Homeಮುಖಪುಟಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ನಿರ್ಭಯ ಪ್ರಕರಣದ ನಂತರ ನ್ಯಾ. ವರ್ಮಾ ಸಮಿತಿ ವರದಿ ಏನು ಹೇಳುತ್ತದೆ?

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ನಿರ್ಭಯ ಪ್ರಕರಣದ ನಂತರ ನ್ಯಾ. ವರ್ಮಾ ಸಮಿತಿ ವರದಿ ಏನು ಹೇಳುತ್ತದೆ?

ರಾಸಾಯನಿಕ ವಿಧಾನದಿಂದ ಅತ್ಯಾಚಾರಿಗಳ ಪುರುಷತ್ವ ಹರಣಗೊಳಿಸುವ ಶಿಕ್ಷೆ ನೀಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಹಾಗೂ ದೇಹಕ್ಕೆ ಊನ ಮಾಡುವುದನ್ನು ನಮ್ಮ ಸಂವಿಧಾನ ಸಮ್ಮತಿಸುವುದಿಲ್ಲ.

- Advertisement -
- Advertisement -

ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದ ಕಾನೂನುಗಳಿಗೆ ತಿದ್ದುಪಡಿಗಳನ್ನು ಸೂಚಿಸಲು ರಚಿಸಲಾಗಿದ್ದ ನ್ಯಾಯಮೂರ್ತಿ ವರ್ಮಾ ಸಮಿತಿಯು ತನ್ನ ವರದಿಯನ್ನು ಗೃಹಖಾತೆಗೆ ಸಲ್ಲಿಸಿದೆ.

ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಮೇಲೆ 2012ರ ಡಿಸೆಂಬರಿನಲ್ಲಿ ನಡೆದ ಕ್ರೂರವಾದ ಸಾಮೂಹಿಕ ಅತ್ಯಾಚಾರದ ಬಳಿಕ ಕಾನೂನುಗಳಿಗೆ ತಿದ್ದುಪಡಿ ಸೂಚಿಸಲು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಮಾಜಿ ಪ್ರಧಾನ ನ್ಯಾಯಾಧೀಶ ಜೆ.ಎಸ್. ವರ್ಮಾ ಅವರ ನೇತೃತ್ವದಲ್ಲಿ ಮೂರು ಸದಸ್ಯರ ಈ ಸಮಿತಿಯನ್ನು ನೇಮಿಸಿತ್ತು.

ವಿದ್ಯಾರ್ಥಿನಿಯ ಮೇಲಿನ ಆ ಲೈಂಗಿಕ ದಾಳಿಯು ದೇಶದಾದ್ಯಂತ ಜನರನ್ನು ರೊಚ್ಚಿಗೆಬ್ಬಿಸಿತ್ತಲ್ಲದೆ, ಅತ್ಯಾಚಾರಿಗಳನ್ನು ಶಿಕ್ಷಿಸಲು ಇನ್ನೂ ಕಠಿಣವಾದ ಕಾನೂನುಗಳನ್ನು ರೂಪಿಸುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು.

ನಾನಾ ಮಹಿಳಾ ಗುಂಪುಗಳು, ನ್ಯಾಯವೇತ್ತರು ಹಾಗೂ ಇನ್ನಿತರ ವೇದಿಕೆಗಳಿಂದ ವರ್ಮಾ ಸಮಿತಿಗೆ 80,000 ಸಲಹೆಗಳು ಬಂದಿದ್ದವು. ಸಮಿತಿಯು ವೈವಾಹಿಕ ರೇಪ್ ಬಗ್ಗೆ ಸಹ ಚರ್ಚೆ ಕೈಗೆತ್ತಿಕೊಂಡಿತ್ತು.

