Homeಕರ್ನಾಟಕರೋಹಿತ್‌ ಚಕ್ರತೀರ್ಥ ಆಯ್ಕೆಯ ಮಾನದಂಡಗಳೇನು?: ಬಹಿರಂಗ ಪತ್ರ ಬರೆದ ಶಿಕ್ಷಣ ತಜ್ಞರು

ರೋಹಿತ್‌ ಚಕ್ರತೀರ್ಥ ಆಯ್ಕೆಯ ಮಾನದಂಡಗಳೇನು?: ಬಹಿರಂಗ ಪತ್ರ ಬರೆದ ಶಿಕ್ಷಣ ತಜ್ಞರು

ಪಠ್ಯ ಪುಸ್ತಕ ರಚನೆ ಮತ್ತು ಪರಿಶೀಲನೆಗೆ, ಭಾರತದ ಚುನಾವಣಾ ಆಯೋಗದ ರೀತಿಯಲ್ಲೇ ಒಂದು ಸ್ವಾಯತ್ತ ಆಯೋಗ ರಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ

- Advertisement -
- Advertisement -

ಪಠ್ಯ ಪುಸ್ತಕಗಳನ್ನು ‘ಬ್ರಾಹ್ಮಣೀಕರಣ’ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರದ ನಿಲುವು ಹಾಗೂ ಪಠ್ಯಗಳನ್ನು ಪರಿಷ್ಕರಣೆ ಮಾಡಿರುವ ಬಲಪಂಥೀಯ ಲೇಖಕ ರೋಹಿತ್‌ ಚಕ್ರತೀರ್ಥ ಅವರ ಅರ್ಹತೆಗಳನ್ನು ಪ್ರಶ್ನಿಸಿ ರಾಜ್ಯದ ಶಿಕ್ಷಣ ತಜ್ಞರು, ಪ್ರಾಧ್ಯಾಪಕರುಗಳು, ಸಂಶೋಧಕರು, ಸಾಹಿತಿಗಳು ಹಾಗೂ ಹೋರಾಟಗಾರರು ಸೇರಿದಂತೆ ಹಲವು ಗಣ್ಯರು ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಶೀಲನೆಗೆ, ಭಾರತದ ಚುನಾವಣಾ ಆಯೋಗದ ರೀತಿಯಲ್ಲೇ ಒಂದು ಸ್ವಾಯತ್ತ ಆಯೋಗ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.

“ಶಿಕ್ಷಣ ತಜ್ಞರಲ್ಲದ, ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಬಗೆಯಲ್ಲಿ ಸಕ್ರಿಯವಾಗಿ ಸಂಶೋಧನೆ ಮಾಡಿಲ್ಲದ ಚಕ್ರತೀರ್ಥ ಅವರನ್ನು ಯಾವ ಮಾನದಂಡದಲ್ಲಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ? ಈ ಮುಖ್ಯ ಪ್ರಶ್ನೆಗೆ ಸಂಬಂಧಪಟ್ಟವರಿಂದ ಉತ್ತರವಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಈ ಸಮಿತಿಯು ಆರಂಭದಲ್ಲಿಯೇ ಆರನೇ ತರಗತಿಯ ಸಮಾಜ ವಿಜ್ಞಾನದ ಹೊಸ ಧರ್ಮಗಳ ಉದಯ ಎನ್ನುವ ಪಠ್ಯದಲ್ಲಿ ಜೈನ, ಬುದ್ಧದಮ್ಮಗಳ ಉದಯವಾದದ್ದು ಯಾಕೆ ಎಂದು ವಿವರಿಸುವ ಪಠ್ಯ ಭಾಗಗಳನ್ನು ತೆಗೆಯಬೇಕೆಂದು ಸೂಚನೆ ಮಾಡಿತ್ತು. ಮತ್ತು ಈ ಹೊಸ ಪರಿಷ್ಕರಣ ಸಮಿತಿಯ ಜವಾಬ್ದಾರಿ ಇದರಾಚೆಗೆ ಎಲ್ಲ ಪಠ್ಯ ಪುಸ್ತಕಗಳನ್ನು ಪರಿಶೀಲಿಸುವುದು ಎಂದೂ ಸಹ ವರದಿಯಾಗಿದೆ. ಅದರ ಮುಂದುವರೆದ ಭಾಗವಾಗಿ ಯಾವ ಮುನ್ಸೂಚನೆಯೂ ಇಲ್ಲದೇ, ಶಿಕ್ಷಣದ ಭಾಗೀದಾರರೊಂದಿಗೆ, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸದೇ ಏಕಪಕ್ಷೀಯವಾಗಿ 10 ನೇ ತರಗತಿಯ ಪಠ್ಯಗಳಲ್ಲಿ ಅನೇಕ ಬದಲಾವಣೆ ಮಾಡಿದೆ” ಎಂದು ಪತ್ರವೂ ಹೇಳಿದೆ.

