Homeಮುಖಪುಟ'ದಿಲ್ಲಿ ಚಲೋ': ಈಡೇರದೆ ಉಳಿದಿರುವ ರೈತರ ಪ್ರಮುಖ ಬೇಡಿಕೆಗಳೇನು?

‘ದಿಲ್ಲಿ ಚಲೋ’: ಈಡೇರದೆ ಉಳಿದಿರುವ ರೈತರ ಪ್ರಮುಖ ಬೇಡಿಕೆಗಳೇನು?

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಹಲವು ರಾಜ್ಯಗಳ ರೈತರು ಇಂದು (ಫೆ.13) ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ರೈತರ ಬೇಡಿಕೆಗಳಲ್ಲಿ ‘ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು’ ಪ್ರಮುಖವಾಗಿದೆ.

ರೈತರ ಇತರ ಬೇಡಿಕೆಗಳೆಂದರೆ, ವಿದ್ಯುತ್ ಕಾಯ್ದೆ 2020ರ ರದ್ದತಿ, ಲಖಿಂಪುರ ಖೇರಿಯಲ್ಲಿ ಸಾವನ್ನಪ್ಪಿದ ರೈತರಿಗೆ ಪರಿಹಾರ ಮತ್ತು ರೈತ ಚಳವಳಿಯಲ್ಲಿ ತೊಡಗಿರುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದಾಗಿದೆ.

ಸೋಮವಾರ (ಫೆ.12) ಮಧ್ಯರಾತ್ರಿಯವರೆಗೆ ರೈತ ಮುಖಂಡರ ಜೊತೆಗೆ ಚಂಡೀಗಢದಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಮತ್ತು ಕೃಷಿ ಸಚಿವ ಅರ್ಜುನ್ ಮುಂಡಾ ಸಭೆ ನಡೆಸಿದ್ದು, ವಿದ್ಯುತ್ ಕಾಯ್ದೆ 2020 ರದ್ದತಿ, ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಮತ್ತು ರೈತರ ಚಳವಳಿಯ ಸಂದರ್ಭಗಳಲ್ಲಿ ದಾಖಲಾದ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಒಂದು ಒಪ್ಪಂದಕ್ಕೆ ಬಂದಿದ್ದಾರೆ.

ಆದರೆ, ರೈತರ ಮೂರು ಪ್ರಮುಖ ಬೇಡಿಕೆಗಳಾದ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು, ರೈತರ ಸಾಲ ಮನ್ನಾ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನದ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ.

2020-21ರಲ್ಲಿ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ದ ನಡೆದ ಅಂದೋಲನದ ವೇಳೆ, ರೈತ ಚಳವಳಿಯ ಸಂದರ್ಭಗಳಲ್ಲಿ ದಾಖಲಾದ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದು, ಎಂಎಸ್‌ಪಿ ಕಾನೂನು ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ನಿನ್ನೆಯ(ಫೆ.12) ಸಭೆಯಲ್ಲಿ ಕೇವಲ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಒಪ್ಪಿಕೊಂಡಿದೆ. ಆದರೆ, ರೈತರ ಪ್ರಮುಖ ಬೇಡಿಕೆಯಾದ ಎಂಎಸ್‌ಪಿಯ ಕುರಿತು ಯಾವುದೇ ತೀರ್ಮಾನ ಆಗಿಲ್ಲ. ಹಾಗಾಗಿ, ಹೋರಾಟ ಮುಂದುವರೆಸುವುದಾಗಿ ರೈತರು ಹೇಳಿದ್ದಾರೆ.

ರೈತ ಮುಖಂಡರಾದ ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಸರ್ವಾನ್ ಸಿಂಗ್ ಪಂಧೇರ್ ಅವರು ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

ಎಂಎಸ್‌ಪಿ, ಸಾಲಮನ್ನಾ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಸಂಬಂಧ ಕಾನೂನು ಜಾರಿಗೊಳಿಸುವ ಕುರಿತು ಚರ್ಚಿಸಲು ಸಮಿತಿ ರಚಿಸುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ, ರೈತ ಪ್ರತಿನಿಧಿಗಳು ಅದಕ್ಕೆ ಒಪ್ಪಿಲ್ಲ.

ನವೆಂಬರ್ 19, 2021ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಮಾಡಿದ್ದರು. ಆ ಮೂಲಕ ದೆಹಲಿಯ ಗಡಿಯಲ್ಲಿ ಹದಿಮೂರು ತಿಂಗಳ ಕಾಲ ಸತತ ಹೋರಾಟ ನಡೆಸಿದ್ದ ರೈತರಿಗೆ ಮಹತ್ವದ ಜಯ ಸಿಕ್ಕಿತ್ತು.