ವರದಿಯ ಮುಖ್ಯಾಂಶಗಳು:
ಅ) ಮಹಿಳೆಯರನ್ನು ವಿವಸ್ತ್ರ (ನಗ್ನ)ಗೊಳಿಸುವುದು, (ರಹಸ್ಯವಾಗಿ) ಮಹಿಳೆಯರ ಗುಪ್ತಾಂಗಗಳನ್ನು ನೋಡಿ ಅಥವಾ ಮೈಥುನ ನೋಡಿ ಸುಖಪಡುವುದು, ಮಹಿಳೆಯರ ಹಿಂದೆಮುಂದೆ ಸುತ್ತುತ್ತಾ ಕಿರುಕುಳ ಉಂಟುಮಾಡುವುದು, ವೇಶ್ಯಾವಾಟಿಕೆಗೆ ಹೆಣ್ಣುಗಳ ಮಾರಾಟ – ಇವುಗಳನ್ನು ಸಮಿತಿಯ ಶಿಫಾರಸುಗಳಲ್ಲಿ ಹೊಸ ಅಪರಾಧಗಳನ್ನಾಗಿ ಸೇರ್ಪಡೆ ಮಾಡಲಾಗಿದೆ ಹಾಗೂ ಶಿಕ್ಷೆಯನ್ನು ಇನ್ನೂ ಕಠಿಣಗೊಳಿಸುವಂತೆ ಸಲಹೆ ಮಾಡಲಾಗಿದೆ.

ಆ) ಅತ್ಯಾಚಾರಕ್ಕೊಳಗಾದ ವ್ಯಕ್ತಿ ಅದರ ಪರಿಣಾಮವಾಗಿ ಸತ್ತರೆ ಅಥವಾ ಸಸ್ಯಸದೃಶ ಬದುಕು ನೂಕುವಂಥ ಸ್ಥಿತಿಗೆ (ವೆಜಿಟೇಟಿವ್ ಸ್ಟೇಟ್‌ಗೆ) ತಳ್ಳಲ್ಪಟ್ಟರೆ ಅಪರಾಧಿಗೆ 20 ವರ್ಷದ ಜೈಲು ಶಿಕ್ಷೆ ಹಾಗೂ ಸಾಮೂಹಿಕ ಅತ್ಯಾಚಾರಕ್ಕೆ ಜೀವಾವಧಿ ಶಿಕ್ಷೆ ವಿಧಿಸಲು ಸಮಿತಿ ಸಲಹೆ ಮಾಡಿದೆ. ಸಾಮೂಹಿಕ ಅತ್ಯಾಚಾರದ ಪರಿಣಾಮವಾಗಿ ಮಹಿಳೆ ಸಾವಿಗೀಡಾದರೆ ಅತ್ಯಾಚಾರಿಗಳಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಲು ಸಲಹೆ ನೀಡಲಾಗಿದೆ.

ಈಗಿರುವ ಕಾನೂನು ಪ್ರಕಾರ ಈ ಶಿಕ್ಷೆ ಕನಿಷ್ಠ 7 ವರ್ಷದಿಂದ ಗರಿಷ್ಠ ಜೀವಾವಧಿಯದಾಗಿತ್ತು. ಫಾಶಿ ಶಿಕ್ಷೆಯೊಂದು(ಗಲ್ಲಿಗೇರಿಸುವುದು) ‘ತಿರೋಗಾಮಿ ಹೆಜ್ಜೆ’ (ಹಿಂಚಲನೆ) ಮತ್ತು ಅದು ‘ಅಪರಾಧಕ್ಕೆ ತಡೆಯೊಡ್ಡುವ ಪರಿಣಾಮ ಉಂಟುಮಾಡಲಾರದು’ ಎಂಬ ಕಾರಣಕ್ಕಾಗಿ ವರ್ಮಾ ಸಮಿತಿಯು ಅತ್ಯಾಚಾರಕ್ಕೆ ಫಾಶಿ ಶಿಕ್ಷೆಯನ್ನು ಶಿಫಾರಸು ಮಾಡಿಲ್ಲ.

ಇ) ಮಹಿಳೆಯ ಆತ್ಮರಕ್ಷಣೆಯ ಹಕ್ಕನ್ನು ಕುರಿತ ಭಾರತೀಯ ದಂಡಸಂಹಿತೆಯ ಸೆಕ್ಷನ್ 100ಕ್ಕೆ ತಿದ್ದುಪಡಿ ಮಾಡುವಂತೆ ಸಮಿತಿ ಶಿಫಾರಸು ಮಾಡಿದೆ. ಆತ್ಮರಕ್ಷಣೆಯ ಹಕ್ಕಿನ ಚಲಾವಣೆಯಿಂದ ಸಾವು ಉಂಟಾದರೂ ಈ ಸೆಕ್ಷನ್ ಅದಕ್ಕೆ ಅನ್ವಯಿಸಬೇಕು ಎನ್ನುತ್ತದೆ ಶಿಫಾರಸು.

