Homeಚಳವಳಿರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಟಿಕ್ರಿ ಮತ್ತು ಸಿಂಘು ಗಡಿಗಳಲ್ಲಿ ಭಾರೀ ಹೋರಾಟ ಭುಗಿಲೆದ್ದಿದೆ. ಕಳೆದ 42 ದಿನಗಳಿಂದ ರೈತ ಹೋರಾಟದ ಕಣವಾಗಿ ವಿಶ್ವದ ಗಮನ ಸೆಳೆದಿರುವ ಈ ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯನ್ನು ನಮ್ಮ ಪ್ರತಿನಿಧಿಗಳು ಕಟ್ಟಿಕೊಟ್ಟಿದ್ದಾರೆ.

ದೆಹಲಿಯ ಉತ್ತರ ಭಾಗದಲ್ಲಿರುವ ಕಡೆಯ ಹಳ್ಳಿಯೇ ಸಿಂಘು. ಈ ಗಡಿಯನ್ನು ದಾಟಿದರೆ ಹರ್ಯಾಣ ಪ್ರವೇಶಿಸಿದಂತೆ. ಸುಮಾರು 250 ಮನೆಗಳಿರುವ ಈ ಹಳ್ಳಿಯು ದೆಹಲಿಯ ಕುಂಡ್ಲಿ, ನರೇಲಾ ಕೈಗಾರಿಕಾ ಪ್ರದೇಶಗಳಿಗೆ ಹತ್ತಿರವಾಗಿದೆ. ತೇಗ್‌ಬಹದ್ದೂರ್‌ ಸ್ಮಾರಕ, ರಾಜೀವ್‌ ಗಾಂಧಿ ಕ್ರೀಡಾ ಸಂಕೀರ್ಣಗಳು ಹತ್ತಿರದಲ್ಲೇ ಇರುವುದರಿಂದ ಈ ಗ್ರಾಮದ ಭೂಮಿಗೆ ಹೆಚ್ಚು ಬೆಲೆಯು ಸಿಕ್ಕಿದೆ. ಹಾಗಾಗಿ ಈ ಹಳ್ಳಿಯ ಆರ್ಥಿಕತೆ ಕೊಂಚ ಉತ್ತಮವಾಗಿದೆ. ಆದರೆ ಅರ್ಧಕ್ಕೂ ಹೆಚ್ಚು ನಿವಾಸಿಗಳು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ.

ಸಣ್ಣ ಹಿಡುವಳಿದಾರರೇ ಹೆಚ್ಚಿರುವ ಈ ಗ್ರಾಮದಲ್ಲಿ ಗೋಧಿ, ಅಕ್ಕಿಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ.
ತಮ್ಮ ಬೆಳೆಯನ್ನು ನರೇಲಾದ ಎಪಿಎಂಸಿಯಲ್ಲಿ ಮಾರುತ್ತಿದ್ದ ಇವರು ಹೊಸ ಮಸೂದೆಗಳಿಂದ ಕನಿಷ್ಠ ಬೆಂಬಲ ಬೆಲೆ, ಎಪಿಎಂಸಿ ಎಲ್ಲವೂ ಸ್ಥಗಿತಗೊಳ್ಳುತ್ತವೆ ಎಂದಿದ್ದಾರೆ.

ಕಳೆದ ವರ್ಷ ನವೆಂಬರ್‌ 28ರಿಂದ ರೈತ ಪ್ರತಿಭಟನೆ ನಡೆಯುತ್ತಿದೆ. 42 ದಿನಗಳಿಂದ ರೈತರು ಇಲ್ಲಿ ನೆರೆಯುತ್ತಿದ್ದು, ಪ್ರತಿ ದಿನ ಹೋರಾಟ ತೀವ್ರವಾಗುತ್ತಲೇ ಇದೆ.

ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಇದು ಹೋರಾಟಗಾರರ ಉತ್ಸಾಹವನ್ನು ಕಡಿಮೆ ಮಾಡಿಲ್ಲ.
ಪಂಜಾಬ್‌, ಹರ್ಯಾಣ, ರಾಜಸ್ತಾನಗಳಿಂದ ವಿವಿಧ ಸಂಘಟನೆಗಳು ಇಲ್ಲಿ ರೈತರು, ರೈತರ ಪರ ಹೋರಾಡುತ್ತಿರುವ ಕಾರ್ಯಕರ್ತರನ್ನು ಒಗ್ಗೂಡಿಸುತ್ತಿವೆ. 541 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್‌ ಮೋರ್ಚಾ ಹೋರಾಟಕ್ಕೆ ನೇತೃತ್ವ ನೀಡಿದೆ.

