Homeಮುಖಪುಟಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಜನರು ಚುನಾಯಿಸಿದ ಶಾಸಕರುಗಳು ಮುಖ್ಯಮಂತ್ರಿಯನ್ನು ಆರಿಸಬೇಕು. ಆದರೆ ದುರಾದೃಷ್ಟವಶಾತ್ ದೆಹಲಿಯಿಂದ ಬರುವ ಲಕೋಟೆಗಳು ಕರ್ನಾಟಕದ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತಿವೆ.

- Advertisement -
- Advertisement -

ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕ ಗದ್ಗದಿತವಾಗಿ ದುಃಖಿತನಾಗಿ ತನ್ನ ಸ್ಥಾನಕ್ಕೆ ರಾಜಿನಾಮೆ ಘೋಷಿಸಿದ್ದಾರೆ.

ರಾಜ್ಯದ ಒಂದು ದೊಡ್ಡ ಸಮುದಾಯ ಹಾಗೂ ನೂರಾರು ಮಠಾಧೀಶರ ಬೆಂಬಲವೂ ದೆಹೆಲಿ ದೊರೆಗಳ ಮುಂದೆ ನಡೆಯಲಿಲ್ಲ. ಕರ್ನಾಟಕದ ಇಷ್ಟು ಮಠಾಧೀಶರಿಂದ ತಮ್ಮದೇ ರಾಜ್ಯದ ಒಬ್ಬ ಮುಖ್ಯಮಂತ್ರಿಯನ್ನು ಉಳಿಸಿಕೊಳ್ಳಲಿಕ್ಕೆ ಆಗಲಿಲ್ಲವೆಂಬುದು ವಿಪರ್ಯಾಸ. ಈ ಬೆಳವಣಿಗೆ ಹಿಂದುತ್ವ ರಾಜಕಾರಣ ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನಗಳ ಪರಂಪರೆಯನ್ನು ಮುನ್ನಡೆಸಿದಂತಿದೆ.

ಜನರು ಚುನಾಯಿಸಿದ ಶಾಸಕರುಗಳು ಮುಖ್ಯಮಂತ್ರಿಯನ್ನು ಆರಿಸಬೇಕು. ಆದರೆ ದುರಾದೃಷ್ಟವಶಾತ್ ದೆಹಲಿಯಿಂದ ಬರುವ ಲಕೋಟೆಗಳು ಕರ್ನಾಟಕದ ಮುಖ್ಯಮಂತ್ರಿ ಯಾರಾಗಬೇಕೆಂದು ನಿರ್ಧರಿಸುತ್ತಿವೆ. ಒಂದು ಕಾಲದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಲಕೋಟೆ ಸರ್ಕಾರ ಎಂದು ಬಿಂಬಿಸಲಾಗುತ್ತಿತ್ತು. ಇದೀಗ ಕಾಂಗ್ರೆಸ್ ಅನ್ನು ಟೀಕಿಸಿ ಅಧಿಕಾರಕ್ಕೆ ಬಂದ ಬಿಜೆಪಿಯು ಸಹ ಅದಕ್ಕಿಂತ ಘೋರವಾಗಿ ಲಕೋಟೆ ಸಂಸ್ಕೃತಿಯನ್ನು ಮುನ್ನಡೆಸುತ್ತಿದೆ.

