Homeಚಳವಳಿರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಟಿಕ್ರಿ ಮತ್ತು ಸಿಂಘು ಗಡಿಗಳಲ್ಲಿ ಭಾರೀ ಹೋರಾಟ ಭುಗಿಲೆದ್ದಿದೆ. ಕಳೆದ 42 ದಿನಗಳಿಂದ ರೈತ ಹೋರಾಟದ ಕಣವಾಗಿ ವಿಶ್ವದ ಗಮನ ಸೆಳೆದಿರುವ ಈ ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯನ್ನು ನಮ್ಮ ಪ್ರತಿನಿಧಿಗಳು ಕಟ್ಟಿಕೊಟ್ಟಿದ್ದಾರೆ.

ದೆಹಲಿಯ ಉತ್ತರ ಭಾಗದಲ್ಲಿರುವ ಕಡೆಯ ಹಳ್ಳಿಯೇ ಸಿಂಘು. ಈ ಗಡಿಯನ್ನು ದಾಟಿದರೆ ಹರ್ಯಾಣ ಪ್ರವೇಶಿಸಿದಂತೆ. ಸುಮಾರು 250 ಮನೆಗಳಿರುವ ಈ ಹಳ್ಳಿಯು ದೆಹಲಿಯ ಕುಂಡ್ಲಿ, ನರೇಲಾ ಕೈಗಾರಿಕಾ ಪ್ರದೇಶಗಳಿಗೆ ಹತ್ತಿರವಾಗಿದೆ. ತೇಗ್‌ಬಹದ್ದೂರ್‌ ಸ್ಮಾರಕ, ರಾಜೀವ್‌ ಗಾಂಧಿ ಕ್ರೀಡಾ ಸಂಕೀರ್ಣಗಳು ಹತ್ತಿರದಲ್ಲೇ ಇರುವುದರಿಂದ ಈ ಗ್ರಾಮದ ಭೂಮಿಗೆ ಹೆಚ್ಚು ಬೆಲೆಯು ಸಿಕ್ಕಿದೆ. ಹಾಗಾಗಿ ಈ ಹಳ್ಳಿಯ ಆರ್ಥಿಕತೆ ಕೊಂಚ ಉತ್ತಮವಾಗಿದೆ. ಆದರೆ ಅರ್ಧಕ್ಕೂ ಹೆಚ್ಚು ನಿವಾಸಿಗಳು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ.

ಸಣ್ಣ ಹಿಡುವಳಿದಾರರೇ ಹೆಚ್ಚಿರುವ ಈ ಗ್ರಾಮದಲ್ಲಿ ಗೋಧಿ, ಅಕ್ಕಿಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ.
ತಮ್ಮ ಬೆಳೆಯನ್ನು ನರೇಲಾದ ಎಪಿಎಂಸಿಯಲ್ಲಿ ಮಾರುತ್ತಿದ್ದ ಇವರು ಹೊಸ ಮಸೂದೆಗಳಿಂದ ಕನಿಷ್ಠ ಬೆಂಬಲ ಬೆಲೆ, ಎಪಿಎಂಸಿ ಎಲ್ಲವೂ ಸ್ಥಗಿತಗೊಳ್ಳುತ್ತವೆ ಎಂದಿದ್ದಾರೆ.

ಕಳೆದ ವರ್ಷ ನವೆಂಬರ್‌ 28ರಿಂದ ರೈತ ಪ್ರತಿಭಟನೆ ನಡೆಯುತ್ತಿದೆ. 42 ದಿನಗಳಿಂದ ರೈತರು ಇಲ್ಲಿ ನೆರೆಯುತ್ತಿದ್ದು, ಪ್ರತಿ ದಿನ ಹೋರಾಟ ತೀವ್ರವಾಗುತ್ತಲೇ ಇದೆ.

ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಇದು ಹೋರಾಟಗಾರರ ಉತ್ಸಾಹವನ್ನು ಕಡಿಮೆ ಮಾಡಿಲ್ಲ.
ಪಂಜಾಬ್‌, ಹರ್ಯಾಣ, ರಾಜಸ್ತಾನಗಳಿಂದ ವಿವಿಧ ಸಂಘಟನೆಗಳು ಇಲ್ಲಿ ರೈತರು, ರೈತರ ಪರ ಹೋರಾಡುತ್ತಿರುವ ಕಾರ್ಯಕರ್ತರನ್ನು ಒಗ್ಗೂಡಿಸುತ್ತಿವೆ. 541 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್‌ ಮೋರ್ಚಾ ಹೋರಾಟಕ್ಕೆ ನೇತೃತ್ವ ನೀಡಿದೆ.

