Homeಮುಖಪುಟಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಜನರು ಚುನಾಯಿಸಿದ ಶಾಸಕರುಗಳು ಮುಖ್ಯಮಂತ್ರಿಯನ್ನು ಆರಿಸಬೇಕು. ಆದರೆ ದುರಾದೃಷ್ಟವಶಾತ್ ದೆಹಲಿಯಿಂದ ಬರುವ ಲಕೋಟೆಗಳು ಕರ್ನಾಟಕದ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತಿವೆ.

- Advertisement -
- Advertisement -

ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕ ಗದ್ಗದಿತವಾಗಿ ದುಃಖಿತನಾಗಿ ತನ್ನ ಸ್ಥಾನಕ್ಕೆ ರಾಜಿನಾಮೆ ಘೋಷಿಸಿದ್ದಾರೆ.

ರಾಜ್ಯದ ಒಂದು ದೊಡ್ಡ ಸಮುದಾಯ ಹಾಗೂ ನೂರಾರು ಮಠಾಧೀಶರ ಬೆಂಬಲವೂ ದೆಹೆಲಿ ದೊರೆಗಳ ಮುಂದೆ ನಡೆಯಲಿಲ್ಲ. ಕರ್ನಾಟಕದ ಇಷ್ಟು ಮಠಾಧೀಶರಿಂದ ತಮ್ಮದೇ ರಾಜ್ಯದ ಒಬ್ಬ ಮುಖ್ಯಮಂತ್ರಿಯನ್ನು ಉಳಿಸಿಕೊಳ್ಳಲಿಕ್ಕೆ ಆಗಲಿಲ್ಲವೆಂಬುದು ವಿಪರ್ಯಾಸ. ಈ ಬೆಳವಣಿಗೆ ಹಿಂದುತ್ವ ರಾಜಕಾರಣ ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನಗಳ ಪರಂಪರೆಯನ್ನು ಮುನ್ನಡೆಸಿದಂತಿದೆ.

ಜನರು ಚುನಾಯಿಸಿದ ಶಾಸಕರುಗಳು ಮುಖ್ಯಮಂತ್ರಿಯನ್ನು ಆರಿಸಬೇಕು. ಆದರೆ ದುರಾದೃಷ್ಟವಶಾತ್ ದೆಹಲಿಯಿಂದ ಬರುವ ಲಕೋಟೆಗಳು ಕರ್ನಾಟಕದ ಮುಖ್ಯಮಂತ್ರಿ ಯಾರಾಗಬೇಕೆಂದು ನಿರ್ಧರಿಸುತ್ತಿವೆ. ಒಂದು ಕಾಲದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಲಕೋಟೆ ಸರ್ಕಾರ ಎಂದು ಬಿಂಬಿಸಲಾಗುತ್ತಿತ್ತು. ಇದೀಗ ಕಾಂಗ್ರೆಸ್ ಅನ್ನು ಟೀಕಿಸಿ ಅಧಿಕಾರಕ್ಕೆ ಬಂದ ಬಿಜೆಪಿಯು ಸಹ ಅದಕ್ಕಿಂತ ಘೋರವಾಗಿ ಲಕೋಟೆ ಸಂಸ್ಕೃತಿಯನ್ನು ಮುನ್ನಡೆಸುತ್ತಿದೆ.

