Homeಕರ್ನಾಟಕಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

ಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

- Advertisement -
- Advertisement -

ಬೆಂಗಳೂರು: ಕೇಂದ್ರ ಸರಕಾರವು ಕಾರ್ಮಿಕ ವಿರೋಧಿ ನಾಲ್ಕು ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದ್ದು, ಇವುಗಳ ಜಾರಿಯಿಂದ ಕಾರ್ಮಿಕರ ಬದುಕೇ ಛಿದ್ರಗೊಳ್ಳಲಿದ್ದು  ಇದನ್ನು ವಿರೋಧಿಸಿ ದೇಶಾದ್ಯಂತ ಮುಷ್ಕರ ನಡೆಯಲಿದೆ. ರಾಜ್ಯದಲ್ಲಿಯೂ ಆಯ್ದ 100 ಕೇಂದ್ರಗಳಲ್ಲಿ ರೈತರು ಮತ್ತು ಕಾರ್ಮಿಕರು ಜಂಟಿಯಾಗಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಜೆಸಿಟಿಯು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

ಕೇಂದ್ರವು ಜಾರಿಗೆ ತರಲೊರಟಿರುವ ಈ ಹೊಸ ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ ಎಂದು ಪತ್ರಿಕಾ ಪ್ರಕಟನೆ ಹೊರಡಿಸಿರುವ ಕಾರ್ಮಿಕ ಮತ್ತು ರೈತ ಸಂಘಟನೆಗಳ ಈ ಜಂಟಿ ವೇದಿಕೆಯು, ಕಾರ್ಪೋರೇಟ್‌ ಕಂಪನಿಗಳ ಲೂಟಿಗೆ ರತ್ನಗಂಬಳಿ ಹಾಸುವ ಶ್ರಮ ವಿರೋಧಿ ಈ ಕಾಯ್ದೆಗಳನ್ನು ಕೇಂದ್ರವು ಜಾರಿಗೆ ತರಲು ಹೊರಟಿದೆ. ಈ ಕಾಯ್ದೆಗಳ ಜಾರಿ ವಿರೋಧಿಸಿ ಮೇ 20ರಂದು ಜೆಸಿಟಿಯು [ಜಾಯಿಂಟ್‌ ಕಮಿಟಿ ಆಫ್‌ ಟ್ರೇಡ್‌ ಯೂನಿಯನ್] ಮತ್ತು ಎಸ್‌ಕೆಎಂ [ಸಂಯುಕ್ತ ಕಿಸಾನ್‌ ಮೋರ್ಛಾ]‌ ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಹೇಳಿವೆ.

ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ 4 ಲೇಬರ್‌ ಕೋಡ್‌ ಗಳು ಜಾರಿಯಾದಲ್ಲಿ ಸಂಘಟಿತ ಕ್ಷೇತ್ರದ ಶೇ.70ರಷ್ಟು ಕಾರ್ಮಿಕರಿಗೂ ಭದ್ರತಾ ಕಾಯ್ದೆಗಳು ಅನ್ವಯವಾಗುವುದಿಲ್ಲ.  ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗಂತೂ “ಸಾಮಾಜಿಕ ಭದ್ರತೆ”ಯ ಹೆಸರಿನಲ್ಲಿ ಒಣಗಿದ ತುಟಿಗೆ ನೀರು ಒರೆಸುವುದು ಬಿಟ್ಟರೆ, ಯಾವುದೇ ಹಕ್ಕುಗಳು ಇರುವುದಿಲ್ಲ. ಒಂದು ದಿನದ ಕನಿಷ್ಟ ಕೂಲಿ ದರ 600 ರೂ. ಸಹ ಅಲ್ಲ. ಕೇವಲ 187 ರೂ ಮಾತ್ರ. ದಿನದ ದುಡಿಮೆಯ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಏರಿಸುವ ಸ್ವಾತಂತ್ರ್ಯ ಮಾಲೀಕರಿಗೆ ಅನಾಹುತಕಾರಿ ಕಾರ್ಖಾನೆಗಳಲ್ಲೂ ಮಹಿಳೆಯರನ್ನು ದುಡಿಸಬಹುದು. ಮಹಿಳಾ ಕಾರ್ಮಿಕರು ರಾತ್ರಿ ಪಾಳಿಯಲ್ಲೂ ದುಡಿಯಬೇಕು. ಕಾರ್ಮಿಕರಿಗೆ ಪೆನ್ಷನ್‌, ಪಿಎಫ್‌, ಇಎಸ್‌ಐ ಯಾವುದೂ ಕಡ್ಡಾಯವಲ್ಲ, ಎಲ್ಲವೂ ಮಾಲೀಕರ ಮರ್ಜಿಗೆ ಬಿಟ್ಟದ್ದು. ಕಂಪನಿಗಳು ಯಾವುದೇ ಅನುಮತಿ ಪಡೆಯದೆ ಉದ್ಯೋಗಿಗಳನ್ನು ತೆಗೆದುಹಾಕಬಹುದು ಅಥವಾ ಕಂಪನಿಯನ್ನೇ ಮುಚ್ಚಬಹುದು. ಇವೆಲ್ಲದರಿಂದಾಗಿ ದೇಶದ ಆರ್ಥಿಕತೆ ಅಸ್ತವ್ಯಸ್ತವಾಗಿ ಕಾರ್ಮಿಕರು ಬೀದಿಪಾಲಾಗಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಈ ಕಾಯ್ದೆಗಳು ಜಾರಿಯಾದಲ್ಲಿ ಕಾರ್ಮಿಕರು ಯೂನಿಯನ್‌ ಕಟ್ಟಿಕೊಳ್ಳುವುದು ಸುಲಭವಿಲ್ಲ. ಕಟ್ಟಿಕೊಂಡರೂ ಅದನ್ನು ಮಾನ್ಯ ಮಾಡುವುದು ಅಥವಾ ಮಾಡದೇ ಇರುವುದು ಮಾಲೀಕರಿಗೆ ಬಿಟ್ಟದ್ದು. ಮುಷ್ಕರ ಹೂಡಲು ಮೂರು ತಿಂಗಳ ಮೊದಲೇ ನೋಟೀಸ್‌ ಕೊಡಬೇಕು. ಸಂಧಾನ ಶುರುವಾದರೆ ಹೋರಾಟಕ್ಕೆ ಇಳಿಯುವಂತಿಲ್ಲ. ಒಟ್ಟಾರೆ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕೇಳಲಾಗಲಿ, ತಮ್ಮ ಮೇಲಿನ ಮಾಲಕರ ದೌರ್ಜನ್ಯವನ್ನು ಪ್ರಶ್ನಿಸಿ, ಪೊಲೀಸ್, ಕೋರ್ಟ್ ಮೆಟ್ಟಿಲು ಹತ್ತುವುದಾಗಲಿ ಸಾಧ್ಯವಿಲ್ಲ. ಇದು ಈ ಕಾಯ್ದೆಗಳ ಜಾರಿಯಿಂದಾಗುವ ಭಯಾನಕತೆಯಾಗಿದೆ ಎಂದು  ಮೇ 20ರಂದು ಮುಷ್ಕರಕ್ಕೆ ಕರೆ ನೀಡಿರುವ ರೈತ ಮತ್ತು ಕಾರ್ಮಿಕ ಸಂಘಟನೆಗಳು ಹೇಳಿವೆ.

