Homeಚಳವಳಿರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಟಿಕ್ರಿ ಮತ್ತು ಸಿಂಘು ಗಡಿಗಳಲ್ಲಿ ಭಾರೀ ಹೋರಾಟ ಭುಗಿಲೆದ್ದಿದೆ. ಕಳೆದ 42 ದಿನಗಳಿಂದ ರೈತ ಹೋರಾಟದ ಕಣವಾಗಿ ವಿಶ್ವದ ಗಮನ ಸೆಳೆದಿರುವ ಈ ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯನ್ನು ನಮ್ಮ ಪ್ರತಿನಿಧಿಗಳು ಕಟ್ಟಿಕೊಟ್ಟಿದ್ದಾರೆ.

ದೆಹಲಿಯ ಉತ್ತರ ಭಾಗದಲ್ಲಿರುವ ಕಡೆಯ ಹಳ್ಳಿಯೇ ಸಿಂಘು. ಈ ಗಡಿಯನ್ನು ದಾಟಿದರೆ ಹರ್ಯಾಣ ಪ್ರವೇಶಿಸಿದಂತೆ. ಸುಮಾರು 250 ಮನೆಗಳಿರುವ ಈ ಹಳ್ಳಿಯು ದೆಹಲಿಯ ಕುಂಡ್ಲಿ, ನರೇಲಾ ಕೈಗಾರಿಕಾ ಪ್ರದೇಶಗಳಿಗೆ ಹತ್ತಿರವಾಗಿದೆ. ತೇಗ್‌ಬಹದ್ದೂರ್‌ ಸ್ಮಾರಕ, ರಾಜೀವ್‌ ಗಾಂಧಿ ಕ್ರೀಡಾ ಸಂಕೀರ್ಣಗಳು ಹತ್ತಿರದಲ್ಲೇ ಇರುವುದರಿಂದ ಈ ಗ್ರಾಮದ ಭೂಮಿಗೆ ಹೆಚ್ಚು ಬೆಲೆಯು ಸಿಕ್ಕಿದೆ. ಹಾಗಾಗಿ ಈ ಹಳ್ಳಿಯ ಆರ್ಥಿಕತೆ ಕೊಂಚ ಉತ್ತಮವಾಗಿದೆ. ಆದರೆ ಅರ್ಧಕ್ಕೂ ಹೆಚ್ಚು ನಿವಾಸಿಗಳು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ.

ಸಣ್ಣ ಹಿಡುವಳಿದಾರರೇ ಹೆಚ್ಚಿರುವ ಈ ಗ್ರಾಮದಲ್ಲಿ ಗೋಧಿ, ಅಕ್ಕಿಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ.
ತಮ್ಮ ಬೆಳೆಯನ್ನು ನರೇಲಾದ ಎಪಿಎಂಸಿಯಲ್ಲಿ ಮಾರುತ್ತಿದ್ದ ಇವರು ಹೊಸ ಮಸೂದೆಗಳಿಂದ ಕನಿಷ್ಠ ಬೆಂಬಲ ಬೆಲೆ, ಎಪಿಎಂಸಿ ಎಲ್ಲವೂ ಸ್ಥಗಿತಗೊಳ್ಳುತ್ತವೆ ಎಂದಿದ್ದಾರೆ.

ಕಳೆದ ವರ್ಷ ನವೆಂಬರ್‌ 28ರಿಂದ ರೈತ ಪ್ರತಿಭಟನೆ ನಡೆಯುತ್ತಿದೆ. 42 ದಿನಗಳಿಂದ ರೈತರು ಇಲ್ಲಿ ನೆರೆಯುತ್ತಿದ್ದು, ಪ್ರತಿ ದಿನ ಹೋರಾಟ ತೀವ್ರವಾಗುತ್ತಲೇ ಇದೆ.

ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಇದು ಹೋರಾಟಗಾರರ ಉತ್ಸಾಹವನ್ನು ಕಡಿಮೆ ಮಾಡಿಲ್ಲ.
ಪಂಜಾಬ್‌, ಹರ್ಯಾಣ, ರಾಜಸ್ತಾನಗಳಿಂದ ವಿವಿಧ ಸಂಘಟನೆಗಳು ಇಲ್ಲಿ ರೈತರು, ರೈತರ ಪರ ಹೋರಾಡುತ್ತಿರುವ ಕಾರ್ಯಕರ್ತರನ್ನು ಒಗ್ಗೂಡಿಸುತ್ತಿವೆ. 541 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್‌ ಮೋರ್ಚಾ ಹೋರಾಟಕ್ಕೆ ನೇತೃತ್ವ ನೀಡಿದೆ.