ಭಾರತೀಯ ಕಿಸಾನ್‌ ಯೂನಿಯನಿನ ವಿವಿಧ ಬಣಗಳು, ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ, ರಾಷ್ಟ್ರೀಯ ಕಿಸಾನ್‌ ಮೋರ್ಚಾ, ಪೆಂಡು ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ- ರಾಜಸ್ಥಾನ, ಖೇತಿ ಬವಾಚೊ ಸಂಘರ್ಷ ಸಮಿತಿ ಹರ್ಯಾಣ, ಫಾರ್ಮರ್‌ ಸ್ಟ್ರಗಲ್‌ ಕಮಿಟಿ, ಕಿಸಾನ್‌ ಸಂಘರ್ಷ ಸಮಿತಿ ಮುಂತಾದವು ಇದರ ಭಾಗವಾಗಿವೆ. ಪಂಜಾಬ್ ಮತ್ತು ಹರಿಯಾಣದ ರೈತರು ಬೃಹತ್ ಸಂಖ್ಯೆಯಲ್ಲಿದ್ದು ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ಇನ್ನು ಕೆಲವು ರಾಜ್ಯಗಳಿಂದ ನೂರಕ್ಕೂ ರೈತ-ರೈತ ಪರ ಸಂಘಟನೆಗಳು ಸಿಂಘುಗಡಿಯಲ್ಲಿ ಕೈಜೋಡಿಸಿವೆ.

ಸಿಂಘುವಿನಿಂದ ದೆಹಲಿಗೆ ಸಂಪರ್ಕ ಬೆಸೆಯುವ ಮೆಟ್ರೋ ಮಾರ್ಗದ ಉದ್ದಕ್ಕೂ ರೈತರ ಟ್ರ್ಯಾಕ್ಟರ್‌, ಲಾರಿ, ಟ್ರೇಲರ್‌ಗಳು ಸಾಲುಗಟ್ಟಿವೆ.

ಇಂಗ್ಲೆಂಡಿನ ಖಾಲ್ಸಾ ಏಡ್‌ ಎಂಬ ಸರ್ಕಾರೇತರ ಸಂಸ್ಥೆ ಎಲ್ಲ ರೀತಿಯ ನೆರವುಗಳನ್ನು ಒದಗಿಸಿದೆ. ವಿಶೇಷವಾಗಿ ಮಾಲ್‌ವೊಂದನ್ನು ಸ್ಥಾಪಿಸಿದ್ದು ಇಲ್ಲಿ ಹೋರಾಟ ನಿರತರಿಗೆ ಅಗತ್ಯವಾದ ಎಲ್ಲ ದಿನಸಿ, ತಿನಿಸು ಪದಾರ್ಥಗಳು ಲಭ್ಯವಿದೆ. ಇವೆಲ್ಲವೂ ಉಚಿತವಾಗಿ ಪೂರೈಸುತ್ತಿದೆ.

ಸಿಂಘು ಗಡಿಯ ಪ್ರತಿಭಟನಾ ಪ್ರದೇಶದಲ್ಲಿ ವಿವಿಧ ಸಣ್ಣ ವೇದಿಕೆಗಳಲ್ಲಿ ಕ್ರಾಂತಿಗೀತೆಗಳು, ಘೋಷಣೆಗಳು, ಭಾಷಣಗಳು ನಿರಂತರವಾಗಿ ನಡೆಯುತ್ತಿವೆ.

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

ಟಿಕ್ರಿ ಗಡಿ

ದೆಹಲಿಯ ಪಶ್ಚಿಮ ಭಾಗದಲ್ಲಿರುವ ಟಿಕ್ರಿ ಗಡಿ, ದೆಹಲಿ ಮತ್ತು ಹರ್ಯಾಣ ರಾಜ್ಯಗಳನ್ನು ಬೆಸೆಯುತ್ತದೆ. ಇದೀಗ ರೈತ ಹೋರಾಟದ ಬಹುಮುಖ್ಯ ಕೇಂದ್ರವೂ ಆಗಿದೆ.

ರಾಜಧಾನಿಯ ಕೇಂದ್ರಭಾಗದಿಂದ ಸುಮಾರು ಒಂದು ತಾಸು ಪ್ರಯಾಣದಷ್ಟು ದೂರವಿರುವ ಟಿಕ್ರಿಯಲ್ಲಿ ಸುಮಾರು 100ಕ್ಕೂ ರೈತ ಸಂಘಟನೆಗಳು ಲಕ್ಷಾಂತರ ರೈತರನ್ನು ಸಂಘಟಿಸಿವೆ.