ಭಾರತದ ಕಾರ್ಮಿಕರೆಂದರೆ ಯಾವುದೇ ಭದ್ರತೆ ಇಲ್ಲದೆ, ಮಾಲೀಕರಿಗೆ ಯಾವುದೇ ಹೊಣೆಗಾರಿಕೆ ಇಲ್ಲದೆ, ಅಗ್ಗದ ಕೂಲಿ ದರದಲ್ಲಿ ಅತಿ ಹೆಚ್ಚು ಗಂಟೆ ದುಡಿಯುವ, ಅಪಾಯಕಾರಿ ಪರಿಸ್ಥಿತಿಗಳಲ್ಲೂ ಕೆಲಸ ಮಾಡುವ ನವ ಗುಲಾಮರನ್ನಾಗಿ ಮಾಡುವುದು. ಮನಬಂದಂತೆ ಕಾರ್ಮಿಕರನ್ನು ದುಡಿಸಿಕೊಳ್ಳುವ, ಬೇಡವಾದರೆ ಬಿಸಾಕುವ ಸಂಪೂರ್ಣ ಸ್ವಾತಂತ್ರ್ಯ ಮಾಲೀಕರಿಗೆ ನೀಡುತ್ತವೆ. ಇಷ್ಟು ಮಾತ್ರವಲ್ಲದೆ ಕಾರ್ಖಾನೆಗಳ ಮಾಲಿಕರಿಗೆ ಅಗ್ಗದ ದರದಲ್ಲಿ ಭೂಮಿ, ಉಚಿತ ಕರೆಂಟು – ನೀರು ಒದಗಿಸಿ, ತೆರಿಗೆಯಲ್ಲಿ ಸಬ್ಸಿಡಿ ನೀಡಿ, ಬ್ಯಾಂಕ್‌ ಲೋನ್‌ ಮನ್ನಾ ಮಾಡಿ, ಹೊಸ ಕಂಪನಿಗಳಿಗೆ 20 ಲಕ್ಷ ಕೋಟಿಯವರೆಗೂ ಉತ್ತೇಜನ ನಿಧಿ ಕೊಟ್ಟು ಪ್ರೋತ್ಸಾಹಿಸುತ್ತದೆ. ಸರ್ಕಾರದ ಒಡೆತನದಲ್ಲಿದ್ದ ರಸ್ತೆ, ವಿದ್ಯುಚ್ಛಕ್ತಿ, ಪೆಟ್ರೋಲ್, ಡೀಸೆಲ್‌, ಗ್ಯಾಸ್‌, ಮಿಲಿಟರಿ ಉತ್ಪಾದನೆ, ವಿಮಾನ, ರೈಲ್ವೆ, ಸ್ಟೀಲ್‌ – ಉಕ್ಕು – ಕಲ್ಲಿದ್ದಲನ್ನು ತಯಾರಿಸುವ ಕೈಗಾರಿಕೆಗಳು, ಬ್ಯಾಂಕ್‌ – ಎಲ್‌ ಐ ಸಿ, ಎಲ್ಲವುಗಳನ್ನೂ ಖಾಸಗೀಕರಣ ಮಾಡಿ ಖಾಸಗೀ ಖದೀಮರಿಗೆ ಅರ್ಪಿಸುವುದು ಈ ಕಾಯ್ದೆ ಜಾರಿಯಿಂದಾಗುವ ದುಷ್ಪರಿಣಾಮಗಳಾಗಿವೆ. ಸರ್ವಂ ಕಾರ್ಪೋರೇಟ್‌ ಮಯಂ. ಕಾರ್ಮಿಕರ ಪಾಲಿಗೆ ಸರ್ವಂ ಸರ್ವನಾಶಂ. ಸಾರ್ವಜನಿಕರ ಮತ್ತು ದೇಶದ ಸಕಲ ಸಂಪತ್ತು ಅದಾನಿ – ಅಂಬಾನಿ ಸ್ವಾಹಂ ಸ್ವಾಹಂ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಹೀಗಾಗಿಯೇ,  ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಾದ ಜಿಸಿಟಿಯು ಮತ್ತು ರೈತ ಸಂಘಟನೆಗಳ ಐಕ್ಯ ವೇದಿಕೆಯಾದ ಸಂಯುಕ್ತ ಕಿಸಾನ್‌ ಮೋರ್ಛಾಗಳು ಜುಂಟಿಯಾಗಿ ಮೇ 20ರಂದು ದೇಶವ್ಯಾಪಿಯಾಗಿ ಸಾರ್ವತ್ರಿಕ ಮುಷ್ಕರ ನಡೆಸಲು ಕರೆ ನೀಡಿವೆ. ಈ ಮುಷ್ಕರವನ್ನು ನಾವು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಬೇಕಿದೆ. ನಮ್ಮ ರಾಜ್ಯದ ಎಲ್ಲ ಜಿಲ್ಲೆಯ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ – ಯುವಜನ ಸಂಘಟನೆಗಳನ್ನೆಲ್ಲಾ ಜೊತೆಗೂಡಿಸಿಕೊಂಡು ಆಯ್ದ ಆಯಕಟ್ಟಿನ ಸ್ಥಳಗಳಲ್ಲಿ ಬೃಹತ್‌ ಪ್ರಮಾಣದ ಪ್ರತಿಭಟನೆಗಳನ್ನು ಸಂಘಟಿಸುತ್ತೇವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಮ್ಮ ಹಕ್ಕೊತ್ತಾಯಗಳಿಗೆ ಸ್ಪಂದಿಸದೇ ಹೋದರೆ ರಸ್ತೆಗಳನ್ನು ಬಂದ್‌ ಮಾಡಿ, ಲಕ್ಷಾಂತರ ಸಂಖ್ಯೆಯಲ್ಲಿ ಜೈಲ್‌ ಭರೋ ನಡೆಸಿ ನಮ್ಮ ಪ್ರತಿರೋಧವನ್ನು ದಾಖಲಿಸುತ್ತೇವೆ. ಮೇ 20ರ ಹೋರಾಟ ರೈತ, ಕಾರ್ಮಿಕರು ಕೂಡಿ ಸರ್ಕಾರಗಳಿಗೆ ಕೊಡುತ್ತಿರುವ ಮೊದಲ ಎಚ್ಚರಿಕೆಯಾಗಿದೆ. ಸರ್ಕಾರಗಳು ಸ್ಪಂದಿಸದೇ ಹೋದಲ್ಲಿ ದೇಶದ ಆಗುಹೋಗುಗಗಳನ್ನೇ ಸ್ಥಬ್ದಗೊಳಿಸಬಲ್ಲ ಶಕ್ತಿ ನಮಗಿದೆ ಎಂಬ ಸಂದೇಶವನ್ನೂ ನಾವು ಕಳುಹಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿವೆ.

