Homeಕರ್ನಾಟಕಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

ಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

- Advertisement -
- Advertisement -

ಬೆಂಗಳೂರು: ಕೇಂದ್ರ ಸರಕಾರವು ಕಾರ್ಮಿಕ ವಿರೋಧಿ ನಾಲ್ಕು ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದ್ದು, ಇವುಗಳ ಜಾರಿಯಿಂದ ಕಾರ್ಮಿಕರ ಬದುಕೇ ಛಿದ್ರಗೊಳ್ಳಲಿದ್ದು  ಇದನ್ನು ವಿರೋಧಿಸಿ ದೇಶಾದ್ಯಂತ ಮುಷ್ಕರ ನಡೆಯಲಿದೆ. ರಾಜ್ಯದಲ್ಲಿಯೂ ಆಯ್ದ 100 ಕೇಂದ್ರಗಳಲ್ಲಿ ರೈತರು ಮತ್ತು ಕಾರ್ಮಿಕರು ಜಂಟಿಯಾಗಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಜೆಸಿಟಿಯು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

ಕೇಂದ್ರವು ಜಾರಿಗೆ ತರಲೊರಟಿರುವ ಈ ಹೊಸ ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ ಎಂದು ಪತ್ರಿಕಾ ಪ್ರಕಟನೆ ಹೊರಡಿಸಿರುವ ಕಾರ್ಮಿಕ ಮತ್ತು ರೈತ ಸಂಘಟನೆಗಳ ಈ ಜಂಟಿ ವೇದಿಕೆಯು, ಕಾರ್ಪೋರೇಟ್‌ ಕಂಪನಿಗಳ ಲೂಟಿಗೆ ರತ್ನಗಂಬಳಿ ಹಾಸುವ ಶ್ರಮ ವಿರೋಧಿ ಈ ಕಾಯ್ದೆಗಳನ್ನು ಕೇಂದ್ರವು ಜಾರಿಗೆ ತರಲು ಹೊರಟಿದೆ. ಈ ಕಾಯ್ದೆಗಳ ಜಾರಿ ವಿರೋಧಿಸಿ ಮೇ 20ರಂದು ಜೆಸಿಟಿಯು [ಜಾಯಿಂಟ್‌ ಕಮಿಟಿ ಆಫ್‌ ಟ್ರೇಡ್‌ ಯೂನಿಯನ್] ಮತ್ತು ಎಸ್‌ಕೆಎಂ [ಸಂಯುಕ್ತ ಕಿಸಾನ್‌ ಮೋರ್ಛಾ]‌ ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಹೇಳಿವೆ.

ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ 4 ಲೇಬರ್‌ ಕೋಡ್‌ ಗಳು ಜಾರಿಯಾದಲ್ಲಿ ಸಂಘಟಿತ ಕ್ಷೇತ್ರದ ಶೇ.70ರಷ್ಟು ಕಾರ್ಮಿಕರಿಗೂ ಭದ್ರತಾ ಕಾಯ್ದೆಗಳು ಅನ್ವಯವಾಗುವುದಿಲ್ಲ.  ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗಂತೂ “ಸಾಮಾಜಿಕ ಭದ್ರತೆ”ಯ ಹೆಸರಿನಲ್ಲಿ ಒಣಗಿದ ತುಟಿಗೆ ನೀರು ಒರೆಸುವುದು ಬಿಟ್ಟರೆ, ಯಾವುದೇ ಹಕ್ಕುಗಳು ಇರುವುದಿಲ್ಲ. ಒಂದು ದಿನದ ಕನಿಷ್ಟ ಕೂಲಿ ದರ 600 ರೂ. ಸಹ ಅಲ್ಲ. ಕೇವಲ 187 ರೂ ಮಾತ್ರ. ದಿನದ ದುಡಿಮೆಯ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಏರಿಸುವ ಸ್ವಾತಂತ್ರ್ಯ ಮಾಲೀಕರಿಗೆ ಅನಾಹುತಕಾರಿ ಕಾರ್ಖಾನೆಗಳಲ್ಲೂ ಮಹಿಳೆಯರನ್ನು ದುಡಿಸಬಹುದು. ಮಹಿಳಾ ಕಾರ್ಮಿಕರು ರಾತ್ರಿ ಪಾಳಿಯಲ್ಲೂ ದುಡಿಯಬೇಕು. ಕಾರ್ಮಿಕರಿಗೆ ಪೆನ್ಷನ್‌, ಪಿಎಫ್‌, ಇಎಸ್‌ಐ ಯಾವುದೂ ಕಡ್ಡಾಯವಲ್ಲ, ಎಲ್ಲವೂ ಮಾಲೀಕರ ಮರ್ಜಿಗೆ ಬಿಟ್ಟದ್ದು. ಕಂಪನಿಗಳು ಯಾವುದೇ ಅನುಮತಿ ಪಡೆಯದೆ ಉದ್ಯೋಗಿಗಳನ್ನು ತೆಗೆದುಹಾಕಬಹುದು ಅಥವಾ ಕಂಪನಿಯನ್ನೇ ಮುಚ್ಚಬಹುದು. ಇವೆಲ್ಲದರಿಂದಾಗಿ ದೇಶದ ಆರ್ಥಿಕತೆ ಅಸ್ತವ್ಯಸ್ತವಾಗಿ ಕಾರ್ಮಿಕರು ಬೀದಿಪಾಲಾಗಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಈ ಕಾಯ್ದೆಗಳು ಜಾರಿಯಾದಲ್ಲಿ ಕಾರ್ಮಿಕರು ಯೂನಿಯನ್‌ ಕಟ್ಟಿಕೊಳ್ಳುವುದು ಸುಲಭವಿಲ್ಲ. ಕಟ್ಟಿಕೊಂಡರೂ ಅದನ್ನು ಮಾನ್ಯ ಮಾಡುವುದು ಅಥವಾ ಮಾಡದೇ ಇರುವುದು ಮಾಲೀಕರಿಗೆ ಬಿಟ್ಟದ್ದು. ಮುಷ್ಕರ ಹೂಡಲು ಮೂರು ತಿಂಗಳ ಮೊದಲೇ ನೋಟೀಸ್‌ ಕೊಡಬೇಕು. ಸಂಧಾನ ಶುರುವಾದರೆ ಹೋರಾಟಕ್ಕೆ ಇಳಿಯುವಂತಿಲ್ಲ. ಒಟ್ಟಾರೆ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕೇಳಲಾಗಲಿ, ತಮ್ಮ ಮೇಲಿನ ಮಾಲಕರ ದೌರ್ಜನ್ಯವನ್ನು ಪ್ರಶ್ನಿಸಿ, ಪೊಲೀಸ್, ಕೋರ್ಟ್ ಮೆಟ್ಟಿಲು ಹತ್ತುವುದಾಗಲಿ ಸಾಧ್ಯವಿಲ್ಲ. ಇದು ಈ ಕಾಯ್ದೆಗಳ ಜಾರಿಯಿಂದಾಗುವ ಭಯಾನಕತೆಯಾಗಿದೆ ಎಂದು  ಮೇ 20ರಂದು ಮುಷ್ಕರಕ್ಕೆ ಕರೆ ನೀಡಿರುವ ರೈತ ಮತ್ತು ಕಾರ್ಮಿಕ ಸಂಘಟನೆಗಳು ಹೇಳಿವೆ.

