Homeಮುಖಪುಟಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಜನರು ಚುನಾಯಿಸಿದ ಶಾಸಕರುಗಳು ಮುಖ್ಯಮಂತ್ರಿಯನ್ನು ಆರಿಸಬೇಕು. ಆದರೆ ದುರಾದೃಷ್ಟವಶಾತ್ ದೆಹಲಿಯಿಂದ ಬರುವ ಲಕೋಟೆಗಳು ಕರ್ನಾಟಕದ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತಿವೆ.

- Advertisement -
- Advertisement -

ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕ ಗದ್ಗದಿತವಾಗಿ ದುಃಖಿತನಾಗಿ ತನ್ನ ಸ್ಥಾನಕ್ಕೆ ರಾಜಿನಾಮೆ ಘೋಷಿಸಿದ್ದಾರೆ.

ರಾಜ್ಯದ ಒಂದು ದೊಡ್ಡ ಸಮುದಾಯ ಹಾಗೂ ನೂರಾರು ಮಠಾಧೀಶರ ಬೆಂಬಲವೂ ದೆಹೆಲಿ ದೊರೆಗಳ ಮುಂದೆ ನಡೆಯಲಿಲ್ಲ. ಕರ್ನಾಟಕದ ಇಷ್ಟು ಮಠಾಧೀಶರಿಂದ ತಮ್ಮದೇ ರಾಜ್ಯದ ಒಬ್ಬ ಮುಖ್ಯಮಂತ್ರಿಯನ್ನು ಉಳಿಸಿಕೊಳ್ಳಲಿಕ್ಕೆ ಆಗಲಿಲ್ಲವೆಂಬುದು ವಿಪರ್ಯಾಸ. ಈ ಬೆಳವಣಿಗೆ ಹಿಂದುತ್ವ ರಾಜಕಾರಣ ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನಗಳ ಪರಂಪರೆಯನ್ನು ಮುನ್ನಡೆಸಿದಂತಿದೆ.

ಜನರು ಚುನಾಯಿಸಿದ ಶಾಸಕರುಗಳು ಮುಖ್ಯಮಂತ್ರಿಯನ್ನು ಆರಿಸಬೇಕು. ಆದರೆ ದುರಾದೃಷ್ಟವಶಾತ್ ದೆಹಲಿಯಿಂದ ಬರುವ ಲಕೋಟೆಗಳು ಕರ್ನಾಟಕದ ಮುಖ್ಯಮಂತ್ರಿ ಯಾರಾಗಬೇಕೆಂದು ನಿರ್ಧರಿಸುತ್ತಿವೆ. ಒಂದು ಕಾಲದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಲಕೋಟೆ ಸರ್ಕಾರ ಎಂದು ಬಿಂಬಿಸಲಾಗುತ್ತಿತ್ತು. ಇದೀಗ ಕಾಂಗ್ರೆಸ್ ಅನ್ನು ಟೀಕಿಸಿ ಅಧಿಕಾರಕ್ಕೆ ಬಂದ ಬಿಜೆಪಿಯು ಸಹ ಅದಕ್ಕಿಂತ ಘೋರವಾಗಿ ಲಕೋಟೆ ಸಂಸ್ಕೃತಿಯನ್ನು ಮುನ್ನಡೆಸುತ್ತಿದೆ.