ಯಾವುದೇ ರಾಜ್ಯಗಳಲ್ಲಿ ಜನರಿಂದ ಆರಿಸಿ ಬಂದ ಜನನಾಯಕರುಗಳು ಮೋದಿ-ಶಾರವರಿಗೆ ಬೇಕಾಗಿಲ್ಲ. ಮೋದಿ ಸರ್ಕಾರಕ್ಕೆ ಬೇಕಾಗಿರುವುದು ತಾವು ಹೇಳಿದ್ದಕ್ಕೆಲ್ಲಾ ತಲೆಯಾಡಿಸಿ ಕೇಳಿಕೊಂಡು ಹೋಗುವ ಮನಸ್ಥಿತಿಯ ಕೈಗೊಂಬೆಗಳು. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಇರಬಹುದು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಇರಬಹುದು ಅಥವಾ ಉತ್ತರಖಂಡ ಇನ್ಯಾವುದೇ ರಾಜ್ಯವಾದರೂ ಅಲ್ಲಿನ ಮುಖ್ಯಮಂತ್ರಿಗಳು ಬೃಹತ್ ಜನಬೆಂಬಲ ಇರುವವರಲ್ಲ. ಹಾಗಾಗಿಯೇ ಅವರನ್ನು ಮುಖ್ಯಮಂತ್ರಿಗಳಾಗಿ ಮಾಡಲಾಗಿದೆ. ಆದರೆ ಯಡಿಯೂರಪ್ಪ ಹಾಗಲ್ಲ. ಅವರು ಜಾತಿಬಲ, ಜನಬಲ ಹೊಂದಿರುವ ಮಾಸ್ ಲೀಡರ್. 75 ವರ್ಷ ತುಂಬಿದ ನಂತರವೂ ಪಕ್ಷದ ನಿಯಮ ಮೀರಿ ಕರ್ನಾಟಕದ ಮುಖ್ಯಮಂತ್ರಿಯಾದ ಛಾತಿವುಳ್ಳವರು. ಹಾಗಾಗಿಯೇ ಅವರನ್ನು ಮೋದಿ – ಶಾ ಕೆಳಗಿಳಿಸಿದ್ದಾರೆ.

ಯಡಿಯೂರಪ್ಪನವರ ಮಗ ಬಿ.ವೈ ವಿಜಯೇಂದ್ರ ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪ ಸತ್ಯ ಕೂಡ. ಆದರೆ ಅದೇ ಯಡಿಯೂರಪ್ಪನವರ ತಲೆದಂಡಕ್ಕೆ ಪ್ರಮುಖ ಕಾರಣ ಎನ್ನಲಾಗದು. ಯಡಿಯೂರಪ್ಪನವರು ಆಪರೇಷನ್ ಕಮಲ ನಡೆಸಿಯೇ ಎರಡು ಭಾರಿ ಮುಖ್ಯಮಂತ್ರಿಯಾಗಿದ್ದಾರೆ. ಅದಕ್ಕೆಲ್ಲ ಮೋದಿಯವರ ಒಪ್ಪಿಗೆ ಇತ್ತು. ಅಮಿತ್ ಶಾರವರ ಮಗ ಜಯ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಭ್ರಷ್ಟಾಚಾರದ ಮೂಲಕ ಹಣ ಮಾಡುತ್ತಿರುವುದು ಮೋದಿಗೆ ತಿಳಿದಿಲ್ಲವೇ? ಇತರ ಪಕ್ಷಗಳಲ್ಲಿ ಭಾರೀ ಭ್ರಷ್ಟಾಚಾರ ನಡೆಸಿ ಸಿಕ್ಕಿಬಿದ್ದವರನ್ನು ಬಿಜೆಪಿ ಏಕೆ ತನ್ನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ?

ಇದರರ್ಥ ಸ್ಪಷ್ಟವಾಗಿದೆ. ಅದೆಂದರೆ ಮೋದಿ ಸರ್ಕಾರ ಎಲ್ಲಾ ಅಧಿಕಾರವನ್ನು ತನ್ನತ್ತ ಕೇಂದ್ರೀಕರಿಸಿಕೊಳ್ಳಲು ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ಪ್ರಬಲ ಲಿಂಗಾಯತ ಜಾತಿಬಲ ಹೊಂದಿರುವ, ಸ್ವಂತಂತ್ರವಾಗಿ ಗೆದ್ದುಬರುವ ಸಾಮರ್ಥ್ಯವುಳ್ಳ ಯಡಿಯೂರಪ್ಪನವರು ಮೋದಿ ಮುಂದೆ ಕೈಕಟ್ಟಿ ಕುಳಿತುಕೊಳ್ಳುವವರಲ್ಲ. ಹಾಗಾಗಿಯೇ ಯಡಿಯೂರಪ್ಪನವರಂತಹ ಹಠಮಾರಿ ರಾಜಕಾರಣಿ ಮೋದಿ ಸರಕಾರಕ್ಕೆ ಬೇಕಾಗಿಲ್ಲ.

