Homeಕರ್ನಾಟಕರೋಹಿತ್‌ ಚಕ್ರತೀರ್ಥ ಆಯ್ಕೆಯ ಮಾನದಂಡಗಳೇನು?: ಬಹಿರಂಗ ಪತ್ರ ಬರೆದ ಶಿಕ್ಷಣ ತಜ್ಞರು

ರೋಹಿತ್‌ ಚಕ್ರತೀರ್ಥ ಆಯ್ಕೆಯ ಮಾನದಂಡಗಳೇನು?: ಬಹಿರಂಗ ಪತ್ರ ಬರೆದ ಶಿಕ್ಷಣ ತಜ್ಞರು

ಪಠ್ಯ ಪುಸ್ತಕ ರಚನೆ ಮತ್ತು ಪರಿಶೀಲನೆಗೆ, ಭಾರತದ ಚುನಾವಣಾ ಆಯೋಗದ ರೀತಿಯಲ್ಲೇ ಒಂದು ಸ್ವಾಯತ್ತ ಆಯೋಗ ರಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ

- Advertisement -
- Advertisement -

ಪಠ್ಯ ಪುಸ್ತಕಗಳನ್ನು ‘ಬ್ರಾಹ್ಮಣೀಕರಣ’ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರದ ನಿಲುವು ಹಾಗೂ ಪಠ್ಯಗಳನ್ನು ಪರಿಷ್ಕರಣೆ ಮಾಡಿರುವ ಬಲಪಂಥೀಯ ಲೇಖಕ ರೋಹಿತ್‌ ಚಕ್ರತೀರ್ಥ ಅವರ ಅರ್ಹತೆಗಳನ್ನು ಪ್ರಶ್ನಿಸಿ ರಾಜ್ಯದ ಶಿಕ್ಷಣ ತಜ್ಞರು, ಪ್ರಾಧ್ಯಾಪಕರುಗಳು, ಸಂಶೋಧಕರು, ಸಾಹಿತಿಗಳು ಹಾಗೂ ಹೋರಾಟಗಾರರು ಸೇರಿದಂತೆ ಹಲವು ಗಣ್ಯರು ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಶೀಲನೆಗೆ, ಭಾರತದ ಚುನಾವಣಾ ಆಯೋಗದ ರೀತಿಯಲ್ಲೇ ಒಂದು ಸ್ವಾಯತ್ತ ಆಯೋಗ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.

“ಶಿಕ್ಷಣ ತಜ್ಞರಲ್ಲದ, ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಬಗೆಯಲ್ಲಿ ಸಕ್ರಿಯವಾಗಿ ಸಂಶೋಧನೆ ಮಾಡಿಲ್ಲದ ಚಕ್ರತೀರ್ಥ ಅವರನ್ನು ಯಾವ ಮಾನದಂಡದಲ್ಲಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ? ಈ ಮುಖ್ಯ ಪ್ರಶ್ನೆಗೆ ಸಂಬಂಧಪಟ್ಟವರಿಂದ ಉತ್ತರವಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಈ ಸಮಿತಿಯು ಆರಂಭದಲ್ಲಿಯೇ ಆರನೇ ತರಗತಿಯ ಸಮಾಜ ವಿಜ್ಞಾನದ ಹೊಸ ಧರ್ಮಗಳ ಉದಯ ಎನ್ನುವ ಪಠ್ಯದಲ್ಲಿ ಜೈನ, ಬುದ್ಧದಮ್ಮಗಳ ಉದಯವಾದದ್ದು ಯಾಕೆ ಎಂದು ವಿವರಿಸುವ ಪಠ್ಯ ಭಾಗಗಳನ್ನು ತೆಗೆಯಬೇಕೆಂದು ಸೂಚನೆ ಮಾಡಿತ್ತು. ಮತ್ತು ಈ ಹೊಸ ಪರಿಷ್ಕರಣ ಸಮಿತಿಯ ಜವಾಬ್ದಾರಿ ಇದರಾಚೆಗೆ ಎಲ್ಲ ಪಠ್ಯ ಪುಸ್ತಕಗಳನ್ನು ಪರಿಶೀಲಿಸುವುದು ಎಂದೂ ಸಹ ವರದಿಯಾಗಿದೆ. ಅದರ ಮುಂದುವರೆದ ಭಾಗವಾಗಿ ಯಾವ ಮುನ್ಸೂಚನೆಯೂ ಇಲ್ಲದೇ, ಶಿಕ್ಷಣದ ಭಾಗೀದಾರರೊಂದಿಗೆ, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸದೇ ಏಕಪಕ್ಷೀಯವಾಗಿ 10 ನೇ ತರಗತಿಯ ಪಠ್ಯಗಳಲ್ಲಿ ಅನೇಕ ಬದಲಾವಣೆ ಮಾಡಿದೆ” ಎಂದು ಪತ್ರವೂ ಹೇಳಿದೆ.

