Homeಮುಖಪುಟ'ದಿಲ್ಲಿ ಚಲೋ': ಈಡೇರದೆ ಉಳಿದಿರುವ ರೈತರ ಪ್ರಮುಖ ಬೇಡಿಕೆಗಳೇನು?

‘ದಿಲ್ಲಿ ಚಲೋ’: ಈಡೇರದೆ ಉಳಿದಿರುವ ರೈತರ ಪ್ರಮುಖ ಬೇಡಿಕೆಗಳೇನು?

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಹಲವು ರಾಜ್ಯಗಳ ರೈತರು ಇಂದು (ಫೆ.13) ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ರೈತರ ಬೇಡಿಕೆಗಳಲ್ಲಿ ‘ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು’ ಪ್ರಮುಖವಾಗಿದೆ.

ರೈತರ ಇತರ ಬೇಡಿಕೆಗಳೆಂದರೆ, ವಿದ್ಯುತ್ ಕಾಯ್ದೆ 2020ರ ರದ್ದತಿ, ಲಖಿಂಪುರ ಖೇರಿಯಲ್ಲಿ ಸಾವನ್ನಪ್ಪಿದ ರೈತರಿಗೆ ಪರಿಹಾರ ಮತ್ತು ರೈತ ಚಳವಳಿಯಲ್ಲಿ ತೊಡಗಿರುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದಾಗಿದೆ.

ಸೋಮವಾರ (ಫೆ.12) ಮಧ್ಯರಾತ್ರಿಯವರೆಗೆ ರೈತ ಮುಖಂಡರ ಜೊತೆಗೆ ಚಂಡೀಗಢದಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಮತ್ತು ಕೃಷಿ ಸಚಿವ ಅರ್ಜುನ್ ಮುಂಡಾ ಸಭೆ ನಡೆಸಿದ್ದು, ವಿದ್ಯುತ್ ಕಾಯ್ದೆ 2020 ರದ್ದತಿ, ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಮತ್ತು ರೈತರ ಚಳವಳಿಯ ಸಂದರ್ಭಗಳಲ್ಲಿ ದಾಖಲಾದ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಒಂದು ಒಪ್ಪಂದಕ್ಕೆ ಬಂದಿದ್ದಾರೆ.

ಆದರೆ, ರೈತರ ಮೂರು ಪ್ರಮುಖ ಬೇಡಿಕೆಗಳಾದ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು, ರೈತರ ಸಾಲ ಮನ್ನಾ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನದ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ.

2020-21ರಲ್ಲಿ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ದ ನಡೆದ ಅಂದೋಲನದ ವೇಳೆ, ರೈತ ಚಳವಳಿಯ ಸಂದರ್ಭಗಳಲ್ಲಿ ದಾಖಲಾದ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದು, ಎಂಎಸ್‌ಪಿ ಕಾನೂನು ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ನಿನ್ನೆಯ(ಫೆ.12) ಸಭೆಯಲ್ಲಿ ಕೇವಲ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಒಪ್ಪಿಕೊಂಡಿದೆ. ಆದರೆ, ರೈತರ ಪ್ರಮುಖ ಬೇಡಿಕೆಯಾದ ಎಂಎಸ್‌ಪಿಯ ಕುರಿತು ಯಾವುದೇ ತೀರ್ಮಾನ ಆಗಿಲ್ಲ. ಹಾಗಾಗಿ, ಹೋರಾಟ ಮುಂದುವರೆಸುವುದಾಗಿ ರೈತರು ಹೇಳಿದ್ದಾರೆ.

ರೈತ ಮುಖಂಡರಾದ ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಸರ್ವಾನ್ ಸಿಂಗ್ ಪಂಧೇರ್ ಅವರು ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

ಎಂಎಸ್‌ಪಿ, ಸಾಲಮನ್ನಾ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಸಂಬಂಧ ಕಾನೂನು ಜಾರಿಗೊಳಿಸುವ ಕುರಿತು ಚರ್ಚಿಸಲು ಸಮಿತಿ ರಚಿಸುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ, ರೈತ ಪ್ರತಿನಿಧಿಗಳು ಅದಕ್ಕೆ ಒಪ್ಪಿಲ್ಲ.

ನವೆಂಬರ್ 19, 2021ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಮಾಡಿದ್ದರು. ಆ ಮೂಲಕ ದೆಹಲಿಯ ಗಡಿಯಲ್ಲಿ ಹದಿಮೂರು ತಿಂಗಳ ಕಾಲ ಸತತ ಹೋರಾಟ ನಡೆಸಿದ್ದ ರೈತರಿಗೆ ಮಹತ್ವದ ಜಯ ಸಿಕ್ಕಿತ್ತು.