ಇದನ್ನೂ ಓದಿ: ರಹಸ್ಯ ಕಾರ್ಯಸೂಚಿಗಳನ್ನು ಒಳಗೊಂಡ ನೂತನ ಪಠ್ಯಪುಸ್ತಕಗಳು ಬೇಕೆ?

ಪರಿಷ್ಕರಣೆಗೊಂಡಿರುವ ಪಠ್ಯ ಪುಸ್ತಕದಲ್ಲಿ ಪಿ. ಲಂಕೇಶ್‌ರ ‘ಮೃಗ ಮತ್ತು ಸುಂದರಿ’, ಡಾ.ಜಿ. ರಾಮಕೃಷ್ಣರ ‘ಭಗತಸಿಂಗ್’, ಸಾರಾ ಅಬೂಬಕರ್‌ರವರ ‘ಯುದ್ಧ’, ಎ.ಎನ್. ಮೂರ್ತಿರಾಯರ ‘ವ್ಯಾಘ್ರ ಕಥೆ’, ಶಿವ ಕೋಟ್ಯಾಚಾರ್ಯರ ‘ಸುಕುಮಾರ ಸ್ವಾಮಿ ಕಥೆ’ ಈ ಪಠ್ಯಗಳನ್ನು ಕೈ ಬಿಡಲಾಗಿದೆ ಎಂದು ಲಭ್ಯವಿರುವ ಪಿಡಿಎಫ್‌ಯಿಂದ ತಿಳಿದು ಬರುತ್ತದೆ. ಆದರೆ ಸರ್ಕಾರ ಮತ್ತು ಪರಿಷ್ಕರಣೆ ಸಮಿತಿ ಭಗತ್ ಸಿಂಗ್ ಪಠ್ಯವನ್ನು ಕೈಬಿಟ್ಟಿಲ್ಲವೆಂದು ಹೇಳಿಕೆ ನೀಡುತ್ತಲೆ ಬರುತ್ತಿದೆ.

“ಕೈ ಬಿಟ್ಟ ಪಠ್ಯ ಮತ್ತು ಸೇರ್ಪಡೆ ಮಾಡಿದ ಪಠ್ಯಗಳನ್ನು ನೋಡಿದರೆ, ಸಮಾಜದ ಪುರೋಗಾಮಿ ಅಬಿವೃದ್ದಿಗೆ ಪೂರಕವಲ್ಲದ, ಸನಾತನವಾದವನ್ನು ಎತ್ತಿ ಹಿಡಿಯುವ, ಆರ್.ಎಸ್.ಎಸ್ ಸಿದ್ದಾಂತಕ್ಕೆ ಬದ್ಧವಾದ ಎಲ್ಲ ಅಂಶಗಳೂ ಸ್ಪಷ್ಟವಾಗಿ ಕಾಣುತ್ತಿವೆ. ಶಿಕ್ಷಣ ಸಚಿವರು ಇನ್ನೂ ಪಠ್ಯ ಪುಸ್ತಕಗಳ ಮುದ್ರಣವೇ ಆಗಿಲ್ಲ ಇವೆಲ್ಲ ವದಂತಿ ಎಂದು ನಿರಾಕರಿಸಿದ್ದಾರೆಂದೂ ವರದಿಗಳಿವೆ. ನಿಯಮದಂತೆ ಮೇ 25 ರೊಳಗೆ ಪಠ್ಯ ಪುಸ್ತಕ ಪೂರೈಕೆ ಆಗಬೇಕು, ಆದರೆ ಇನ್ನೂ ವಿವಾದವನ್ನೇ ಇಟ್ಟುಕೊಂಡಿರುವ ಸರಕಾರ ಪುಸ್ತಕ ಪೂರೈಸಬಹುದೇ ಎಂಬ ಪ್ರಶ್ನೆಯೂ ಇದೆ” ಎಂದು ಪತ್ರ ಉಲ್ಲೇಖಿಸಿದೆ.