ಇದನ್ನೂ ಓದಿ: ರಹಸ್ಯ ಕಾರ್ಯಸೂಚಿಗಳನ್ನು ಒಳಗೊಂಡ ನೂತನ ಪಠ್ಯಪುಸ್ತಕಗಳು ಬೇಕೆ?

ಪರಿಷ್ಕರಣೆಗೊಂಡಿರುವ ಪಠ್ಯ ಪುಸ್ತಕದಲ್ಲಿ ಪಿ. ಲಂಕೇಶ್‌ರ ‘ಮೃಗ ಮತ್ತು ಸುಂದರಿ’, ಡಾ.ಜಿ. ರಾಮಕೃಷ್ಣರ ‘ಭಗತಸಿಂಗ್’, ಸಾರಾ ಅಬೂಬಕರ್‌ರವರ ‘ಯುದ್ಧ’, ಎ.ಎನ್. ಮೂರ್ತಿರಾಯರ ‘ವ್ಯಾಘ್ರ ಕಥೆ’, ಶಿವ ಕೋಟ್ಯಾಚಾರ್ಯರ ‘ಸುಕುಮಾರ ಸ್ವಾಮಿ ಕಥೆ’ ಈ ಪಠ್ಯಗಳನ್ನು ಕೈ ಬಿಡಲಾಗಿದೆ ಎಂದು ಲಭ್ಯವಿರುವ ಪಿಡಿಎಫ್‌ಯಿಂದ ತಿಳಿದು ಬರುತ್ತದೆ. ಆದರೆ ಸರ್ಕಾರ ಮತ್ತು ಪರಿಷ್ಕರಣೆ ಸಮಿತಿ ಭಗತ್ ಸಿಂಗ್ ಪಠ್ಯವನ್ನು ಕೈಬಿಟ್ಟಿಲ್ಲವೆಂದು ಹೇಳಿಕೆ ನೀಡುತ್ತಲೆ ಬರುತ್ತಿದೆ.

“ಕೈ ಬಿಟ್ಟ ಪಠ್ಯ ಮತ್ತು ಸೇರ್ಪಡೆ ಮಾಡಿದ ಪಠ್ಯಗಳನ್ನು ನೋಡಿದರೆ, ಸಮಾಜದ ಪುರೋಗಾಮಿ ಅಬಿವೃದ್ದಿಗೆ ಪೂರಕವಲ್ಲದ, ಸನಾತನವಾದವನ್ನು ಎತ್ತಿ ಹಿಡಿಯುವ, ಆರ್.ಎಸ್.ಎಸ್ ಸಿದ್ದಾಂತಕ್ಕೆ ಬದ್ಧವಾದ ಎಲ್ಲ ಅಂಶಗಳೂ ಸ್ಪಷ್ಟವಾಗಿ ಕಾಣುತ್ತಿವೆ. ಶಿಕ್ಷಣ ಸಚಿವರು ಇನ್ನೂ ಪಠ್ಯ ಪುಸ್ತಕಗಳ ಮುದ್ರಣವೇ ಆಗಿಲ್ಲ ಇವೆಲ್ಲ ವದಂತಿ ಎಂದು ನಿರಾಕರಿಸಿದ್ದಾರೆಂದೂ ವರದಿಗಳಿವೆ. ನಿಯಮದಂತೆ ಮೇ 25 ರೊಳಗೆ ಪಠ್ಯ ಪುಸ್ತಕ ಪೂರೈಕೆ ಆಗಬೇಕು, ಆದರೆ ಇನ್ನೂ ವಿವಾದವನ್ನೇ ಇಟ್ಟುಕೊಂಡಿರುವ ಸರಕಾರ ಪುಸ್ತಕ ಪೂರೈಸಬಹುದೇ ಎಂಬ ಪ್ರಶ್ನೆಯೂ ಇದೆ” ಎಂದು ಪತ್ರ ಉಲ್ಲೇಖಿಸಿದೆ.