ರೈತರ ಹೋರಾಟದ ವೇಳೆ ಅವರ ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ, ಆ ಮಾತಿಗೆ ತಪ್ಪಿದ ಸರ್ಕಾರ ಭರವಸೆ ಕೊಟ್ಟ ಸುಮಾರು 9 ತಿಂಗಳ ನಂತರ ಜುಲೈ 12, 2022 ರಂದು ಸಮಿತಿಯೊಂದನ್ನು ರಚಿಸಿತ್ತು. ಮಾಜಿ ಕೃಷಿ ಕಾರ್ಯದರ್ಶಿ ಸಂಜಯ್ ಅಗರ್ವಾಲ್ ಅವರ ಅಧ್ಯಕ್ಷತೆಯ ಸಮಿತಿಯಲ್ಲಿ ಒಟ್ಟು 29 ಸದಸ್ಯರಿದ್ದು, ನಾಲ್ವರು ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು ಮತ್ತು ನಾಲ್ವರು ರಾಜ್ಯ ಸರ್ಕಾರ ಪ್ರತಿನಿಧಿಗಳು ಈ ಸಮಿತಿಯಲ್ಲಿದ್ದಾರೆ.

ಕೃಷಿ ಕಾನೂನಗಳ ವಿರುದ್ದ ನಡೆದ ಹೋರಾಟದಲ್ಲಿ ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣದ ರೈತರು ಪ್ರಮುಖ ವಹಿಸಿದ್ದರು. ಈ ರಾಜ್ಯಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಸರ್ಕಾರ ರಚಿಸಿದ ಸಮಿತಿಯಲ್ಲಿ ಈ ರಾಜ್ಯಗಳ ಪ್ರತಿನಿಧಿಗಳೇ ಇರಲಿಲ್ಲ. ಅಲ್ಲದೆ, ಕೃಷಿ ಕಾನೂನುಗಳನ್ನು ವಿರೋಧಿಸುವ ಯಾವುದೇ ಅರ್ಥಶಾಸ್ತ್ರಜ್ಞರು ಅಥವಾ ತಜ್ಞರು ಇಲ್ಲದಿರುವುದು ರೈತರಿಗೆ ಕಳವಳ ಉಂಟು ಮಾಡಿದೆ.

ಭೂಸ್ವಾಧೀನ ಕಾಯಿದೆ 2013ರ ಮರುಸ್ಥಾಪನೆ, ವಿಶ್ವ ವ್ಯಾಪಾರ ಸಂಸ್ಥೆಯಿಂದ ಹಿಂದೆ ಸರಿಯುವುದು ಮತ್ತು ಹಿಂದಿನ ಆಂದೋಲನದ ಸಮಯದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಇತರ ಹಲವು ಬೇಡಿಕೆಗಳನ್ನು ರೈತರು ಸರ್ಕಾರದ ಮುಂದಿಟ್ಟಿದ್ದಾರೆ.

ಪ್ರತಿಭಟನಾ ಮೆರವಣಿಗೆ ಕೈಗೊಂಡಿರುವ ರೈತರು ದೆಹಲಿ ಪ್ರವೇಶಿಸದಂತೆ ತಡೆಯಲು ಪೊಲೀಸರು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ. ಸಿಂಘು, ಟಿಕ್ರಿ ಮತ್ತು ಗಾಝಿಪುರ ಗಡಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕ ಸಭೆಗಳು ನಡೆಸುವುದಕ್ಕೆ ಮತ್ತು ಟ್ರ್ಯಾಕ್ಟರ್, ಟ್ರಾಲಿಗಳು ನಗರಕ್ಕೆ ಪ್ರವೇಶಿಸದಂತೆ ಪೊಲೀಸರು ಒಂದು ತಿಂಗಳ ಕಾಲ ನಿಷೇಧ ಹೇರಿದ್ದಾರೆ.

ದೆಹಲಿಯಾದ್ಯಂತ ಬೃಹತ್ ಸಭೆಗಳನ್ನು ನಿಷೇಧಿಸಲಾಗಿದೆ. ಹೆಚ್ಚಿನ ರಸ್ತೆಗಳನ್ನು ಕಾಂಕ್ರೀಟ್ ಬ್ಲಾಕ್‌ಗಳು, ಮುಳ್ಳು ತಂತಿಗಳು ಮತ್ತು ಬ್ಯಾರಿಕೇಡ್‌ಗಳಿಂದ ಮುಚ್ಚಲಾಗಿದೆ. ವಾಣಿಜ್ಯ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ : ಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...