Homeಅಂತರಾಷ್ಟ್ರೀಯಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

ಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

- Advertisement -
- Advertisement -

ಚೀನಾ ಕಳೆದ ಮೇ ತಿಂಗಳಿನಿಂದ ಲಡಾಕ್‌ನ ಗಾಲ್ವನ್ ಕಣಿವೆ ಮತ್ತು ಪೋಂಗೊಂಗ್ ತ್ಸೋ ಕೆರೆಯ ಪ್ರದೇಶವನ್ನು ಒತ್ತುವರಿ ಮಾಡಿ ವಾಸ್ತವ್ಯ ಹೂಡಿದೆ ಎಂಬ ವರದಿಗಳು ಕೇಳುತ್ತಾ ಬಂದಿದ್ದೇವೆ. ಈಗ ಭಾರತ ತನ್ನ ಸೇನಾಧಿಕಾರಿಯನ್ನು ಸೇರಿದಂತೆ 20 ಯೋಧರನ್ನು ಈ ಗಡಿ ಸಂಘರ್ಷದಲ್ಲಿ ಕಳೆದುಕೊಂಡಿದೆ. ಚೀನಾ ಸೈನ್ಯದ ಸಾವು ನಷ್ಟ ಇನ್ನೂ ವರದಿಯಾಗಿಲ್ಲ. ಈ ಸಂಘರ್ಷದ ಸಾವುಗಳಿಗೆ ಮುಖ್ಯ ಕಾರಣ ತಿಳಿದು ಬಂದಿಲ್ಲವಾದರೂ, 70ರ ದಶಕದ ನಂತರ ಇದೇ ಮೊದಲ ಬಾರಿ 3488 ಕಿ.ಮೀ ಉದ್ದಗಲ ಇರುವ ಚೀನಾ ಗಡಿ ರೇಖೆಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.

ನಮ್ಮ ಮಾಧ್ಯಮಗಳು ಏನು ಹೇಳುತ್ತಿವೆ ಎಂಬುದು ಎಲ್ಲರಿಗೂ ಗೊತ್ತಿದೆ. ಚೀನಾದ ಮಾಧ್ಯಮಗಳ ಪ್ರಕಾರ ಭಾರತವು ಸಂಧಾನಕ್ಕೆ ಒಪ್ಪಿಯೂ ಕೂಡ ಸೋಮವಾರದಂದು ಎರಡು ಕಡೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದಾಗ ಈ ಸಂಘರ್ಷ ಆಗಿದೆ ಮತ್ತು ಅದಕ್ಕೆ ಭಾರತದ ಆಕ್ರಮಣಕಾರಿ ವರ್ತನೆಯೇ ಕಾರಣವಂತೆ. ಪ್ರಸ್ತುತ ಪರಿಸ್ಥಿತಿಯನ್ನು ಬಗೆಹರಿಸಲು ಎರಡೂ ಕಡೆಯ ಹಿರಿಯ ಸೇನಾಧಿಕಾರಿಗಳು ಸಂಧಾನದ ಮಾತುಕತೆಯಲ್ಲಿ ತೊಡಗಿದ್ದಾರೆ.

