Homeಮುಖಪುಟಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ಹೊಸ ಕೃಷಿ ಮಸೂದೆಗಳು ರೈತರನ್ನು, ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ಶಕ್ತಿಗಳ ಸೆರೆಯಾಗುವಂತೆ ಮಾಡುತ್ತವೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

- Advertisement -
- Advertisement -

ಸಂಸತ್ತಿನಲ್ಲಿ ಅಂಗೀಕಾರವಾಗಿರುವ ಮೂರು ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ಪಂಜಾಬ್, ಹರಿಯಾಣ, ತೆಲಂಗಾಣ ಸೇರಿ ದೇಶದ ಹಲವೆಡೆ ಕಳೆದೊಂದು ವಾರದಿಂದ ಪ್ರತಿಭಟನೆ ನಡೆಯುತ್ತಿದೆ. ಇಂದು ಪಂಜಾಬ್‌ನಲ್ಲಿ ರೈತರೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ.

ಹೊಸ ಮಸೂದೆಗಳು ರೈತರನ್ನು, ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ಶಕ್ತಿಗಳ ಸೆರೆಯಾಗುವಂತೆ ಮಾಡುತ್ತಿವೆ ಎಂದು ಆರೋಪಿಸುತ್ತಿದ್ದಾರೆ. ಪಂಜಾಬ್‌ನಲ್ಲಿ ಕಿಸಾನ್ ಮಜ್ದೂರ್‌ ಸಂಘರ್ಷ್ ಸಂಘಟನೆ ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 26 ರವರೆಗೆ ರಾಜ್ಯಾದ್ಯಂತ ‘ರೈಲ್ ರೋಕೊ’ ಆಂದೋಲನಕ್ಕೆ ಕರೆ ನೀಡಿದೆ. ಇತರ ರೈತ ಸಂಘಟನೆಗಳು ಸೆಪ್ಟೆಂಬರ್ 25ಕ್ಕೆ ಪಂಜಾಬ್ ಬಂದ್‌ಗೆ ಕರೆ ನೀಡಿವೆ.

ಸೆಪ್ಟಂಬರ್ 21ರಿಂದ ಕರ್ನಾಟಕ ರಾಜ್ಯ ಸರ್ಕಾರವು ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಮುಂದಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿರುವ ದಲಿತ, ಕಾರ್ಮಿಕ, ರೈತ ಸಂಘಟನೆಗಳೆಲ್ಲಾ ಒಟ್ಟಾಗಿ ಐಕ್ಯ ಹೋರಾಟ ನಡೆಸಬೇಕೆಂದು ಕರೆ ನೀಡಿವೆ. ಅಧಿವೇಶನ ನಡೆಯುವ ಪ್ರತಿದಿನವೂ ತಮ್ಮ ಪ್ರತಿಭಟನೆಯನ್ನು ಕೈಗೊಂಡು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಿವೆ. ತುರ್ತಾಗಿ ಹಿಂಪಡೆಯಲೇಬೇಕಾದ ಮತ್ತು ಸುಗ್ರೀವಾಜ್ಞೆ ತಂದು ಜಾರಿಗೊಳಿಸಲು ಹೊರಟಿರುವ ಕೆಲವು ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ: ಪ್ರಧಾನಿ ಮೋದಿ

ಇಷ್ಟೆಲ್ಲಾ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಇದು ರೈತರ ಅನುಕೂಲಕ್ಕಾಗಿ ಎಂದುಕೊಂಡು ಕಾನೂನನ್ನು ಜಾರಿಗೆ ಬಂದಿದೆ. ಮಧ್ಯವರ್ತಿಗಳಿಂದ ರೈತರನ್ನು ರಕ್ಷಿಸುತ್ತದೆ ಎನ್ನುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ  ಮಸೂದೆಗಳ ಅಂಗೀಕಾರಕ್ಕೆ ಸಂತಸ ವ್ಯಕ್ತಪಡಿಸಿದ್ದು, ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ವಿಪಕ್ಷಗಳ ಮೇಲೆ ಕಿಡಿ ಕಾರಿದ್ದಾರೆ.

ಕೃಷಿ ಮಸೂದೆಗಳು ಹೇಳುವುದೇನು..?

1. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಸುಗ್ರೀವಾಜ್ಞೆ

ಸರ್ಕಾರ ಈ ಸುಗ್ರೀವಾಜ್ಞೆಯನ್ನು ’ಒಂದು ರಾಷ್ಟ್ರ, ಒಂದು ಮಾರುಕಟ್ಟೆ’ ಭಾಗವಾಗಿ ಮುಂದಿಡುತ್ತಿದೆ. ರೈತ ತಾನು ಬೆಳೆದ ಬೆಳೆಗಳನ್ನು ಯಾವುದೇ ವ್ಯಾಪಾರಿಗಳಿಗೆ ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ನಿರ್ದಿಷ್ಟ ಪ್ರದೇಶದ ಎಪಿಎಂಸಿಯಲ್ಲಿ ಕಡ್ಡಾಯವಾಗಿ ಮಾರಾಟ ಮಾಡಬೇಕಿರುವುದಿಲ್ಲ.

2. ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದದ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020

ಈ ಸುಗ್ರೀವಾಜ್ಞೆಯಡಿಯಲ್ಲಿ, ರೈತ ತಾನು ಬೆಳೆದ ಬೆಳೆಗೆ ತಾನೇ ನಿಗದಿಪಡಿಸಿದ ಬೆಲೆ ಆಧಾರದ ಮೇಲೆ ಬೆಳೆಗಳನ್ನು ಮಾರಾಟ ಮಾಡುವ ಒಪ್ಪಂದ. ಕೃಷಿ ವ್ಯವಹಾರ ಸಂಸ್ಥೆಗಳು, ಸಂಸ್ಕರಣ ಘಟಕಗಳು, ಸಗಟು ವ್ಯಾಪಾರಿಗಳು, ರಫ್ತುದಾರರ ಜೊತೆ ಭವಿಷ್ಯದ ಕೃಷಿ ಉತ್ಪನ್ನಗಳನ್ನು ಪರಸ್ಪರ ಒಪ್ಪಿದ ಸಂಭಾವನೆ  ಬೆಲೆಯಲ್ಲಿ ಮಾರಾಟ ಮಾಡಲು ಒಪ್ಪಂದ ಮಾಡಿಕೊಳ್ಳುವುದು. ಇದು ರೈತನ ಅಪಾಯವನ್ನು ಕಡಿಮೆ  ಮಾಡುತ್ತದೆ ಎಂದು ಮಸೂದೆ ಹೇಳುತ್ತದೆ.

3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ

ಈ ಮೊದಲು ದಲ್ಲಾಳಿ ಮತ್ತು ಉದ್ಯಮಿಗಳು ಬೆಳೆಗಳನ್ನು ಕೈಗೆಟುಕುವ ದರದಲ್ಲಿ ರೈತರಿಂದ ಖರೀದಿಸಿ, ಸಂಗ್ರಹಿಸಿ, ನಂತರ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದರು. ಇದನ್ನು ತಪ್ಪಿಸಲು ಸರ್ಕಾರ 1955 ರಲ್ಲಿ ಅಗತ್ಯ ಸರಕುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಆದರೆ, ಈಗ ಈ ಕಾಯ್ದೆಗೆ ತಿದ್ದುಪಡಿ ತಂದು, ಹೊಸ ತಿದ್ದುಪಡಿಯಡಿಯಲ್ಲಿ ಕೃಷಿ ಉತ್ಪನ್ನಗಳಾದ ಸಿರಿಧಾನ್ಯಗಳು, ಬೇಳೆಕಾಳುಗಳು, ಎಣ್ಣೆಕಾಳುಗಳು, ಖಾದ್ಯ ತೈಲಗಳು ಮತ್ತು ಆಲೂಗಡ್ಡೆಗಳನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ರೈತ ಸಂಘಟನೆಗಳು ಮಸೂದೆ ವಿರೋಧಿಸಲು ಕಾರಣವೇನು..?