ಭಾರತದ ಕಾರ್ಮಿಕರೆಂದರೆ ಯಾವುದೇ ಭದ್ರತೆ ಇಲ್ಲದೆ, ಮಾಲೀಕರಿಗೆ ಯಾವುದೇ ಹೊಣೆಗಾರಿಕೆ ಇಲ್ಲದೆ, ಅಗ್ಗದ ಕೂಲಿ ದರದಲ್ಲಿ ಅತಿ ಹೆಚ್ಚು ಗಂಟೆ ದುಡಿಯುವ, ಅಪಾಯಕಾರಿ ಪರಿಸ್ಥಿತಿಗಳಲ್ಲೂ ಕೆಲಸ ಮಾಡುವ ನವ ಗುಲಾಮರನ್ನಾಗಿ ಮಾಡುವುದು. ಮನಬಂದಂತೆ ಕಾರ್ಮಿಕರನ್ನು ದುಡಿಸಿಕೊಳ್ಳುವ, ಬೇಡವಾದರೆ ಬಿಸಾಕುವ ಸಂಪೂರ್ಣ ಸ್ವಾತಂತ್ರ್ಯ ಮಾಲೀಕರಿಗೆ ನೀಡುತ್ತವೆ. ಇಷ್ಟು ಮಾತ್ರವಲ್ಲದೆ ಕಾರ್ಖಾನೆಗಳ ಮಾಲಿಕರಿಗೆ ಅಗ್ಗದ ದರದಲ್ಲಿ ಭೂಮಿ, ಉಚಿತ ಕರೆಂಟು – ನೀರು ಒದಗಿಸಿ, ತೆರಿಗೆಯಲ್ಲಿ ಸಬ್ಸಿಡಿ ನೀಡಿ, ಬ್ಯಾಂಕ್‌ ಲೋನ್‌ ಮನ್ನಾ ಮಾಡಿ, ಹೊಸ ಕಂಪನಿಗಳಿಗೆ 20 ಲಕ್ಷ ಕೋಟಿಯವರೆಗೂ ಉತ್ತೇಜನ ನಿಧಿ ಕೊಟ್ಟು ಪ್ರೋತ್ಸಾಹಿಸುತ್ತದೆ. ಸರ್ಕಾರದ ಒಡೆತನದಲ್ಲಿದ್ದ ರಸ್ತೆ, ವಿದ್ಯುಚ್ಛಕ್ತಿ, ಪೆಟ್ರೋಲ್, ಡೀಸೆಲ್‌, ಗ್ಯಾಸ್‌, ಮಿಲಿಟರಿ ಉತ್ಪಾದನೆ, ವಿಮಾನ, ರೈಲ್ವೆ, ಸ್ಟೀಲ್‌ – ಉಕ್ಕು – ಕಲ್ಲಿದ್ದಲನ್ನು ತಯಾರಿಸುವ ಕೈಗಾರಿಕೆಗಳು, ಬ್ಯಾಂಕ್‌ – ಎಲ್‌ ಐ ಸಿ, ಎಲ್ಲವುಗಳನ್ನೂ ಖಾಸಗೀಕರಣ ಮಾಡಿ ಖಾಸಗೀ ಖದೀಮರಿಗೆ ಅರ್ಪಿಸುವುದು ಈ ಕಾಯ್ದೆ ಜಾರಿಯಿಂದಾಗುವ ದುಷ್ಪರಿಣಾಮಗಳಾಗಿವೆ. ಸರ್ವಂ ಕಾರ್ಪೋರೇಟ್‌ ಮಯಂ. ಕಾರ್ಮಿಕರ ಪಾಲಿಗೆ ಸರ್ವಂ ಸರ್ವನಾಶಂ. ಸಾರ್ವಜನಿಕರ ಮತ್ತು ದೇಶದ ಸಕಲ ಸಂಪತ್ತು ಅದಾನಿ – ಅಂಬಾನಿ ಸ್ವಾಹಂ ಸ್ವಾಹಂ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಹೀಗಾಗಿಯೇ,  ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಾದ ಜಿಸಿಟಿಯು ಮತ್ತು ರೈತ ಸಂಘಟನೆಗಳ ಐಕ್ಯ ವೇದಿಕೆಯಾದ ಸಂಯುಕ್ತ ಕಿಸಾನ್‌ ಮೋರ್ಛಾಗಳು ಜುಂಟಿಯಾಗಿ ಮೇ 20ರಂದು ದೇಶವ್ಯಾಪಿಯಾಗಿ ಸಾರ್ವತ್ರಿಕ ಮುಷ್ಕರ ನಡೆಸಲು ಕರೆ ನೀಡಿವೆ. ಈ ಮುಷ್ಕರವನ್ನು ನಾವು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಬೇಕಿದೆ. ನಮ್ಮ ರಾಜ್ಯದ ಎಲ್ಲ ಜಿಲ್ಲೆಯ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ – ಯುವಜನ ಸಂಘಟನೆಗಳನ್ನೆಲ್ಲಾ ಜೊತೆಗೂಡಿಸಿಕೊಂಡು ಆಯ್ದ ಆಯಕಟ್ಟಿನ ಸ್ಥಳಗಳಲ್ಲಿ ಬೃಹತ್‌ ಪ್ರಮಾಣದ ಪ್ರತಿಭಟನೆಗಳನ್ನು ಸಂಘಟಿಸುತ್ತೇವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಮ್ಮ ಹಕ್ಕೊತ್ತಾಯಗಳಿಗೆ ಸ್ಪಂದಿಸದೇ ಹೋದರೆ ರಸ್ತೆಗಳನ್ನು ಬಂದ್‌ ಮಾಡಿ, ಲಕ್ಷಾಂತರ ಸಂಖ್ಯೆಯಲ್ಲಿ ಜೈಲ್‌ ಭರೋ ನಡೆಸಿ ನಮ್ಮ ಪ್ರತಿರೋಧವನ್ನು ದಾಖಲಿಸುತ್ತೇವೆ. ಮೇ 20ರ ಹೋರಾಟ ರೈತ, ಕಾರ್ಮಿಕರು ಕೂಡಿ ಸರ್ಕಾರಗಳಿಗೆ ಕೊಡುತ್ತಿರುವ ಮೊದಲ ಎಚ್ಚರಿಕೆಯಾಗಿದೆ. ಸರ್ಕಾರಗಳು ಸ್ಪಂದಿಸದೇ ಹೋದಲ್ಲಿ ದೇಶದ ಆಗುಹೋಗುಗಗಳನ್ನೇ ಸ್ಥಬ್ದಗೊಳಿಸಬಲ್ಲ ಶಕ್ತಿ ನಮಗಿದೆ ಎಂಬ ಸಂದೇಶವನ್ನೂ ನಾವು ಕಳುಹಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಕೇಂದ್ರ ಸರ್ಕಾರವು ಜಾರಿ ಮಾಡಲು ಬಯಸುತ್ತಿರುವ “4 ಲೇಬರ್‌ ಕೋಡ್‌” ಗಳನ್ನು ಈ ಕೂಡಲೇ ಹಿಂಪಡೆಯಬೇಕು. ಕಾರ್ಮಿಕರ ಕೆಲಸದ ಅವಧಿಯನ್ನು 8ರಿಂದ 12 ಗಂಟೆಗೆ ಏರಿಸುವ ನಿಯಮ”ವನ್ನು ಈ ಕೂಡಲೇ ಹಿಂಪಡೆಯಬೇಕು. ಕಾರ್ಮಿಕರಿಗೆ ಕನಿಷ್ಟ 30 ಸಾವಿರ ವೇತನ, ಉದ್ಯೋಗ ಭದ್ರತೆ, ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ʼಸಾಮಾಜಿಕ ಭದ್ರತಾ ಮಂಡಳಿಗಳು”, ಯುವಜನರಿಗೆ ಉದ್ಯೋಗ ಖಾತ್ರಿ ಕಾಯ್ದೆಗಳಂತಹ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು ರೈತ ಮತ್ತು ಕಾರ್ಮಿಕ ಸಂಘಟನೆಗಳ ಜೊತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಸಭೆ ಕರೆಯಬೇಕು ಎಂದು ಸಂಯುಕ್ತ ಹೋರಾಟ–ಕರ್ನಾಟಕ ಮತ್ತು  ಜೆಸಿಟಿಯು (ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ)ಗಳು ಒತ್ತಾಯಿಸಿವೆ.

ಜಮ್ಮು ಕಾಶ್ಮೀರದಲ್ಲಿ ಶಾಂತ ರಾತ್ರಿ, ಯಾವುದೇ ಘಟನೆಗಳು ವರದಿಯಾಗಿಲ್ಲ: ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...