ಭಾರತೀಯ ಕಿಸಾನ್‌ ಯೂನಿಯನಿನ ವಿವಿಧ ಬಣಗಳು, ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ, ರಾಷ್ಟ್ರೀಯ ಕಿಸಾನ್‌ ಮೋರ್ಚಾ, ಪೆಂಡು ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ- ರಾಜಸ್ಥಾನ, ಖೇತಿ ಬವಾಚೊ ಸಂಘರ್ಷ ಸಮಿತಿ ಹರ್ಯಾಣ, ಫಾರ್ಮರ್‌ ಸ್ಟ್ರಗಲ್‌ ಕಮಿಟಿ, ಕಿಸಾನ್‌ ಸಂಘರ್ಷ ಸಮಿತಿ ಮುಂತಾದವು ಇದರ ಭಾಗವಾಗಿವೆ. ಪಂಜಾಬ್ ಮತ್ತು ಹರಿಯಾಣದ ರೈತರು ಬೃಹತ್ ಸಂಖ್ಯೆಯಲ್ಲಿದ್ದು ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ಇನ್ನು ಕೆಲವು ರಾಜ್ಯಗಳಿಂದ ನೂರಕ್ಕೂ ರೈತ-ರೈತ ಪರ ಸಂಘಟನೆಗಳು ಸಿಂಘುಗಡಿಯಲ್ಲಿ ಕೈಜೋಡಿಸಿವೆ.

ಸಿಂಘುವಿನಿಂದ ದೆಹಲಿಗೆ ಸಂಪರ್ಕ ಬೆಸೆಯುವ ಮೆಟ್ರೋ ಮಾರ್ಗದ ಉದ್ದಕ್ಕೂ ರೈತರ ಟ್ರ್ಯಾಕ್ಟರ್‌, ಲಾರಿ, ಟ್ರೇಲರ್‌ಗಳು ಸಾಲುಗಟ್ಟಿವೆ.

ಇಂಗ್ಲೆಂಡಿನ ಖಾಲ್ಸಾ ಏಡ್‌ ಎಂಬ ಸರ್ಕಾರೇತರ ಸಂಸ್ಥೆ ಎಲ್ಲ ರೀತಿಯ ನೆರವುಗಳನ್ನು ಒದಗಿಸಿದೆ. ವಿಶೇಷವಾಗಿ ಮಾಲ್‌ವೊಂದನ್ನು ಸ್ಥಾಪಿಸಿದ್ದು ಇಲ್ಲಿ ಹೋರಾಟ ನಿರತರಿಗೆ ಅಗತ್ಯವಾದ ಎಲ್ಲ ದಿನಸಿ, ತಿನಿಸು ಪದಾರ್ಥಗಳು ಲಭ್ಯವಿದೆ. ಇವೆಲ್ಲವೂ ಉಚಿತವಾಗಿ ಪೂರೈಸುತ್ತಿದೆ.

ಸಿಂಘು ಗಡಿಯ ಪ್ರತಿಭಟನಾ ಪ್ರದೇಶದಲ್ಲಿ ವಿವಿಧ ಸಣ್ಣ ವೇದಿಕೆಗಳಲ್ಲಿ ಕ್ರಾಂತಿಗೀತೆಗಳು, ಘೋಷಣೆಗಳು, ಭಾಷಣಗಳು ನಿರಂತರವಾಗಿ ನಡೆಯುತ್ತಿವೆ.

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

ಟಿಕ್ರಿ ಗಡಿ

ದೆಹಲಿಯ ಪಶ್ಚಿಮ ಭಾಗದಲ್ಲಿರುವ ಟಿಕ್ರಿ ಗಡಿ, ದೆಹಲಿ ಮತ್ತು ಹರ್ಯಾಣ ರಾಜ್ಯಗಳನ್ನು ಬೆಸೆಯುತ್ತದೆ. ಇದೀಗ ರೈತ ಹೋರಾಟದ ಬಹುಮುಖ್ಯ ಕೇಂದ್ರವೂ ಆಗಿದೆ.

ರಾಜಧಾನಿಯ ಕೇಂದ್ರಭಾಗದಿಂದ ಸುಮಾರು ಒಂದು ತಾಸು ಪ್ರಯಾಣದಷ್ಟು ದೂರವಿರುವ ಟಿಕ್ರಿಯಲ್ಲಿ ಸುಮಾರು 100ಕ್ಕೂ ರೈತ ಸಂಘಟನೆಗಳು ಲಕ್ಷಾಂತರ ರೈತರನ್ನು ಸಂಘಟಿಸಿವೆ.