ಭಾರತೀಯ ಕಿಸಾನ್‌ ಯೂನಿಯನಿನ ವಿವಿಧ ಬಣಗಳು, ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ, ರಾಷ್ಟ್ರೀಯ ಕಿಸಾನ್‌ ಮೋರ್ಚಾ, ಪೆಂಡು ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ- ರಾಜಸ್ಥಾನ, ಖೇತಿ ಬವಾಚೊ ಸಂಘರ್ಷ ಸಮಿತಿ ಹರ್ಯಾಣ, ಫಾರ್ಮರ್‌ ಸ್ಟ್ರಗಲ್‌ ಕಮಿಟಿ, ಕಿಸಾನ್‌ ಸಂಘರ್ಷ ಸಮಿತಿ ಮುಂತಾದವು ಇದರ ಭಾಗವಾಗಿವೆ. ಪಂಜಾಬ್ ಮತ್ತು ಹರಿಯಾಣದ ರೈತರು ಬೃಹತ್ ಸಂಖ್ಯೆಯಲ್ಲಿದ್ದು ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ಇನ್ನು ಕೆಲವು ರಾಜ್ಯಗಳಿಂದ ನೂರಕ್ಕೂ ರೈತ-ರೈತ ಪರ ಸಂಘಟನೆಗಳು ಸಿಂಘುಗಡಿಯಲ್ಲಿ ಕೈಜೋಡಿಸಿವೆ.

ಸಿಂಘುವಿನಿಂದ ದೆಹಲಿಗೆ ಸಂಪರ್ಕ ಬೆಸೆಯುವ ಮೆಟ್ರೋ ಮಾರ್ಗದ ಉದ್ದಕ್ಕೂ ರೈತರ ಟ್ರ್ಯಾಕ್ಟರ್‌, ಲಾರಿ, ಟ್ರೇಲರ್‌ಗಳು ಸಾಲುಗಟ್ಟಿವೆ.

ಇಂಗ್ಲೆಂಡಿನ ಖಾಲ್ಸಾ ಏಡ್‌ ಎಂಬ ಸರ್ಕಾರೇತರ ಸಂಸ್ಥೆ ಎಲ್ಲ ರೀತಿಯ ನೆರವುಗಳನ್ನು ಒದಗಿಸಿದೆ. ವಿಶೇಷವಾಗಿ ಮಾಲ್‌ವೊಂದನ್ನು ಸ್ಥಾಪಿಸಿದ್ದು ಇಲ್ಲಿ ಹೋರಾಟ ನಿರತರಿಗೆ ಅಗತ್ಯವಾದ ಎಲ್ಲ ದಿನಸಿ, ತಿನಿಸು ಪದಾರ್ಥಗಳು ಲಭ್ಯವಿದೆ. ಇವೆಲ್ಲವೂ ಉಚಿತವಾಗಿ ಪೂರೈಸುತ್ತಿದೆ.

ಸಿಂಘು ಗಡಿಯ ಪ್ರತಿಭಟನಾ ಪ್ರದೇಶದಲ್ಲಿ ವಿವಿಧ ಸಣ್ಣ ವೇದಿಕೆಗಳಲ್ಲಿ ಕ್ರಾಂತಿಗೀತೆಗಳು, ಘೋಷಣೆಗಳು, ಭಾಷಣಗಳು ನಿರಂತರವಾಗಿ ನಡೆಯುತ್ತಿವೆ.

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

ಟಿಕ್ರಿ ಗಡಿ

ದೆಹಲಿಯ ಪಶ್ಚಿಮ ಭಾಗದಲ್ಲಿರುವ ಟಿಕ್ರಿ ಗಡಿ, ದೆಹಲಿ ಮತ್ತು ಹರ್ಯಾಣ ರಾಜ್ಯಗಳನ್ನು ಬೆಸೆಯುತ್ತದೆ. ಇದೀಗ ರೈತ ಹೋರಾಟದ ಬಹುಮುಖ್ಯ ಕೇಂದ್ರವೂ ಆಗಿದೆ.

ರಾಜಧಾನಿಯ ಕೇಂದ್ರಭಾಗದಿಂದ ಸುಮಾರು ಒಂದು ತಾಸು ಪ್ರಯಾಣದಷ್ಟು ದೂರವಿರುವ ಟಿಕ್ರಿಯಲ್ಲಿ ಸುಮಾರು 100ಕ್ಕೂ ರೈತ ಸಂಘಟನೆಗಳು ಲಕ್ಷಾಂತರ ರೈತರನ್ನು ಸಂಘಟಿಸಿವೆ.