ಯಾವುದೇ ರಾಜ್ಯಗಳಲ್ಲಿ ಜನರಿಂದ ಆರಿಸಿ ಬಂದ ಜನನಾಯಕರುಗಳು ಮೋದಿ-ಶಾರವರಿಗೆ ಬೇಕಾಗಿಲ್ಲ. ಮೋದಿ ಸರ್ಕಾರಕ್ಕೆ ಬೇಕಾಗಿರುವುದು ತಾವು ಹೇಳಿದ್ದಕ್ಕೆಲ್ಲಾ ತಲೆಯಾಡಿಸಿ ಕೇಳಿಕೊಂಡು ಹೋಗುವ ಮನಸ್ಥಿತಿಯ ಕೈಗೊಂಬೆಗಳು. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಇರಬಹುದು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಇರಬಹುದು ಅಥವಾ ಉತ್ತರಖಂಡ ಇನ್ಯಾವುದೇ ರಾಜ್ಯವಾದರೂ ಅಲ್ಲಿನ ಮುಖ್ಯಮಂತ್ರಿಗಳು ಬೃಹತ್ ಜನಬೆಂಬಲ ಇರುವವರಲ್ಲ. ಹಾಗಾಗಿಯೇ ಅವರನ್ನು ಮುಖ್ಯಮಂತ್ರಿಗಳಾಗಿ ಮಾಡಲಾಗಿದೆ. ಆದರೆ ಯಡಿಯೂರಪ್ಪ ಹಾಗಲ್ಲ. ಅವರು ಜಾತಿಬಲ, ಜನಬಲ ಹೊಂದಿರುವ ಮಾಸ್ ಲೀಡರ್. 75 ವರ್ಷ ತುಂಬಿದ ನಂತರವೂ ಪಕ್ಷದ ನಿಯಮ ಮೀರಿ ಕರ್ನಾಟಕದ ಮುಖ್ಯಮಂತ್ರಿಯಾದ ಛಾತಿವುಳ್ಳವರು. ಹಾಗಾಗಿಯೇ ಅವರನ್ನು ಮೋದಿ – ಶಾ ಕೆಳಗಿಳಿಸಿದ್ದಾರೆ.

ಯಡಿಯೂರಪ್ಪನವರ ಮಗ ಬಿ.ವೈ ವಿಜಯೇಂದ್ರ ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪ ಸತ್ಯ ಕೂಡ. ಆದರೆ ಅದೇ ಯಡಿಯೂರಪ್ಪನವರ ತಲೆದಂಡಕ್ಕೆ ಪ್ರಮುಖ ಕಾರಣ ಎನ್ನಲಾಗದು. ಯಡಿಯೂರಪ್ಪನವರು ಆಪರೇಷನ್ ಕಮಲ ನಡೆಸಿಯೇ ಎರಡು ಭಾರಿ ಮುಖ್ಯಮಂತ್ರಿಯಾಗಿದ್ದಾರೆ. ಅದಕ್ಕೆಲ್ಲ ಮೋದಿಯವರ ಒಪ್ಪಿಗೆ ಇತ್ತು. ಅಮಿತ್ ಶಾರವರ ಮಗ ಜಯ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಭ್ರಷ್ಟಾಚಾರದ ಮೂಲಕ ಹಣ ಮಾಡುತ್ತಿರುವುದು ಮೋದಿಗೆ ತಿಳಿದಿಲ್ಲವೇ? ಇತರ ಪಕ್ಷಗಳಲ್ಲಿ ಭಾರೀ ಭ್ರಷ್ಟಾಚಾರ ನಡೆಸಿ ಸಿಕ್ಕಿಬಿದ್ದವರನ್ನು ಬಿಜೆಪಿ ಏಕೆ ತನ್ನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ?

ಇದರರ್ಥ ಸ್ಪಷ್ಟವಾಗಿದೆ. ಅದೆಂದರೆ ಮೋದಿ ಸರ್ಕಾರ ಎಲ್ಲಾ ಅಧಿಕಾರವನ್ನು ತನ್ನತ್ತ ಕೇಂದ್ರೀಕರಿಸಿಕೊಳ್ಳಲು ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ಪ್ರಬಲ ಲಿಂಗಾಯತ ಜಾತಿಬಲ ಹೊಂದಿರುವ, ಸ್ವಂತಂತ್ರವಾಗಿ ಗೆದ್ದುಬರುವ ಸಾಮರ್ಥ್ಯವುಳ್ಳ ಯಡಿಯೂರಪ್ಪನವರು ಮೋದಿ ಮುಂದೆ ಕೈಕಟ್ಟಿ ಕುಳಿತುಕೊಳ್ಳುವವರಲ್ಲ. ಹಾಗಾಗಿಯೇ ಯಡಿಯೂರಪ್ಪನವರಂತಹ ಹಠಮಾರಿ ರಾಜಕಾರಣಿ ಮೋದಿ ಸರಕಾರಕ್ಕೆ ಬೇಕಾಗಿಲ್ಲ.