ಟಿಕ್ರಿಯ ಉದ್ದಕ್ಕೂ ಮೆಟ್ರೋ ಮಾರ್ಗವಿದ್ದು, ಅದರ ಬೃಹತ್‌ ಕಂಬಗಳಡಿಯಲ್ಲಿ ರೈತರು ಬಿಡಾರ ಹೂಡಿದ್ದಾರೆ.
ಸುಮಾರು 15 ಕಿಮೀ ಉದ್ದಕ್ಕೂ ವಾಹನಗಳು ಸಾಲುಗಟ್ಟಿದ್ದು, ಕೆಲವು ವಾಹನಗಳು ರೈತ ಹೋರಾಟಗಾರರಿಗೆ ಅಗತ್ಯವಾದ ಎಲ್ಲ ರೀತಿಯ ಸಾಮಾಗ್ರಿಗಳನ್ನು ಹೊತ್ತು ನಿಂತಿವೆ. ಇನ್ನು ಕೆಲವು ಆಶ್ರಯತಾಣಗಳಾಗಿವೆ.

ಇನ್ನೂ ಅನೇಕರು ಮೆಟ್ರೋ ಮಾರ್ಗಕ್ಕೆಂದು ನಿರ್ಮಿಸಲಾಗಿರುವ ಕಂಬಗಳ ಅಡಿ ಆಶ್ರಯ ಪಡೆದುಕೊಂಡಿದ್ದಾರೆ.
ಟ್ಯಾಕ್ಟರು, ಲಗೇಜ್ ಆಟೋ, ಕಾರು, ಮಿನಿ ಬಸ್ ಮುಂತಾದ ವಾಹನಗಳ ನಡುವೆಯೇ ರಸ್ತೆಯ ಮಧ್ಯಭಾಗದಲ್ಲಿ ಜನ ಓಡಾಟಕ್ಕೆ ದಾರಿ ಮಾಡಿಕೊಂಡು, ಅದರ ಆಸುಪಾಸಿನಲ್ಲಿ ಉದ್ದಕ್ಕೂ ಡೇರೆಗಳನ್ನು ಹಾಕಲಾಗಿದೆ. ಆ ಡೇರೆಗಳಲ್ಲಿ ದೆಹಲಿ ಚಳಿಯಿಂದ ಜೀವ ಹಿಡಿದುಕೊಳ್ಳಲು ಬೇಕಾದ ಉಣ್ಣೆಯ ಶಾಲು, ಟೊಪ್ಪಿ, ಹೊದಿಕೆ, ಹಾಸಿಗೆ, ನಿತ್ಯ ಬಳಕೆಯ ವಸ್ತುಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ 500 ಮೀಟರಿಗೊಂದು ಪ್ರತ್ಯೇಕ ಅಡುಗೆ ಮತ್ತು ಊಟದ ಲಂಗರುಗಳನ್ನು ನಿರ್ಮಿಸಲಾಗಿದೆ. ಸ್ನಾನ ಮತ್ತು ಶೌಚಕ್ಕೆ ಮೊಬೈಲ್ ಬಾತ್ ರೂಂ- ಟಾಯ್ಲೆಟ್ ವ್ಯವಸ್ಥೆಗಳಿವೆ.

 

ಟಿಕ್ರಿ ಗಡಿಯಲ್ಲಿ ಒಂದು ಮುಖ್ಯ ವೇದಿಕೆ ಮೂಲಕ ಪ್ರತಿಭಟನಾ ಭಾಷಣ, ಧರಣಿಗಳನ್ನು ನಡೆಸಲಾಗುತ್ತಿದ್ದರೂ, ಅಲ್ಲಿ ಸೇರಿರುವ ಸುಮಾರು ನೂರಾರು ವಿವಿಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ತಮ್ಮ ತಮ್ಮ ವಾಸ್ತವ್ಯದ ಟೆಂಟ್ ಬಳಿಯೇ ನಿತ್ಯದ ಸಭೆ, ಚರ್ಚೆ, ಹಾಡು, ನೃತ್ಯಗಳಿಗಾಗಿ ಪ್ರತ್ಯೇಕ ಚಿಕ್ಕಚಿಕ್ಕ ವೇದಿಕೆಗಳನ್ನೂ ಮಾಡಿಕೊಂಡಿವೆ. 200ಕ್ಕೂ ಹೆಚ್ಚು ಸಂಘಟನೆಗಳು ರೈತ ಹೋರಾಟಕ್ಕೆ ದನಿಗೂಡಿಸಿವೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...