ಈ) ರಾಸಾಯನಿಕ ವಿಧಾನದಿಂದ ಅತ್ಯಾಚಾರಿಗಳ ಪುರುಷತ್ವ ಹರಣಗೊಳಿಸುವ ಶಿಕ್ಷೆ ನೀಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಹಾಗೂ ದೇಹಕ್ಕೆ ಊನ ಮಾಡುವುದನ್ನು ನಮ್ಮ ಸಂವಿಧಾನ ಸಮ್ಮತಿಸುವುದಿಲ್ಲ ಎನ್ನುವ ಕಾರಣಕ್ಕೆ ಸಮಿತಿ ಆ ಶಿಕ್ಷೆಯ ಸಲಹೆಯನ್ನು ತಿರಸ್ಕರಿಸಿದೆ.

ಉ) ವೈವಾಹಿಕ ಅತ್ಯಾಚಾರದ ಬಗ್ಗೆ ಹಾಗೂ ಹೋರಾಟದ (“ಗಲಭೆಗ್ರಸ್ತ”) ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಕೂಡ ಸಮಿತಿ ಚರ್ಚಿಸಿದೆ; ‘ಸಶಸ್ತ್ರ ಬಲಗಳ ವಿಶೇಷಾಧಿಕಾರ ಕಾಯ್ದೆ’ (AFSPA)ಯನ್ನು ಸಶಸ್ತ್ರ ಪಡೆಗಳವರು ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸಲು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಿರುವುದರಿಂದ ಆ ಕಾಯ್ದೆಯನ್ನು ಪುನರ್ ವಿಮರ್ಶಿಸಬೇಕೆಂದು ಸಮಿತಿ ಶಿಫಾರಸು ಮಾಡಿದೆ.

ಊ) ಸಾಂವಿಧಾನಿಕ ಪರಿಹಾರದ ಮಾರ್ಗದ ಮೂಲಕ ಮೂಲಭೂತ ಹಕ್ಕುಗಳ ರಕ್ಷಣೆಯು ನ್ಯಾಯಾಂಗದ ಪ್ರಧಾನ ಜವಾಬ್ದಾರಿಯಾಗಿದೆ ಎಂದು ಸಮಿತಿ ಹೇಳಿದೆ. ಭಾರತದ ಪ್ರಧಾನ ನ್ಯಾಯಾಧೀಶರು ಯಾವುದೇ ಪ್ರಕರಣವನ್ನು ತಾವಾಗಿಯೇ ವಿಚಾರಣೆಗೆ ಎತ್ತಿಕೊಳ್ಳಬಹುದು (ಸುವೋ ಮೋಟು ಕಾಗ್ನಿಜನ್ಸ್); ಸಾಮಾಜಿಕ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕೋರ್ಟಿಗೆ ನೆರವಾಗಬೇಕು. ಪ್ರತಿಯೊಂದು ರಾಜ್ಯದ ಹೈಕೋರ್ಟುಗಳ ಮುಖ್ಯ ನ್ಯಾಯಾಧೀಶರುಗಳು ಬಾಲ ರಕ್ಷಣಾ ಗೃಹಗಳ ನಿರ್ವಹಣೆ, ಮೇಲ್ವಿಚಾರಣೆ ಮಾಡಲು ಆ ಕ್ಷೇತ್ರದ ತಜ್ಞರ ಸಲಹೆಗಳ ಮೇರೆಗೆ ಸೂಕ್ತವಾದ ಯಂತ್ರಾಂಗವನ್ನು ರೂಪಿಸಬೇಕು ಎಂದೂ ಶಿಫಾರಸು ಮಾಡಿದೆ.

