Homeಚಳವಳಿರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಟಿಕ್ರಿ ಮತ್ತು ಸಿಂಘು ಗಡಿಗಳಲ್ಲಿ ಭಾರೀ ಹೋರಾಟ ಭುಗಿಲೆದ್ದಿದೆ. ಕಳೆದ 42 ದಿನಗಳಿಂದ ರೈತ ಹೋರಾಟದ ಕಣವಾಗಿ ವಿಶ್ವದ ಗಮನ ಸೆಳೆದಿರುವ ಈ ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯನ್ನು ನಮ್ಮ ಪ್ರತಿನಿಧಿಗಳು ಕಟ್ಟಿಕೊಟ್ಟಿದ್ದಾರೆ.

ದೆಹಲಿಯ ಉತ್ತರ ಭಾಗದಲ್ಲಿರುವ ಕಡೆಯ ಹಳ್ಳಿಯೇ ಸಿಂಘು. ಈ ಗಡಿಯನ್ನು ದಾಟಿದರೆ ಹರ್ಯಾಣ ಪ್ರವೇಶಿಸಿದಂತೆ. ಸುಮಾರು 250 ಮನೆಗಳಿರುವ ಈ ಹಳ್ಳಿಯು ದೆಹಲಿಯ ಕುಂಡ್ಲಿ, ನರೇಲಾ ಕೈಗಾರಿಕಾ ಪ್ರದೇಶಗಳಿಗೆ ಹತ್ತಿರವಾಗಿದೆ. ತೇಗ್‌ಬಹದ್ದೂರ್‌ ಸ್ಮಾರಕ, ರಾಜೀವ್‌ ಗಾಂಧಿ ಕ್ರೀಡಾ ಸಂಕೀರ್ಣಗಳು ಹತ್ತಿರದಲ್ಲೇ ಇರುವುದರಿಂದ ಈ ಗ್ರಾಮದ ಭೂಮಿಗೆ ಹೆಚ್ಚು ಬೆಲೆಯು ಸಿಕ್ಕಿದೆ. ಹಾಗಾಗಿ ಈ ಹಳ್ಳಿಯ ಆರ್ಥಿಕತೆ ಕೊಂಚ ಉತ್ತಮವಾಗಿದೆ. ಆದರೆ ಅರ್ಧಕ್ಕೂ ಹೆಚ್ಚು ನಿವಾಸಿಗಳು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ.

ಸಣ್ಣ ಹಿಡುವಳಿದಾರರೇ ಹೆಚ್ಚಿರುವ ಈ ಗ್ರಾಮದಲ್ಲಿ ಗೋಧಿ, ಅಕ್ಕಿಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ.
ತಮ್ಮ ಬೆಳೆಯನ್ನು ನರೇಲಾದ ಎಪಿಎಂಸಿಯಲ್ಲಿ ಮಾರುತ್ತಿದ್ದ ಇವರು ಹೊಸ ಮಸೂದೆಗಳಿಂದ ಕನಿಷ್ಠ ಬೆಂಬಲ ಬೆಲೆ, ಎಪಿಎಂಸಿ ಎಲ್ಲವೂ ಸ್ಥಗಿತಗೊಳ್ಳುತ್ತವೆ ಎಂದಿದ್ದಾರೆ.

ಕಳೆದ ವರ್ಷ ನವೆಂಬರ್‌ 28ರಿಂದ ರೈತ ಪ್ರತಿಭಟನೆ ನಡೆಯುತ್ತಿದೆ. 42 ದಿನಗಳಿಂದ ರೈತರು ಇಲ್ಲಿ ನೆರೆಯುತ್ತಿದ್ದು, ಪ್ರತಿ ದಿನ ಹೋರಾಟ ತೀವ್ರವಾಗುತ್ತಲೇ ಇದೆ.

ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಇದು ಹೋರಾಟಗಾರರ ಉತ್ಸಾಹವನ್ನು ಕಡಿಮೆ ಮಾಡಿಲ್ಲ.
ಪಂಜಾಬ್‌, ಹರ್ಯಾಣ, ರಾಜಸ್ತಾನಗಳಿಂದ ವಿವಿಧ ಸಂಘಟನೆಗಳು ಇಲ್ಲಿ ರೈತರು, ರೈತರ ಪರ ಹೋರಾಡುತ್ತಿರುವ ಕಾರ್ಯಕರ್ತರನ್ನು ಒಗ್ಗೂಡಿಸುತ್ತಿವೆ. 541 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್‌ ಮೋರ್ಚಾ ಹೋರಾಟಕ್ಕೆ ನೇತೃತ್ವ ನೀಡಿದೆ.