ರೈತರ ಹೋರಾಟದ ವೇಳೆ ಅವರ ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ, ಆ ಮಾತಿಗೆ ತಪ್ಪಿದ ಸರ್ಕಾರ ಭರವಸೆ ಕೊಟ್ಟ ಸುಮಾರು 9 ತಿಂಗಳ ನಂತರ ಜುಲೈ 12, 2022 ರಂದು ಸಮಿತಿಯೊಂದನ್ನು ರಚಿಸಿತ್ತು. ಮಾಜಿ ಕೃಷಿ ಕಾರ್ಯದರ್ಶಿ ಸಂಜಯ್ ಅಗರ್ವಾಲ್ ಅವರ ಅಧ್ಯಕ್ಷತೆಯ ಸಮಿತಿಯಲ್ಲಿ ಒಟ್ಟು 29 ಸದಸ್ಯರಿದ್ದು, ನಾಲ್ವರು ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು ಮತ್ತು ನಾಲ್ವರು ರಾಜ್ಯ ಸರ್ಕಾರ ಪ್ರತಿನಿಧಿಗಳು ಈ ಸಮಿತಿಯಲ್ಲಿದ್ದಾರೆ.

ಕೃಷಿ ಕಾನೂನಗಳ ವಿರುದ್ದ ನಡೆದ ಹೋರಾಟದಲ್ಲಿ ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣದ ರೈತರು ಪ್ರಮುಖ ವಹಿಸಿದ್ದರು. ಈ ರಾಜ್ಯಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಸರ್ಕಾರ ರಚಿಸಿದ ಸಮಿತಿಯಲ್ಲಿ ಈ ರಾಜ್ಯಗಳ ಪ್ರತಿನಿಧಿಗಳೇ ಇರಲಿಲ್ಲ. ಅಲ್ಲದೆ, ಕೃಷಿ ಕಾನೂನುಗಳನ್ನು ವಿರೋಧಿಸುವ ಯಾವುದೇ ಅರ್ಥಶಾಸ್ತ್ರಜ್ಞರು ಅಥವಾ ತಜ್ಞರು ಇಲ್ಲದಿರುವುದು ರೈತರಿಗೆ ಕಳವಳ ಉಂಟು ಮಾಡಿದೆ.

ಭೂಸ್ವಾಧೀನ ಕಾಯಿದೆ 2013ರ ಮರುಸ್ಥಾಪನೆ, ವಿಶ್ವ ವ್ಯಾಪಾರ ಸಂಸ್ಥೆಯಿಂದ ಹಿಂದೆ ಸರಿಯುವುದು ಮತ್ತು ಹಿಂದಿನ ಆಂದೋಲನದ ಸಮಯದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಇತರ ಹಲವು ಬೇಡಿಕೆಗಳನ್ನು ರೈತರು ಸರ್ಕಾರದ ಮುಂದಿಟ್ಟಿದ್ದಾರೆ.

ಪ್ರತಿಭಟನಾ ಮೆರವಣಿಗೆ ಕೈಗೊಂಡಿರುವ ರೈತರು ದೆಹಲಿ ಪ್ರವೇಶಿಸದಂತೆ ತಡೆಯಲು ಪೊಲೀಸರು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ. ಸಿಂಘು, ಟಿಕ್ರಿ ಮತ್ತು ಗಾಝಿಪುರ ಗಡಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕ ಸಭೆಗಳು ನಡೆಸುವುದಕ್ಕೆ ಮತ್ತು ಟ್ರ್ಯಾಕ್ಟರ್, ಟ್ರಾಲಿಗಳು ನಗರಕ್ಕೆ ಪ್ರವೇಶಿಸದಂತೆ ಪೊಲೀಸರು ಒಂದು ತಿಂಗಳ ಕಾಲ ನಿಷೇಧ ಹೇರಿದ್ದಾರೆ.

ದೆಹಲಿಯಾದ್ಯಂತ ಬೃಹತ್ ಸಭೆಗಳನ್ನು ನಿಷೇಧಿಸಲಾಗಿದೆ. ಹೆಚ್ಚಿನ ರಸ್ತೆಗಳನ್ನು ಕಾಂಕ್ರೀಟ್ ಬ್ಲಾಕ್‌ಗಳು, ಮುಳ್ಳು ತಂತಿಗಳು ಮತ್ತು ಬ್ಯಾರಿಕೇಡ್‌ಗಳಿಂದ ಮುಚ್ಚಲಾಗಿದೆ. ವಾಣಿಜ್ಯ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ : ಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...