Homeಮುಖಪುಟಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ಈ ವರ್ಷ ಮಾರುಕಟ್ಟೆಯಲ್ಲಿ ಲಭ್ಯವಿರುವ ಸುಮಾರು 80% ಪಟಾಕಿಗಳು ಹಸಿರು ಪಟಾಕಿ ಟ್ಯಾಗ್ ಹೊತ್ತುಕೊಳ್ಳುತ್ತವೆ ಎನ್ನುತ್ತಾರೆ ಹಸಿರು ಪಟಾಕಿ ತಯಾರಕರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಪ್ರತಿ ಬಾರಿ ದೀಪಾವಳಿ ಸಂದರ್ಭದಲ್ಲಿ ಬಳಸಲಾಗುವ ಪಟಾಕಿಗಳಿಂದ ವಾಯಮಾಲಿನ್ಯ ಹೆಚ್ಚಾಗುವ ಕಾರಣ ಈ ಬಾರಿ ಪಟಾಕಿ ನಿಷೇಧಿಸಲಾಗಿದೆ. ಕರ್ನಾಟಕ ಸರ್ಕಾರ ಸಾಂಪ್ರದಾಯಿಕ ಪಟಾಕಿಗೆ ನಿಷೇಧ ಹೇರಿ, ಹಸಿರು ಪಟಾಕಿಗೆ  ಅಸ್ತು ಎಂದಿದೆ. ನವೆಂಬರ್ 16ರ ವರೆಗೆ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಿದೆ.

ಸುಪ್ರೀಂ ಕೋರ್ಟ್ ಆದೇಶದ ಎರಡು ವರ್ಷಗಳ ನಂತರ, ಹಸಿರು ಪಟಾಕಿಗಳು ಈ ದೀಪಾವಳಿಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚಿನ ಪಾಲು ಪಡೆಯುತ್ತಿವೆ. ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಹಿನ್ನೆಲೆ ಸುಪ್ರೀಂ ಕೋರ್ಟ್‌‌ನಲ್ಲಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಂತರ ಈ ನಿರ್ಧಾರ ಬಂದಿತ್ತು. ಈ ಬಾರಿ ಕೊರೊನಾ ಇರುವ ಹಿನ್ನೆಲೆ ಮಕ್ಕಳು ಹಾಗೂ ಕೊರೊನಾ ಸೋಕಿತರ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ನಿಷೇಧ ನಿರ್ಧಾರ ಕೈಗೊಳ್ಳಲಾಗಿದೆ.

ಹಾಗಾದರೆ ಹಸಿರು ಪಟಾಕಿ ಎಂದರೇನು..?

ಸಾಮಾನ್ಯ ಪಟಾಕಿಯಂತೆಯೇ ಕಾಣುವ ಇದು ಪರಿಸರ ಸ್ನೇಹಿ ಪಟಾಕಿಯಾಗಿದೆ. ಕೌನ್ಸಿಲ್​ ಆಫ್ ಸೈಂಟಿಫಿಕ್​ ಅಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ (ಸಿಎಸ್​ಐಆರ್​) ಮತ್ತು ನ್ಯಾಷನಲ್ ಎನ್ವಿರಾನ್ಮೆಂಟ್ ಇಂಜಿನಿಯರಿಂಗ್ ರಿಸರ್ಚ್ ಇನ್ಸ್ ಟಿಟ್ಯೂಟ್‌ (ಎನ್‌ಇಇಆರ್‌ಐ)ನ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವ ಈ ಪಟಾಕಿಗಳು ಕೇವಲ ಶೇಕಡಾ 30ರಷ್ಟು ಪ್ರಮಾಣದ ಹೊಗೆಯನ್ನು ಹೊರಹಾಕುತ್ತದೆ.

ಸಾಮಾನ್ಯ ಪಟಾಕಿಗಳಂತೆ ಅಧಿಕ ಶಬ್ಧ ಹಾಗೂ ಹೊಗೆ ಸೂಸುವ ಬದಲಾಗಿ ನೀರಿನ ಆವಿಯನ್ನು ಮಾತ್ರ ಬಿಡುಗಡೆ ಮಾಡುತ್ತದೆ.  ಈ ಪಟಾಕಿಯಲ್ಲಿ ಲೀಥಿಯಂ, ಆರ್ಸೆನಿಕ್, ಬೇರಿಯಂ ಮತ್ತು ಸತುವಿನಂತಹ ಅಪಾಯಕಾರಿ ರಾಸಾಯನಿಕಗಳನ್ನು ಬಳಸುವುದಿಲ್ಲ. ಕಳೆದ ವರ್ಷ ಈ ಪಟಾಕಿಯನ್ನು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ​ದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