ಟಿಕ್ರಿಯ ಉದ್ದಕ್ಕೂ ಮೆಟ್ರೋ ಮಾರ್ಗವಿದ್ದು, ಅದರ ಬೃಹತ್‌ ಕಂಬಗಳಡಿಯಲ್ಲಿ ರೈತರು ಬಿಡಾರ ಹೂಡಿದ್ದಾರೆ.
ಸುಮಾರು 15 ಕಿಮೀ ಉದ್ದಕ್ಕೂ ವಾಹನಗಳು ಸಾಲುಗಟ್ಟಿದ್ದು, ಕೆಲವು ವಾಹನಗಳು ರೈತ ಹೋರಾಟಗಾರರಿಗೆ ಅಗತ್ಯವಾದ ಎಲ್ಲ ರೀತಿಯ ಸಾಮಾಗ್ರಿಗಳನ್ನು ಹೊತ್ತು ನಿಂತಿವೆ. ಇನ್ನು ಕೆಲವು ಆಶ್ರಯತಾಣಗಳಾಗಿವೆ.

ಇನ್ನೂ ಅನೇಕರು ಮೆಟ್ರೋ ಮಾರ್ಗಕ್ಕೆಂದು ನಿರ್ಮಿಸಲಾಗಿರುವ ಕಂಬಗಳ ಅಡಿ ಆಶ್ರಯ ಪಡೆದುಕೊಂಡಿದ್ದಾರೆ.
ಟ್ಯಾಕ್ಟರು, ಲಗೇಜ್ ಆಟೋ, ಕಾರು, ಮಿನಿ ಬಸ್ ಮುಂತಾದ ವಾಹನಗಳ ನಡುವೆಯೇ ರಸ್ತೆಯ ಮಧ್ಯಭಾಗದಲ್ಲಿ ಜನ ಓಡಾಟಕ್ಕೆ ದಾರಿ ಮಾಡಿಕೊಂಡು, ಅದರ ಆಸುಪಾಸಿನಲ್ಲಿ ಉದ್ದಕ್ಕೂ ಡೇರೆಗಳನ್ನು ಹಾಕಲಾಗಿದೆ. ಆ ಡೇರೆಗಳಲ್ಲಿ ದೆಹಲಿ ಚಳಿಯಿಂದ ಜೀವ ಹಿಡಿದುಕೊಳ್ಳಲು ಬೇಕಾದ ಉಣ್ಣೆಯ ಶಾಲು, ಟೊಪ್ಪಿ, ಹೊದಿಕೆ, ಹಾಸಿಗೆ, ನಿತ್ಯ ಬಳಕೆಯ ವಸ್ತುಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ 500 ಮೀಟರಿಗೊಂದು ಪ್ರತ್ಯೇಕ ಅಡುಗೆ ಮತ್ತು ಊಟದ ಲಂಗರುಗಳನ್ನು ನಿರ್ಮಿಸಲಾಗಿದೆ. ಸ್ನಾನ ಮತ್ತು ಶೌಚಕ್ಕೆ ಮೊಬೈಲ್ ಬಾತ್ ರೂಂ- ಟಾಯ್ಲೆಟ್ ವ್ಯವಸ್ಥೆಗಳಿವೆ.

 

ಟಿಕ್ರಿ ಗಡಿಯಲ್ಲಿ ಒಂದು ಮುಖ್ಯ ವೇದಿಕೆ ಮೂಲಕ ಪ್ರತಿಭಟನಾ ಭಾಷಣ, ಧರಣಿಗಳನ್ನು ನಡೆಸಲಾಗುತ್ತಿದ್ದರೂ, ಅಲ್ಲಿ ಸೇರಿರುವ ಸುಮಾರು ನೂರಾರು ವಿವಿಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ತಮ್ಮ ತಮ್ಮ ವಾಸ್ತವ್ಯದ ಟೆಂಟ್ ಬಳಿಯೇ ನಿತ್ಯದ ಸಭೆ, ಚರ್ಚೆ, ಹಾಡು, ನೃತ್ಯಗಳಿಗಾಗಿ ಪ್ರತ್ಯೇಕ ಚಿಕ್ಕಚಿಕ್ಕ ವೇದಿಕೆಗಳನ್ನೂ ಮಾಡಿಕೊಂಡಿವೆ. 200ಕ್ಕೂ ಹೆಚ್ಚು ಸಂಘಟನೆಗಳು ರೈತ ಹೋರಾಟಕ್ಕೆ ದನಿಗೂಡಿಸಿವೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...