ಇದನ್ನೂ ಓದಿ: ಅತ್ಯಾಚಾರವನ್ನು ತಡೆಗಟ್ಟಲು ಸಾಧ್ಯ! ತಡೆಗಟ್ಟಲೇಬೇಕು! ಅದರ ಮೂಲಬೇರುಗಳನ್ನು ಅರಿತಾಗ ಮಾತ್ರ…

ಋ) ದೇಶದಲ್ಲಿ ಯಾವುದೇ ವೈಯಕ್ತಿಕ ಕಾನೂನಿನ (ಪರ್ಸನಲ್ ಲಾ) ಮೇರೆಗೆ ನಡೆಯುವ ಎಲ್ಲಾ ಮದುವೆಗಳನ್ನೂ ಒಬ್ಬ ಮ್ಯಾಜಿಸ್ಟ್ರೇಟರ ಸಮ್ಮುಖದಲ್ಲಿ ನೊಂದಾವಣೆ ಮಾಡಿಸಲೇಬೇಕು. ಆ ಮದುವೆಯಲ್ಲಿ ವರದಕ್ಷಿಣೆಯ ಡಿಮ್ಯಾಂಡ್ ಇರಲಿಲ್ಲ ಹಾಗೂ ವಧೂವರರಿಬ್ಬರ ಸಂಪೂರ್ಣ, ಸ್ವತಂತ್ರ ಒಪ್ಪಿಗೆಯ ಮೇರೆಗೆ ಮದುವೆ ನಡೆಯುತ್ತಿದೆ ಎಂಬುದನ್ನು ಮ್ಯಾಜಿಸ್ಟ್ರೇಟರು ಖಾತ್ರಿಪಡಿಸಿಕೊಳ್ಳಬೇಕು ಎಂದೂ ಸಮಿತಿ ಶಿಫಾರಸು ಮಾಡಿದೆ.

ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗಿರುವ ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನು ಸ್ತ್ರೀ ರೋಗ ಮತ್ತು ಮನೋವೈದ್ಯಕೀಯ ಕ್ಷೇತ್ರಗಳಲ್ಲಿನ ಜಾಗತಿಕ ಖ್ಯಾತಿಯ ತಜ್ಞರು ಶಿಫಾರಸು ಮಾಡಿರುವ ಅತ್ಯುತ್ತಮ ವಿಧಾನಗಳ ಮೂಲಕ ನಡೆಸಬೇಕು ಎಂದು ಶಿಫಾರಸು ಮಾಡಲಾಗಿದೆ.

ಎ) ಅಪ್ರಾಪ್ತ ವಯಸ್ಸಿನ ಮಕ್ಕಳ ಮಾರಾಟ ಜಾಲವನ್ನು ಒಂದು ತೀವ್ರವಾದ ಅಪರಾಧವೆಂದು ಪರಿಗಣಿಸಬೇಕು ಹಾಗೂ ಅದಕ್ಕೆ ಕಠಿಣ ಶಿಕ್ಷೆ ನೀಡಬೇಕು. ಶಿಕ್ಷೆಯು ಏಳು ವರ್ಷಗಳಿಗಿಂತ ಕಡಿಮೆ ಇರಬಾರದು, ಹತ್ತು ವರ್ಷಗಳವರೆಗೂ ಹೆಚ್ಚಬಹುದು ಎಂದು ಸಮಿತಿ ಶಿಫಾರಸು ಮಾಡಿದೆ.

ಏ) ತನಿಖಾ ಸಂಸ್ಥೆಗಳು ಚುನಾಯಿತ ಸದಸ್ಯರ ಮೇಲೆ ಅಥವಾ ಚುನಾವಣಾ ಅಭ್ಯರ್ಥಿಯ ಮೇಲೆ ಹಾಕಿದ ಚಾರ್ಜ್ ಶೀಟನ್ನು ನ್ಯಾಯಾಲಯವು ವಿಚಾರಣೆಗೆ ಪರಿಗಣಿಸಿದ್ದರೆ ಅಂಥ ಸದಸ್ಯರ ಅಧಿಕಾರ ರದ್ದಾಗಬೇಕು ಹಾಗೂ ಅಂಥ ಅಭ್ಯರ್ಥಿಗೆ ನಾಮಪತ್ರ ಸಲ್ಲಿಸದಂತೆ ನಿಷೇಧ ಹೇರಬೇಕು ಎಂಬ ಸಲಹೆಯನ್ನು ಸಹ ಮಾಡಲಾಗಿದೆ.

ಕೃಪೆ: ಹೇಮಲತಾರವರು ಸಂಪಾದಿಸಿರುವ “ಅತ್ಯಾಚಾರ ಬರ್ಬರತೆಯ ಬೇರುಗಳೆಲ್ಲಿ?” ಪುಸ್ತಕದಿಂದ ಈ ಲೇಖನವನ್ನು ಆಯ್ದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...