ವೋಟ್ ಕೇಳುವುದರಿಂದ ಹಿಡಿದು ಸರ್ಕಾರ ನಡೆಸಲು ಎಲ್ಲದಕ್ಕೂ ಮೋದಿ ಜಪ ಮಾಡುವವರು, ಕೇಂದ್ರದ ಆದೇಶಗಳಿಗೆ ತಲೆಬಾಗುವವರು ಬಿಜೆಪಿಗೆ ಬೇಕು. ಸರ್ವಾಧಿಕಾರ ಅಂದರೆ ಇದೇ ಅಲ್ಲವೆ? ಸ್ವಾಭಿಮಾನದಿಂದ ಬದುಕುವವರಿಗೆ ಬಿಜೆಪಿಯಲ್ಲಿ ಜಾಗವಿಲ್ಲ ಎಂಬುದನ್ನು ಬಿಜೆಪಿ ಮತ್ತೊಮ್ಮೆ ಸಾಬೀತುಪಡಿಸಿದೆ. ಕರ್ನಾಟಕದ 25 ಲೋಕಸಭಾ ಸದಸ್ಯರ ಹಾಗೆ ಕೈ ಕಟ್ಟಿ ನಿಲ್ಲುವ ನಾಯಕರಿಗೆ ಬಿಜೆಪಿಯಲ್ಲಿ ಬೆಲೆ ಇದ್ದಂತಿದೆ. ಯಾಕೆಂದರೆ ಇವರು ಆರಿಸಿ ಬಂದಿರುವುದೇ ಮೋದಿ ಹೆಸರನ್ನು ಹೇಳಿಕೊಂಡು, ಮೋದಿಯ ಅಸ್ತಿತ್ವದಿಂದಲೇ ಇವರ ಅಸ್ತಿತ್ವ.

ಭಾರತ ಇರುವುದೇ ರಾಜ್ಯಗಳಿಂದ ಎಂಬ ಕನಿಷ್ಠ ಜ್ಞಾನ ಬಿಜೆಪಿಯ ಕೇಂದ್ರ ನಾಯಕರಿಗೆ ಇದ್ದಂತಿಲ್ಲ. ಒಕ್ಕೂಟ ಸರಕಾರವನ್ನು ತಾವೇ ಅಳಬೇಕು, ರಾಜ್ಯವನ್ನು ತಾವೇ ಆಳಬೇಕೆಂಬ ದುರಾಸೆ ಇವರನ್ನು ಈ ಸ್ಥಿತಿಗೆ ತಂದಿದೆ. ರಾಜ್ಯದ ಎಲ್ಲಾ ಅಧಿಕಾರಗಳನ್ನು ಕಿತ್ತುಕೊಳ್ಳುವ ಮತ್ತು ರಾಜ್ಯಗಳನ್ನು ಅಘೋಷಿತ ಕೇಂದ್ರಾಡಳಿತ ಪ್ರದೇಶಗಳಾನ್ನಾಗಿ ಮಾಡುವ ಹುನ್ನಾರ ಭಾಗ ಯಡಿಯೂರಪ್ಪನವರ ರಾಜೀನಾಮೆ. ಇದು ಕೇವಲ ಮುಖ್ಯಮಂತ್ರಿಯ ಬದಲಾವಣೆ ಮಾತ್ರವಲ್ಲ ಸಮಸ್ತ ಆಡಳಿತದ ಬದಲಾವಣೆ. ಇದಕ್ಕಿಂತ ದೊಡ್ಡ ಆಘಾತ ಒಕ್ಕೂಟ ವ್ಯವಸ್ಥೆಗೆ ಮತ್ತೊಂದಿಲ್ಲ.

  • ಝೀಶಾನ್ ಆಖೀಲ್ ಸಿದ್ದಿಕಿ

(ರಾಯಚೂರು ಜಿಲ್ಲೆಯ ಮಾನ್ವಿಯವರಾದ ಝೀಶಾನ್, ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್‌ನಲ್ಲಿ ಕೆಲಸ ಮಾಡಿದ ಯುವ ಹೋರಾಟಗಾರನಾಗಿದ್ದು, ರಾಜಕೀಯ ಆಗುಹೋಗುಗಳಿಗೆ ಸಕ್ರಿಯವಾಗಿ ಪ್ರತಿಕ್ರಿಯಿಸುತ್ತಾರೆ. ಲೇಖನದಲ್ಲಿ ಅಭಿಪ್ರಾಯಗಳು ವೈಯಕ್ತಿಕವಾದವು)


ಇದನ್ನೂ ಓದಿ: ಯಡಿಯೂರಪ್ಪ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಹೆಸರಿನ ಊಹೆಗಿಂತ ಕರ್ನಾಟಕದ ಸ್ಥಿತಿ ಚರ್ಚೆಯಾಗಬೇಕಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...