Homeಕರ್ನಾಟಕಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

ಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

- Advertisement -
- Advertisement -

ಬೆಂಗಳೂರು: ಕೇಂದ್ರ ಸರಕಾರವು ಕಾರ್ಮಿಕ ವಿರೋಧಿ ನಾಲ್ಕು ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದ್ದು, ಇವುಗಳ ಜಾರಿಯಿಂದ ಕಾರ್ಮಿಕರ ಬದುಕೇ ಛಿದ್ರಗೊಳ್ಳಲಿದ್ದು  ಇದನ್ನು ವಿರೋಧಿಸಿ ದೇಶಾದ್ಯಂತ ಮುಷ್ಕರ ನಡೆಯಲಿದೆ. ರಾಜ್ಯದಲ್ಲಿಯೂ ಆಯ್ದ 100 ಕೇಂದ್ರಗಳಲ್ಲಿ ರೈತರು ಮತ್ತು ಕಾರ್ಮಿಕರು ಜಂಟಿಯಾಗಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಜೆಸಿಟಿಯು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

ಕೇಂದ್ರವು ಜಾರಿಗೆ ತರಲೊರಟಿರುವ ಈ ಹೊಸ ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ ಎಂದು ಪತ್ರಿಕಾ ಪ್ರಕಟನೆ ಹೊರಡಿಸಿರುವ ಕಾರ್ಮಿಕ ಮತ್ತು ರೈತ ಸಂಘಟನೆಗಳ ಈ ಜಂಟಿ ವೇದಿಕೆಯು, ಕಾರ್ಪೋರೇಟ್‌ ಕಂಪನಿಗಳ ಲೂಟಿಗೆ ರತ್ನಗಂಬಳಿ ಹಾಸುವ ಶ್ರಮ ವಿರೋಧಿ ಈ ಕಾಯ್ದೆಗಳನ್ನು ಕೇಂದ್ರವು ಜಾರಿಗೆ ತರಲು ಹೊರಟಿದೆ. ಈ ಕಾಯ್ದೆಗಳ ಜಾರಿ ವಿರೋಧಿಸಿ ಮೇ 20ರಂದು ಜೆಸಿಟಿಯು [ಜಾಯಿಂಟ್‌ ಕಮಿಟಿ ಆಫ್‌ ಟ್ರೇಡ್‌ ಯೂನಿಯನ್] ಮತ್ತು ಎಸ್‌ಕೆಎಂ [ಸಂಯುಕ್ತ ಕಿಸಾನ್‌ ಮೋರ್ಛಾ]‌ ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಹೇಳಿವೆ.

ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ 4 ಲೇಬರ್‌ ಕೋಡ್‌ ಗಳು ಜಾರಿಯಾದಲ್ಲಿ ಸಂಘಟಿತ ಕ್ಷೇತ್ರದ ಶೇ.70ರಷ್ಟು ಕಾರ್ಮಿಕರಿಗೂ ಭದ್ರತಾ ಕಾಯ್ದೆಗಳು ಅನ್ವಯವಾಗುವುದಿಲ್ಲ.  ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗಂತೂ “ಸಾಮಾಜಿಕ ಭದ್ರತೆ”ಯ ಹೆಸರಿನಲ್ಲಿ ಒಣಗಿದ ತುಟಿಗೆ ನೀರು ಒರೆಸುವುದು ಬಿಟ್ಟರೆ, ಯಾವುದೇ ಹಕ್ಕುಗಳು ಇರುವುದಿಲ್ಲ. ಒಂದು ದಿನದ ಕನಿಷ್ಟ ಕೂಲಿ ದರ 600 ರೂ. ಸಹ ಅಲ್ಲ. ಕೇವಲ 187 ರೂ ಮಾತ್ರ. ದಿನದ ದುಡಿಮೆಯ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಏರಿಸುವ ಸ್ವಾತಂತ್ರ್ಯ ಮಾಲೀಕರಿಗೆ ಅನಾಹುತಕಾರಿ ಕಾರ್ಖಾನೆಗಳಲ್ಲೂ ಮಹಿಳೆಯರನ್ನು ದುಡಿಸಬಹುದು. ಮಹಿಳಾ ಕಾರ್ಮಿಕರು ರಾತ್ರಿ ಪಾಳಿಯಲ್ಲೂ ದುಡಿಯಬೇಕು. ಕಾರ್ಮಿಕರಿಗೆ ಪೆನ್ಷನ್‌, ಪಿಎಫ್‌, ಇಎಸ್‌ಐ ಯಾವುದೂ ಕಡ್ಡಾಯವಲ್ಲ, ಎಲ್ಲವೂ ಮಾಲೀಕರ ಮರ್ಜಿಗೆ ಬಿಟ್ಟದ್ದು. ಕಂಪನಿಗಳು ಯಾವುದೇ ಅನುಮತಿ ಪಡೆಯದೆ ಉದ್ಯೋಗಿಗಳನ್ನು ತೆಗೆದುಹಾಕಬಹುದು ಅಥವಾ ಕಂಪನಿಯನ್ನೇ ಮುಚ್ಚಬಹುದು. ಇವೆಲ್ಲದರಿಂದಾಗಿ ದೇಶದ ಆರ್ಥಿಕತೆ ಅಸ್ತವ್ಯಸ್ತವಾಗಿ ಕಾರ್ಮಿಕರು ಬೀದಿಪಾಲಾಗಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಈ ಕಾಯ್ದೆಗಳು ಜಾರಿಯಾದಲ್ಲಿ ಕಾರ್ಮಿಕರು ಯೂನಿಯನ್‌ ಕಟ್ಟಿಕೊಳ್ಳುವುದು ಸುಲಭವಿಲ್ಲ. ಕಟ್ಟಿಕೊಂಡರೂ ಅದನ್ನು ಮಾನ್ಯ ಮಾಡುವುದು ಅಥವಾ ಮಾಡದೇ ಇರುವುದು ಮಾಲೀಕರಿಗೆ ಬಿಟ್ಟದ್ದು. ಮುಷ್ಕರ ಹೂಡಲು ಮೂರು ತಿಂಗಳ ಮೊದಲೇ ನೋಟೀಸ್‌ ಕೊಡಬೇಕು. ಸಂಧಾನ ಶುರುವಾದರೆ ಹೋರಾಟಕ್ಕೆ ಇಳಿಯುವಂತಿಲ್ಲ. ಒಟ್ಟಾರೆ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕೇಳಲಾಗಲಿ, ತಮ್ಮ ಮೇಲಿನ ಮಾಲಕರ ದೌರ್ಜನ್ಯವನ್ನು ಪ್ರಶ್ನಿಸಿ, ಪೊಲೀಸ್, ಕೋರ್ಟ್ ಮೆಟ್ಟಿಲು ಹತ್ತುವುದಾಗಲಿ ಸಾಧ್ಯವಿಲ್ಲ. ಇದು ಈ ಕಾಯ್ದೆಗಳ ಜಾರಿಯಿಂದಾಗುವ ಭಯಾನಕತೆಯಾಗಿದೆ ಎಂದು  ಮೇ 20ರಂದು ಮುಷ್ಕರಕ್ಕೆ ಕರೆ ನೀಡಿರುವ ರೈತ ಮತ್ತು ಕಾರ್ಮಿಕ ಸಂಘಟನೆಗಳು ಹೇಳಿವೆ.