ಭಾರತೀಯ ಕಿಸಾನ್‌ ಯೂನಿಯನಿನ ವಿವಿಧ ಬಣಗಳು, ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ, ರಾಷ್ಟ್ರೀಯ ಕಿಸಾನ್‌ ಮೋರ್ಚಾ, ಪೆಂಡು ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ- ರಾಜಸ್ಥಾನ, ಖೇತಿ ಬವಾಚೊ ಸಂಘರ್ಷ ಸಮಿತಿ ಹರ್ಯಾಣ, ಫಾರ್ಮರ್‌ ಸ್ಟ್ರಗಲ್‌ ಕಮಿಟಿ, ಕಿಸಾನ್‌ ಸಂಘರ್ಷ ಸಮಿತಿ ಮುಂತಾದವು ಇದರ ಭಾಗವಾಗಿವೆ. ಪಂಜಾಬ್ ಮತ್ತು ಹರಿಯಾಣದ ರೈತರು ಬೃಹತ್ ಸಂಖ್ಯೆಯಲ್ಲಿದ್ದು ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ಇನ್ನು ಕೆಲವು ರಾಜ್ಯಗಳಿಂದ ನೂರಕ್ಕೂ ರೈತ-ರೈತ ಪರ ಸಂಘಟನೆಗಳು ಸಿಂಘುಗಡಿಯಲ್ಲಿ ಕೈಜೋಡಿಸಿವೆ.

ಸಿಂಘುವಿನಿಂದ ದೆಹಲಿಗೆ ಸಂಪರ್ಕ ಬೆಸೆಯುವ ಮೆಟ್ರೋ ಮಾರ್ಗದ ಉದ್ದಕ್ಕೂ ರೈತರ ಟ್ರ್ಯಾಕ್ಟರ್‌, ಲಾರಿ, ಟ್ರೇಲರ್‌ಗಳು ಸಾಲುಗಟ್ಟಿವೆ.

ಇಂಗ್ಲೆಂಡಿನ ಖಾಲ್ಸಾ ಏಡ್‌ ಎಂಬ ಸರ್ಕಾರೇತರ ಸಂಸ್ಥೆ ಎಲ್ಲ ರೀತಿಯ ನೆರವುಗಳನ್ನು ಒದಗಿಸಿದೆ. ವಿಶೇಷವಾಗಿ ಮಾಲ್‌ವೊಂದನ್ನು ಸ್ಥಾಪಿಸಿದ್ದು ಇಲ್ಲಿ ಹೋರಾಟ ನಿರತರಿಗೆ ಅಗತ್ಯವಾದ ಎಲ್ಲ ದಿನಸಿ, ತಿನಿಸು ಪದಾರ್ಥಗಳು ಲಭ್ಯವಿದೆ. ಇವೆಲ್ಲವೂ ಉಚಿತವಾಗಿ ಪೂರೈಸುತ್ತಿದೆ.

ಸಿಂಘು ಗಡಿಯ ಪ್ರತಿಭಟನಾ ಪ್ರದೇಶದಲ್ಲಿ ವಿವಿಧ ಸಣ್ಣ ವೇದಿಕೆಗಳಲ್ಲಿ ಕ್ರಾಂತಿಗೀತೆಗಳು, ಘೋಷಣೆಗಳು, ಭಾಷಣಗಳು ನಿರಂತರವಾಗಿ ನಡೆಯುತ್ತಿವೆ.

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

ಟಿಕ್ರಿ ಗಡಿ

ದೆಹಲಿಯ ಪಶ್ಚಿಮ ಭಾಗದಲ್ಲಿರುವ ಟಿಕ್ರಿ ಗಡಿ, ದೆಹಲಿ ಮತ್ತು ಹರ್ಯಾಣ ರಾಜ್ಯಗಳನ್ನು ಬೆಸೆಯುತ್ತದೆ. ಇದೀಗ ರೈತ ಹೋರಾಟದ ಬಹುಮುಖ್ಯ ಕೇಂದ್ರವೂ ಆಗಿದೆ.

ರಾಜಧಾನಿಯ ಕೇಂದ್ರಭಾಗದಿಂದ ಸುಮಾರು ಒಂದು ತಾಸು ಪ್ರಯಾಣದಷ್ಟು ದೂರವಿರುವ ಟಿಕ್ರಿಯಲ್ಲಿ ಸುಮಾರು 100ಕ್ಕೂ ರೈತ ಸಂಘಟನೆಗಳು ಲಕ್ಷಾಂತರ ರೈತರನ್ನು ಸಂಘಟಿಸಿವೆ.

