Homeಅಂತರಾಷ್ಟ್ರೀಯಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

ಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

- Advertisement -
- Advertisement -

ಚೀನಾ ಕಳೆದ ಮೇ ತಿಂಗಳಿನಿಂದ ಲಡಾಕ್‌ನ ಗಾಲ್ವನ್ ಕಣಿವೆ ಮತ್ತು ಪೋಂಗೊಂಗ್ ತ್ಸೋ ಕೆರೆಯ ಪ್ರದೇಶವನ್ನು ಒತ್ತುವರಿ ಮಾಡಿ ವಾಸ್ತವ್ಯ ಹೂಡಿದೆ ಎಂಬ ವರದಿಗಳು ಕೇಳುತ್ತಾ ಬಂದಿದ್ದೇವೆ. ಈಗ ಭಾರತ ತನ್ನ ಸೇನಾಧಿಕಾರಿಯನ್ನು ಸೇರಿದಂತೆ 20 ಯೋಧರನ್ನು ಈ ಗಡಿ ಸಂಘರ್ಷದಲ್ಲಿ ಕಳೆದುಕೊಂಡಿದೆ. ಚೀನಾ ಸೈನ್ಯದ ಸಾವು ನಷ್ಟ ಇನ್ನೂ ವರದಿಯಾಗಿಲ್ಲ. ಈ ಸಂಘರ್ಷದ ಸಾವುಗಳಿಗೆ ಮುಖ್ಯ ಕಾರಣ ತಿಳಿದು ಬಂದಿಲ್ಲವಾದರೂ, 70ರ ದಶಕದ ನಂತರ ಇದೇ ಮೊದಲ ಬಾರಿ 3488 ಕಿ.ಮೀ ಉದ್ದಗಲ ಇರುವ ಚೀನಾ ಗಡಿ ರೇಖೆಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.

ನಮ್ಮ ಮಾಧ್ಯಮಗಳು ಏನು ಹೇಳುತ್ತಿವೆ ಎಂಬುದು ಎಲ್ಲರಿಗೂ ಗೊತ್ತಿದೆ. ಚೀನಾದ ಮಾಧ್ಯಮಗಳ ಪ್ರಕಾರ ಭಾರತವು ಸಂಧಾನಕ್ಕೆ ಒಪ್ಪಿಯೂ ಕೂಡ ಸೋಮವಾರದಂದು ಎರಡು ಕಡೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದಾಗ ಈ ಸಂಘರ್ಷ ಆಗಿದೆ ಮತ್ತು ಅದಕ್ಕೆ ಭಾರತದ ಆಕ್ರಮಣಕಾರಿ ವರ್ತನೆಯೇ ಕಾರಣವಂತೆ. ಪ್ರಸ್ತುತ ಪರಿಸ್ಥಿತಿಯನ್ನು ಬಗೆಹರಿಸಲು ಎರಡೂ ಕಡೆಯ ಹಿರಿಯ ಸೇನಾಧಿಕಾರಿಗಳು ಸಂಧಾನದ ಮಾತುಕತೆಯಲ್ಲಿ ತೊಡಗಿದ್ದಾರೆ.

