Homeಮುಖಪುಟಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಜನರು ಚುನಾಯಿಸಿದ ಶಾಸಕರುಗಳು ಮುಖ್ಯಮಂತ್ರಿಯನ್ನು ಆರಿಸಬೇಕು. ಆದರೆ ದುರಾದೃಷ್ಟವಶಾತ್ ದೆಹಲಿಯಿಂದ ಬರುವ ಲಕೋಟೆಗಳು ಕರ್ನಾಟಕದ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತಿವೆ.

- Advertisement -
- Advertisement -

ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕ ಗದ್ಗದಿತವಾಗಿ ದುಃಖಿತನಾಗಿ ತನ್ನ ಸ್ಥಾನಕ್ಕೆ ರಾಜಿನಾಮೆ ಘೋಷಿಸಿದ್ದಾರೆ.

ರಾಜ್ಯದ ಒಂದು ದೊಡ್ಡ ಸಮುದಾಯ ಹಾಗೂ ನೂರಾರು ಮಠಾಧೀಶರ ಬೆಂಬಲವೂ ದೆಹೆಲಿ ದೊರೆಗಳ ಮುಂದೆ ನಡೆಯಲಿಲ್ಲ. ಕರ್ನಾಟಕದ ಇಷ್ಟು ಮಠಾಧೀಶರಿಂದ ತಮ್ಮದೇ ರಾಜ್ಯದ ಒಬ್ಬ ಮುಖ್ಯಮಂತ್ರಿಯನ್ನು ಉಳಿಸಿಕೊಳ್ಳಲಿಕ್ಕೆ ಆಗಲಿಲ್ಲವೆಂಬುದು ವಿಪರ್ಯಾಸ. ಈ ಬೆಳವಣಿಗೆ ಹಿಂದುತ್ವ ರಾಜಕಾರಣ ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನಗಳ ಪರಂಪರೆಯನ್ನು ಮುನ್ನಡೆಸಿದಂತಿದೆ.

ಜನರು ಚುನಾಯಿಸಿದ ಶಾಸಕರುಗಳು ಮುಖ್ಯಮಂತ್ರಿಯನ್ನು ಆರಿಸಬೇಕು. ಆದರೆ ದುರಾದೃಷ್ಟವಶಾತ್ ದೆಹಲಿಯಿಂದ ಬರುವ ಲಕೋಟೆಗಳು ಕರ್ನಾಟಕದ ಮುಖ್ಯಮಂತ್ರಿ ಯಾರಾಗಬೇಕೆಂದು ನಿರ್ಧರಿಸುತ್ತಿವೆ. ಒಂದು ಕಾಲದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಲಕೋಟೆ ಸರ್ಕಾರ ಎಂದು ಬಿಂಬಿಸಲಾಗುತ್ತಿತ್ತು. ಇದೀಗ ಕಾಂಗ್ರೆಸ್ ಅನ್ನು ಟೀಕಿಸಿ ಅಧಿಕಾರಕ್ಕೆ ಬಂದ ಬಿಜೆಪಿಯು ಸಹ ಅದಕ್ಕಿಂತ ಘೋರವಾಗಿ ಲಕೋಟೆ ಸಂಸ್ಕೃತಿಯನ್ನು ಮುನ್ನಡೆಸುತ್ತಿದೆ.