ಚೆನ್ನೈನಿಂದ 540 ಕಿ.ಮೀ ದೂರದಲ್ಲಿರುವ ಶಿವಕಾಸಿಯಲ್ಲಿರುವ ಪಟಾಕಿ ತಯಾರಕರು, ಎನ್‌ಇಇಆರ್‌ಐ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದಾರೆ. “ನಾವು 2019 ರಲ್ಲಿ ಹಸಿರು ಪಟಾಕಿ‌ಗಳನ್ನು ತಯಾರಿಸಲು ಪ್ರಾರಂಭಿಸಿದ್ದೇವೆ. ಇದು ವಾಯುಮಾಲಿನ್ಯವನ್ನು ಕಡಿಮೆ ಮಾಡುತ್ತದೆ. ಈ ವರ್ಷ ಮಾರುಕಟ್ಟೆಯಲ್ಲಿ ಲಭ್ಯವಿರುವ ಸುಮಾರು 80% ಪಟಾಕಿಗಳು ಹಸಿರು ಪಟಾಕಿ ಟ್ಯಾಗ್ ಅನ್ನು ಹೊತ್ತುಕೊಳ್ಳುತ್ತವೆ ”ಎಂದು ತಮಿಳುನಾಡು ಪಟಾಕಿ ಮತ್ತು ಸಿಡಿಮದ್ದು ತಯಾರಕರ ಸಂಘದ ಅಧ್ಯಕ್ಷ ಪಿ.ಗಣೇಶನ್ ತಿಳಿಸಿದ್ದಾರೆ.

ಹಸಿರು ಪಟಾಕಿಗಳಲ್ಲಿ ಎರಡು ವಿಧಗಳಿವೆ

೧.ಬೇರಿಯಂ ಸಾಲ್ಟ್ ಇಲ್ಲದ ಪಟಾಕಿ: ಇದು ಬಹು-ಕೋಟಿ ಪಟಾಕಿ ಉದ್ಯಮಕ್ಕೆ ಅನಿವಾರ್ಯವೆಂದು ಪರಿಗಣಿಸಲಾದ ರಾಸಾಯನಿಕ

೨.ಕಡಿಮೆ ಪ್ರಮಾಣದಲ್ಲಿ ಬೇರಿಯಂ ಇರುವ ಪಟಾಕಿ

ಈ ಎರಡು ವಿಧದ ಪಟಾಕಿಗಳು ಕೂಡ ಸಾಂಪ್ರದಾಯಿಕ ಪಟಾಕಿಗಳಿಗೆ ಹೋಲಿಸಿದರೆ 30% ರಿಂದ 35% ಕಡಿಮೆ ಮಾಲಿನ್ಯಕಾರಕವಾಗಿವೆ. ಸಾಂಪ್ರದಾಯಿಕ ಪಟಾಕಿಗಳು ಹೊರಸೂಸುವ 160 ಡೆಸಿಬಲ್ ಶಬ್ಧಕ್ಕಿಂತ ಕಡಿಮೆ ಅಂದರೆ 125 ಡೆಸಿಬಲ್ ಧ್ವನಿಯನ್ನು ಉಂಟು ಮಾಡುತ್ತವೆ ಎಂದು ತಯಾರಕರು ಮತ್ತು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆ, ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಉದ್ಯಮವು ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಬದ್ಧತೆಯನ್ನು ಪೂರೈಸಿದೆ ಎಂದು ಪಟಾಕಿ ತಯಾರಕರು ಹೇಳಿದ್ದಾರೆ. “ಅಗ್ಗದ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಭಾರೀ ಮಾಲಿನ್ಯಕ್ಕೆ ಕಾರಣವಾಗಿದ್ದರೂ ಅವು ಕಾನೂನುಬಾಹಿರವಾಗಿವೆ. ಅವುಗಳನ್ನು ನಿಷೇಧಿಸಬೇಕು ಮತ್ತು ಹಸಿರು ಕ್ರ್ಯಾಕರ್‌ಗಳನ್ನು ಮಾತ್ರ ಬಳಸಬೇಕು” ಎಂದು ಪಟಾಕಿ ತಯಾರಕರು ಹೇಳುತ್ತಾರೆ.

ಈ ಪಟಾಕಿಗಳನ್ನು ಅಧಿಕೃತ ಪರವಾನಗಿ ಪಡೆದಿರುವ ಮಳಿಗೆಗಳಿಂದ ಮಾತ್ರ ಕೊಳ್ಳಬಹುದು. ನೀವು ಕೊಳ್ಳುವ ಪಟಾಕಿ ಹಸಿರು ಪಟಾಕಿಯೇ ಎಂಬ ಗೊಂದಲ ನಿವಾರಿಸಿಕೊಳ್ಳಲು ಪಟಾಕಿ ಪ್ಯಾಕ್ ಮೇಲಿನ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ದೃಢಪಡಿಸಿಕೊಳ್ಳಬಹುದು.


ಇದನ್ನೂ ಓದಿ: ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಪೋಟ; 7 ಮಹಿಳೆಯರ ದಾರುಣ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...