ಚೀನಾ ಈಗ ಲಡಾಕ್‌ನ ಮೂರು ಜಾಗಗಳಲ್ಲಿ ಬೀಡು ಬಿಟ್ಟು ರಸ್ತೆ, ಮೂಲ ಸೌಕರ್ಯ ಕಾಮಗಾರಿಯಲ್ಲಿ ತೊಡಗಿದೆ ಹಾಗೂ ಟಿಬೆಟ್ ಪ್ರಾಂತ್ಯದಲ್ಲಿನ ಗಾರಿ ಗುನ್ಸ ವಿಮಾನ ನಿಲ್ದಾಣವನ್ನು ನವೀಕರಿಸುತ್ತಿದೆ. 60 ಕಿಲೋಮೀಟರ್ ಚದುರದಷ್ಟು ಒತ್ತುವರಿ ಗಾಲ್ವನ್ ಕಣಿವೆಯಲ್ಲೇ ಮಾಡಿದೆ. ಪೋಂಗೊಂಗ್ ತ್ಸೋ ಸರೋವರದಲ್ಲಿ ಚೀನಾ ಸೇನೆ ತನ್ನ ಬೋಟ್‌ಗಳಿಂದ ಗಸ್ತು ಸುತ್ತುತ್ತಿದ್ದು ಆರು ಜಾಗಗಳಲ್ಲಿ ತನ್ನ ಆರ್ಟಿಲರಿ ಗನ್‌ಗಳನ್ನು ನಿಯೋಜಿಸಿದೆ. ಸಿಕ್ಕಿಂನ ನಕುಲ ಪ್ರದೇಶದಲ್ಲೂ ಚೀನಾ ಸೈನ್ಯದ ಇದೆ ರೀತಿಯ ನುಸುಳುವಿಕೆ ವರದಿಯಾಗಿದೆ. ಕಳವಳಕಾರಿ ಅಂಶವೆಂದರೆ ಗಾಲ್ವನ್ ಕಣಿವೆಯ ಎರಡು ಕಡೆಯ ಎತ್ತರದ ಪರ್ವತಗಳನ್ನು ಆಕ್ರಮಿಸಿಕೊಂಡಿರುವ ಚೀನಾ ಈಗ ಲಡಾಕ್‌ಗೆ ಸಂಪರ್ಕ ಕಲ್ಪಿಸುವ ದರ್ಬುಕ್-ಶ್ಯೋಕ್-ದೌಲತ್ ಬೆಗ್ ಒಳ್ದಿ ಹೆದ್ದಾರಿಯನ್ನು ನಿಯಂತ್ರಣ ಸುಲಭವಾಗಿ ಮಾಡಬಹುದಾಗಿದೆ.

ಕಳೆದ 2017ರಲ್ಲಿ ಭೂತಾನ್, ಭಾರತ ಮತ್ತು ಚೀನಾ ಗಡಿಯ ಬಳಿಯ ಧೊಕ್ಲೊಮ್ ಎತ್ತರದ ಪ್ರದೇಶದಲ್ಲಿ ಚೀನಾ ಈಗ ಮಿಲಿಟರಿ ಔಟ್‌ಪೋಸ್ಟ್ ಮಾಡಿ, ವಿಮಾನ ಏರುದಾರಿಯನ್ನು ನಿರ್ಮಿಸಿಕೊಂಡಿದೆ. ಭಾರತದ ಕಡೆಯಿಂದ ಸಿನಿಮೀಯ ರೀತಿಯಲ್ಲಿ ಉಡಾಫೆ ಹೇಳಿಕೆಗಳನ್ನು ಕೊಡುವುದನ್ನು ಬಿಟ್ಟರೆ, ಈ ಬಿಕ್ಕಟ್ಟಿನ ಸ್ವರೂಪ ಮತ್ತು ಗಂಭೀರತೆ ಕಾಣುತ್ತಿಲ್ಲ. ಗೃಹ ಸಚಿವ ಅಮಿತ್ ಶಾ ನಮ್ಮ ಒಂದು ಇಂಚು ಪ್ರದೇಶ ಯಾರಿಗೂ ಹೋಗುವುದಿಲ್ಲ ಎಂದು ಟ್ವೀಟ್ ಮಾಡಿದರೆ, ಗಡ್ಕರಿ ನಮಗೆ ಚೀನಾ ಪಾಕಿಸ್ತಾನದ ಜಾಗ ಬೇಡ ನಮಗೆ ಶಾಂತಿ ಬೇಕು ಎನ್ನುತ್ತಾರೆ. ಭಾರತದ ಯಾವುದೇ ಪ್ರಧಾನಿ ಕೈಗೊಳ್ಳದಷ್ಟು ಚೀನಾ ಪ್ರವಾಸ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈವರೆಗೂ ಆಗಿರುವ ಘಟನೆಗಳಿಗೆ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ.

2019ರ ಆಗಸ್ಟ್ ತಿಂಗಳಿನಲ್ಲಿ ಭಾರತ ಏಕಪಕ್ಷೀಯವಾಗಿ ಸಂವಿಧಾನದ ಆರ್ಟಿಕಲ್ 370 ರದ್ದುಗೊಳಿಸಿ ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡಲಾಗಿತ್ತು. ಆಕ್ಸೈ ಚಿನ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು ಮತ್ತು ಅದನ್ನು ಪಡೆಯುತ್ತೇವೆ ಎಂದು ಹೇಳಿತ್ತು. ಈ ಏಕಪಕ್ಷೀಯ ನಿರ್ಧಾರಗಳಿಂದ ಚೀನಾ ಕೆರಳಿತ್ತು. ಅದನ್ನು ಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳುವ ಸಲುವಾಗಿ ಮೋದಿಯ ಚೀನಾ ಪ್ರವಾಸದ ವೂವಾನ್ ಸ್ಪಿರಿಟ್‌ನ ಮುಂದುವರೆದು ಭಾಗವಾಗಿ ಚೆನ್ನೈ ಕನೆಕ್ಟ್ ಮಾಡಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ನ್ನು ಮಹಾಬಲಿಪುರಂಗೆ ಕರೆಸಿ ಮಾತುಕತೆ ನಡೆಸಲಾಗಿತ್ತು. ಆ ಮಾತುಕತೆಗಳ ಸಾರಾಂಶವೇ ಯಾವುದೇ ಗಡಿ ವಿವಾದಗಳನ್ನು ಏಕಪಕ್ಷೀಯವಾಗಿ ನಿರ್ಧರಿಸದೇ ಪರಸ್ಪರ ಮಾತುಕತೆ ಮೂಲಕ ಇತ್ಯರ್ಥ ಮಾಡಿಕೊಳ್ಳುವುದಾಗಿತ್ತು. ಆದರೆ ಈವರೆಗೂ ಕೇಂದ್ರ ಸರ್ಕಾರ ಚೀನಾ ಗಡಿ ವಿವಾದದ ವಿಚಾರವಾಗಿ ಯಾವುದೇ ಸ್ಪಷ್ಟ ಸಂದೇಶ ಕೊಟ್ಟಿಲ್ಲ. ಚೀನಾದೊಂದಿಗಿನ ಭಾರತದ ಸಂಬಂಧ ಏನು? ಭಾರತ ಚೀನಾ ಸಮಸ್ಯೆಗಳೇನು? ಅದರ ಪರಿಹಾರ ಹೇಗೆ ಕಂಡುಕೊಳ್ಳುವುದು. ಭಾರತ ಮತ್ತು ಚೀನಾದ ಸಮನ್ವಯ ಗುರಿಯೇನು? ಈವರೆಗೂ ವಿರೋಧ ಪಕ್ಷದವರನ್ನು ಟೀಕಿಸುವುದನ್ನು ಬಿಟ್ಟು, ಚುನಾವಣಾ ಪ್ರಚಾರದಲ್ಲಿ ಭಾಷಣ ಬಿಟ್ಟು ಒಂದು ಸಣ್ಣ ಪ್ರೆಸ್ ಕಾನ್ಫರೆನ್ಸ್ ಕೂಡ ಮಾಡದ ಪ್ರಧಾನಿಯವರಿಂದ ಉತ್ತರ ಪಡೆಯುವುದು ಹೇಗೆ?

ಪ್ರಪಂಚದ ಮೇಲೆ ಅಧಿಪತ್ಯ ಸಾಧಿಸಲು ಹೊರಟಿರುವ ಚೀನಾದ ಆಕ್ರಮಣಕಾರಿ ನೀತಿಯನ್ನು ಭಾರತ ಒಗ್ಗಟ್ಟಾಗಿ ಎದುರಿಸಲೇಬೇಕಿದೆ. ಅಂತಹ ಒಗ್ಗಟ್ಟನ್ನು ಖಾತರಿಪಡಿಸುವ ಜವಾಬ್ದಾರಿ ಒಕ್ಕೂಟ ಸರ್ಕಾರದ್ದಾಗಿದೆ. ಏಕೆಂದರೆ ಎಲ್ಲಕ್ಕೂ ಇನ್ಯಾರನ್ನೋ ದೂರುತ್ತಾ, ಸತ್ಯಸಂಗತಿಗಳನ್ನು ಮುಚ್ಚಿಡುವ ಅದರ ರೀತಿಯು ಆತಂಕವನ್ನು ಹೆಚ್ಚಿಸುತ್ತಾ ಹೋಗುತ್ತಿದೆ.

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...