Homeಕರ್ನಾಟಕಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

ಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

- Advertisement -
- Advertisement -

ಬೆಂಗಳೂರು: ಕೇಂದ್ರ ಸರಕಾರವು ಕಾರ್ಮಿಕ ವಿರೋಧಿ ನಾಲ್ಕು ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದ್ದು, ಇವುಗಳ ಜಾರಿಯಿಂದ ಕಾರ್ಮಿಕರ ಬದುಕೇ ಛಿದ್ರಗೊಳ್ಳಲಿದ್ದು  ಇದನ್ನು ವಿರೋಧಿಸಿ ದೇಶಾದ್ಯಂತ ಮುಷ್ಕರ ನಡೆಯಲಿದೆ. ರಾಜ್ಯದಲ್ಲಿಯೂ ಆಯ್ದ 100 ಕೇಂದ್ರಗಳಲ್ಲಿ ರೈತರು ಮತ್ತು ಕಾರ್ಮಿಕರು ಜಂಟಿಯಾಗಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಜೆಸಿಟಿಯು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

ಕೇಂದ್ರವು ಜಾರಿಗೆ ತರಲೊರಟಿರುವ ಈ ಹೊಸ ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ ಎಂದು ಪತ್ರಿಕಾ ಪ್ರಕಟನೆ ಹೊರಡಿಸಿರುವ ಕಾರ್ಮಿಕ ಮತ್ತು ರೈತ ಸಂಘಟನೆಗಳ ಈ ಜಂಟಿ ವೇದಿಕೆಯು, ಕಾರ್ಪೋರೇಟ್‌ ಕಂಪನಿಗಳ ಲೂಟಿಗೆ ರತ್ನಗಂಬಳಿ ಹಾಸುವ ಶ್ರಮ ವಿರೋಧಿ ಈ ಕಾಯ್ದೆಗಳನ್ನು ಕೇಂದ್ರವು ಜಾರಿಗೆ ತರಲು ಹೊರಟಿದೆ. ಈ ಕಾಯ್ದೆಗಳ ಜಾರಿ ವಿರೋಧಿಸಿ ಮೇ 20ರಂದು ಜೆಸಿಟಿಯು [ಜಾಯಿಂಟ್‌ ಕಮಿಟಿ ಆಫ್‌ ಟ್ರೇಡ್‌ ಯೂನಿಯನ್] ಮತ್ತು ಎಸ್‌ಕೆಎಂ [ಸಂಯುಕ್ತ ಕಿಸಾನ್‌ ಮೋರ್ಛಾ]‌ ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಹೇಳಿವೆ.

ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ 4 ಲೇಬರ್‌ ಕೋಡ್‌ ಗಳು ಜಾರಿಯಾದಲ್ಲಿ ಸಂಘಟಿತ ಕ್ಷೇತ್ರದ ಶೇ.70ರಷ್ಟು ಕಾರ್ಮಿಕರಿಗೂ ಭದ್ರತಾ ಕಾಯ್ದೆಗಳು ಅನ್ವಯವಾಗುವುದಿಲ್ಲ.  ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗಂತೂ “ಸಾಮಾಜಿಕ ಭದ್ರತೆ”ಯ ಹೆಸರಿನಲ್ಲಿ ಒಣಗಿದ ತುಟಿಗೆ ನೀರು ಒರೆಸುವುದು ಬಿಟ್ಟರೆ, ಯಾವುದೇ ಹಕ್ಕುಗಳು ಇರುವುದಿಲ್ಲ. ಒಂದು ದಿನದ ಕನಿಷ್ಟ ಕೂಲಿ ದರ 600 ರೂ. ಸಹ ಅಲ್ಲ. ಕೇವಲ 187 ರೂ ಮಾತ್ರ. ದಿನದ ದುಡಿಮೆಯ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಏರಿಸುವ ಸ್ವಾತಂತ್ರ್ಯ ಮಾಲೀಕರಿಗೆ ಅನಾಹುತಕಾರಿ ಕಾರ್ಖಾನೆಗಳಲ್ಲೂ ಮಹಿಳೆಯರನ್ನು ದುಡಿಸಬಹುದು. ಮಹಿಳಾ ಕಾರ್ಮಿಕರು ರಾತ್ರಿ ಪಾಳಿಯಲ್ಲೂ ದುಡಿಯಬೇಕು. ಕಾರ್ಮಿಕರಿಗೆ ಪೆನ್ಷನ್‌, ಪಿಎಫ್‌, ಇಎಸ್‌ಐ ಯಾವುದೂ ಕಡ್ಡಾಯವಲ್ಲ, ಎಲ್ಲವೂ ಮಾಲೀಕರ ಮರ್ಜಿಗೆ ಬಿಟ್ಟದ್ದು. ಕಂಪನಿಗಳು ಯಾವುದೇ ಅನುಮತಿ ಪಡೆಯದೆ ಉದ್ಯೋಗಿಗಳನ್ನು ತೆಗೆದುಹಾಕಬಹುದು ಅಥವಾ ಕಂಪನಿಯನ್ನೇ ಮುಚ್ಚಬಹುದು. ಇವೆಲ್ಲದರಿಂದಾಗಿ ದೇಶದ ಆರ್ಥಿಕತೆ ಅಸ್ತವ್ಯಸ್ತವಾಗಿ ಕಾರ್ಮಿಕರು ಬೀದಿಪಾಲಾಗಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಈ ಕಾಯ್ದೆಗಳು ಜಾರಿಯಾದಲ್ಲಿ ಕಾರ್ಮಿಕರು ಯೂನಿಯನ್‌ ಕಟ್ಟಿಕೊಳ್ಳುವುದು ಸುಲಭವಿಲ್ಲ. ಕಟ್ಟಿಕೊಂಡರೂ ಅದನ್ನು ಮಾನ್ಯ ಮಾಡುವುದು ಅಥವಾ ಮಾಡದೇ ಇರುವುದು ಮಾಲೀಕರಿಗೆ ಬಿಟ್ಟದ್ದು. ಮುಷ್ಕರ ಹೂಡಲು ಮೂರು ತಿಂಗಳ ಮೊದಲೇ ನೋಟೀಸ್‌ ಕೊಡಬೇಕು. ಸಂಧಾನ ಶುರುವಾದರೆ ಹೋರಾಟಕ್ಕೆ ಇಳಿಯುವಂತಿಲ್ಲ. ಒಟ್ಟಾರೆ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕೇಳಲಾಗಲಿ, ತಮ್ಮ ಮೇಲಿನ ಮಾಲಕರ ದೌರ್ಜನ್ಯವನ್ನು ಪ್ರಶ್ನಿಸಿ, ಪೊಲೀಸ್, ಕೋರ್ಟ್ ಮೆಟ್ಟಿಲು ಹತ್ತುವುದಾಗಲಿ ಸಾಧ್ಯವಿಲ್ಲ. ಇದು ಈ ಕಾಯ್ದೆಗಳ ಜಾರಿಯಿಂದಾಗುವ ಭಯಾನಕತೆಯಾಗಿದೆ ಎಂದು  ಮೇ 20ರಂದು ಮುಷ್ಕರಕ್ಕೆ ಕರೆ ನೀಡಿರುವ ರೈತ ಮತ್ತು ಕಾರ್ಮಿಕ ಸಂಘಟನೆಗಳು ಹೇಳಿವೆ.