“ಕನ್ನಡ ನಾಡಿನ ಅಸ್ಮಿತೆ, ಕನ್ನಡ ಭಾಷೆಯ ಘನತೆಗಳನ್ನು ಗಾಳಿಗೆ ತೂರುವ ರೋಹಿತ್ ಚಕ್ರತೀರ್ಥರವರ ಸಮಿತಿ ಅದಕ್ಕೆ ಬದಲಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಲ್ಲೊಬ್ಬರಾದ ಹೆಡಗೆವಾರ್‌‌ರವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು’, ಬನ್ನಂಜೆ ಗೋವಿಂದಾಚಾರ್ಯರವರ ‘ಶುಕನಾಸನ ಉಪದೇಶ’, ಶತಾವಧಾನಿ ಗಣೇಶ್‌ರವರ ‘ಶ್ರೇಷ್ಠ ಭಾರತೀಯ ಚಿಂತನೆಗಳು’, ಶಿವಾನಂದ ಕಳವೆಯವರ ‘ಸ್ವದೇಶಿ ಸೂತ್ರದ ಸರಳ ಹಬ್ಬ’ ಪಠ್ಯಗಳನ್ನು ಸೇರಿಸಲಾಗಿದೆ” ಎಂದು ಪತ್ರ ಹೇಳಿದೆ.

ಇದನ್ನೂ ಓದಿ: ಪಠ್ಯಪುಸ್ತಕಗಳಿಗೂ ಪ್ರತಿಕ್ರಾಂತಿ; ಪಕ್ಷರಾಜಕೀಯಕ್ಕೆ ನೈಜ ಶಿಕ್ಷಣದ ಬಲಿ

“ಯಾವ ಕಾರಣಕ್ಕೆ ಕನ್ನಡದ ಪ್ರಮುಖ ಲೇಖಕ, ಲೇಖಕಿಯರ ಪಠ್ಯಗಳನ್ನು ಕೈ ಬಿಟ್ಟಿದ್ದಾರೆ ಎನ್ನುವುದಕ್ಕೆ ಯಾವುದೇ ಕಾರಣಗಳನ್ನು ಕೊಟ್ಟಿಲ್ಲ. ಹಾಗೆಯೇ ಹೆಡಗೇವಾರ್ ಅವರ ಭಾಷಣವನ್ನು ಸೇರಿಸುವುದರ ಕಾರಣ ಮಾತ್ರ ಹೇಳದೇ ಹೋದರೂ ಅರ್ಥವಾಗುತ್ತದೆ. ಒಟ್ಟಾರೆಯಾಗಿ ಇಲ್ಲಿ ಯಾವುದೇ ರೀತಿಯ ಪಾರದರ್ಶಕತೆ ಕಂಡು ಬರುತ್ತಿಲ್ಲ” ಎಂದು ಪತ್ರವು ಹೇಳಿದೆ.