“ಕನ್ನಡ ನಾಡಿನ ಅಸ್ಮಿತೆ, ಕನ್ನಡ ಭಾಷೆಯ ಘನತೆಗಳನ್ನು ಗಾಳಿಗೆ ತೂರುವ ರೋಹಿತ್ ಚಕ್ರತೀರ್ಥರವರ ಸಮಿತಿ ಅದಕ್ಕೆ ಬದಲಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಲ್ಲೊಬ್ಬರಾದ ಹೆಡಗೆವಾರ್‌‌ರವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು’, ಬನ್ನಂಜೆ ಗೋವಿಂದಾಚಾರ್ಯರವರ ‘ಶುಕನಾಸನ ಉಪದೇಶ’, ಶತಾವಧಾನಿ ಗಣೇಶ್‌ರವರ ‘ಶ್ರೇಷ್ಠ ಭಾರತೀಯ ಚಿಂತನೆಗಳು’, ಶಿವಾನಂದ ಕಳವೆಯವರ ‘ಸ್ವದೇಶಿ ಸೂತ್ರದ ಸರಳ ಹಬ್ಬ’ ಪಠ್ಯಗಳನ್ನು ಸೇರಿಸಲಾಗಿದೆ” ಎಂದು ಪತ್ರ ಹೇಳಿದೆ.

ಇದನ್ನೂ ಓದಿ: ಪಠ್ಯಪುಸ್ತಕಗಳಿಗೂ ಪ್ರತಿಕ್ರಾಂತಿ; ಪಕ್ಷರಾಜಕೀಯಕ್ಕೆ ನೈಜ ಶಿಕ್ಷಣದ ಬಲಿ

“ಯಾವ ಕಾರಣಕ್ಕೆ ಕನ್ನಡದ ಪ್ರಮುಖ ಲೇಖಕ, ಲೇಖಕಿಯರ ಪಠ್ಯಗಳನ್ನು ಕೈ ಬಿಟ್ಟಿದ್ದಾರೆ ಎನ್ನುವುದಕ್ಕೆ ಯಾವುದೇ ಕಾರಣಗಳನ್ನು ಕೊಟ್ಟಿಲ್ಲ. ಹಾಗೆಯೇ ಹೆಡಗೇವಾರ್ ಅವರ ಭಾಷಣವನ್ನು ಸೇರಿಸುವುದರ ಕಾರಣ ಮಾತ್ರ ಹೇಳದೇ ಹೋದರೂ ಅರ್ಥವಾಗುತ್ತದೆ. ಒಟ್ಟಾರೆಯಾಗಿ ಇಲ್ಲಿ ಯಾವುದೇ ರೀತಿಯ ಪಾರದರ್ಶಕತೆ ಕಂಡು ಬರುತ್ತಿಲ್ಲ” ಎಂದು ಪತ್ರವು ಹೇಳಿದೆ.

