Homeಮುಖಪುಟಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಜನರು ಚುನಾಯಿಸಿದ ಶಾಸಕರುಗಳು ಮುಖ್ಯಮಂತ್ರಿಯನ್ನು ಆರಿಸಬೇಕು. ಆದರೆ ದುರಾದೃಷ್ಟವಶಾತ್ ದೆಹಲಿಯಿಂದ ಬರುವ ಲಕೋಟೆಗಳು ಕರ್ನಾಟಕದ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತಿವೆ.

- Advertisement -
- Advertisement -

ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕ ಗದ್ಗದಿತವಾಗಿ ದುಃಖಿತನಾಗಿ ತನ್ನ ಸ್ಥಾನಕ್ಕೆ ರಾಜಿನಾಮೆ ಘೋಷಿಸಿದ್ದಾರೆ.

ರಾಜ್ಯದ ಒಂದು ದೊಡ್ಡ ಸಮುದಾಯ ಹಾಗೂ ನೂರಾರು ಮಠಾಧೀಶರ ಬೆಂಬಲವೂ ದೆಹೆಲಿ ದೊರೆಗಳ ಮುಂದೆ ನಡೆಯಲಿಲ್ಲ. ಕರ್ನಾಟಕದ ಇಷ್ಟು ಮಠಾಧೀಶರಿಂದ ತಮ್ಮದೇ ರಾಜ್ಯದ ಒಬ್ಬ ಮುಖ್ಯಮಂತ್ರಿಯನ್ನು ಉಳಿಸಿಕೊಳ್ಳಲಿಕ್ಕೆ ಆಗಲಿಲ್ಲವೆಂಬುದು ವಿಪರ್ಯಾಸ. ಈ ಬೆಳವಣಿಗೆ ಹಿಂದುತ್ವ ರಾಜಕಾರಣ ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನಗಳ ಪರಂಪರೆಯನ್ನು ಮುನ್ನಡೆಸಿದಂತಿದೆ.

ಜನರು ಚುನಾಯಿಸಿದ ಶಾಸಕರುಗಳು ಮುಖ್ಯಮಂತ್ರಿಯನ್ನು ಆರಿಸಬೇಕು. ಆದರೆ ದುರಾದೃಷ್ಟವಶಾತ್ ದೆಹಲಿಯಿಂದ ಬರುವ ಲಕೋಟೆಗಳು ಕರ್ನಾಟಕದ ಮುಖ್ಯಮಂತ್ರಿ ಯಾರಾಗಬೇಕೆಂದು ನಿರ್ಧರಿಸುತ್ತಿವೆ. ಒಂದು ಕಾಲದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಲಕೋಟೆ ಸರ್ಕಾರ ಎಂದು ಬಿಂಬಿಸಲಾಗುತ್ತಿತ್ತು. ಇದೀಗ ಕಾಂಗ್ರೆಸ್ ಅನ್ನು ಟೀಕಿಸಿ ಅಧಿಕಾರಕ್ಕೆ ಬಂದ ಬಿಜೆಪಿಯು ಸಹ ಅದಕ್ಕಿಂತ ಘೋರವಾಗಿ ಲಕೋಟೆ ಸಂಸ್ಕೃತಿಯನ್ನು ಮುನ್ನಡೆಸುತ್ತಿದೆ.