ಪಠ್ಯ ಪುಸ್ತಕ ರಚನೆಯ ಸಂದರ್ಭದಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ಮೌಲ್ಯಗಳು, ನೀತಿಗಳು ಪ್ರಜಾತಾಂತ್ರಿಕತೆಗೆ ಪೂರಕವಾಗಿರಬೇಕು ಎಂದು ಹೇಳಿರುವ ಪತ್ರವೂ ಪಠ್ಯ ಪುಸ್ತಕಗಳನ್ನು ರಚನೆ ಮಾಡಲು ಬೇಕಾದ ಕೆಲವು ಮುಖ್ಯ ಮೌಲ್ಯಗಳನ್ನು, ನೀತಿ ನಿಯಮಗಳನ್ನು ಹೇಳಿದೆ.

  1. ಸರಕಾರಗಳು ಬದಲಾದಂತೆ ತಮ್ಮ ಸಿದ್ಧಾಂತಕ್ಕೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಬದಲಾಯಿಸುವ ಈ ಪರಿಪಾಠ ಸರಿಯಲ್ಲ.
  2. ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಷ್ಕರಣೆಯು ಸಂಪೂರ್ಣವಾಗಿ ಶಿಕ್ಷಣ ತಜ್ಞರ ಮೂಲಕ ಮಾತ್ರ ನಡೆಯಬೇಕು ಎನ್ನುವುದು ಇಲ್ಲಿನ ಪ್ರಜ್ಞಾವಂತರ ಆಶಯವಾಗಿದೆ. ಭಾರತದ ಚುನಾವಣಾ ಆಯೋಗದ ರೀತಿಯಲ್ಲಿ ಈ ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಶೀಲನೆಗೆ ಒಂದು ಸ್ವಾಯತ್ತ ಆಯೋಗ ರಚಿಸಬೇಕು ಮತ್ತು ಇದು ಸರಕಾರದ ನಿಯಂತ್ರಣದಲ್ಲಿ ಇರಬಾರದು ಎಂದು ಶಿಕ್ಷಣ ತಜ್ಞರು ಅಭಿಪ್ರಾಯ ಪಡುತ್ತಾರೆ.
  3. ಯಾವುದೇ ಪೂರ್ವಾಲೋಚನೆ ಇಲ್ಲದೇ ಶಿಕ್ಷಣ ತಜ್ಞರು, ವಿಷಯ ತಜ್ಞರುಗಳ ಜೊತೆ, ಹಿಂದಿನ ಪರಿಷ್ಕರಣಾ ಸಮಿತಿಯ ಅಧ್ಯಕ್ಷರ ಜೊತೆ ಸಮಾಲೋಚಿಸದೇ, ತನ್ನ ಹಿಂದುತ್ವ ಸಿದ್ಧಾಂತಕ್ಕೆ ಬದ್ಧರಾಗಿರುವವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಅವರ ಮೂಲಕ ಪಠ್ಯಪುಸ್ತಕಗಳ ಬದಲಾವಣೆಗೆ ಮುಂದಾಗಿರುವುದು ನಮ್ಮ ಆತಂಕಕ್ಕೆ ಕಾರಣ.