ಕೇಂದ್ರ ಸರ್ಕಾರವು ಜಾರಿ ಮಾಡಲು ಬಯಸುತ್ತಿರುವ “4 ಲೇಬರ್‌ ಕೋಡ್‌” ಗಳನ್ನು ಈ ಕೂಡಲೇ ಹಿಂಪಡೆಯಬೇಕು. ಕಾರ್ಮಿಕರ ಕೆಲಸದ ಅವಧಿಯನ್ನು 8ರಿಂದ 12 ಗಂಟೆಗೆ ಏರಿಸುವ ನಿಯಮ”ವನ್ನು ಈ ಕೂಡಲೇ ಹಿಂಪಡೆಯಬೇಕು. ಕಾರ್ಮಿಕರಿಗೆ ಕನಿಷ್ಟ 30 ಸಾವಿರ ವೇತನ, ಉದ್ಯೋಗ ಭದ್ರತೆ, ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ʼಸಾಮಾಜಿಕ ಭದ್ರತಾ ಮಂಡಳಿಗಳು”, ಯುವಜನರಿಗೆ ಉದ್ಯೋಗ ಖಾತ್ರಿ ಕಾಯ್ದೆಗಳಂತಹ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು ರೈತ ಮತ್ತು ಕಾರ್ಮಿಕ ಸಂಘಟನೆಗಳ ಜೊತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಸಭೆ ಕರೆಯಬೇಕು ಎಂದು ಸಂಯುಕ್ತ ಹೋರಾಟ–ಕರ್ನಾಟಕ ಮತ್ತು  ಜೆಸಿಟಿಯು (ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ)ಗಳು ಒತ್ತಾಯಿಸಿವೆ.

ಜಮ್ಮು ಕಾಶ್ಮೀರದಲ್ಲಿ ಶಾಂತ ರಾತ್ರಿ, ಯಾವುದೇ ಘಟನೆಗಳು ವರದಿಯಾಗಿಲ್ಲ: ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...