Homeಮುಖಪುಟಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ನಿರ್ಭಯ ಪ್ರಕರಣದ ನಂತರ ನ್ಯಾ. ವರ್ಮಾ ಸಮಿತಿ ವರದಿ ಏನು ಹೇಳುತ್ತದೆ?

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ನಿರ್ಭಯ ಪ್ರಕರಣದ ನಂತರ ನ್ಯಾ. ವರ್ಮಾ ಸಮಿತಿ ವರದಿ ಏನು ಹೇಳುತ್ತದೆ?

ರಾಸಾಯನಿಕ ವಿಧಾನದಿಂದ ಅತ್ಯಾಚಾರಿಗಳ ಪುರುಷತ್ವ ಹರಣಗೊಳಿಸುವ ಶಿಕ್ಷೆ ನೀಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಹಾಗೂ ದೇಹಕ್ಕೆ ಊನ ಮಾಡುವುದನ್ನು ನಮ್ಮ ಸಂವಿಧಾನ ಸಮ್ಮತಿಸುವುದಿಲ್ಲ.

- Advertisement -
- Advertisement -

ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದ ಕಾನೂನುಗಳಿಗೆ ತಿದ್ದುಪಡಿಗಳನ್ನು ಸೂಚಿಸಲು ರಚಿಸಲಾಗಿದ್ದ ನ್ಯಾಯಮೂರ್ತಿ ವರ್ಮಾ ಸಮಿತಿಯು ತನ್ನ ವರದಿಯನ್ನು ಗೃಹಖಾತೆಗೆ ಸಲ್ಲಿಸಿದೆ.

ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಮೇಲೆ 2012ರ ಡಿಸೆಂಬರಿನಲ್ಲಿ ನಡೆದ ಕ್ರೂರವಾದ ಸಾಮೂಹಿಕ ಅತ್ಯಾಚಾರದ ಬಳಿಕ ಕಾನೂನುಗಳಿಗೆ ತಿದ್ದುಪಡಿ ಸೂಚಿಸಲು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಮಾಜಿ ಪ್ರಧಾನ ನ್ಯಾಯಾಧೀಶ ಜೆ.ಎಸ್. ವರ್ಮಾ ಅವರ ನೇತೃತ್ವದಲ್ಲಿ ಮೂರು ಸದಸ್ಯರ ಈ ಸಮಿತಿಯನ್ನು ನೇಮಿಸಿತ್ತು.

ವಿದ್ಯಾರ್ಥಿನಿಯ ಮೇಲಿನ ಆ ಲೈಂಗಿಕ ದಾಳಿಯು ದೇಶದಾದ್ಯಂತ ಜನರನ್ನು ರೊಚ್ಚಿಗೆಬ್ಬಿಸಿತ್ತಲ್ಲದೆ, ಅತ್ಯಾಚಾರಿಗಳನ್ನು ಶಿಕ್ಷಿಸಲು ಇನ್ನೂ ಕಠಿಣವಾದ ಕಾನೂನುಗಳನ್ನು ರೂಪಿಸುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು.

ನಾನಾ ಮಹಿಳಾ ಗುಂಪುಗಳು, ನ್ಯಾಯವೇತ್ತರು ಹಾಗೂ ಇನ್ನಿತರ ವೇದಿಕೆಗಳಿಂದ ವರ್ಮಾ ಸಮಿತಿಗೆ 80,000 ಸಲಹೆಗಳು ಬಂದಿದ್ದವು. ಸಮಿತಿಯು ವೈವಾಹಿಕ ರೇಪ್ ಬಗ್ಗೆ ಸಹ ಚರ್ಚೆ ಕೈಗೆತ್ತಿಕೊಂಡಿತ್ತು.