ಚೀನಾ ಈಗ ಲಡಾಕ್‌ನ ಮೂರು ಜಾಗಗಳಲ್ಲಿ ಬೀಡು ಬಿಟ್ಟು ರಸ್ತೆ, ಮೂಲ ಸೌಕರ್ಯ ಕಾಮಗಾರಿಯಲ್ಲಿ ತೊಡಗಿದೆ ಹಾಗೂ ಟಿಬೆಟ್ ಪ್ರಾಂತ್ಯದಲ್ಲಿನ ಗಾರಿ ಗುನ್ಸ ವಿಮಾನ ನಿಲ್ದಾಣವನ್ನು ನವೀಕರಿಸುತ್ತಿದೆ. 60 ಕಿಲೋಮೀಟರ್ ಚದುರದಷ್ಟು ಒತ್ತುವರಿ ಗಾಲ್ವನ್ ಕಣಿವೆಯಲ್ಲೇ ಮಾಡಿದೆ. ಪೋಂಗೊಂಗ್ ತ್ಸೋ ಸರೋವರದಲ್ಲಿ ಚೀನಾ ಸೇನೆ ತನ್ನ ಬೋಟ್‌ಗಳಿಂದ ಗಸ್ತು ಸುತ್ತುತ್ತಿದ್ದು ಆರು ಜಾಗಗಳಲ್ಲಿ ತನ್ನ ಆರ್ಟಿಲರಿ ಗನ್‌ಗಳನ್ನು ನಿಯೋಜಿಸಿದೆ. ಸಿಕ್ಕಿಂನ ನಕುಲ ಪ್ರದೇಶದಲ್ಲೂ ಚೀನಾ ಸೈನ್ಯದ ಇದೆ ರೀತಿಯ ನುಸುಳುವಿಕೆ ವರದಿಯಾಗಿದೆ. ಕಳವಳಕಾರಿ ಅಂಶವೆಂದರೆ ಗಾಲ್ವನ್ ಕಣಿವೆಯ ಎರಡು ಕಡೆಯ ಎತ್ತರದ ಪರ್ವತಗಳನ್ನು ಆಕ್ರಮಿಸಿಕೊಂಡಿರುವ ಚೀನಾ ಈಗ ಲಡಾಕ್‌ಗೆ ಸಂಪರ್ಕ ಕಲ್ಪಿಸುವ ದರ್ಬುಕ್-ಶ್ಯೋಕ್-ದೌಲತ್ ಬೆಗ್ ಒಳ್ದಿ ಹೆದ್ದಾರಿಯನ್ನು ನಿಯಂತ್ರಣ ಸುಲಭವಾಗಿ ಮಾಡಬಹುದಾಗಿದೆ.

ಕಳೆದ 2017ರಲ್ಲಿ ಭೂತಾನ್, ಭಾರತ ಮತ್ತು ಚೀನಾ ಗಡಿಯ ಬಳಿಯ ಧೊಕ್ಲೊಮ್ ಎತ್ತರದ ಪ್ರದೇಶದಲ್ಲಿ ಚೀನಾ ಈಗ ಮಿಲಿಟರಿ ಔಟ್‌ಪೋಸ್ಟ್ ಮಾಡಿ, ವಿಮಾನ ಏರುದಾರಿಯನ್ನು ನಿರ್ಮಿಸಿಕೊಂಡಿದೆ. ಭಾರತದ ಕಡೆಯಿಂದ ಸಿನಿಮೀಯ ರೀತಿಯಲ್ಲಿ ಉಡಾಫೆ ಹೇಳಿಕೆಗಳನ್ನು ಕೊಡುವುದನ್ನು ಬಿಟ್ಟರೆ, ಈ ಬಿಕ್ಕಟ್ಟಿನ ಸ್ವರೂಪ ಮತ್ತು ಗಂಭೀರತೆ ಕಾಣುತ್ತಿಲ್ಲ. ಗೃಹ ಸಚಿವ ಅಮಿತ್ ಶಾ ನಮ್ಮ ಒಂದು ಇಂಚು ಪ್ರದೇಶ ಯಾರಿಗೂ ಹೋಗುವುದಿಲ್ಲ ಎಂದು ಟ್ವೀಟ್ ಮಾಡಿದರೆ, ಗಡ್ಕರಿ ನಮಗೆ ಚೀನಾ ಪಾಕಿಸ್ತಾನದ ಜಾಗ ಬೇಡ ನಮಗೆ ಶಾಂತಿ ಬೇಕು ಎನ್ನುತ್ತಾರೆ. ಭಾರತದ ಯಾವುದೇ ಪ್ರಧಾನಿ ಕೈಗೊಳ್ಳದಷ್ಟು ಚೀನಾ ಪ್ರವಾಸ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈವರೆಗೂ ಆಗಿರುವ ಘಟನೆಗಳಿಗೆ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ.