ಯಾವುದೇ ರಾಜ್ಯಗಳಲ್ಲಿ ಜನರಿಂದ ಆರಿಸಿ ಬಂದ ಜನನಾಯಕರುಗಳು ಮೋದಿ-ಶಾರವರಿಗೆ ಬೇಕಾಗಿಲ್ಲ. ಮೋದಿ ಸರ್ಕಾರಕ್ಕೆ ಬೇಕಾಗಿರುವುದು ತಾವು ಹೇಳಿದ್ದಕ್ಕೆಲ್ಲಾ ತಲೆಯಾಡಿಸಿ ಕೇಳಿಕೊಂಡು ಹೋಗುವ ಮನಸ್ಥಿತಿಯ ಕೈಗೊಂಬೆಗಳು. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಇರಬಹುದು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಇರಬಹುದು ಅಥವಾ ಉತ್ತರಖಂಡ ಇನ್ಯಾವುದೇ ರಾಜ್ಯವಾದರೂ ಅಲ್ಲಿನ ಮುಖ್ಯಮಂತ್ರಿಗಳು ಬೃಹತ್ ಜನಬೆಂಬಲ ಇರುವವರಲ್ಲ. ಹಾಗಾಗಿಯೇ ಅವರನ್ನು ಮುಖ್ಯಮಂತ್ರಿಗಳಾಗಿ ಮಾಡಲಾಗಿದೆ. ಆದರೆ ಯಡಿಯೂರಪ್ಪ ಹಾಗಲ್ಲ. ಅವರು ಜಾತಿಬಲ, ಜನಬಲ ಹೊಂದಿರುವ ಮಾಸ್ ಲೀಡರ್. 75 ವರ್ಷ ತುಂಬಿದ ನಂತರವೂ ಪಕ್ಷದ ನಿಯಮ ಮೀರಿ ಕರ್ನಾಟಕದ ಮುಖ್ಯಮಂತ್ರಿಯಾದ ಛಾತಿವುಳ್ಳವರು. ಹಾಗಾಗಿಯೇ ಅವರನ್ನು ಮೋದಿ – ಶಾ ಕೆಳಗಿಳಿಸಿದ್ದಾರೆ.

ಯಡಿಯೂರಪ್ಪನವರ ಮಗ ಬಿ.ವೈ ವಿಜಯೇಂದ್ರ ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪ ಸತ್ಯ ಕೂಡ. ಆದರೆ ಅದೇ ಯಡಿಯೂರಪ್ಪನವರ ತಲೆದಂಡಕ್ಕೆ ಪ್ರಮುಖ ಕಾರಣ ಎನ್ನಲಾಗದು. ಯಡಿಯೂರಪ್ಪನವರು ಆಪರೇಷನ್ ಕಮಲ ನಡೆಸಿಯೇ ಎರಡು ಭಾರಿ ಮುಖ್ಯಮಂತ್ರಿಯಾಗಿದ್ದಾರೆ. ಅದಕ್ಕೆಲ್ಲ ಮೋದಿಯವರ ಒಪ್ಪಿಗೆ ಇತ್ತು. ಅಮಿತ್ ಶಾರವರ ಮಗ ಜಯ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಭ್ರಷ್ಟಾಚಾರದ ಮೂಲಕ ಹಣ ಮಾಡುತ್ತಿರುವುದು ಮೋದಿಗೆ ತಿಳಿದಿಲ್ಲವೇ? ಇತರ ಪಕ್ಷಗಳಲ್ಲಿ ಭಾರೀ ಭ್ರಷ್ಟಾಚಾರ ನಡೆಸಿ ಸಿಕ್ಕಿಬಿದ್ದವರನ್ನು ಬಿಜೆಪಿ ಏಕೆ ತನ್ನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ?

ಇದರರ್ಥ ಸ್ಪಷ್ಟವಾಗಿದೆ. ಅದೆಂದರೆ ಮೋದಿ ಸರ್ಕಾರ ಎಲ್ಲಾ ಅಧಿಕಾರವನ್ನು ತನ್ನತ್ತ ಕೇಂದ್ರೀಕರಿಸಿಕೊಳ್ಳಲು ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ಪ್ರಬಲ ಲಿಂಗಾಯತ ಜಾತಿಬಲ ಹೊಂದಿರುವ, ಸ್ವಂತಂತ್ರವಾಗಿ ಗೆದ್ದುಬರುವ ಸಾಮರ್ಥ್ಯವುಳ್ಳ ಯಡಿಯೂರಪ್ಪನವರು ಮೋದಿ ಮುಂದೆ ಕೈಕಟ್ಟಿ ಕುಳಿತುಕೊಳ್ಳುವವರಲ್ಲ. ಹಾಗಾಗಿಯೇ ಯಡಿಯೂರಪ್ಪನವರಂತಹ ಹಠಮಾರಿ ರಾಜಕಾರಣಿ ಮೋದಿ ಸರಕಾರಕ್ಕೆ ಬೇಕಾಗಿಲ್ಲ.

