗುವುದಿಲ್ಲ…” ಎಂದು ಸುನೀತಾ ಕೇಜ್ರಿವಾಲ್ ಸಭೆಯಲ್ಲಿ ಹೇಳಿದರು.

ಜೈಲಿನಿಂದ ಅರವಿಂದ್ ಕೇಜ್ರಿವಾಲ್ ಅವರ ಸಂದೇಶವನ್ನು ಓದಿದ ಸುನೀತಾ ಕೇಜ್ರಿವಾಲ್, “ನನ್ನ ಪ್ರೀತಿಯ ಸಹೋದ್ಯೋಗಿಗಳೇ, ನಿಮ್ಮ ಮಗ, ನಿಮ್ಮ ಸಹೋದರ ಜೈಲಿನಿಂದ ಶುಭಾಶಯಗಳನ್ನು ಸ್ವೀಕರಿಸಿ. ನಾನು ನಿಮ್ಮ ಮತವನ್ನು ಕೇಳುತ್ತಿಲ್ಲ. ಮುಂಬರುವ ಚುನಾವಣೆಯಲ್ಲಿ ನಾನು ಗೆಲ್ಲುವ ಅಥವಾ ಸೋಲುವ ಬಗ್ಗೆ ಚರ್ಚಿಸುವುದಿಲ್ಲ. ಇಂದು ನಾನು ಈ ದೇಶದ ಎಲ್ಲಾ 1.4 ಶತಕೋಟಿ ಜನರನ್ನು ಭವ್ಯ ಭಾರತವನ್ನು ನಿರ್ಮಿಸಲು ಆಹ್ವಾನಿಸುತ್ತೇನೆ ಎಂದು ಹೇಳಿದ್ದಾರೆ.

ದೇವರು ಭಾರತಕ್ಕೆ ಎಲ್ಲವನ್ನೂ ಉಡುಗೊರೆಯಾಗಿ ನೀಡಿದ್ದಾನೆ. ಆದರೂ ನಾವೇಕೆ ಹಿಂದುಳಿದಿದ್ದೇವೆ? ನಾವೇಕೆ ಅನಕ್ಷರಸ್ಥರು? ನಾನು ಇಲ್ಲಿ ಜೈಲಿನಲ್ಲಿದ್ದೇನೆ, ಅಲ್ಲಿ ನನಗೆ ಯೋಚಿಸಲು ಸಾಕಷ್ಟು ಸಮಯವಿದೆ. ನಾನು ಭಾರತ ಮಾತೆಗಾಗಿ ಯೋಚಿಸುತ್ತೇನೆ. ಭಾರತಮಾತೆ ತುಂಬಾ ದುಃಖಿತಳಾಗಿದ್ದಾಳೆ. ಭಾರತ ಮಾತೆ ನೋವಿನಲ್ಲಿದ್ದಾರೆ, ಸಂಕಟದಿಂದ ಅಳುತ್ತಿದ್ದಾರೆ ಎಂದು ಸುನೀತಾ ಕೇಜ್ರಿವಾಲ್ ಅವರು ದೆಹಲಿ ಸಿಎಂ ಸಂದೇಶವನ್ನು ಓದಿದ್ದಾರೆ.

ಇದನ್ನು ಓದಿ: ಲೋಕಸಭಾ ಚುನಾವಣೆ: ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...