ಯಾವುದೇ ರಾಜ್ಯಗಳಲ್ಲಿ ಜನರಿಂದ ಆರಿಸಿ ಬಂದ ಜನನಾಯಕರುಗಳು ಮೋದಿ-ಶಾರವರಿಗೆ ಬೇಕಾಗಿಲ್ಲ. ಮೋದಿ ಸರ್ಕಾರಕ್ಕೆ ಬೇಕಾಗಿರುವುದು ತಾವು ಹೇಳಿದ್ದಕ್ಕೆಲ್ಲಾ ತಲೆಯಾಡಿಸಿ ಕೇಳಿಕೊಂಡು ಹೋಗುವ ಮನಸ್ಥಿತಿಯ ಕೈಗೊಂಬೆಗಳು. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಇರಬಹುದು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಇರಬಹುದು ಅಥವಾ ಉತ್ತರಖಂಡ ಇನ್ಯಾವುದೇ ರಾಜ್ಯವಾದರೂ ಅಲ್ಲಿನ ಮುಖ್ಯಮಂತ್ರಿಗಳು ಬೃಹತ್ ಜನಬೆಂಬಲ ಇರುವವರಲ್ಲ. ಹಾಗಾಗಿಯೇ ಅವರನ್ನು ಮುಖ್ಯಮಂತ್ರಿಗಳಾಗಿ ಮಾಡಲಾಗಿದೆ. ಆದರೆ ಯಡಿಯೂರಪ್ಪ ಹಾಗಲ್ಲ. ಅವರು ಜಾತಿಬಲ, ಜನಬಲ ಹೊಂದಿರುವ ಮಾಸ್ ಲೀಡರ್. 75 ವರ್ಷ ತುಂಬಿದ ನಂತರವೂ ಪಕ್ಷದ ನಿಯಮ ಮೀರಿ ಕರ್ನಾಟಕದ ಮುಖ್ಯಮಂತ್ರಿಯಾದ ಛಾತಿವುಳ್ಳವರು. ಹಾಗಾಗಿಯೇ ಅವರನ್ನು ಮೋದಿ – ಶಾ ಕೆಳಗಿಳಿಸಿದ್ದಾರೆ.

ಯಡಿಯೂರಪ್ಪನವರ ಮಗ ಬಿ.ವೈ ವಿಜಯೇಂದ್ರ ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪ ಸತ್ಯ ಕೂಡ. ಆದರೆ ಅದೇ ಯಡಿಯೂರಪ್ಪನವರ ತಲೆದಂಡಕ್ಕೆ ಪ್ರಮುಖ ಕಾರಣ ಎನ್ನಲಾಗದು. ಯಡಿಯೂರಪ್ಪನವರು ಆಪರೇಷನ್ ಕಮಲ ನಡೆಸಿಯೇ ಎರಡು ಭಾರಿ ಮುಖ್ಯಮಂತ್ರಿಯಾಗಿದ್ದಾರೆ. ಅದಕ್ಕೆಲ್ಲ ಮೋದಿಯವರ ಒಪ್ಪಿಗೆ ಇತ್ತು. ಅಮಿತ್ ಶಾರವರ ಮಗ ಜಯ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಭ್ರಷ್ಟಾಚಾರದ ಮೂಲಕ ಹಣ ಮಾಡುತ್ತಿರುವುದು ಮೋದಿಗೆ ತಿಳಿದಿಲ್ಲವೇ? ಇತರ ಪಕ್ಷಗಳಲ್ಲಿ ಭಾರೀ ಭ್ರಷ್ಟಾಚಾರ ನಡೆಸಿ ಸಿಕ್ಕಿಬಿದ್ದವರನ್ನು ಬಿಜೆಪಿ ಏಕೆ ತನ್ನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ?

ಇದರರ್ಥ ಸ್ಪಷ್ಟವಾಗಿದೆ. ಅದೆಂದರೆ ಮೋದಿ ಸರ್ಕಾರ ಎಲ್ಲಾ ಅಧಿಕಾರವನ್ನು ತನ್ನತ್ತ ಕೇಂದ್ರೀಕರಿಸಿಕೊಳ್ಳಲು ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ಪ್ರಬಲ ಲಿಂಗಾಯತ ಜಾತಿಬಲ ಹೊಂದಿರುವ, ಸ್ವಂತಂತ್ರವಾಗಿ ಗೆದ್ದುಬರುವ ಸಾಮರ್ಥ್ಯವುಳ್ಳ ಯಡಿಯೂರಪ್ಪನವರು ಮೋದಿ ಮುಂದೆ ಕೈಕಟ್ಟಿ ಕುಳಿತುಕೊಳ್ಳುವವರಲ್ಲ. ಹಾಗಾಗಿಯೇ ಯಡಿಯೂರಪ್ಪನವರಂತಹ ಹಠಮಾರಿ ರಾಜಕಾರಣಿ ಮೋದಿ ಸರಕಾರಕ್ಕೆ ಬೇಕಾಗಿಲ್ಲ.