ವೋಟ್ ಕೇಳುವುದರಿಂದ ಹಿಡಿದು ಸರ್ಕಾರ ನಡೆಸಲು ಎಲ್ಲದಕ್ಕೂ ಮೋದಿ ಜಪ ಮಾಡುವವರು, ಕೇಂದ್ರದ ಆದೇಶಗಳಿಗೆ ತಲೆಬಾಗುವವರು ಬಿಜೆಪಿಗೆ ಬೇಕು. ಸರ್ವಾಧಿಕಾರ ಅಂದರೆ ಇದೇ ಅಲ್ಲವೆ? ಸ್ವಾಭಿಮಾನದಿಂದ ಬದುಕುವವರಿಗೆ ಬಿಜೆಪಿಯಲ್ಲಿ ಜಾಗವಿಲ್ಲ ಎಂಬುದನ್ನು ಬಿಜೆಪಿ ಮತ್ತೊಮ್ಮೆ ಸಾಬೀತುಪಡಿಸಿದೆ. ಕರ್ನಾಟಕದ 25 ಲೋಕಸಭಾ ಸದಸ್ಯರ ಹಾಗೆ ಕೈ ಕಟ್ಟಿ ನಿಲ್ಲುವ ನಾಯಕರಿಗೆ ಬಿಜೆಪಿಯಲ್ಲಿ ಬೆಲೆ ಇದ್ದಂತಿದೆ. ಯಾಕೆಂದರೆ ಇವರು ಆರಿಸಿ ಬಂದಿರುವುದೇ ಮೋದಿ ಹೆಸರನ್ನು ಹೇಳಿಕೊಂಡು, ಮೋದಿಯ ಅಸ್ತಿತ್ವದಿಂದಲೇ ಇವರ ಅಸ್ತಿತ್ವ.

ಭಾರತ ಇರುವುದೇ ರಾಜ್ಯಗಳಿಂದ ಎಂಬ ಕನಿಷ್ಠ ಜ್ಞಾನ ಬಿಜೆಪಿಯ ಕೇಂದ್ರ ನಾಯಕರಿಗೆ ಇದ್ದಂತಿಲ್ಲ. ಒಕ್ಕೂಟ ಸರಕಾರವನ್ನು ತಾವೇ ಅಳಬೇಕು, ರಾಜ್ಯವನ್ನು ತಾವೇ ಆಳಬೇಕೆಂಬ ದುರಾಸೆ ಇವರನ್ನು ಈ ಸ್ಥಿತಿಗೆ ತಂದಿದೆ. ರಾಜ್ಯದ ಎಲ್ಲಾ ಅಧಿಕಾರಗಳನ್ನು ಕಿತ್ತುಕೊಳ್ಳುವ ಮತ್ತು ರಾಜ್ಯಗಳನ್ನು ಅಘೋಷಿತ ಕೇಂದ್ರಾಡಳಿತ ಪ್ರದೇಶಗಳಾನ್ನಾಗಿ ಮಾಡುವ ಹುನ್ನಾರ ಭಾಗ ಯಡಿಯೂರಪ್ಪನವರ ರಾಜೀನಾಮೆ. ಇದು ಕೇವಲ ಮುಖ್ಯಮಂತ್ರಿಯ ಬದಲಾವಣೆ ಮಾತ್ರವಲ್ಲ ಸಮಸ್ತ ಆಡಳಿತದ ಬದಲಾವಣೆ. ಇದಕ್ಕಿಂತ ದೊಡ್ಡ ಆಘಾತ ಒಕ್ಕೂಟ ವ್ಯವಸ್ಥೆಗೆ ಮತ್ತೊಂದಿಲ್ಲ.

  • ಝೀಶಾನ್ ಆಖೀಲ್ ಸಿದ್ದಿಕಿ

(ರಾಯಚೂರು ಜಿಲ್ಲೆಯ ಮಾನ್ವಿಯವರಾದ ಝೀಶಾನ್, ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್‌ನಲ್ಲಿ ಕೆಲಸ ಮಾಡಿದ ಯುವ ಹೋರಾಟಗಾರನಾಗಿದ್ದು, ರಾಜಕೀಯ ಆಗುಹೋಗುಗಳಿಗೆ ಸಕ್ರಿಯವಾಗಿ ಪ್ರತಿಕ್ರಿಯಿಸುತ್ತಾರೆ. ಲೇಖನದಲ್ಲಿ ಅಭಿಪ್ರಾಯಗಳು ವೈಯಕ್ತಿಕವಾದವು)


ಇದನ್ನೂ ಓದಿ: ಯಡಿಯೂರಪ್ಪ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಹೆಸರಿನ ಊಹೆಗಿಂತ ಕರ್ನಾಟಕದ ಸ್ಥಿತಿ ಚರ್ಚೆಯಾಗಬೇಕಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...