2019ರ ಆಗಸ್ಟ್ ತಿಂಗಳಿನಲ್ಲಿ ಭಾರತ ಏಕಪಕ್ಷೀಯವಾಗಿ ಸಂವಿಧಾನದ ಆರ್ಟಿಕಲ್ 370 ರದ್ದುಗೊಳಿಸಿ ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡಲಾಗಿತ್ತು. ಆಕ್ಸೈ ಚಿನ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು ಮತ್ತು ಅದನ್ನು ಪಡೆಯುತ್ತೇವೆ ಎಂದು ಹೇಳಿತ್ತು. ಈ ಏಕಪಕ್ಷೀಯ ನಿರ್ಧಾರಗಳಿಂದ ಚೀನಾ ಕೆರಳಿತ್ತು. ಅದನ್ನು ಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳುವ ಸಲುವಾಗಿ ಮೋದಿಯ ಚೀನಾ ಪ್ರವಾಸದ ವೂವಾನ್ ಸ್ಪಿರಿಟ್‌ನ ಮುಂದುವರೆದು ಭಾಗವಾಗಿ ಚೆನ್ನೈ ಕನೆಕ್ಟ್ ಮಾಡಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ನ್ನು ಮಹಾಬಲಿಪುರಂಗೆ ಕರೆಸಿ ಮಾತುಕತೆ ನಡೆಸಲಾಗಿತ್ತು. ಆ ಮಾತುಕತೆಗಳ ಸಾರಾಂಶವೇ ಯಾವುದೇ ಗಡಿ ವಿವಾದಗಳನ್ನು ಏಕಪಕ್ಷೀಯವಾಗಿ ನಿರ್ಧರಿಸದೇ ಪರಸ್ಪರ ಮಾತುಕತೆ ಮೂಲಕ ಇತ್ಯರ್ಥ ಮಾಡಿಕೊಳ್ಳುವುದಾಗಿತ್ತು. ಆದರೆ ಈವರೆಗೂ ಕೇಂದ್ರ ಸರ್ಕಾರ ಚೀನಾ ಗಡಿ ವಿವಾದದ ವಿಚಾರವಾಗಿ ಯಾವುದೇ ಸ್ಪಷ್ಟ ಸಂದೇಶ ಕೊಟ್ಟಿಲ್ಲ. ಚೀನಾದೊಂದಿಗಿನ ಭಾರತದ ಸಂಬಂಧ ಏನು? ಭಾರತ ಚೀನಾ ಸಮಸ್ಯೆಗಳೇನು? ಅದರ ಪರಿಹಾರ ಹೇಗೆ ಕಂಡುಕೊಳ್ಳುವುದು. ಭಾರತ ಮತ್ತು ಚೀನಾದ ಸಮನ್ವಯ ಗುರಿಯೇನು? ಈವರೆಗೂ ವಿರೋಧ ಪಕ್ಷದವರನ್ನು ಟೀಕಿಸುವುದನ್ನು ಬಿಟ್ಟು, ಚುನಾವಣಾ ಪ್ರಚಾರದಲ್ಲಿ ಭಾಷಣ ಬಿಟ್ಟು ಒಂದು ಸಣ್ಣ ಪ್ರೆಸ್ ಕಾನ್ಫರೆನ್ಸ್ ಕೂಡ ಮಾಡದ ಪ್ರಧಾನಿಯವರಿಂದ ಉತ್ತರ ಪಡೆಯುವುದು ಹೇಗೆ?

ಪ್ರಪಂಚದ ಮೇಲೆ ಅಧಿಪತ್ಯ ಸಾಧಿಸಲು ಹೊರಟಿರುವ ಚೀನಾದ ಆಕ್ರಮಣಕಾರಿ ನೀತಿಯನ್ನು ಭಾರತ ಒಗ್ಗಟ್ಟಾಗಿ ಎದುರಿಸಲೇಬೇಕಿದೆ. ಅಂತಹ ಒಗ್ಗಟ್ಟನ್ನು ಖಾತರಿಪಡಿಸುವ ಜವಾಬ್ದಾರಿ ಒಕ್ಕೂಟ ಸರ್ಕಾರದ್ದಾಗಿದೆ. ಏಕೆಂದರೆ ಎಲ್ಲಕ್ಕೂ ಇನ್ಯಾರನ್ನೋ ದೂರುತ್ತಾ, ಸತ್ಯಸಂಗತಿಗಳನ್ನು ಮುಚ್ಚಿಡುವ ಅದರ ರೀತಿಯು ಆತಂಕವನ್ನು ಹೆಚ್ಚಿಸುತ್ತಾ ಹೋಗುತ್ತಿದೆ.

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...