  4. ಪಠ್ಯ ಪುಸ್ತಕ ರಚನಾ ಸಮಿತಿ, ಪರಿಷ್ಕರಣಾ ಸಮಿತಿಗಳಿಗೆ ಅದರದೇ ಆದ ಮಾನದಂಡಗಳಿರುತ್ತವೆ. ಅದರ ಅಧ್ಯಕ್ಷರು ಮತ್ತು ಸದಸ್ಯರು ಶಿಕ್ಷಣ ತಜ್ಞರಾಗಿರಬೇಕು. ಸಮಿತಿಯ ರಚನೆಯಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸಬೇಕು. ಮುಖ್ಯವಾಗಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಅದು ಕನ್ನಡದ ಅಸ್ಮಿತೆಗೆ ಪೂರಕವಾಗಿದ್ದು, ಇಲ್ಲಿನ ಬಹು ಸಂಸ್ಕೃತಿಯ ಆಶಯಗಳನ್ನು ಪ್ರತಿನಿಧಿಸುವಂತಿರಬೇಕು. ವೈಜ್ಞಾನಿಕ ಮನೋಧರ್ಮ, ವೈಚಾರಿಕತೆ, ಆಧುನಿಕ ಪ್ರಜ್ಞೆ, ಜಾತ್ಯಾತೀತ ತತ್ವಗಳಿಗೆ ಬದ್ಧವಾಗಿರಬೇಕು. ಸಾಮಾಜಿಕ ಸಾಮರಸ್ಯ, ನೈತಿಕತೆ, ವ್ಯಕ್ತಿತ್ವ ವಿಕಸನಕ್ಕೆ ಅನುವಾಗುವಂತೆ ಪಠ್ಯಪುಸ್ತಕಗಳನ್ನು ರೂಪಿಸಬೇಕು.
  5. ಸಂವಿಧಾನದ ಆಶಯಗಳ ಅನುಸಾರ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ರೂಪಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪಠ್ಯಕ್ರಮ ರೂಪಿಸಬೇಕು.
  6. ಪಠ್ಯಗಳನ್ನು ಆಯ್ಕೆ ಮಾಡುವಾಗ ಲಿಂಗತ್ವ ಅಸಮಾನತೆ, ಪ್ರಾದೇಶಿಕ ಅಸಮಾನತೆಯನ್ನು ತಪ್ಪಿಸಬೇಕು. ಸಾಮಾಜಿಕ ನ್ಯಾಯದ ತತ್ವ ಪಾಲನೆಯಾಗಬೇಕು.
  7. ತರಗತಿಗಳ ಮಕ್ಕಳ ವಯೋಮಾನವನ್ನು ಆಧರಿಸಿ ಪಠ್ಯಗಳನ್ನು ಆಯ್ಕೆ ಮಾಡಬೇಕು.
  8. ಪಠ್ಯಕ್ರಮವು ಕನ್ನಡ ಭಾಷೆಯ ಎಲ್ಲಾ ಸಾಹಿತ್ಯ ಪರಂಪರೆಯನ್ನು ಪ್ರತಿನಿಧಿಸಬೇಕು.
  9. ಮುಖ್ಯವಾಗಿ ಮಕ್ಕಳ ನಡುವೆ ದ್ವೇಷವನ್ನು ಬಿತ್ತುವಂತಹ, ದೇಶ, ಸಂವಿಧಾನ, ರಾಷ್ಟ್ರದ ಬಾವುಟಕ್ಕೆ ಅವಮಾನ ಮಾಡುವ ಪಠ್ಯಗಳನ್ನು ಯಾವುದೇ ಕಾರಣಕ್ಕೂ ಆಯ್ಕೆ ಮಾಡಬಾರದು. ಜಾತೀಯತೆಯನ್ನು ಪೋಷಿಸುವಂತಹ ಪಠ್ಯಗಳನ್ನು ಆಯ್ಕೆ ಮಾಡಬಾರದು.
  10. ಪಠ್ಯ ಪುಸ್ತಕಗಳ ಪರಿಷ್ಕರಣೆಯು ಪ್ರಜಾಸತ್ತಾತ್ಮಕವಾಗಿರಬೇಕು.
  11. ಮಕ್ಕಳ ಮೇಲೆ ಯಾವುದೇ ರಾಜಕೀಯ, ಧಾರ್ಮಿಕ ಸಿದ್ಧಾಂತಗಳನ್ನು ಹೇರುವ ಪಠ್ಯಗಳನ್ನು ಆಯ್ಕೆ ಮಾಡಬಾರದು.