ಟಿಕ್ರಿಯ ಉದ್ದಕ್ಕೂ ಮೆಟ್ರೋ ಮಾರ್ಗವಿದ್ದು, ಅದರ ಬೃಹತ್‌ ಕಂಬಗಳಡಿಯಲ್ಲಿ ರೈತರು ಬಿಡಾರ ಹೂಡಿದ್ದಾರೆ.
ಸುಮಾರು 15 ಕಿಮೀ ಉದ್ದಕ್ಕೂ ವಾಹನಗಳು ಸಾಲುಗಟ್ಟಿದ್ದು, ಕೆಲವು ವಾಹನಗಳು ರೈತ ಹೋರಾಟಗಾರರಿಗೆ ಅಗತ್ಯವಾದ ಎಲ್ಲ ರೀತಿಯ ಸಾಮಾಗ್ರಿಗಳನ್ನು ಹೊತ್ತು ನಿಂತಿವೆ. ಇನ್ನು ಕೆಲವು ಆಶ್ರಯತಾಣಗಳಾಗಿವೆ.

ಇನ್ನೂ ಅನೇಕರು ಮೆಟ್ರೋ ಮಾರ್ಗಕ್ಕೆಂದು ನಿರ್ಮಿಸಲಾಗಿರುವ ಕಂಬಗಳ ಅಡಿ ಆಶ್ರಯ ಪಡೆದುಕೊಂಡಿದ್ದಾರೆ.
ಟ್ಯಾಕ್ಟರು, ಲಗೇಜ್ ಆಟೋ, ಕಾರು, ಮಿನಿ ಬಸ್ ಮುಂತಾದ ವಾಹನಗಳ ನಡುವೆಯೇ ರಸ್ತೆಯ ಮಧ್ಯಭಾಗದಲ್ಲಿ ಜನ ಓಡಾಟಕ್ಕೆ ದಾರಿ ಮಾಡಿಕೊಂಡು, ಅದರ ಆಸುಪಾಸಿನಲ್ಲಿ ಉದ್ದಕ್ಕೂ ಡೇರೆಗಳನ್ನು ಹಾಕಲಾಗಿದೆ. ಆ ಡೇರೆಗಳಲ್ಲಿ ದೆಹಲಿ ಚಳಿಯಿಂದ ಜೀವ ಹಿಡಿದುಕೊಳ್ಳಲು ಬೇಕಾದ ಉಣ್ಣೆಯ ಶಾಲು, ಟೊಪ್ಪಿ, ಹೊದಿಕೆ, ಹಾಸಿಗೆ, ನಿತ್ಯ ಬಳಕೆಯ ವಸ್ತುಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ 500 ಮೀಟರಿಗೊಂದು ಪ್ರತ್ಯೇಕ ಅಡುಗೆ ಮತ್ತು ಊಟದ ಲಂಗರುಗಳನ್ನು ನಿರ್ಮಿಸಲಾಗಿದೆ. ಸ್ನಾನ ಮತ್ತು ಶೌಚಕ್ಕೆ ಮೊಬೈಲ್ ಬಾತ್ ರೂಂ- ಟಾಯ್ಲೆಟ್ ವ್ಯವಸ್ಥೆಗಳಿವೆ.

 

ಟಿಕ್ರಿ ಗಡಿಯಲ್ಲಿ ಒಂದು ಮುಖ್ಯ ವೇದಿಕೆ ಮೂಲಕ ಪ್ರತಿಭಟನಾ ಭಾಷಣ, ಧರಣಿಗಳನ್ನು ನಡೆಸಲಾಗುತ್ತಿದ್ದರೂ, ಅಲ್ಲಿ ಸೇರಿರುವ ಸುಮಾರು ನೂರಾರು ವಿವಿಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ತಮ್ಮ ತಮ್ಮ ವಾಸ್ತವ್ಯದ ಟೆಂಟ್ ಬಳಿಯೇ ನಿತ್ಯದ ಸಭೆ, ಚರ್ಚೆ, ಹಾಡು, ನೃತ್ಯಗಳಿಗಾಗಿ ಪ್ರತ್ಯೇಕ ಚಿಕ್ಕಚಿಕ್ಕ ವೇದಿಕೆಗಳನ್ನೂ ಮಾಡಿಕೊಂಡಿವೆ. 200ಕ್ಕೂ ಹೆಚ್ಚು ಸಂಘಟನೆಗಳು ರೈತ ಹೋರಾಟಕ್ಕೆ ದನಿಗೂಡಿಸಿವೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...