ವರದಿಯ ಮುಖ್ಯಾಂಶಗಳು:
ಅ) ಮಹಿಳೆಯರನ್ನು ವಿವಸ್ತ್ರ (ನಗ್ನ)ಗೊಳಿಸುವುದು, (ರಹಸ್ಯವಾಗಿ) ಮಹಿಳೆಯರ ಗುಪ್ತಾಂಗಗಳನ್ನು ನೋಡಿ ಅಥವಾ ಮೈಥುನ ನೋಡಿ ಸುಖಪಡುವುದು, ಮಹಿಳೆಯರ ಹಿಂದೆಮುಂದೆ ಸುತ್ತುತ್ತಾ ಕಿರುಕುಳ ಉಂಟುಮಾಡುವುದು, ವೇಶ್ಯಾವಾಟಿಕೆಗೆ ಹೆಣ್ಣುಗಳ ಮಾರಾಟ – ಇವುಗಳನ್ನು ಸಮಿತಿಯ ಶಿಫಾರಸುಗಳಲ್ಲಿ ಹೊಸ ಅಪರಾಧಗಳನ್ನಾಗಿ ಸೇರ್ಪಡೆ ಮಾಡಲಾಗಿದೆ ಹಾಗೂ ಶಿಕ್ಷೆಯನ್ನು ಇನ್ನೂ ಕಠಿಣಗೊಳಿಸುವಂತೆ ಸಲಹೆ ಮಾಡಲಾಗಿದೆ.

ಆ) ಅತ್ಯಾಚಾರಕ್ಕೊಳಗಾದ ವ್ಯಕ್ತಿ ಅದರ ಪರಿಣಾಮವಾಗಿ ಸತ್ತರೆ ಅಥವಾ ಸಸ್ಯಸದೃಶ ಬದುಕು ನೂಕುವಂಥ ಸ್ಥಿತಿಗೆ (ವೆಜಿಟೇಟಿವ್ ಸ್ಟೇಟ್‌ಗೆ) ತಳ್ಳಲ್ಪಟ್ಟರೆ ಅಪರಾಧಿಗೆ 20 ವರ್ಷದ ಜೈಲು ಶಿಕ್ಷೆ ಹಾಗೂ ಸಾಮೂಹಿಕ ಅತ್ಯಾಚಾರಕ್ಕೆ ಜೀವಾವಧಿ ಶಿಕ್ಷೆ ವಿಧಿಸಲು ಸಮಿತಿ ಸಲಹೆ ಮಾಡಿದೆ. ಸಾಮೂಹಿಕ ಅತ್ಯಾಚಾರದ ಪರಿಣಾಮವಾಗಿ ಮಹಿಳೆ ಸಾವಿಗೀಡಾದರೆ ಅತ್ಯಾಚಾರಿಗಳಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಲು ಸಲಹೆ ನೀಡಲಾಗಿದೆ.

ಈಗಿರುವ ಕಾನೂನು ಪ್ರಕಾರ ಈ ಶಿಕ್ಷೆ ಕನಿಷ್ಠ 7 ವರ್ಷದಿಂದ ಗರಿಷ್ಠ ಜೀವಾವಧಿಯದಾಗಿತ್ತು. ಫಾಶಿ ಶಿಕ್ಷೆಯೊಂದು(ಗಲ್ಲಿಗೇರಿಸುವುದು) ‘ತಿರೋಗಾಮಿ ಹೆಜ್ಜೆ’ (ಹಿಂಚಲನೆ) ಮತ್ತು ಅದು ‘ಅಪರಾಧಕ್ಕೆ ತಡೆಯೊಡ್ಡುವ ಪರಿಣಾಮ ಉಂಟುಮಾಡಲಾರದು’ ಎಂಬ ಕಾರಣಕ್ಕಾಗಿ ವರ್ಮಾ ಸಮಿತಿಯು ಅತ್ಯಾಚಾರಕ್ಕೆ ಫಾಶಿ ಶಿಕ್ಷೆಯನ್ನು ಶಿಫಾರಸು ಮಾಡಿಲ್ಲ.

ಇ) ಮಹಿಳೆಯ ಆತ್ಮರಕ್ಷಣೆಯ ಹಕ್ಕನ್ನು ಕುರಿತ ಭಾರತೀಯ ದಂಡಸಂಹಿತೆಯ ಸೆಕ್ಷನ್ 100ಕ್ಕೆ ತಿದ್ದುಪಡಿ ಮಾಡುವಂತೆ ಸಮಿತಿ ಶಿಫಾರಸು ಮಾಡಿದೆ. ಆತ್ಮರಕ್ಷಣೆಯ ಹಕ್ಕಿನ ಚಲಾವಣೆಯಿಂದ ಸಾವು ಉಂಟಾದರೂ ಈ ಸೆಕ್ಷನ್ ಅದಕ್ಕೆ ಅನ್ವಯಿಸಬೇಕು ಎನ್ನುತ್ತದೆ ಶಿಫಾರಸು.