ಭಾರತದ ಕಾರ್ಮಿಕರೆಂದರೆ ಯಾವುದೇ ಭದ್ರತೆ ಇಲ್ಲದೆ, ಮಾಲೀಕರಿಗೆ ಯಾವುದೇ ಹೊಣೆಗಾರಿಕೆ ಇಲ್ಲದೆ, ಅಗ್ಗದ ಕೂಲಿ ದರದಲ್ಲಿ ಅತಿ ಹೆಚ್ಚು ಗಂಟೆ ದುಡಿಯುವ, ಅಪಾಯಕಾರಿ ಪರಿಸ್ಥಿತಿಗಳಲ್ಲೂ ಕೆಲಸ ಮಾಡುವ ನವ ಗುಲಾಮರನ್ನಾಗಿ ಮಾಡುವುದು. ಮನಬಂದಂತೆ ಕಾರ್ಮಿಕರನ್ನು ದುಡಿಸಿಕೊಳ್ಳುವ, ಬೇಡವಾದರೆ ಬಿಸಾಕುವ ಸಂಪೂರ್ಣ ಸ್ವಾತಂತ್ರ್ಯ ಮಾಲೀಕರಿಗೆ ನೀಡುತ್ತವೆ. ಇಷ್ಟು ಮಾತ್ರವಲ್ಲದೆ ಕಾರ್ಖಾನೆಗಳ ಮಾಲಿಕರಿಗೆ ಅಗ್ಗದ ದರದಲ್ಲಿ ಭೂಮಿ, ಉಚಿತ ಕರೆಂಟು – ನೀರು ಒದಗಿಸಿ, ತೆರಿಗೆಯಲ್ಲಿ ಸಬ್ಸಿಡಿ ನೀಡಿ, ಬ್ಯಾಂಕ್‌ ಲೋನ್‌ ಮನ್ನಾ ಮಾಡಿ, ಹೊಸ ಕಂಪನಿಗಳಿಗೆ 20 ಲಕ್ಷ ಕೋಟಿಯವರೆಗೂ ಉತ್ತೇಜನ ನಿಧಿ ಕೊಟ್ಟು ಪ್ರೋತ್ಸಾಹಿಸುತ್ತದೆ. ಸರ್ಕಾರದ ಒಡೆತನದಲ್ಲಿದ್ದ ರಸ್ತೆ, ವಿದ್ಯುಚ್ಛಕ್ತಿ, ಪೆಟ್ರೋಲ್, ಡೀಸೆಲ್‌, ಗ್ಯಾಸ್‌, ಮಿಲಿಟರಿ ಉತ್ಪಾದನೆ, ವಿಮಾನ, ರೈಲ್ವೆ, ಸ್ಟೀಲ್‌ – ಉಕ್ಕು – ಕಲ್ಲಿದ್ದಲನ್ನು ತಯಾರಿಸುವ ಕೈಗಾರಿಕೆಗಳು, ಬ್ಯಾಂಕ್‌ – ಎಲ್‌ ಐ ಸಿ, ಎಲ್ಲವುಗಳನ್ನೂ ಖಾಸಗೀಕರಣ ಮಾಡಿ ಖಾಸಗೀ ಖದೀಮರಿಗೆ ಅರ್ಪಿಸುವುದು ಈ ಕಾಯ್ದೆ ಜಾರಿಯಿಂದಾಗುವ ದುಷ್ಪರಿಣಾಮಗಳಾಗಿವೆ. ಸರ್ವಂ ಕಾರ್ಪೋರೇಟ್‌ ಮಯಂ. ಕಾರ್ಮಿಕರ ಪಾಲಿಗೆ ಸರ್ವಂ ಸರ್ವನಾಶಂ. ಸಾರ್ವಜನಿಕರ ಮತ್ತು ದೇಶದ ಸಕಲ ಸಂಪತ್ತು ಅದಾನಿ – ಅಂಬಾನಿ ಸ್ವಾಹಂ ಸ್ವಾಹಂ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಹೀಗಾಗಿಯೇ,  ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಾದ ಜಿಸಿಟಿಯು ಮತ್ತು ರೈತ ಸಂಘಟನೆಗಳ ಐಕ್ಯ ವೇದಿಕೆಯಾದ ಸಂಯುಕ್ತ ಕಿಸಾನ್‌ ಮೋರ್ಛಾಗಳು ಜುಂಟಿಯಾಗಿ ಮೇ 20ರಂದು ದೇಶವ್ಯಾಪಿಯಾಗಿ ಸಾರ್ವತ್ರಿಕ ಮುಷ್ಕರ ನಡೆಸಲು ಕರೆ ನೀಡಿವೆ. ಈ ಮುಷ್ಕರವನ್ನು ನಾವು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಬೇಕಿದೆ. ನಮ್ಮ ರಾಜ್ಯದ ಎಲ್ಲ ಜಿಲ್ಲೆಯ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ – ಯುವಜನ ಸಂಘಟನೆಗಳನ್ನೆಲ್ಲಾ ಜೊತೆಗೂಡಿಸಿಕೊಂಡು ಆಯ್ದ ಆಯಕಟ್ಟಿನ ಸ್ಥಳಗಳಲ್ಲಿ ಬೃಹತ್‌ ಪ್ರಮಾಣದ ಪ್ರತಿಭಟನೆಗಳನ್ನು ಸಂಘಟಿಸುತ್ತೇವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಮ್ಮ ಹಕ್ಕೊತ್ತಾಯಗಳಿಗೆ ಸ್ಪಂದಿಸದೇ ಹೋದರೆ ರಸ್ತೆಗಳನ್ನು ಬಂದ್‌ ಮಾಡಿ, ಲಕ್ಷಾಂತರ ಸಂಖ್ಯೆಯಲ್ಲಿ ಜೈಲ್‌ ಭರೋ ನಡೆಸಿ ನಮ್ಮ ಪ್ರತಿರೋಧವನ್ನು ದಾಖಲಿಸುತ್ತೇವೆ. ಮೇ 20ರ ಹೋರಾಟ ರೈತ, ಕಾರ್ಮಿಕರು ಕೂಡಿ ಸರ್ಕಾರಗಳಿಗೆ ಕೊಡುತ್ತಿರುವ ಮೊದಲ ಎಚ್ಚರಿಕೆಯಾಗಿದೆ. ಸರ್ಕಾರಗಳು ಸ್ಪಂದಿಸದೇ ಹೋದಲ್ಲಿ ದೇಶದ ಆಗುಹೋಗುಗಗಳನ್ನೇ ಸ್ಥಬ್ದಗೊಳಿಸಬಲ್ಲ ಶಕ್ತಿ ನಮಗಿದೆ ಎಂಬ ಸಂದೇಶವನ್ನೂ ನಾವು ಕಳುಹಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಕೇಂದ್ರ ಸರ್ಕಾರವು ಜಾರಿ ಮಾಡಲು ಬಯಸುತ್ತಿರುವ “4 ಲೇಬರ್‌ ಕೋಡ್‌” ಗಳನ್ನು ಈ ಕೂಡಲೇ ಹಿಂಪಡೆಯಬೇಕು. ಕಾರ್ಮಿಕರ ಕೆಲಸದ ಅವಧಿಯನ್ನು 8ರಿಂದ 12 ಗಂಟೆಗೆ ಏರಿಸುವ ನಿಯಮ”ವನ್ನು ಈ ಕೂಡಲೇ ಹಿಂಪಡೆಯಬೇಕು. ಕಾರ್ಮಿಕರಿಗೆ ಕನಿಷ್ಟ 30 ಸಾವಿರ ವೇತನ, ಉದ್ಯೋಗ ಭದ್ರತೆ, ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ʼಸಾಮಾಜಿಕ ಭದ್ರತಾ ಮಂಡಳಿಗಳು”, ಯುವಜನರಿಗೆ ಉದ್ಯೋಗ ಖಾತ್ರಿ ಕಾಯ್ದೆಗಳಂತಹ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು ರೈತ ಮತ್ತು ಕಾರ್ಮಿಕ ಸಂಘಟನೆಗಳ ಜೊತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಸಭೆ ಕರೆಯಬೇಕು ಎಂದು ಸಂಯುಕ್ತ ಹೋರಾಟ–ಕರ್ನಾಟಕ ಮತ್ತು  ಜೆಸಿಟಿಯು (ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ)ಗಳು ಒತ್ತಾಯಿಸಿವೆ.

ಜಮ್ಮು ಕಾಶ್ಮೀರದಲ್ಲಿ ಶಾಂತ ರಾತ್ರಿ, ಯಾವುದೇ ಘಟನೆಗಳು ವರದಿಯಾಗಿಲ್ಲ: ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...