ರೋಹಿತ್ ಚಕ್ರತೀರ್ಥರ ಅಧ್ಯಕ್ಷತೆಯ ಈ ಪಠ್ಯಪುಸ್ತಕ ಪರಿಷ್ಕರಣೆಯ ಸಮಿತಿಯು ಯಾವುದೇ ಮೌಲ್ಯಗಳನ್ನು , ನೀತಿ ನಿಯಮಗಳನ್ನು ಪಾಲನೆ ಮಾಡಿಲ್ಲ ಎಂದು ಆರೋಪಿಸಿರುವ ಪತ್ರ, ಹಲವು ಪಠ್ಯಗಳನ್ನು ಕೈ ಬಿಟ್ಟಿದ್ದೇಕೆ ಎಂದು ಕೇಳಿದಾಗ ಶಿಕ್ಷಣ ಸಚಿವರಿಂದ ಉತ್ತರವೇ ಇಲ್ಲ. ಹಾಗಾಗಿ ಅದು ಪೂರ್ವಗ್ರಹಪೀಡಿತವಾಗಿದೆ ಎಂದು ತಿಳಿದಿದೆ.

ಇದನ್ನೂ ಓದಿ: ಸ್ವಾಮಿ ವಿವೇಕಾನಂದರ ಚಿಂತನೆಗಳ ತಿರುಚುವಿಕೆ: ಪ್ರಗತಿಪರ ವಿಚಾರ ಕೈಬಿಟ್ಟು, ಶಾಸ್ತ್ರ, ವೇದಾಂತ ಹೇರಿದ ನೂತನ ಪಠ್ಯ ಸಮಿತಿ

“ಆರ್.ಎಸ್.ಎಸ್‌ನ ಹಿಂದುತ್ವ ಸಿದ್ಧಾಂತವನ್ನು ರೂಪಿಸಿದ ಹೆಡಗೇವಾರ್ ಅವರ ಭಾಷಣವನ್ನು ಸೇರಿಸುವ ಔಚಿತ್ಯವೇನು ಎಂಬುದಕ್ಕೆ ಯಾವುದೇ ಸ್ಪಷ್ಟೀಕರಣವಿಲ. ಬದಲಿಗೆ ಹೆಡಗೇವಾರ್ ಭಾಷಣ ಸೇರಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಒಬ್ಬ ಜವಾಬ್ದಾರಿಯುತ ಸಚಿವರಾಗಿ ಈ ವಿಷಯದಲ್ಲಿ ಸಂವಿಧಾನಕ್ಕೆ ಬದ್ಧರಾಗಿ ನಡೆದುಕೊಂಡಿಲ್ಲ” ಎಂದು ಪತ್ರವೂ ಹೇಳಿದ್ದು, ಸಚಿವರ ವರ್ತನೆಯು ಇದು ಪ್ರಶ್ನಾರ್ಹವಾಗಿದೆ ಎಂದು ತಿಳಿಸಿದೆ.

“ಇದೇ ಪದ್ಧತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಗೋಡ್ಸೆ ಕುರಿತಾದ ಆಧ್ಯಾಯವನ್ನು ಸೇರಿಸುವ ದಿನಗಳು ದೂರವಿಲ್ಲ” ಎಂದು ಆತಂಕ ವ್ಯಕ್ತಪಡಿಸಿರುವ ಪತ್ರವು, ಈ ಬದಲಾವಣೆ ಕುರಿತು ಸ್ಪಷ್ಟೀಕರಣ ಕೇಳಿದಾಗ ಆರ್.ಎಸ್.ಎಸ್ ಸಿದ್ಧಾಂತದಲ್ಲಿ ನಂಬಿಕೆ, ಗೌರವವಿದೆ ಎಂದು ಹೇಳಿಕೊಳ್ಳುತ್ತಿರುವ ರೋಹಿತ್ ಚಕ್ರತೀರ್ಥರವರು ಉಡಾಫೆಯಲ್ಲಿ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

ಹೊಸ ಪರಿಷ್ಕರಣೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು. ಶಿಕ್ಷಣ ತಜ್ಞರು ಹಾಗೂ ಭಾಗೀದಾರರೊಂದಿಗೆ ಸಮಾಲೋಚನೆ ನಡೆಸುವ ಕ್ರಮ ಅಳವಡಿಕೆಯಾಗಬೇಕು. ಕನ್ನಡದ ಅಸ್ಮಿತೆಯ, ಘನತೆ ಹಾಗೂ ಪ್ರಾದೇಶಿಕ ಆಶೋತ್ತರಗಳಿಗೆ ಕುಂದು ತರಬಾರದು ಎಂದು ಪತ್ರವೂ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...