ಈ) ರಾಸಾಯನಿಕ ವಿಧಾನದಿಂದ ಅತ್ಯಾಚಾರಿಗಳ ಪುರುಷತ್ವ ಹರಣಗೊಳಿಸುವ ಶಿಕ್ಷೆ ನೀಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಹಾಗೂ ದೇಹಕ್ಕೆ ಊನ ಮಾಡುವುದನ್ನು ನಮ್ಮ ಸಂವಿಧಾನ ಸಮ್ಮತಿಸುವುದಿಲ್ಲ ಎನ್ನುವ ಕಾರಣಕ್ಕೆ ಸಮಿತಿ ಆ ಶಿಕ್ಷೆಯ ಸಲಹೆಯನ್ನು ತಿರಸ್ಕರಿಸಿದೆ.

ಉ) ವೈವಾಹಿಕ ಅತ್ಯಾಚಾರದ ಬಗ್ಗೆ ಹಾಗೂ ಹೋರಾಟದ (“ಗಲಭೆಗ್ರಸ್ತ”) ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಕೂಡ ಸಮಿತಿ ಚರ್ಚಿಸಿದೆ; ‘ಸಶಸ್ತ್ರ ಬಲಗಳ ವಿಶೇಷಾಧಿಕಾರ ಕಾಯ್ದೆ’ (AFSPA)ಯನ್ನು ಸಶಸ್ತ್ರ ಪಡೆಗಳವರು ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸಲು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಿರುವುದರಿಂದ ಆ ಕಾಯ್ದೆಯನ್ನು ಪುನರ್ ವಿಮರ್ಶಿಸಬೇಕೆಂದು ಸಮಿತಿ ಶಿಫಾರಸು ಮಾಡಿದೆ.

ಊ) ಸಾಂವಿಧಾನಿಕ ಪರಿಹಾರದ ಮಾರ್ಗದ ಮೂಲಕ ಮೂಲಭೂತ ಹಕ್ಕುಗಳ ರಕ್ಷಣೆಯು ನ್ಯಾಯಾಂಗದ ಪ್ರಧಾನ ಜವಾಬ್ದಾರಿಯಾಗಿದೆ ಎಂದು ಸಮಿತಿ ಹೇಳಿದೆ. ಭಾರತದ ಪ್ರಧಾನ ನ್ಯಾಯಾಧೀಶರು ಯಾವುದೇ ಪ್ರಕರಣವನ್ನು ತಾವಾಗಿಯೇ ವಿಚಾರಣೆಗೆ ಎತ್ತಿಕೊಳ್ಳಬಹುದು (ಸುವೋ ಮೋಟು ಕಾಗ್ನಿಜನ್ಸ್); ಸಾಮಾಜಿಕ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕೋರ್ಟಿಗೆ ನೆರವಾಗಬೇಕು. ಪ್ರತಿಯೊಂದು ರಾಜ್ಯದ ಹೈಕೋರ್ಟುಗಳ ಮುಖ್ಯ ನ್ಯಾಯಾಧೀಶರುಗಳು ಬಾಲ ರಕ್ಷಣಾ ಗೃಹಗಳ ನಿರ್ವಹಣೆ, ಮೇಲ್ವಿಚಾರಣೆ ಮಾಡಲು ಆ ಕ್ಷೇತ್ರದ ತಜ್ಞರ ಸಲಹೆಗಳ ಮೇರೆಗೆ ಸೂಕ್ತವಾದ ಯಂತ್ರಾಂಗವನ್ನು ರೂಪಿಸಬೇಕು ಎಂದೂ ಶಿಫಾರಸು ಮಾಡಿದೆ.

