Homeಚಳವಳಿರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಟಿಕ್ರಿ ಮತ್ತು ಸಿಂಘು ಗಡಿಗಳಲ್ಲಿ ಭಾರೀ ಹೋರಾಟ ಭುಗಿಲೆದ್ದಿದೆ. ಕಳೆದ 42 ದಿನಗಳಿಂದ ರೈತ ಹೋರಾಟದ ಕಣವಾಗಿ ವಿಶ್ವದ ಗಮನ ಸೆಳೆದಿರುವ ಈ ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯನ್ನು ನಮ್ಮ ಪ್ರತಿನಿಧಿಗಳು ಕಟ್ಟಿಕೊಟ್ಟಿದ್ದಾರೆ.

ದೆಹಲಿಯ ಉತ್ತರ ಭಾಗದಲ್ಲಿರುವ ಕಡೆಯ ಹಳ್ಳಿಯೇ ಸಿಂಘು. ಈ ಗಡಿಯನ್ನು ದಾಟಿದರೆ ಹರ್ಯಾಣ ಪ್ರವೇಶಿಸಿದಂತೆ. ಸುಮಾರು 250 ಮನೆಗಳಿರುವ ಈ ಹಳ್ಳಿಯು ದೆಹಲಿಯ ಕುಂಡ್ಲಿ, ನರೇಲಾ ಕೈಗಾರಿಕಾ ಪ್ರದೇಶಗಳಿಗೆ ಹತ್ತಿರವಾಗಿದೆ. ತೇಗ್‌ಬಹದ್ದೂರ್‌ ಸ್ಮಾರಕ, ರಾಜೀವ್‌ ಗಾಂಧಿ ಕ್ರೀಡಾ ಸಂಕೀರ್ಣಗಳು ಹತ್ತಿರದಲ್ಲೇ ಇರುವುದರಿಂದ ಈ ಗ್ರಾಮದ ಭೂಮಿಗೆ ಹೆಚ್ಚು ಬೆಲೆಯು ಸಿಕ್ಕಿದೆ. ಹಾಗಾಗಿ ಈ ಹಳ್ಳಿಯ ಆರ್ಥಿಕತೆ ಕೊಂಚ ಉತ್ತಮವಾಗಿದೆ. ಆದರೆ ಅರ್ಧಕ್ಕೂ ಹೆಚ್ಚು ನಿವಾಸಿಗಳು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ.

ಸಣ್ಣ ಹಿಡುವಳಿದಾರರೇ ಹೆಚ್ಚಿರುವ ಈ ಗ್ರಾಮದಲ್ಲಿ ಗೋಧಿ, ಅಕ್ಕಿಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ.
ತಮ್ಮ ಬೆಳೆಯನ್ನು ನರೇಲಾದ ಎಪಿಎಂಸಿಯಲ್ಲಿ ಮಾರುತ್ತಿದ್ದ ಇವರು ಹೊಸ ಮಸೂದೆಗಳಿಂದ ಕನಿಷ್ಠ ಬೆಂಬಲ ಬೆಲೆ, ಎಪಿಎಂಸಿ ಎಲ್ಲವೂ ಸ್ಥಗಿತಗೊಳ್ಳುತ್ತವೆ ಎಂದಿದ್ದಾರೆ.

ಕಳೆದ ವರ್ಷ ನವೆಂಬರ್‌ 28ರಿಂದ ರೈತ ಪ್ರತಿಭಟನೆ ನಡೆಯುತ್ತಿದೆ. 42 ದಿನಗಳಿಂದ ರೈತರು ಇಲ್ಲಿ ನೆರೆಯುತ್ತಿದ್ದು, ಪ್ರತಿ ದಿನ ಹೋರಾಟ ತೀವ್ರವಾಗುತ್ತಲೇ ಇದೆ.

ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಇದು ಹೋರಾಟಗಾರರ ಉತ್ಸಾಹವನ್ನು ಕಡಿಮೆ ಮಾಡಿಲ್ಲ.
ಪಂಜಾಬ್‌, ಹರ್ಯಾಣ, ರಾಜಸ್ತಾನಗಳಿಂದ ವಿವಿಧ ಸಂಘಟನೆಗಳು ಇಲ್ಲಿ ರೈತರು, ರೈತರ ಪರ ಹೋರಾಡುತ್ತಿರುವ ಕಾರ್ಯಕರ್ತರನ್ನು ಒಗ್ಗೂಡಿಸುತ್ತಿವೆ. 541 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್‌ ಮೋರ್ಚಾ ಹೋರಾಟಕ್ಕೆ ನೇತೃತ್ವ ನೀಡಿದೆ.