ಟಿಕ್ರಿಯ ಉದ್ದಕ್ಕೂ ಮೆಟ್ರೋ ಮಾರ್ಗವಿದ್ದು, ಅದರ ಬೃಹತ್‌ ಕಂಬಗಳಡಿಯಲ್ಲಿ ರೈತರು ಬಿಡಾರ ಹೂಡಿದ್ದಾರೆ.
ಸುಮಾರು 15 ಕಿಮೀ ಉದ್ದಕ್ಕೂ ವಾಹನಗಳು ಸಾಲುಗಟ್ಟಿದ್ದು, ಕೆಲವು ವಾಹನಗಳು ರೈತ ಹೋರಾಟಗಾರರಿಗೆ ಅಗತ್ಯವಾದ ಎಲ್ಲ ರೀತಿಯ ಸಾಮಾಗ್ರಿಗಳನ್ನು ಹೊತ್ತು ನಿಂತಿವೆ. ಇನ್ನು ಕೆಲವು ಆಶ್ರಯತಾಣಗಳಾಗಿವೆ.

ಇನ್ನೂ ಅನೇಕರು ಮೆಟ್ರೋ ಮಾರ್ಗಕ್ಕೆಂದು ನಿರ್ಮಿಸಲಾಗಿರುವ ಕಂಬಗಳ ಅಡಿ ಆಶ್ರಯ ಪಡೆದುಕೊಂಡಿದ್ದಾರೆ.
ಟ್ಯಾಕ್ಟರು, ಲಗೇಜ್ ಆಟೋ, ಕಾರು, ಮಿನಿ ಬಸ್ ಮುಂತಾದ ವಾಹನಗಳ ನಡುವೆಯೇ ರಸ್ತೆಯ ಮಧ್ಯಭಾಗದಲ್ಲಿ ಜನ ಓಡಾಟಕ್ಕೆ ದಾರಿ ಮಾಡಿಕೊಂಡು, ಅದರ ಆಸುಪಾಸಿನಲ್ಲಿ ಉದ್ದಕ್ಕೂ ಡೇರೆಗಳನ್ನು ಹಾಕಲಾಗಿದೆ. ಆ ಡೇರೆಗಳಲ್ಲಿ ದೆಹಲಿ ಚಳಿಯಿಂದ ಜೀವ ಹಿಡಿದುಕೊಳ್ಳಲು ಬೇಕಾದ ಉಣ್ಣೆಯ ಶಾಲು, ಟೊಪ್ಪಿ, ಹೊದಿಕೆ, ಹಾಸಿಗೆ, ನಿತ್ಯ ಬಳಕೆಯ ವಸ್ತುಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ 500 ಮೀಟರಿಗೊಂದು ಪ್ರತ್ಯೇಕ ಅಡುಗೆ ಮತ್ತು ಊಟದ ಲಂಗರುಗಳನ್ನು ನಿರ್ಮಿಸಲಾಗಿದೆ. ಸ್ನಾನ ಮತ್ತು ಶೌಚಕ್ಕೆ ಮೊಬೈಲ್ ಬಾತ್ ರೂಂ- ಟಾಯ್ಲೆಟ್ ವ್ಯವಸ್ಥೆಗಳಿವೆ.

 

ಟಿಕ್ರಿ ಗಡಿಯಲ್ಲಿ ಒಂದು ಮುಖ್ಯ ವೇದಿಕೆ ಮೂಲಕ ಪ್ರತಿಭಟನಾ ಭಾಷಣ, ಧರಣಿಗಳನ್ನು ನಡೆಸಲಾಗುತ್ತಿದ್ದರೂ, ಅಲ್ಲಿ ಸೇರಿರುವ ಸುಮಾರು ನೂರಾರು ವಿವಿಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ತಮ್ಮ ತಮ್ಮ ವಾಸ್ತವ್ಯದ ಟೆಂಟ್ ಬಳಿಯೇ ನಿತ್ಯದ ಸಭೆ, ಚರ್ಚೆ, ಹಾಡು, ನೃತ್ಯಗಳಿಗಾಗಿ ಪ್ರತ್ಯೇಕ ಚಿಕ್ಕಚಿಕ್ಕ ವೇದಿಕೆಗಳನ್ನೂ ಮಾಡಿಕೊಂಡಿವೆ. 200ಕ್ಕೂ ಹೆಚ್ಚು ಸಂಘಟನೆಗಳು ರೈತ ಹೋರಾಟಕ್ಕೆ ದನಿಗೂಡಿಸಿವೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...