ಪಠ್ಯ ಪುಸ್ತಕ ರಚನೆಯ ಸಂದರ್ಭದಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ಮೌಲ್ಯಗಳು, ನೀತಿಗಳು ಪ್ರಜಾತಾಂತ್ರಿಕತೆಗೆ ಪೂರಕವಾಗಿರಬೇಕು ಎಂದು ಹೇಳಿರುವ ಪತ್ರವೂ ಪಠ್ಯ ಪುಸ್ತಕಗಳನ್ನು ರಚನೆ ಮಾಡಲು ಬೇಕಾದ ಕೆಲವು ಮುಖ್ಯ ಮೌಲ್ಯಗಳನ್ನು, ನೀತಿ ನಿಯಮಗಳನ್ನು ಹೇಳಿದೆ.

  1. ಸರಕಾರಗಳು ಬದಲಾದಂತೆ ತಮ್ಮ ಸಿದ್ಧಾಂತಕ್ಕೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಬದಲಾಯಿಸುವ ಈ ಪರಿಪಾಠ ಸರಿಯಲ್ಲ.
  2. ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಷ್ಕರಣೆಯು ಸಂಪೂರ್ಣವಾಗಿ ಶಿಕ್ಷಣ ತಜ್ಞರ ಮೂಲಕ ಮಾತ್ರ ನಡೆಯಬೇಕು ಎನ್ನುವುದು ಇಲ್ಲಿನ ಪ್ರಜ್ಞಾವಂತರ ಆಶಯವಾಗಿದೆ. ಭಾರತದ ಚುನಾವಣಾ ಆಯೋಗದ ರೀತಿಯಲ್ಲಿ ಈ ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಶೀಲನೆಗೆ ಒಂದು ಸ್ವಾಯತ್ತ ಆಯೋಗ ರಚಿಸಬೇಕು ಮತ್ತು ಇದು ಸರಕಾರದ ನಿಯಂತ್ರಣದಲ್ಲಿ ಇರಬಾರದು ಎಂದು ಶಿಕ್ಷಣ ತಜ್ಞರು ಅಭಿಪ್ರಾಯ ಪಡುತ್ತಾರೆ.
  3. ಯಾವುದೇ ಪೂರ್ವಾಲೋಚನೆ ಇಲ್ಲದೇ ಶಿಕ್ಷಣ ತಜ್ಞರು, ವಿಷಯ ತಜ್ಞರುಗಳ ಜೊತೆ, ಹಿಂದಿನ ಪರಿಷ್ಕರಣಾ ಸಮಿತಿಯ ಅಧ್ಯಕ್ಷರ ಜೊತೆ ಸಮಾಲೋಚಿಸದೇ, ತನ್ನ ಹಿಂದುತ್ವ ಸಿದ್ಧಾಂತಕ್ಕೆ ಬದ್ಧರಾಗಿರುವವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಅವರ ಮೂಲಕ ಪಠ್ಯಪುಸ್ತಕಗಳ ಬದಲಾವಣೆಗೆ ಮುಂದಾಗಿರುವುದು ನಮ್ಮ ಆತಂಕಕ್ಕೆ ಕಾರಣ.