ಇದನ್ನೂ ಓದಿ: ಅತ್ಯಾಚಾರವನ್ನು ತಡೆಗಟ್ಟಲು ಸಾಧ್ಯ! ತಡೆಗಟ್ಟಲೇಬೇಕು! ಅದರ ಮೂಲಬೇರುಗಳನ್ನು ಅರಿತಾಗ ಮಾತ್ರ…

ಋ) ದೇಶದಲ್ಲಿ ಯಾವುದೇ ವೈಯಕ್ತಿಕ ಕಾನೂನಿನ (ಪರ್ಸನಲ್ ಲಾ) ಮೇರೆಗೆ ನಡೆಯುವ ಎಲ್ಲಾ ಮದುವೆಗಳನ್ನೂ ಒಬ್ಬ ಮ್ಯಾಜಿಸ್ಟ್ರೇಟರ ಸಮ್ಮುಖದಲ್ಲಿ ನೊಂದಾವಣೆ ಮಾಡಿಸಲೇಬೇಕು. ಆ ಮದುವೆಯಲ್ಲಿ ವರದಕ್ಷಿಣೆಯ ಡಿಮ್ಯಾಂಡ್ ಇರಲಿಲ್ಲ ಹಾಗೂ ವಧೂವರರಿಬ್ಬರ ಸಂಪೂರ್ಣ, ಸ್ವತಂತ್ರ ಒಪ್ಪಿಗೆಯ ಮೇರೆಗೆ ಮದುವೆ ನಡೆಯುತ್ತಿದೆ ಎಂಬುದನ್ನು ಮ್ಯಾಜಿಸ್ಟ್ರೇಟರು ಖಾತ್ರಿಪಡಿಸಿಕೊಳ್ಳಬೇಕು ಎಂದೂ ಸಮಿತಿ ಶಿಫಾರಸು ಮಾಡಿದೆ.

ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗಿರುವ ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನು ಸ್ತ್ರೀ ರೋಗ ಮತ್ತು ಮನೋವೈದ್ಯಕೀಯ ಕ್ಷೇತ್ರಗಳಲ್ಲಿನ ಜಾಗತಿಕ ಖ್ಯಾತಿಯ ತಜ್ಞರು ಶಿಫಾರಸು ಮಾಡಿರುವ ಅತ್ಯುತ್ತಮ ವಿಧಾನಗಳ ಮೂಲಕ ನಡೆಸಬೇಕು ಎಂದು ಶಿಫಾರಸು ಮಾಡಲಾಗಿದೆ.

ಎ) ಅಪ್ರಾಪ್ತ ವಯಸ್ಸಿನ ಮಕ್ಕಳ ಮಾರಾಟ ಜಾಲವನ್ನು ಒಂದು ತೀವ್ರವಾದ ಅಪರಾಧವೆಂದು ಪರಿಗಣಿಸಬೇಕು ಹಾಗೂ ಅದಕ್ಕೆ ಕಠಿಣ ಶಿಕ್ಷೆ ನೀಡಬೇಕು. ಶಿಕ್ಷೆಯು ಏಳು ವರ್ಷಗಳಿಗಿಂತ ಕಡಿಮೆ ಇರಬಾರದು, ಹತ್ತು ವರ್ಷಗಳವರೆಗೂ ಹೆಚ್ಚಬಹುದು ಎಂದು ಸಮಿತಿ ಶಿಫಾರಸು ಮಾಡಿದೆ.

ಏ) ತನಿಖಾ ಸಂಸ್ಥೆಗಳು ಚುನಾಯಿತ ಸದಸ್ಯರ ಮೇಲೆ ಅಥವಾ ಚುನಾವಣಾ ಅಭ್ಯರ್ಥಿಯ ಮೇಲೆ ಹಾಕಿದ ಚಾರ್ಜ್ ಶೀಟನ್ನು ನ್ಯಾಯಾಲಯವು ವಿಚಾರಣೆಗೆ ಪರಿಗಣಿಸಿದ್ದರೆ ಅಂಥ ಸದಸ್ಯರ ಅಧಿಕಾರ ರದ್ದಾಗಬೇಕು ಹಾಗೂ ಅಂಥ ಅಭ್ಯರ್ಥಿಗೆ ನಾಮಪತ್ರ ಸಲ್ಲಿಸದಂತೆ ನಿಷೇಧ ಹೇರಬೇಕು ಎಂಬ ಸಲಹೆಯನ್ನು ಸಹ ಮಾಡಲಾಗಿದೆ.

ಕೃಪೆ: ಹೇಮಲತಾರವರು ಸಂಪಾದಿಸಿರುವ “ಅತ್ಯಾಚಾರ ಬರ್ಬರತೆಯ ಬೇರುಗಳೆಲ್ಲಿ?” ಪುಸ್ತಕದಿಂದ ಈ ಲೇಖನವನ್ನು ಆಯ್ದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...