ಭಾರತೀಯ ಕಿಸಾನ್ ಯೂನಿಯನ್ ಸಂಘದ ಪ್ರಕಾರ, ಈ ಮಸೂದೆಗಳಿಂದ ರೈತರು ಕಂಪನಿಗಳಿಗೆ ಸೆರೆಯಾಗುವ ಅಪಾಯವಿದೆ. ಕಾನೂನು ನಿಯಂತ್ರಣ, ಉಚಿತ ಮಾರುಕಟ್ಟೆ, ಸಂಗ್ರಹಣೆ, ಆಮದು-ರಫ್ತು, ರೈತರ ಹಿತದೃಷ್ಟಿಯಿಂದ ಮಾಡಿಲ್ಲ ಎಂದಿದೆ. ವಿಶ್ವ ವಾಣಿಜ್ಯ ಸಂಸ್ಥೆಯ ನೀತಿಗಳಿಂದಾಗಿಯೂ ಈ ದೇಶದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. 1943-44ರಲ್ಲಿ ಬಂಗಾಳದ ಬರಗಾಲದ ಸಮಯದಲ್ಲಿ, ಈಸ್ಟ್ ಇಂಡಿಯಾ ಕಂಪನಿಯು ಆಹಾರ ಧಾನ್ಯಗಳನ್ನು ಸಂಗ್ರಹಿಸಿಟ್ಟಿದ್ದರಿಂದ 40 ಲಕ್ಷ ಜನರು ಹಸಿವಿನಿಂದ ಸಾವನ್ನಪ್ಪಿದರು ಎಂದಿದೆ.

PC:Times Now

ಜೊತೆಗೆ, ಶಾಂತಕುಮಾರ್, ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರುವುದು ಈ ಸುಗ್ರೀವಾಜ್ಞೆಗಳ ಹಿಂದಿನ ಉದ್ದೇಶ ಎಂದು ರೈತ ಮುಖಂಡರು ಆರೋಪಿಸುತ್ತಾರೆ. ಈ ಸಮಿತಿ 2015ರಲ್ಲಿ ವರದಿ ಸಲ್ಲಿಸಿದ್ದು, ಆಹಾರ ಸಂರಕ್ಷಣೆಯ ಜವಾಬ್ದಾರಿ ಹೊಂದಿರುವ ಭಾರತದ ಆಹಾರ ನಿಗಮ (FCI) ತನ್ನ ಜವಾಬ್ದಾರಿಯನ್ನು ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಒಡಿಶಾ ಮತ್ತು ಆಂಧ್ರಪ್ರದೇಶ ಸರ್ಕಾರಗಳಿಗೆ ನೀಡಬೇಕು ಎಂದು ಹೇಳಿದೆ. ಈ ಮೂಲಕ ಕೇಂದ್ರ ಸರ್ಕಾರ ಆಹಾರ ಸಂಸ್ಕರಣೆ ಮತ್ತು ಖರೀದಿಯಿಂದ ದೂರ ಉಳಿಯಲು ಪ್ರಯತ್ನಿಸುತ್ತದೆ.

ಕೃಷಿ ಮಸೂದೆಗಳ ಕುರಿತು ತಜ್ಞರ ಅಭಿಪ್ರಾಯವೇನು..?

ಕೆ.ಪಿ. ಸುರೇಶ್: ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ತಜ್ಞ ಕೆ.ಪಿ. ಸುರೇಶ್ ನಾನುಗೌರಿ.ಕಾಂ ಜೊತೆ ಮಾತನಾಡಿ, ಈ ಕಾಯ್ದೆಗಳು ಸಂಪೂರ್ಣವಾಗಿ ಕಾರ್ಪೋರೇಟ್ ಕಂಪನಿಗಳ ಪರವಾಗಿವೆ. ಎಪಿಎಂಸಿ ಜೊತೆಗಿನ ಸಂಬಂಧವನ್ನು ಕತ್ತರಿಸಿ, ಕಂಪನಿಗಳ ಕೈಕೆಳಗಿರುವಂತೆ ಮಾಡುತ್ತವೆ. ಈ ಮಸೂದೆಗಳ ದುಷ್ಪರಿಣಾಮ ತಕ್ಷಣಕ್ಕೆ ತಿಳಿಯುವುದಿಲ್ಲ. ಆದರೆ ಮಲೆನಾಡು ಭಾಗದಲ್ಲಿ ಕಾಫೀ, ವೆನಿಲ್ಲಾ, ಕೋಕೋ ಬೆಳೆಗಾರರು ಅನುಭವಿಸುತ್ತಿರುವ ಸ್ಥಿತಿಯೇ ಇನ್ನೆರಡು ವರ್ಷಗಳಲ್ಲಿ ಬರಲಿದೆ. ಕೊರೊನಾ ನಡುವೆ ಇಷ್ಟು ಬೇಗ ಕಾಯ್ದೆ ತರುವ ಅಗತ್ಯವೇನಿತ್ತು..? ಕಾರ್ಪೊರೇಟ್ ಕಂಪನಿಗಳ ಜೊತೆಗಿನ ಸಂಬಂಧ ಉತ್ತಮಗೊಳಿಸಿಕೊಳ್ಳಲು ಸರ್ಕಾರಗಳು ಇಂತಹ ಮಸೂದೆಗಳನ್ನು ಜಾರಿಗೊಳಿಸುತ್ತಿವೆ ಎನ್ನುತ್ತಾರೆ.