ವೋಟ್ ಕೇಳುವುದರಿಂದ ಹಿಡಿದು ಸರ್ಕಾರ ನಡೆಸಲು ಎಲ್ಲದಕ್ಕೂ ಮೋದಿ ಜಪ ಮಾಡುವವರು, ಕೇಂದ್ರದ ಆದೇಶಗಳಿಗೆ ತಲೆಬಾಗುವವರು ಬಿಜೆಪಿಗೆ ಬೇಕು. ಸರ್ವಾಧಿಕಾರ ಅಂದರೆ ಇದೇ ಅಲ್ಲವೆ? ಸ್ವಾಭಿಮಾನದಿಂದ ಬದುಕುವವರಿಗೆ ಬಿಜೆಪಿಯಲ್ಲಿ ಜಾಗವಿಲ್ಲ ಎಂಬುದನ್ನು ಬಿಜೆಪಿ ಮತ್ತೊಮ್ಮೆ ಸಾಬೀತುಪಡಿಸಿದೆ. ಕರ್ನಾಟಕದ 25 ಲೋಕಸಭಾ ಸದಸ್ಯರ ಹಾಗೆ ಕೈ ಕಟ್ಟಿ ನಿಲ್ಲುವ ನಾಯಕರಿಗೆ ಬಿಜೆಪಿಯಲ್ಲಿ ಬೆಲೆ ಇದ್ದಂತಿದೆ. ಯಾಕೆಂದರೆ ಇವರು ಆರಿಸಿ ಬಂದಿರುವುದೇ ಮೋದಿ ಹೆಸರನ್ನು ಹೇಳಿಕೊಂಡು, ಮೋದಿಯ ಅಸ್ತಿತ್ವದಿಂದಲೇ ಇವರ ಅಸ್ತಿತ್ವ.

ಭಾರತ ಇರುವುದೇ ರಾಜ್ಯಗಳಿಂದ ಎಂಬ ಕನಿಷ್ಠ ಜ್ಞಾನ ಬಿಜೆಪಿಯ ಕೇಂದ್ರ ನಾಯಕರಿಗೆ ಇದ್ದಂತಿಲ್ಲ. ಒಕ್ಕೂಟ ಸರಕಾರವನ್ನು ತಾವೇ ಅಳಬೇಕು, ರಾಜ್ಯವನ್ನು ತಾವೇ ಆಳಬೇಕೆಂಬ ದುರಾಸೆ ಇವರನ್ನು ಈ ಸ್ಥಿತಿಗೆ ತಂದಿದೆ. ರಾಜ್ಯದ ಎಲ್ಲಾ ಅಧಿಕಾರಗಳನ್ನು ಕಿತ್ತುಕೊಳ್ಳುವ ಮತ್ತು ರಾಜ್ಯಗಳನ್ನು ಅಘೋಷಿತ ಕೇಂದ್ರಾಡಳಿತ ಪ್ರದೇಶಗಳಾನ್ನಾಗಿ ಮಾಡುವ ಹುನ್ನಾರ ಭಾಗ ಯಡಿಯೂರಪ್ಪನವರ ರಾಜೀನಾಮೆ. ಇದು ಕೇವಲ ಮುಖ್ಯಮಂತ್ರಿಯ ಬದಲಾವಣೆ ಮಾತ್ರವಲ್ಲ ಸಮಸ್ತ ಆಡಳಿತದ ಬದಲಾವಣೆ. ಇದಕ್ಕಿಂತ ದೊಡ್ಡ ಆಘಾತ ಒಕ್ಕೂಟ ವ್ಯವಸ್ಥೆಗೆ ಮತ್ತೊಂದಿಲ್ಲ.

  • ಝೀಶಾನ್ ಆಖೀಲ್ ಸಿದ್ದಿಕಿ

(ರಾಯಚೂರು ಜಿಲ್ಲೆಯ ಮಾನ್ವಿಯವರಾದ ಝೀಶಾನ್, ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್‌ನಲ್ಲಿ ಕೆಲಸ ಮಾಡಿದ ಯುವ ಹೋರಾಟಗಾರನಾಗಿದ್ದು, ರಾಜಕೀಯ ಆಗುಹೋಗುಗಳಿಗೆ ಸಕ್ರಿಯವಾಗಿ ಪ್ರತಿಕ್ರಿಯಿಸುತ್ತಾರೆ. ಲೇಖನದಲ್ಲಿ ಅಭಿಪ್ರಾಯಗಳು ವೈಯಕ್ತಿಕವಾದವು)


ಇದನ್ನೂ ಓದಿ: ಯಡಿಯೂರಪ್ಪ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಹೆಸರಿನ ಊಹೆಗಿಂತ ಕರ್ನಾಟಕದ ಸ್ಥಿತಿ ಚರ್ಚೆಯಾಗಬೇಕಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...