  4. ಪಠ್ಯ ಪುಸ್ತಕ ರಚನಾ ಸಮಿತಿ, ಪರಿಷ್ಕರಣಾ ಸಮಿತಿಗಳಿಗೆ ಅದರದೇ ಆದ ಮಾನದಂಡಗಳಿರುತ್ತವೆ. ಅದರ ಅಧ್ಯಕ್ಷರು ಮತ್ತು ಸದಸ್ಯರು ಶಿಕ್ಷಣ ತಜ್ಞರಾಗಿರಬೇಕು. ಸಮಿತಿಯ ರಚನೆಯಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸಬೇಕು. ಮುಖ್ಯವಾಗಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಅದು ಕನ್ನಡದ ಅಸ್ಮಿತೆಗೆ ಪೂರಕವಾಗಿದ್ದು, ಇಲ್ಲಿನ ಬಹು ಸಂಸ್ಕೃತಿಯ ಆಶಯಗಳನ್ನು ಪ್ರತಿನಿಧಿಸುವಂತಿರಬೇಕು. ವೈಜ್ಞಾನಿಕ ಮನೋಧರ್ಮ, ವೈಚಾರಿಕತೆ, ಆಧುನಿಕ ಪ್ರಜ್ಞೆ, ಜಾತ್ಯಾತೀತ ತತ್ವಗಳಿಗೆ ಬದ್ಧವಾಗಿರಬೇಕು. ಸಾಮಾಜಿಕ ಸಾಮರಸ್ಯ, ನೈತಿಕತೆ, ವ್ಯಕ್ತಿತ್ವ ವಿಕಸನಕ್ಕೆ ಅನುವಾಗುವಂತೆ ಪಠ್ಯಪುಸ್ತಕಗಳನ್ನು ರೂಪಿಸಬೇಕು.
  5. ಸಂವಿಧಾನದ ಆಶಯಗಳ ಅನುಸಾರ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ರೂಪಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪಠ್ಯಕ್ರಮ ರೂಪಿಸಬೇಕು.
  6. ಪಠ್ಯಗಳನ್ನು ಆಯ್ಕೆ ಮಾಡುವಾಗ ಲಿಂಗತ್ವ ಅಸಮಾನತೆ, ಪ್ರಾದೇಶಿಕ ಅಸಮಾನತೆಯನ್ನು ತಪ್ಪಿಸಬೇಕು. ಸಾಮಾಜಿಕ ನ್ಯಾಯದ ತತ್ವ ಪಾಲನೆಯಾಗಬೇಕು.
  7. ತರಗತಿಗಳ ಮಕ್ಕಳ ವಯೋಮಾನವನ್ನು ಆಧರಿಸಿ ಪಠ್ಯಗಳನ್ನು ಆಯ್ಕೆ ಮಾಡಬೇಕು.
  8. ಪಠ್ಯಕ್ರಮವು ಕನ್ನಡ ಭಾಷೆಯ ಎಲ್ಲಾ ಸಾಹಿತ್ಯ ಪರಂಪರೆಯನ್ನು ಪ್ರತಿನಿಧಿಸಬೇಕು.
  9. ಮುಖ್ಯವಾಗಿ ಮಕ್ಕಳ ನಡುವೆ ದ್ವೇಷವನ್ನು ಬಿತ್ತುವಂತಹ, ದೇಶ, ಸಂವಿಧಾನ, ರಾಷ್ಟ್ರದ ಬಾವುಟಕ್ಕೆ ಅವಮಾನ ಮಾಡುವ ಪಠ್ಯಗಳನ್ನು ಯಾವುದೇ ಕಾರಣಕ್ಕೂ ಆಯ್ಕೆ ಮಾಡಬಾರದು. ಜಾತೀಯತೆಯನ್ನು ಪೋಷಿಸುವಂತಹ ಪಠ್ಯಗಳನ್ನು ಆಯ್ಕೆ ಮಾಡಬಾರದು.
  10. ಪಠ್ಯ ಪುಸ್ತಕಗಳ ಪರಿಷ್ಕರಣೆಯು ಪ್ರಜಾಸತ್ತಾತ್ಮಕವಾಗಿರಬೇಕು.
  11. ಮಕ್ಕಳ ಮೇಲೆ ಯಾವುದೇ ರಾಜಕೀಯ, ಧಾರ್ಮಿಕ ಸಿದ್ಧಾಂತಗಳನ್ನು ಹೇರುವ ಪಠ್ಯಗಳನ್ನು ಆಯ್ಕೆ ಮಾಡಬಾರದು.