ಪ್ರಕಾಶ್ ಕಮ್ಮರಡಿ:  ಈ ಕೃಷಿ ಸುಗ್ರೀವಾಜ್ಞೆಗಳು, ಪರ ವಿರೋಧದ ಪ್ರಶ್ನೆ ಉದ್ಭವಿಸುವ ಅವಕಾಶವೇ ಇಲ್ಲದಂತೆ ಮಾಡಿವೆ. ಕೊರೊನಾ ವೈರಸ್ ಸಂಕಷ್ಟದ ಜೊತೆಗೆ ಸುಗ್ರೀವಾಜ್ಞೆಗಳ ಮೂಲಕ ಮಸೂದೆ ಜಾರಿಗೊಳಿಸುವ ಅಗತ್ಯವೆನಿದೆ..? ಎಂದು ಪ್ರಶ್ನೆಸುತ್ತಾರೆ ಕೃಷಿ ಅರ್ಥಶಾಸ್ತ್ರಜ್ಞ ಮತ್ತು ಕರ್ನಾಟಕ ಸರ್ಕಾರದ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ

ಮುಂದುವರಿದು, ರೈತರ ಬೆಳೆಗೆ ಬೆಂಬಲ ಬೆಲೆ, ಎಪಿಎಂಸಿ ಸುಧಾರಣೆ, ಎನ್.ಎಸ್.ಸ್ವಾಮಿನಾಥನ್ ವರದಿ ಜಾರಿ, ಮಾರುಕಟ್ಟೆ ಸಧೃಡ  ಈ ಎಲ್ಲ ಸಮಸ್ಯೆಗಳಿಗೆಸರ್ಕಾರ ಪರಿಹಾರ ನೀಡದೆ, ಒಮ್ಮೆಲೆ ಚರ್ಚೆಗೆ ಅವಕಾಶವೇ ನೀಡದೆ ಸುಗ್ರಿವಾಜ್ಞೆ ತರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಚರ್ಚೆಯೇ ಮಾಡದೇ ರೈತರ ಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಎಷ್ಟು ಸರಿ. ಅಡಳಿತ ಪಕ್ಷ, ವಿರೋಧ ಪಕ್ಷ ಎಲ್ಲರೂ ಕೂಡ ಕೃಷಿಯನ್ನು ಖಾಸಗೀಕರಣ ಮಾಡಲು ಆಸಕ್ತರಾಗಿದ್ದಾರೆ.  ಹೀಗಾಗಿ ನಾವು ಬೆಂಗಳೂರಿನಲ್ಲಿ ಸೋಮವಾರ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದಿದ್ದಾರೆ ಪ್ರಕಾಶ್ ಕಮ್ಮರಡಿ.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ 2020 ಮತ್ತು ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದದ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಅನ್ನು ಲೋಕಸಭೆಯಲ್ಲಿ ಗುರುವಾರ (ಸೆ.17) ಅಂಗೀಕರಿಸಲಾಯಿತು. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಯನ್ನು ಸೆಪ್ಟೆಂಬರ್ 13 ರಂದು ಅಂಗೀಕರಿಸಲಾಗಿದೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ರೈತರಿಗೆ ಸಮಸ್ಯೆ: ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡ ರೈತ ಹೋರಾಟಗಾರರು & ಕೃಷಿ ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...