ಭಾರತೀಯ ಕಿಸಾನ್‌ ಯೂನಿಯನಿನ ವಿವಿಧ ಬಣಗಳು, ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ, ರಾಷ್ಟ್ರೀಯ ಕಿಸಾನ್‌ ಮೋರ್ಚಾ, ಪೆಂಡು ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ- ರಾಜಸ್ಥಾನ, ಖೇತಿ ಬವಾಚೊ ಸಂಘರ್ಷ ಸಮಿತಿ ಹರ್ಯಾಣ, ಫಾರ್ಮರ್‌ ಸ್ಟ್ರಗಲ್‌ ಕಮಿಟಿ, ಕಿಸಾನ್‌ ಸಂಘರ್ಷ ಸಮಿತಿ ಮುಂತಾದವು ಇದರ ಭಾಗವಾಗಿವೆ. ಪಂಜಾಬ್ ಮತ್ತು ಹರಿಯಾಣದ ರೈತರು ಬೃಹತ್ ಸಂಖ್ಯೆಯಲ್ಲಿದ್ದು ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ಇನ್ನು ಕೆಲವು ರಾಜ್ಯಗಳಿಂದ ನೂರಕ್ಕೂ ರೈತ-ರೈತ ಪರ ಸಂಘಟನೆಗಳು ಸಿಂಘುಗಡಿಯಲ್ಲಿ ಕೈಜೋಡಿಸಿವೆ.

ಸಿಂಘುವಿನಿಂದ ದೆಹಲಿಗೆ ಸಂಪರ್ಕ ಬೆಸೆಯುವ ಮೆಟ್ರೋ ಮಾರ್ಗದ ಉದ್ದಕ್ಕೂ ರೈತರ ಟ್ರ್ಯಾಕ್ಟರ್‌, ಲಾರಿ, ಟ್ರೇಲರ್‌ಗಳು ಸಾಲುಗಟ್ಟಿವೆ.

ಇಂಗ್ಲೆಂಡಿನ ಖಾಲ್ಸಾ ಏಡ್‌ ಎಂಬ ಸರ್ಕಾರೇತರ ಸಂಸ್ಥೆ ಎಲ್ಲ ರೀತಿಯ ನೆರವುಗಳನ್ನು ಒದಗಿಸಿದೆ. ವಿಶೇಷವಾಗಿ ಮಾಲ್‌ವೊಂದನ್ನು ಸ್ಥಾಪಿಸಿದ್ದು ಇಲ್ಲಿ ಹೋರಾಟ ನಿರತರಿಗೆ ಅಗತ್ಯವಾದ ಎಲ್ಲ ದಿನಸಿ, ತಿನಿಸು ಪದಾರ್ಥಗಳು ಲಭ್ಯವಿದೆ. ಇವೆಲ್ಲವೂ ಉಚಿತವಾಗಿ ಪೂರೈಸುತ್ತಿದೆ.

ಸಿಂಘು ಗಡಿಯ ಪ್ರತಿಭಟನಾ ಪ್ರದೇಶದಲ್ಲಿ ವಿವಿಧ ಸಣ್ಣ ವೇದಿಕೆಗಳಲ್ಲಿ ಕ್ರಾಂತಿಗೀತೆಗಳು, ಘೋಷಣೆಗಳು, ಭಾಷಣಗಳು ನಿರಂತರವಾಗಿ ನಡೆಯುತ್ತಿವೆ.

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

ಟಿಕ್ರಿ ಗಡಿ

ದೆಹಲಿಯ ಪಶ್ಚಿಮ ಭಾಗದಲ್ಲಿರುವ ಟಿಕ್ರಿ ಗಡಿ, ದೆಹಲಿ ಮತ್ತು ಹರ್ಯಾಣ ರಾಜ್ಯಗಳನ್ನು ಬೆಸೆಯುತ್ತದೆ. ಇದೀಗ ರೈತ ಹೋರಾಟದ ಬಹುಮುಖ್ಯ ಕೇಂದ್ರವೂ ಆಗಿದೆ.

ರಾಜಧಾನಿಯ ಕೇಂದ್ರಭಾಗದಿಂದ ಸುಮಾರು ಒಂದು ತಾಸು ಪ್ರಯಾಣದಷ್ಟು ದೂರವಿರುವ ಟಿಕ್ರಿಯಲ್ಲಿ ಸುಮಾರು 100ಕ್ಕೂ ರೈತ ಸಂಘಟನೆಗಳು ಲಕ್ಷಾಂತರ ರೈತರನ್ನು ಸಂಘಟಿಸಿವೆ.