ರೋಹಿತ್ ಚಕ್ರತೀರ್ಥರ ಅಧ್ಯಕ್ಷತೆಯ ಈ ಪಠ್ಯಪುಸ್ತಕ ಪರಿಷ್ಕರಣೆಯ ಸಮಿತಿಯು ಯಾವುದೇ ಮೌಲ್ಯಗಳನ್ನು , ನೀತಿ ನಿಯಮಗಳನ್ನು ಪಾಲನೆ ಮಾಡಿಲ್ಲ ಎಂದು ಆರೋಪಿಸಿರುವ ಪತ್ರ, ಹಲವು ಪಠ್ಯಗಳನ್ನು ಕೈ ಬಿಟ್ಟಿದ್ದೇಕೆ ಎಂದು ಕೇಳಿದಾಗ ಶಿಕ್ಷಣ ಸಚಿವರಿಂದ ಉತ್ತರವೇ ಇಲ್ಲ. ಹಾಗಾಗಿ ಅದು ಪೂರ್ವಗ್ರಹಪೀಡಿತವಾಗಿದೆ ಎಂದು ತಿಳಿದಿದೆ.

ಇದನ್ನೂ ಓದಿ: ಸ್ವಾಮಿ ವಿವೇಕಾನಂದರ ಚಿಂತನೆಗಳ ತಿರುಚುವಿಕೆ: ಪ್ರಗತಿಪರ ವಿಚಾರ ಕೈಬಿಟ್ಟು, ಶಾಸ್ತ್ರ, ವೇದಾಂತ ಹೇರಿದ ನೂತನ ಪಠ್ಯ ಸಮಿತಿ

“ಆರ್.ಎಸ್.ಎಸ್‌ನ ಹಿಂದುತ್ವ ಸಿದ್ಧಾಂತವನ್ನು ರೂಪಿಸಿದ ಹೆಡಗೇವಾರ್ ಅವರ ಭಾಷಣವನ್ನು ಸೇರಿಸುವ ಔಚಿತ್ಯವೇನು ಎಂಬುದಕ್ಕೆ ಯಾವುದೇ ಸ್ಪಷ್ಟೀಕರಣವಿಲ. ಬದಲಿಗೆ ಹೆಡಗೇವಾರ್ ಭಾಷಣ ಸೇರಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಒಬ್ಬ ಜವಾಬ್ದಾರಿಯುತ ಸಚಿವರಾಗಿ ಈ ವಿಷಯದಲ್ಲಿ ಸಂವಿಧಾನಕ್ಕೆ ಬದ್ಧರಾಗಿ ನಡೆದುಕೊಂಡಿಲ್ಲ” ಎಂದು ಪತ್ರವೂ ಹೇಳಿದ್ದು, ಸಚಿವರ ವರ್ತನೆಯು ಇದು ಪ್ರಶ್ನಾರ್ಹವಾಗಿದೆ ಎಂದು ತಿಳಿಸಿದೆ.

“ಇದೇ ಪದ್ಧತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಗೋಡ್ಸೆ ಕುರಿತಾದ ಆಧ್ಯಾಯವನ್ನು ಸೇರಿಸುವ ದಿನಗಳು ದೂರವಿಲ್ಲ” ಎಂದು ಆತಂಕ ವ್ಯಕ್ತಪಡಿಸಿರುವ ಪತ್ರವು, ಈ ಬದಲಾವಣೆ ಕುರಿತು ಸ್ಪಷ್ಟೀಕರಣ ಕೇಳಿದಾಗ ಆರ್.ಎಸ್.ಎಸ್ ಸಿದ್ಧಾಂತದಲ್ಲಿ ನಂಬಿಕೆ, ಗೌರವವಿದೆ ಎಂದು ಹೇಳಿಕೊಳ್ಳುತ್ತಿರುವ ರೋಹಿತ್ ಚಕ್ರತೀರ್ಥರವರು ಉಡಾಫೆಯಲ್ಲಿ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

ಹೊಸ ಪರಿಷ್ಕರಣೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು. ಶಿಕ್ಷಣ ತಜ್ಞರು ಹಾಗೂ ಭಾಗೀದಾರರೊಂದಿಗೆ ಸಮಾಲೋಚನೆ ನಡೆಸುವ ಕ್ರಮ ಅಳವಡಿಕೆಯಾಗಬೇಕು. ಕನ್ನಡದ ಅಸ್ಮಿತೆಯ, ಘನತೆ ಹಾಗೂ ಪ್ರಾದೇಶಿಕ ಆಶೋತ್ತರಗಳಿಗೆ ಕುಂದು ತರಬಾರದು ಎಂದು ಪತ್ರವೂ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...