ಯಾವುದೇ ರಾಜ್ಯಗಳಲ್ಲಿ ಜನರಿಂದ ಆರಿಸಿ ಬಂದ ಜನನಾಯಕರುಗಳು ಮೋದಿ-ಶಾರವರಿಗೆ ಬೇಕಾಗಿಲ್ಲ. ಮೋದಿ ಸರ್ಕಾರಕ್ಕೆ ಬೇಕಾಗಿರುವುದು ತಾವು ಹೇಳಿದ್ದಕ್ಕೆಲ್ಲಾ ತಲೆಯಾಡಿಸಿ ಕೇಳಿಕೊಂಡು ಹೋಗುವ ಮನಸ್ಥಿತಿಯ ಕೈಗೊಂಬೆಗಳು. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಇರಬಹುದು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಇರಬಹುದು ಅಥವಾ ಉತ್ತರಖಂಡ ಇನ್ಯಾವುದೇ ರಾಜ್ಯವಾದರೂ ಅಲ್ಲಿನ ಮುಖ್ಯಮಂತ್ರಿಗಳು ಬೃಹತ್ ಜನಬೆಂಬಲ ಇರುವವರಲ್ಲ. ಹಾಗಾಗಿಯೇ ಅವರನ್ನು ಮುಖ್ಯಮಂತ್ರಿಗಳಾಗಿ ಮಾಡಲಾಗಿದೆ. ಆದರೆ ಯಡಿಯೂರಪ್ಪ ಹಾಗಲ್ಲ. ಅವರು ಜಾತಿಬಲ, ಜನಬಲ ಹೊಂದಿರುವ ಮಾಸ್ ಲೀಡರ್. 75 ವರ್ಷ ತುಂಬಿದ ನಂತರವೂ ಪಕ್ಷದ ನಿಯಮ ಮೀರಿ ಕರ್ನಾಟಕದ ಮುಖ್ಯಮಂತ್ರಿಯಾದ ಛಾತಿವುಳ್ಳವರು. ಹಾಗಾಗಿಯೇ ಅವರನ್ನು ಮೋದಿ – ಶಾ ಕೆಳಗಿಳಿಸಿದ್ದಾರೆ.

ಯಡಿಯೂರಪ್ಪನವರ ಮಗ ಬಿ.ವೈ ವಿಜಯೇಂದ್ರ ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪ ಸತ್ಯ ಕೂಡ. ಆದರೆ ಅದೇ ಯಡಿಯೂರಪ್ಪನವರ ತಲೆದಂಡಕ್ಕೆ ಪ್ರಮುಖ ಕಾರಣ ಎನ್ನಲಾಗದು. ಯಡಿಯೂರಪ್ಪನವರು ಆಪರೇಷನ್ ಕಮಲ ನಡೆಸಿಯೇ ಎರಡು ಭಾರಿ ಮುಖ್ಯಮಂತ್ರಿಯಾಗಿದ್ದಾರೆ. ಅದಕ್ಕೆಲ್ಲ ಮೋದಿಯವರ ಒಪ್ಪಿಗೆ ಇತ್ತು. ಅಮಿತ್ ಶಾರವರ ಮಗ ಜಯ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಭ್ರಷ್ಟಾಚಾರದ ಮೂಲಕ ಹಣ ಮಾಡುತ್ತಿರುವುದು ಮೋದಿಗೆ ತಿಳಿದಿಲ್ಲವೇ? ಇತರ ಪಕ್ಷಗಳಲ್ಲಿ ಭಾರೀ ಭ್ರಷ್ಟಾಚಾರ ನಡೆಸಿ ಸಿಕ್ಕಿಬಿದ್ದವರನ್ನು ಬಿಜೆಪಿ ಏಕೆ ತನ್ನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ?

ಇದರರ್ಥ ಸ್ಪಷ್ಟವಾಗಿದೆ. ಅದೆಂದರೆ ಮೋದಿ ಸರ್ಕಾರ ಎಲ್ಲಾ ಅಧಿಕಾರವನ್ನು ತನ್ನತ್ತ ಕೇಂದ್ರೀಕರಿಸಿಕೊಳ್ಳಲು ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ಪ್ರಬಲ ಲಿಂಗಾಯತ ಜಾತಿಬಲ ಹೊಂದಿರುವ, ಸ್ವಂತಂತ್ರವಾಗಿ ಗೆದ್ದುಬರುವ ಸಾಮರ್ಥ್ಯವುಳ್ಳ ಯಡಿಯೂರಪ್ಪನವರು ಮೋದಿ ಮುಂದೆ ಕೈಕಟ್ಟಿ ಕುಳಿತುಕೊಳ್ಳುವವರಲ್ಲ. ಹಾಗಾಗಿಯೇ ಯಡಿಯೂರಪ್ಪನವರಂತಹ ಹಠಮಾರಿ ರಾಜಕಾರಣಿ ಮೋದಿ ಸರಕಾರಕ್ಕೆ ಬೇಕಾಗಿಲ್ಲ.