ಟಿಕ್ರಿಯ ಉದ್ದಕ್ಕೂ ಮೆಟ್ರೋ ಮಾರ್ಗವಿದ್ದು, ಅದರ ಬೃಹತ್‌ ಕಂಬಗಳಡಿಯಲ್ಲಿ ರೈತರು ಬಿಡಾರ ಹೂಡಿದ್ದಾರೆ.
ಸುಮಾರು 15 ಕಿಮೀ ಉದ್ದಕ್ಕೂ ವಾಹನಗಳು ಸಾಲುಗಟ್ಟಿದ್ದು, ಕೆಲವು ವಾಹನಗಳು ರೈತ ಹೋರಾಟಗಾರರಿಗೆ ಅಗತ್ಯವಾದ ಎಲ್ಲ ರೀತಿಯ ಸಾಮಾಗ್ರಿಗಳನ್ನು ಹೊತ್ತು ನಿಂತಿವೆ. ಇನ್ನು ಕೆಲವು ಆಶ್ರಯತಾಣಗಳಾಗಿವೆ.

ಇನ್ನೂ ಅನೇಕರು ಮೆಟ್ರೋ ಮಾರ್ಗಕ್ಕೆಂದು ನಿರ್ಮಿಸಲಾಗಿರುವ ಕಂಬಗಳ ಅಡಿ ಆಶ್ರಯ ಪಡೆದುಕೊಂಡಿದ್ದಾರೆ.
ಟ್ಯಾಕ್ಟರು, ಲಗೇಜ್ ಆಟೋ, ಕಾರು, ಮಿನಿ ಬಸ್ ಮುಂತಾದ ವಾಹನಗಳ ನಡುವೆಯೇ ರಸ್ತೆಯ ಮಧ್ಯಭಾಗದಲ್ಲಿ ಜನ ಓಡಾಟಕ್ಕೆ ದಾರಿ ಮಾಡಿಕೊಂಡು, ಅದರ ಆಸುಪಾಸಿನಲ್ಲಿ ಉದ್ದಕ್ಕೂ ಡೇರೆಗಳನ್ನು ಹಾಕಲಾಗಿದೆ. ಆ ಡೇರೆಗಳಲ್ಲಿ ದೆಹಲಿ ಚಳಿಯಿಂದ ಜೀವ ಹಿಡಿದುಕೊಳ್ಳಲು ಬೇಕಾದ ಉಣ್ಣೆಯ ಶಾಲು, ಟೊಪ್ಪಿ, ಹೊದಿಕೆ, ಹಾಸಿಗೆ, ನಿತ್ಯ ಬಳಕೆಯ ವಸ್ತುಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ 500 ಮೀಟರಿಗೊಂದು ಪ್ರತ್ಯೇಕ ಅಡುಗೆ ಮತ್ತು ಊಟದ ಲಂಗರುಗಳನ್ನು ನಿರ್ಮಿಸಲಾಗಿದೆ. ಸ್ನಾನ ಮತ್ತು ಶೌಚಕ್ಕೆ ಮೊಬೈಲ್ ಬಾತ್ ರೂಂ- ಟಾಯ್ಲೆಟ್ ವ್ಯವಸ್ಥೆಗಳಿವೆ.

 

ಟಿಕ್ರಿ ಗಡಿಯಲ್ಲಿ ಒಂದು ಮುಖ್ಯ ವೇದಿಕೆ ಮೂಲಕ ಪ್ರತಿಭಟನಾ ಭಾಷಣ, ಧರಣಿಗಳನ್ನು ನಡೆಸಲಾಗುತ್ತಿದ್ದರೂ, ಅಲ್ಲಿ ಸೇರಿರುವ ಸುಮಾರು ನೂರಾರು ವಿವಿಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ತಮ್ಮ ತಮ್ಮ ವಾಸ್ತವ್ಯದ ಟೆಂಟ್ ಬಳಿಯೇ ನಿತ್ಯದ ಸಭೆ, ಚರ್ಚೆ, ಹಾಡು, ನೃತ್ಯಗಳಿಗಾಗಿ ಪ್ರತ್ಯೇಕ ಚಿಕ್ಕಚಿಕ್ಕ ವೇದಿಕೆಗಳನ್ನೂ ಮಾಡಿಕೊಂಡಿವೆ. 200ಕ್ಕೂ ಹೆಚ್ಚು ಸಂಘಟನೆಗಳು ರೈತ ಹೋರಾಟಕ್ಕೆ ದನಿಗೂಡಿಸಿವೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...