ವೋಟ್ ಕೇಳುವುದರಿಂದ ಹಿಡಿದು ಸರ್ಕಾರ ನಡೆಸಲು ಎಲ್ಲದಕ್ಕೂ ಮೋದಿ ಜಪ ಮಾಡುವವರು, ಕೇಂದ್ರದ ಆದೇಶಗಳಿಗೆ ತಲೆಬಾಗುವವರು ಬಿಜೆಪಿಗೆ ಬೇಕು. ಸರ್ವಾಧಿಕಾರ ಅಂದರೆ ಇದೇ ಅಲ್ಲವೆ? ಸ್ವಾಭಿಮಾನದಿಂದ ಬದುಕುವವರಿಗೆ ಬಿಜೆಪಿಯಲ್ಲಿ ಜಾಗವಿಲ್ಲ ಎಂಬುದನ್ನು ಬಿಜೆಪಿ ಮತ್ತೊಮ್ಮೆ ಸಾಬೀತುಪಡಿಸಿದೆ. ಕರ್ನಾಟಕದ 25 ಲೋಕಸಭಾ ಸದಸ್ಯರ ಹಾಗೆ ಕೈ ಕಟ್ಟಿ ನಿಲ್ಲುವ ನಾಯಕರಿಗೆ ಬಿಜೆಪಿಯಲ್ಲಿ ಬೆಲೆ ಇದ್ದಂತಿದೆ. ಯಾಕೆಂದರೆ ಇವರು ಆರಿಸಿ ಬಂದಿರುವುದೇ ಮೋದಿ ಹೆಸರನ್ನು ಹೇಳಿಕೊಂಡು, ಮೋದಿಯ ಅಸ್ತಿತ್ವದಿಂದಲೇ ಇವರ ಅಸ್ತಿತ್ವ.

ಭಾರತ ಇರುವುದೇ ರಾಜ್ಯಗಳಿಂದ ಎಂಬ ಕನಿಷ್ಠ ಜ್ಞಾನ ಬಿಜೆಪಿಯ ಕೇಂದ್ರ ನಾಯಕರಿಗೆ ಇದ್ದಂತಿಲ್ಲ. ಒಕ್ಕೂಟ ಸರಕಾರವನ್ನು ತಾವೇ ಅಳಬೇಕು, ರಾಜ್ಯವನ್ನು ತಾವೇ ಆಳಬೇಕೆಂಬ ದುರಾಸೆ ಇವರನ್ನು ಈ ಸ್ಥಿತಿಗೆ ತಂದಿದೆ. ರಾಜ್ಯದ ಎಲ್ಲಾ ಅಧಿಕಾರಗಳನ್ನು ಕಿತ್ತುಕೊಳ್ಳುವ ಮತ್ತು ರಾಜ್ಯಗಳನ್ನು ಅಘೋಷಿತ ಕೇಂದ್ರಾಡಳಿತ ಪ್ರದೇಶಗಳಾನ್ನಾಗಿ ಮಾಡುವ ಹುನ್ನಾರ ಭಾಗ ಯಡಿಯೂರಪ್ಪನವರ ರಾಜೀನಾಮೆ. ಇದು ಕೇವಲ ಮುಖ್ಯಮಂತ್ರಿಯ ಬದಲಾವಣೆ ಮಾತ್ರವಲ್ಲ ಸಮಸ್ತ ಆಡಳಿತದ ಬದಲಾವಣೆ. ಇದಕ್ಕಿಂತ ದೊಡ್ಡ ಆಘಾತ ಒಕ್ಕೂಟ ವ್ಯವಸ್ಥೆಗೆ ಮತ್ತೊಂದಿಲ್ಲ.

  • ಝೀಶಾನ್ ಆಖೀಲ್ ಸಿದ್ದಿಕಿ

(ರಾಯಚೂರು ಜಿಲ್ಲೆಯ ಮಾನ್ವಿಯವರಾದ ಝೀಶಾನ್, ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್‌ನಲ್ಲಿ ಕೆಲಸ ಮಾಡಿದ ಯುವ ಹೋರಾಟಗಾರನಾಗಿದ್ದು, ರಾಜಕೀಯ ಆಗುಹೋಗುಗಳಿಗೆ ಸಕ್ರಿಯವಾಗಿ ಪ್ರತಿಕ್ರಿಯಿಸುತ್ತಾರೆ. ಲೇಖನದಲ್ಲಿ ಅಭಿಪ್ರಾಯಗಳು ವೈಯಕ್ತಿಕವಾದವು)


ಇದನ್ನೂ ಓದಿ: ಯಡಿಯೂರಪ್ಪ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಹೆಸರಿನ ಊಹೆಗಿಂತ ಕರ್ನಾಟಕದ ಸ್ಥಿತಿ ಚರ್ಚೆಯಾಗಬೇಕಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...