ವೋಟ್ ಕೇಳುವುದರಿಂದ ಹಿಡಿದು ಸರ್ಕಾರ ನಡೆಸಲು ಎಲ್ಲದಕ್ಕೂ ಮೋದಿ ಜಪ ಮಾಡುವವರು, ಕೇಂದ್ರದ ಆದೇಶಗಳಿಗೆ ತಲೆಬಾಗುವವರು ಬಿಜೆಪಿಗೆ ಬೇಕು. ಸರ್ವಾಧಿಕಾರ ಅಂದರೆ ಇದೇ ಅಲ್ಲವೆ? ಸ್ವಾಭಿಮಾನದಿಂದ ಬದುಕುವವರಿಗೆ ಬಿಜೆಪಿಯಲ್ಲಿ ಜಾಗವಿಲ್ಲ ಎಂಬುದನ್ನು ಬಿಜೆಪಿ ಮತ್ತೊಮ್ಮೆ ಸಾಬೀತುಪಡಿಸಿದೆ. ಕರ್ನಾಟಕದ 25 ಲೋಕಸಭಾ ಸದಸ್ಯರ ಹಾಗೆ ಕೈ ಕಟ್ಟಿ ನಿಲ್ಲುವ ನಾಯಕರಿಗೆ ಬಿಜೆಪಿಯಲ್ಲಿ ಬೆಲೆ ಇದ್ದಂತಿದೆ. ಯಾಕೆಂದರೆ ಇವರು ಆರಿಸಿ ಬಂದಿರುವುದೇ ಮೋದಿ ಹೆಸರನ್ನು ಹೇಳಿಕೊಂಡು, ಮೋದಿಯ ಅಸ್ತಿತ್ವದಿಂದಲೇ ಇವರ ಅಸ್ತಿತ್ವ.

ಭಾರತ ಇರುವುದೇ ರಾಜ್ಯಗಳಿಂದ ಎಂಬ ಕನಿಷ್ಠ ಜ್ಞಾನ ಬಿಜೆಪಿಯ ಕೇಂದ್ರ ನಾಯಕರಿಗೆ ಇದ್ದಂತಿಲ್ಲ. ಒಕ್ಕೂಟ ಸರಕಾರವನ್ನು ತಾವೇ ಅಳಬೇಕು, ರಾಜ್ಯವನ್ನು ತಾವೇ ಆಳಬೇಕೆಂಬ ದುರಾಸೆ ಇವರನ್ನು ಈ ಸ್ಥಿತಿಗೆ ತಂದಿದೆ. ರಾಜ್ಯದ ಎಲ್ಲಾ ಅಧಿಕಾರಗಳನ್ನು ಕಿತ್ತುಕೊಳ್ಳುವ ಮತ್ತು ರಾಜ್ಯಗಳನ್ನು ಅಘೋಷಿತ ಕೇಂದ್ರಾಡಳಿತ ಪ್ರದೇಶಗಳಾನ್ನಾಗಿ ಮಾಡುವ ಹುನ್ನಾರ ಭಾಗ ಯಡಿಯೂರಪ್ಪನವರ ರಾಜೀನಾಮೆ. ಇದು ಕೇವಲ ಮುಖ್ಯಮಂತ್ರಿಯ ಬದಲಾವಣೆ ಮಾತ್ರವಲ್ಲ ಸಮಸ್ತ ಆಡಳಿತದ ಬದಲಾವಣೆ. ಇದಕ್ಕಿಂತ ದೊಡ್ಡ ಆಘಾತ ಒಕ್ಕೂಟ ವ್ಯವಸ್ಥೆಗೆ ಮತ್ತೊಂದಿಲ್ಲ.

  • ಝೀಶಾನ್ ಆಖೀಲ್ ಸಿದ್ದಿಕಿ

(ರಾಯಚೂರು ಜಿಲ್ಲೆಯ ಮಾನ್ವಿಯವರಾದ ಝೀಶಾನ್, ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್‌ನಲ್ಲಿ ಕೆಲಸ ಮಾಡಿದ ಯುವ ಹೋರಾಟಗಾರನಾಗಿದ್ದು, ರಾಜಕೀಯ ಆಗುಹೋಗುಗಳಿಗೆ ಸಕ್ರಿಯವಾಗಿ ಪ್ರತಿಕ್ರಿಯಿಸುತ್ತಾರೆ. ಲೇಖನದಲ್ಲಿ ಅಭಿಪ್ರಾಯಗಳು ವೈಯಕ್ತಿಕವಾದವು)


ಇದನ್ನೂ ಓದಿ: ಯಡಿಯೂರಪ್ಪ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಹೆಸರಿನ ಊಹೆಗಿಂತ ಕರ್ನಾಟಕದ ಸ್ಥಿತಿ ಚರ್ಚೆಯಾಗಬೇಕಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...