ಭಾರತದ ಕಾರ್ಮಿಕರೆಂದರೆ ಯಾವುದೇ ಭದ್ರತೆ ಇಲ್ಲದೆ, ಮಾಲೀಕರಿಗೆ ಯಾವುದೇ ಹೊಣೆಗಾರಿಕೆ ಇಲ್ಲದೆ, ಅಗ್ಗದ ಕೂಲಿ ದರದಲ್ಲಿ ಅತಿ ಹೆಚ್ಚು ಗಂಟೆ ದುಡಿಯುವ, ಅಪಾಯಕಾರಿ ಪರಿಸ್ಥಿತಿಗಳಲ್ಲೂ ಕೆಲಸ ಮಾಡುವ ನವ ಗುಲಾಮರನ್ನಾಗಿ ಮಾಡುವುದು. ಮನಬಂದಂತೆ ಕಾರ್ಮಿಕರನ್ನು ದುಡಿಸಿಕೊಳ್ಳುವ, ಬೇಡವಾದರೆ ಬಿಸಾಕುವ ಸಂಪೂರ್ಣ ಸ್ವಾತಂತ್ರ್ಯ ಮಾಲೀಕರಿಗೆ ನೀಡುತ್ತವೆ. ಇಷ್ಟು ಮಾತ್ರವಲ್ಲದೆ ಕಾರ್ಖಾನೆಗಳ ಮಾಲಿಕರಿಗೆ ಅಗ್ಗದ ದರದಲ್ಲಿ ಭೂಮಿ, ಉಚಿತ ಕರೆಂಟು – ನೀರು ಒದಗಿಸಿ, ತೆರಿಗೆಯಲ್ಲಿ ಸಬ್ಸಿಡಿ ನೀಡಿ, ಬ್ಯಾಂಕ್‌ ಲೋನ್‌ ಮನ್ನಾ ಮಾಡಿ, ಹೊಸ ಕಂಪನಿಗಳಿಗೆ 20 ಲಕ್ಷ ಕೋಟಿಯವರೆಗೂ ಉತ್ತೇಜನ ನಿಧಿ ಕೊಟ್ಟು ಪ್ರೋತ್ಸಾಹಿಸುತ್ತದೆ. ಸರ್ಕಾರದ ಒಡೆತನದಲ್ಲಿದ್ದ ರಸ್ತೆ, ವಿದ್ಯುಚ್ಛಕ್ತಿ, ಪೆಟ್ರೋಲ್, ಡೀಸೆಲ್‌, ಗ್ಯಾಸ್‌, ಮಿಲಿಟರಿ ಉತ್ಪಾದನೆ, ವಿಮಾನ, ರೈಲ್ವೆ, ಸ್ಟೀಲ್‌ – ಉಕ್ಕು – ಕಲ್ಲಿದ್ದಲನ್ನು ತಯಾರಿಸುವ ಕೈಗಾರಿಕೆಗಳು, ಬ್ಯಾಂಕ್‌ – ಎಲ್‌ ಐ ಸಿ, ಎಲ್ಲವುಗಳನ್ನೂ ಖಾಸಗೀಕರಣ ಮಾಡಿ ಖಾಸಗೀ ಖದೀಮರಿಗೆ ಅರ್ಪಿಸುವುದು ಈ ಕಾಯ್ದೆ ಜಾರಿಯಿಂದಾಗುವ ದುಷ್ಪರಿಣಾಮಗಳಾಗಿವೆ. ಸರ್ವಂ ಕಾರ್ಪೋರೇಟ್‌ ಮಯಂ. ಕಾರ್ಮಿಕರ ಪಾಲಿಗೆ ಸರ್ವಂ ಸರ್ವನಾಶಂ. ಸಾರ್ವಜನಿಕರ ಮತ್ತು ದೇಶದ ಸಕಲ ಸಂಪತ್ತು ಅದಾನಿ – ಅಂಬಾನಿ ಸ್ವಾಹಂ ಸ್ವಾಹಂ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಹೀಗಾಗಿಯೇ,  ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಾದ ಜಿಸಿಟಿಯು ಮತ್ತು ರೈತ ಸಂಘಟನೆಗಳ ಐಕ್ಯ ವೇದಿಕೆಯಾದ ಸಂಯುಕ್ತ ಕಿಸಾನ್‌ ಮೋರ್ಛಾಗಳು ಜುಂಟಿಯಾಗಿ ಮೇ 20ರಂದು ದೇಶವ್ಯಾಪಿಯಾಗಿ ಸಾರ್ವತ್ರಿಕ ಮುಷ್ಕರ ನಡೆಸಲು ಕರೆ ನೀಡಿವೆ. ಈ ಮುಷ್ಕರವನ್ನು ನಾವು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಬೇಕಿದೆ. ನಮ್ಮ ರಾಜ್ಯದ ಎಲ್ಲ ಜಿಲ್ಲೆಯ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ – ಯುವಜನ ಸಂಘಟನೆಗಳನ್ನೆಲ್ಲಾ ಜೊತೆಗೂಡಿಸಿಕೊಂಡು ಆಯ್ದ ಆಯಕಟ್ಟಿನ ಸ್ಥಳಗಳಲ್ಲಿ ಬೃಹತ್‌ ಪ್ರಮಾಣದ ಪ್ರತಿಭಟನೆಗಳನ್ನು ಸಂಘಟಿಸುತ್ತೇವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಮ್ಮ ಹಕ್ಕೊತ್ತಾಯಗಳಿಗೆ ಸ್ಪಂದಿಸದೇ ಹೋದರೆ ರಸ್ತೆಗಳನ್ನು ಬಂದ್‌ ಮಾಡಿ, ಲಕ್ಷಾಂತರ ಸಂಖ್ಯೆಯಲ್ಲಿ ಜೈಲ್‌ ಭರೋ ನಡೆಸಿ ನಮ್ಮ ಪ್ರತಿರೋಧವನ್ನು ದಾಖಲಿಸುತ್ತೇವೆ. ಮೇ 20ರ ಹೋರಾಟ ರೈತ, ಕಾರ್ಮಿಕರು ಕೂಡಿ ಸರ್ಕಾರಗಳಿಗೆ ಕೊಡುತ್ತಿರುವ ಮೊದಲ ಎಚ್ಚರಿಕೆಯಾಗಿದೆ. ಸರ್ಕಾರಗಳು ಸ್ಪಂದಿಸದೇ ಹೋದಲ್ಲಿ ದೇಶದ ಆಗುಹೋಗುಗಗಳನ್ನೇ ಸ್ಥಬ್ದಗೊಳಿಸಬಲ್ಲ ಶಕ್ತಿ ನಮಗಿದೆ ಎಂಬ ಸಂದೇಶವನ್ನೂ ನಾವು ಕಳುಹಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಕೇಂದ್ರ ಸರ್ಕಾರವು ಜಾರಿ ಮಾಡಲು ಬಯಸುತ್ತಿರುವ “4 ಲೇಬರ್‌ ಕೋಡ್‌” ಗಳನ್ನು ಈ ಕೂಡಲೇ ಹಿಂಪಡೆಯಬೇಕು. ಕಾರ್ಮಿಕರ ಕೆಲಸದ ಅವಧಿಯನ್ನು 8ರಿಂದ 12 ಗಂಟೆಗೆ ಏರಿಸುವ ನಿಯಮ”ವನ್ನು ಈ ಕೂಡಲೇ ಹಿಂಪಡೆಯಬೇಕು. ಕಾರ್ಮಿಕರಿಗೆ ಕನಿಷ್ಟ 30 ಸಾವಿರ ವೇತನ, ಉದ್ಯೋಗ ಭದ್ರತೆ, ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ʼಸಾಮಾಜಿಕ ಭದ್ರತಾ ಮಂಡಳಿಗಳು”, ಯುವಜನರಿಗೆ ಉದ್ಯೋಗ ಖಾತ್ರಿ ಕಾಯ್ದೆಗಳಂತಹ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು ರೈತ ಮತ್ತು ಕಾರ್ಮಿಕ ಸಂಘಟನೆಗಳ ಜೊತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಸಭೆ ಕರೆಯಬೇಕು ಎಂದು ಸಂಯುಕ್ತ ಹೋರಾಟ–ಕರ್ನಾಟಕ ಮತ್ತು  ಜೆಸಿಟಿಯು (ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ)ಗಳು ಒತ್ತಾಯಿಸಿವೆ.

ಜಮ್ಮು ಕಾಶ್ಮೀರದಲ್ಲಿ ಶಾಂತ ರಾತ್ರಿ, ಯಾವುದೇ ಘಟನೆಗಳು ವರದಿಯಾಗಿಲ್ಲ: ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...